AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer Health Tips: ಬೇಸಿಗೆಯಲ್ಲಿ ಇಡ್ಲಿ,ದೋಸೆ ಹಿಟ್ಟು ಬೇಗ ಹುಳಿಯಾಗುತ್ತಿದೆಯೇ? ಹಾಗಿದ್ದರೆ ಈ ಟಿಪ್ಸ್​ ಪಾಲಿಸಿ

ಬೇಸಿಗೆಯಲ್ಲಿ ಇಡ್ಲಿ-ದೋಸೆ ಹಿಟ್ಟು ಬೇಗ ಹುಳಿಯಾಗುತ್ತದೆ. ಸರಿಯಾದ ಫರ್ಮೆಂಟೇಶನ್ ಆರೋಗ್ಯಕ್ಕೆ ಒಳ್ಳೆಯದು, ಆದರೆ ಅತಿಯಾದ ಹುಳಿ ಹಿಟ್ಟು ಪೌಷ್ಟಿಕಾಂಶ ಕಳೆದು ಕೆಟ್ಟ ಬ್ಯಾಕ್ಟೀರಿಯಾಗಳಿಗೆ ಕಾರಣವಾಗುತ್ತದೆ. ಇದರಿಂದ ಅಸಿಡಿಟಿ, ಹೊಟ್ಟೆ ನೋವು ಬರಬಹುದು. ಹಿಟ್ಟಿನ ಬಣ್ಣ, ವಾಸನೆ ಬದಲಾದರೆ ಬಳಸಬೇಡಿ. ತಣ್ಣೀರು ಬಳಸಿ, ಸರಿಯಾದ ಸಮಯಕ್ಕೆ ಫ್ರಿಡ್ಜ್‌ನಲ್ಲಿಟ್ಟು ಬೇಸಿಗೆಯಲ್ಲಿ ಹಿಟ್ಟು ಹಾಳಾಗದಂತೆ ನೋಡಿಕೊಳ್ಳಿ.

Summer Health Tips: ಬೇಸಿಗೆಯಲ್ಲಿ ಇಡ್ಲಿ,ದೋಸೆ ಹಿಟ್ಟು ಬೇಗ ಹುಳಿಯಾಗುತ್ತಿದೆಯೇ? ಹಾಗಿದ್ದರೆ ಈ ಟಿಪ್ಸ್​ ಪಾಲಿಸಿ
ಬೇಸಿಗೆಯಲ್ಲಿ ಇಡ್ಲಿ, ದೋಸೆ ಹಿಟ್ಟುImage Credit source: gemini ai
ಅಕ್ಷತಾ ವರ್ಕಾಡಿ
|

Updated on: Apr 25, 2026 | 12:26 PM

Share

ನಮ್ಮ ದೈನಂದಿನ ಜೀವನದಲ್ಲಿ ಬೆಳಿಗ್ಗೆ ಎದ್ದ ತಕ್ಷಣ ಬಿಸಿಬಿಸಿ ಇಡ್ಲಿ ಅಥವಾ ಗರಿಗರಿಯಾದ ದೋಸೆ ಜೊತೆಗೆ ಒಂದು ಕಪ್ ಕಾಫಿ ಸಿಗದಿದ್ದರೆ ದಿನವೇ ಅಪೂರ್ಣ ಎನಿಸುತ್ತದೆ. ಈ ಪೌಷ್ಟಿಕ ಆಹಾರಗಳು ಕೇವಲ ಹೊಟ್ಟೆ ತುಂಬಿಸುವುದಲ್ಲದೆ, ನಾಲಿಗೆಗೂ ಹಿತ ನೀಡುತ್ತವೆ. ಆದರೆ, ಬೇಸಿಗೆಯ ಸುಡುವ ಬಿಸಿಲಿನಲ್ಲಿ ಒಂದು ಸಣ್ಣ ನಿರ್ಲಕ್ಷ್ಯವೂ ಈ ರುಚಿಕರ ಆಹಾರವನ್ನು ಆರೋಗ್ಯಕ್ಕೆ ಹಾನಿಕಾರಕವಾಗಿ ಬದಲಿಸಬಹುದು. ಹೀಗಾಗಿ, ಬೇಸಿಗೆಯಲ್ಲಿ ಹಿಟ್ಟಿನ ತಯಾರಿಕೆ ಮತ್ತು ಬಳಕೆಯ ಮೇಲೆ ಒಂದು ಕಣ್ಣಿಡುವುದು ಬಹಳ ಮುಖ್ಯ.

