AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿನ ಜ್ಯೂಸ್ vs ಎಳ ನೀರು : ಬೇಸಿಗೆಯಲ್ಲಿ ಆರೋಗ್ಯಕ್ಕೆ ಉತ್ತಮ ಯಾವುದು?

ಬೇಸಿಗೆಯ ಝಳ ಜೋರಾಗಿದೆ. ಈ ಋತುವಿನಲ್ಲಿ ಎಲ್ಲರೂ ತಣ್ಣನೆಯ ಪಾನೀಯಗಳನ್ನು ಕುಡಿಯಲು ಇಷ್ಟಪಡುತ್ತಾರೆ. ಅದರಲ್ಲಿ ನಿಂಬು ಪಾನೀಯ, ಎಳನೀರು, ಕಬ್ಬಿನ ಜ್ಯೂಸ್ ಸೇರಿದಂತೆ ತಾಜಾ ಹಣ್ಣುಗಳ ಪಾನೀಯವನ್ನು ಹೆಚ್ಚೆಚ್ಚು ಸೇವಿಸುತ್ತಾರೆ. ಆದರೆ ನೀವೇನಾದ್ರೂ ಎಳನೀರು ಹಾಗೂ ಕಬ್ಬಿನ ಜ್ಯೂಸ್ ಸೇವಿಸುತ್ತಿದ್ದೀರಾ ಅಂತಾದ್ರೆ ಇವೆರಡರಲ್ಲಿ ಯಾವುದು ಆರೋಗ್ಯ ಉತ್ತಮ? ಎನ್ನುವುದನ್ನು ತಿಳಿದುಕೊಂಡರೆ ಒಳ್ಳೆಯದು, ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಕಬ್ಬಿನ ಜ್ಯೂಸ್ vs ಎಳ ನೀರು : ಬೇಸಿಗೆಯಲ್ಲಿ ಆರೋಗ್ಯಕ್ಕೆ ಉತ್ತಮ ಯಾವುದು?
ಸಾಂದರ್ಭಿಕ ಚಿತ್ರImage Credit source: Getty Images
Follow us
ಸಾಯಿನಂದಾ
|

Updated on: May 04, 2025 | 4:04 PM

ಬೇಸಿಗೆ (summer) ಯ ಕಾಲ ಶುರುವಾದರೆ ಜ್ಯೂಸ್ ಸೇರಿದಂತೆ ಎಳನೀರಿಗೆ ಬಾರಿ ಬೇಡಿಕೆಯಿರುತ್ತದೆ. ಕೆಲವರು ಮನೆಯಲ್ಲೇ ಮಾಡಿದ ತಾಜಾ ಹಣ್ಣಿನ ಜ್ಯೂಸ್ ಗೆ ಮೊದಲ ಆದ್ಯತೆ ನೀಡಿದರೆ ಇನ್ನು ಕೆಲವರು ಕಬ್ಬಿನ ಜ್ಯೂಸ್ (sugarcane juice) ಹಾಗೂ ಎಳನೀರ (coconut water) ನ್ನು ಕುಡಿಯುವುದನ್ನು ನೋಡಬಹುದು. ಈ ಋತುವಿನಲ್ಲಿ ಎಲ್ಲೆಂದರಲ್ಲಿ ಕಬ್ಬಿನ ಜ್ಯೂಸ್ ಅಂಗಡಿ ಹಾಗೂ ರಸ್ತೆ ಬದಿಯಲ್ಲಿ ಎಳನೀರನ್ನು ಮಾರಾಟ ಮಾಡಲಾಗುತ್ತದೆ. ಈ ಬೇಸಿಗೆಯಲ್ಲಿ ಕಬ್ಬಿನ ಜ್ಯೂಸ್ ಹಾಗೂ ಎಳನೀರನ್ನು ಆರೋಗ್ಯಕ್ಕೆ ಒಳ್ಳೆಯದು ಎನ್ನಲಾಗಿದೆ. ಆದರೆ ತಜ್ಞರು ಈ ಎರಡರಲ್ಲಿ ಯಾವುದು ಉತ್ತಮ ಎನ್ನುತ್ತಾರೆ ಎನ್ನುವ ಬಗೆಗಿನ ಮಾಹಿತಿ ಇಲ್ಲಿದೆ.

ಎಳನೀರು ಹಾಗೂ ಕಬ್ಬಿನ ರಸದ ಆರೋಗ್ಯ ಪ್ರಯೋಜನಗಳು

ಬೇಸಿಗೆಯಲ್ಲಿ ಹೆಚ್ಚಾ ಬೇಡಿಕೆಯಿರುವ ಎಳನೀರಿನಲ್ಲಿ ಮೆಗ್ನೇಷಿಯಮ್, ವಿಟಮಿನ್ ಸಿ ನಿಂದ ಸಮೃದ್ಧವಾಗಿದ್ದು, ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳು ಇದರಲ್ಲಿದೆ. ಬೇಸಿಗೆಯಲ್ಲಿ ಹೆಚ್ಚು ತೆಂಗಿನ ನೀರು ಅಥವಾ ಎಳನೀರು ಸೇವನೆ ಮಾಡುವುದರಿಂದ ಇದು ದೇಹವನ್ನು ಹೈಡ್ರೇಟ್ ಆಗಿರಿಸಲು ಸಹಾಯ ಮಾಡುತ್ತದೆ. ಚರ್ಮದ ಆರೋಗ್ಯವನ್ನು ಸುಧಾರಿಸುವುದಲ್ಲದೆ, ಯೌವನದಿಂದ ಕಾಣುವಂತೆ ಮಾಡುತ್ತದೆ. ಜೀರ್ಣಕ್ರಿಯೆ ಸುಧಾರಿಸಿ, ರಕ್ತದೊತ್ತಡವನ್ನು ಸಮತೋಲನದಲ್ಲಿಡಲು ಸಹಾಯಕವಾಗಿದೆ. ಅದಲ್ಲದೆ ಹೃದಯದ ಆರೋಗ್ಯ ಹಾಗೂ ತೂಕ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.