ಅಕ್ಕಿ ಮತ್ತು ಉದ್ದಿನ ಹಿಟ್ಟು ಹುಳಿಯಾಗುವ ಪ್ರಕ್ರಿಯೆಯನ್ನು ವಿಜ್ಞಾನದ ಭಾಷೆಯಲ್ಲಿ ‘ಫರ್ಮೆಂಟೇಶನ್’ ಎನ್ನಲಾಗುತ್ತದೆ. ಇದರಲ್ಲಿ ಲ್ಯಾಕ್ಟೋಬ್ಯಾಸಿಲಸ್ ಎಂಬ ಉತ್ತಮ ಬ್ಯಾಕ್ಟೀರಿಯಾಗಳು ಸಕ್ಕರೆಯನ್ನು ಒಡೆದು ಲ್ಯಾಕ್ಟಿಕ್ ಆ್ಯಸಿಡ್ ಆಗಿ ಪರಿವರ್ತಿಸುತ್ತವೆ. ಈ ಪ್ರಕ್ರಿಯೆಯಿಂದ ಹಿಟ್ಟು ಹಗುರವಾಗುವುದಲ್ಲದೆ, ಪ್ರೋಟೀನ್ ಜೀರ್ಣಕ್ರಿಯೆಗೆ ಸುಲಭವಾಗುತ್ತದೆ. ಅಲ್ಲದೆ, ಹಿಟ್ಟಿನಲ್ಲಿ ಬಿ12 ಮತ್ತು ಫೋಲೇಟ್ ಅಂಶಗಳು ಹೆಚ್ಚಿ, ನಮ್ಮ ಕರುಳಿಗೆ ಅಗತ್ಯವಿರುವ ‘ಪ್ರೋಬಯೋಟಿಕ್’ ಬ್ಯಾಕ್ಟೀರಿಯಾಗಳನ್ನು ಒದಗಿಸುತ್ತದೆ. ಸರಿಯಾದ ಪ್ರಮಾಣದಲ್ಲಿ ಹುಳಿಯಾದ ಹಿಟ್ಟು ಆರೋಗ್ಯಕ್ಕೆ ಅಮೃತವಿದ್ದಂತೆ.

ಆದರೆ, ತಾಪಮಾನ ಹೆಚ್ಚಾದಂತೆ ಬ್ಯಾಕ್ಟೀರಿಯಾಗಳ ಚಟುವಟಿಕೆಯೂ ವೇಗವಾಗುತ್ತದೆ. ಚಳಿಗಾಲದಲ್ಲಿ ಹಿಟ್ಟು ಹುಳಿಯಾಗಲು 8 ರಿಂದ 10 ಗಂಟೆ ಬೇಕಾದರೆ, ಬೇಸಿಗೆಯ 30-37 ಡಿಗ್ರಿ ತಾಪಮಾನದಲ್ಲಿ ಕೇವಲ 3 ರಿಂದ 5 ಗಂಟೆಗಳಲ್ಲೇ ಹಿಟ್ಟು ಸಿದ್ಧವಾಗಿಬಿಡುತ್ತದೆ. ಒಂದು ವೇಳೆ ಸಮಯ ಮೀರಿದರೆ ಹಿಟ್ಟು ‘ಓವರ್ ಫರ್ಮೆಂಟ್’ ಆಗಿ, ಅದರಲ್ಲಿರುವ ಪೌಷ್ಟಿಕಾಂಶಗಳು ನಶಿಸಿ ಕೆಟ್ಟ ಬ್ಯಾಕ್ಟೀರಿಯಾಗಳು ಬೆಳೆಯಲು ಶುರುವಾಗುತ್ತವೆ. ಇದರಿಂದ ಹಿಟ್ಟು ಅತಿಯಾಗಿ ಹುಳಿಯಾಗುವುದು ಮಾತ್ರವಲ್ಲದೆ ಕಹಿಯಾಗುವ ಸಾಧ್ಯತೆಯೂ ಇರುತ್ತದೆ.

ಇದನ್ನೂ ಓದಿ: ಲಿವರ್‌ ಆರೋಗ್ಯಕರವಾಗಿರಬೇಕಂದ್ರೆ ತಪ್ಪದೇ ಈ ಆಹಾರಗಳನ್ನು ಸೇವನೆ ಮಾಡಲೇಬೇಕು

ಹಿಟ್ಟು ಹಾಳಾಗಿದೆಯೇ ಎಂದು ತಿಳಿಯುವುದು ಹೇಗೆ?

ನಿಮ್ಮ ಮನೆಯ ಹಿಟ್ಟು ಹಾಳಾಗಿದೆಯೇ ಎಂದು ತಿಳಿಯಲು ಕೆಲವು ಸುಲಭ ಮಾರ್ಗಗಳಿವೆ. ಹಿಟ್ಟಿನಿಂದ ಕಟು ಹುಳಿ ವಾಸನೆ ಅಥವಾ ಘಾಟು ವಾಸನೆ ಬರುತ್ತಿದ್ದರೆ, ಅದರ ಬಣ್ಣ ಬದಲಾಗಿದ್ದರೆ ಅಥವಾ ಅತಿಯಾಗಿ ನೊರೆ ಬರುತ್ತಿದ್ದರೆ ಅಂತಹ ಹಿಟ್ಟನ್ನು ಬಳಸಬೇಡಿ. ಇಂತಹ ಹಿಟ್ಟಿನಿಂದ ತಯಾರಿಸಿದ ಆಹಾರ ಸೇವನೆಯು ವಾಕರಿಕೆ, ಹೊಟ್ಟೆ ನೋವು ಮತ್ತು ಅತಿಸಾರದಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ವಿಜ್ಞಾನದ ಪ್ರಕಾರ, ಸರಿಯಾದ ಹದದಲ್ಲಿರುವ ಹಿಟ್ಟು ಕಬ್ಬಿಣ ಮತ್ತು ಕ್ಯಾಲ್ಸಿಯಂ ಹೀರಿಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ, ಆದರೆ ಅತಿಯಾಗಿ ಹುಳಿಯಾದ ಹಿಟ್ಟು ಅಸಿಡಿಟಿಯನ್ನು ಉಂಟುಮಾಡುತ್ತದೆ.

ಬೇಸಿಗೆಯಲ್ಲಿ ಹಿಟ್ಟು ಹಾಳಾಗದಂತೆ ತಡೆಯಲು ಕೆಲವು ಸರಳ ಸೂತ್ರಗಳನ್ನು ಪಾಲಿಸಬಹುದು. ಹಿಟ್ಟು ಅರೆದ ನಂತರ ಹೆಚ್ಚು ಕಾಲ ಹೊರಗಿಡದೆ, ಸರಿಯಾದ ಹದಕ್ಕೆ ಏರಿದ ತಕ್ಷಣ ಫ್ರಿಡ್ಜ್‌ನಲ್ಲಿ ಇರಿಸಿ. ಹಿಟ್ಟು ಅರೆಯಲು ತಣ್ಣನೆಯ ನೀರನ್ನು ಬಳಸಿ ಮತ್ತು ಪಾತ್ರೆಗಳು ಸಂಪೂರ್ಣವಾಗಿ ಸ್ವಚ್ಛವಾಗಿರುವಂತೆ ನೋಡಿಕೊಳ್ಳಿ.

ಲೇಖನ: ಡಾ. ರವಿಕಿರಣ್ ಪಟವರ್ಧನ, ಪಟವರ್ಧನ ಆಯುರ್ವೇದ ಕ್ಲಿನಿಕ್, ಶಿರಸಿ (9242122874)

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!