ಬೇಸಿಗೆಯಲ್ಲಿ ಕಬ್ಬಿನ ಜ್ಯೂಸ್ ಗೆ ಎಲ್ಲಿಲ್ಲದ ಬೇಡಿಕೆ, ಇದು ಮೆಗ್ನೀಸಿಯಮ್, ಮ್ಯಾಂಗನೀಸ್, ಸತು, ಕಬ್ಬಿಣ, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ಸೇರಿದಂತೆ ವಿವಿಧ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರ ನಿಯಮಿತ ಸೇವನೆಯೂ ದೇಹಕ್ಕೆ ಬೇಕಾಗುವ ತ್ವರಿತ ಶಕ್ತಿಯನ್ನು ಒದಗಿಸುತ್ತದೆ. ನಿಯಮಿತ ಸೇವನೆಯೂ ಚರ್ಮದ ಹೊಳಪನ್ನು ಹೆಚ್ಚಿಸುತ್ತದೆ. ಅದರೊಂದಿಗೆ ದೇಹದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರ ಹಾಕುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅದಲ್ಲದೇ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದ್ದು ಯಕೃತ್ತನ್ನು ಸೋಂಕು ಬರದಂತೆ ತಡೆಯುತ್ತದೆ.

ಇದನ್ನೂ ಓದಿ
Image
ಒಮ್ಮೆ ಹೃದಯಾಘಾತವಾಗಿ ಪ್ರಾಣ ಉಳಿಸಿಕೊಂಡವರು ಈ ಹೂವಿನ ಚಹಾ ಕುಡಿಯಲೇಬೇಕು
Image
ಸಿಸೇರಿಯನ್‌, ನಾರ್ಮಲ್ ಡೆಲಿವರಿಯಾದ ಬಾಣಂತಿಯರಿಗೆ ಡಾ. ಶಿಲ್ಪಾ ಹೇಳೋದೇನು?
Image
ಬೇರೆಯವರ ಚಪ್ಪಲಿ, ಶೂ ಬಳಸುವ ಮುನ್ನ ಈ ರೀತಿ ಮಾಡಿ
Image
ಗೋವುಗಳು ಪ್ಲಾಸ್ಟಿಕ್​​ ತಿಂದು ಸಾಯುವುದಕ್ಕೆ ಕಾರಣವೇನು?

ಇದನ್ನೂ ಓದಿ: ಈ ಹೂವಿನಿಂದ ತಯಾರಾಗುವ ಬ್ಲೂ ಟೀ ಕುಡಿದರೆ ಹೃದಯ ಚೆನ್ನಾಗಿರುತ್ತೆ

ಕಬ್ಬಿನ ಜ್ಯೂಸ್ ಹಾಗೂ ಎಳ ನೀರಿನಲ್ಲಿ ಯಾವುದು ಉತ್ತಮ?

ಬೇಸಿಗೆಯಲ್ಲಿ ಎಲ್ಲರೂ ಕಬ್ಬಿನ ಜ್ಯೂಸ್ ಹಾಗೂ ಎಳ ನೀರಿನಲ್ಲಿ ಸೇವಿಸುತ್ತಾರೆ. ಆದರೆ ಕಬ್ಬಿನ ಜ್ಯೂಸ್ ಗಿಂತ ಎಳನೀರು ಉತ್ತಮ ಆರೋಗ್ಯಕ್ಕೆ ಎನ್ನಬಹುದು. ಹೌದು, ಇದು ದೇಹವನ್ನು ಹೈಡ್ರೇಟ್ ಆಗಿರಿಸಲು ಸಹಾಯಕವಾಗಿದೆ. ಆದರೆ ಈ ಕಬ್ಬಿನ ಜ್ಯೂಸ್ ಸೇವನೆ ಆರೋಗ್ಯಕ್ಕೆ ಒಳ್ಳೆಯದು ಆಗಿದ್ದರೂ ಇದರಲ್ಲಿ ಹೆಚ್ಚಿನ ಮಟ್ಟದಲ್ಲಿ ಕ್ಯಾಲೋರಿ ಹಾಗೂ ಸಕ್ಕರೆ ಅಂಶವಿದೆ. ಇದನ್ನು ಹೆಚ್ಚು ಸೇವಿಸುವುದರಿಂದ ಬೊಜ್ಜಿನ ಸಮಸ್ಯೆಗೆ ದಾರಿ ಮಾಡಿಕೊಟ್ಟಂತೆ ಆಗುತ್ತದೆ. ಅದಲ್ಲದೇ ಮಧುಮೇಹ ಸಮಸ್ಯೆಯಿರುವವರು ಈ ಕಬ್ಬಿನ ಜ್ಯೂಸ್ ಸೇವನೆಯಿಂದ ದೂರವಿರುವುದು ಆರೋಗ್ಯ ದೃಷ್ಟಿಯಿಂದ ಒಳ್ಳೆಯದು ಎನ್ನಬಹುದಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು