AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer Diet: ಬೇಸಿಗೆಯ ವಾತಾವರಣದಲ್ಲಿ ಈ 5 ಆಹಾರಗಳನ್ನು ತಿನ್ನಲೇಬೇಕು

ಬೇಸಿಗೆಯಲ್ಲಿ ನಾವು ತಿನ್ನಲು ಆಯ್ಕೆ ಮಾಡುವ ಆಹಾರವು ನಮ್ಮ ದೇಹವನ್ನು ತಂಪಾಗಿಡಬೇಕು. ಆಗ ಮಾತ್ರ ನಮಗೆ ಬಿಸಿ ಅನುಭವ ಹೆಚ್ಚಾಗಿ ತಿಳಿಯುವುದಿಲ್ಲ. ಅದರಲ್ಲಿಯೂ ಬಿಸಿ ವಾತಾವರಣದಲ್ಲಿ ಆಹಾರಗಳಲ್ಲಿ ನೀರಿನ ಅಂಶ ಹೆಚ್ಚಾಗಿ ಇರಬೇಕು. ಇದರಿಂದ ದೇಹದ ತಾಪಮಾನವನ್ನು ಕಡಿಮೆ ಮಾಡಬಹುದು. ಇದರ ಬದಲಾಗಿ, ಬೇಸಿಗೆಯಲ್ಲಿ ಕೊಬ್ಬಿನ ಅಥವಾ ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸುವುದರಿಂದ ನಮಗೆ ಬಿಸಿ ಮತ್ತು ಅಹಿತಕರ ಅನುಭವವಾಗುತ್ತದೆ. ಜೊತೆಗೆ ಈ ಆಹಾರಗಳು ನಮ್ಮ ರಕ್ತದೊತ್ತಡವನ್ನು ಹೆಚ್ಚಿಸಬಹುದು, ಹಾಗಾಗಿ ಬೇಸಿಗೆಯಲ್ಲಿ ಕೆಲವು ಆಹಾರಗಳನ್ನು ತಪ್ಪದೆ ಸೇವನೆ ಮಾಡುವುದು ಬಹಳ ಒಳ್ಳೆಯದು.

Summer Diet: ಬೇಸಿಗೆಯ ವಾತಾವರಣದಲ್ಲಿ ಈ 5 ಆಹಾರಗಳನ್ನು ತಿನ್ನಲೇಬೇಕು
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Mar 25, 2025 | 10:01 AM

Share

ಬೇಸಿಗೆ  (Summer Diet) ಸೇರಿದಂತೆ ವರ್ಷವಿಡೀ ನಾವು ಸೇವನೆ ಮಾಡುವ ಆಹಾರವು ನಮ್ಮ ಆರೋಗ್ಯದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ಅದರಲ್ಲಿಯೂ ಬೇಸಿಗೆಯ ಬಿಸಿಯಾದ ಹವಾಮಾನ ನಮ್ಮ ಜೀರ್ಣಕ್ರಿಯೆ, ದೇಹದಲ್ಲಿ ನೀರಿನ ಕೊರತೆ ಹೀಗೆ, ದೇಹದ ಕಾರ್ಯಗಳ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ಸಮಯದಲ್ಲಿ ನಾವು ಸೇವನೆ ಮಾಡುವ ಆಹಾರ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಬಹಳ ಮುಖ್ಯವಾಗುತ್ತದೆ. ಜೊತೆಗೆ ಬೇಸಿಗೆಯಲ್ಲಿ ನಾವು ತಿನ್ನಲು ಆಯ್ಕೆ ಮಾಡುವ ಆಹಾರವು ನಮ್ಮ ದೇಹವನ್ನು ತಂಪಾಗಿಡಬೇಕು. ಆಗ ಮಾತ್ರ ನಮಗೆ ಬಿಸಿ ಅನುಭವ ಹೆಚ್ಚಾಗಿ ತಿಳಿಯುವುದಿಲ್ಲ. ಅದರಲ್ಲಿಯೂ ಬಿಸಿ ವಾತಾವರಣದಲ್ಲಿ ಆಹಾರಗಳಲ್ಲಿ ನೀರಿನ ಅಂಶ ಹೆಚ್ಚಾಗಿ ಇರಬೇಕು. ಇದರಿಂದ ದೇಹದ ತಾಪಮಾನವನ್ನು ಕಡಿಮೆ ಮಾಡಬಹುದು. ಇದರ ಬದಲಾಗಿ, ಬೇಸಿಗೆಯಲ್ಲಿ ಕೊಬ್ಬಿನ ಅಥವಾ ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸುವುದರಿಂದ ನಮಗೆ ಬಿಸಿ ಮತ್ತು ಅಹಿತಕರ ಅನುಭವವಾಗುತ್ತದೆ. ಜೊತೆಗೆ ಈ ಆಹಾರಗಳು ನಮ್ಮ ರಕ್ತದೊತ್ತಡವನ್ನು ಹೆಚ್ಚಿಸಬಹುದು, ಹಾಗಾಗಿ ಬೇಸಿಗೆಯಲ್ಲಿ ಕೆಲವು ಆಹಾರಗಳನ್ನು ತಪ್ಪದೆ ಸೇವನೆ ಮಾಡುವುದು ಬಹಳ ಒಳ್ಳೆಯದು.

ಬೇಸಿಗೆಯಲ್ಲಿ ತಿನ್ನಬೇಕಾದ ಆಹಾರಗಳು ಯಾವವು?

1. ಕಲ್ಲಂಗಡಿ

ಈ ಹಣ್ಣಿನಲ್ಲಿ ಸುಮಾರು 90% ನೀರಿನ ಅಂಶ ಇರುವುದರಿಂದ ಬೇಸಿಗೆಯಲ್ಲಿ ಸೇವಿಸಲೇಬೇಕಾದ ಹಣ್ಣಾಗಿದೆ. ಅದಲ್ಲದೆ ಕಲ್ಲಂಗಡಿ ಸೇವನೆಯು ದೇಹವನ್ನು ಹೈಡ್ರೇಟ್ ಮತ್ತು ತಂಪಾಗಿಡಲು ಸಹಾಯ ಮಾಡುತ್ತದೆ. ಇದು ವಿಟಮಿನ್ ಸಿ, ಎ ಮತ್ತು ಪೊಟ್ಯಾಸಿಯಮ್ ನ ಉತ್ತಮ ಮೂಲವಾಗಿದೆ, ಇದು ದೇಹದಲ್ಲಿ ಎಲೆಕ್ಟ್ರೋಲೈಟ್ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

2. ಸೌತೆಕಾಯಿ

ಈ ತರಕಾರಿ ಮತ್ತೊಂದು ಹೈಡ್ರೇಟಿಂಗ್ ಆಹಾರವಾಗಿದ್ದು, ಇದು ನೀರಿನ ಅಂಶದಿಂದ ಸಮೃದ್ಧವಾಗಿದೆ ಮತ್ತು ಕಡಿಮೆ ಕ್ಯಾಲೊರಿಗಳನ್ನು ಹೊಂದಿದೆ. ಈ ತರಕಾರಿ ದೇಹದ ತಾಪಮಾನವನ್ನು ನಿಯಂತ್ರಿಸಲು ಮತ್ತು ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಸೌತೆಕಾಯಿಗಳನ್ನು ಸಲಾಡ್ಗಳು, ಸ್ಮೂಥಿಗಳು ಅಥವಾ ಸೈಡ್ ಡಿಶ್ ಆಗಿ ಸೇವಿಸಬಹುದು.

ಇದನ್ನೂ ಓದಿ
Image
ಕರಬೂಜ ಹಣ್ಣನ್ನು ಈ ಆರೋಗ್ಯ ಸಮಸ್ಯೆಗಳಿರುವವರು ಸೇವನೆ ಮಾಡಬೇಡಿ
Image
ಬೇಸಿಗೆಯಲ್ಲಿ ಸಿಗುವ ಈ ಹಣ್ಣನ್ನು ತಪ್ಪದೆ ಸೇವನೆ ಮಾಡಿ
Image
ಗರ್ಭವಾಸ್ಥೆಯಲ್ಲಿ ಪ್ಯಾರಾಸಿಟಮಾಲ್ ಸೇವನೆ ಅಪಾಯಕಾರಿ! ಅಧ್ಯಯನದಿಂದ ಬಹಿರಂಗ
Image
ಬಾಹ್ಯಾಕಾಶದಲ್ಲಿ ಸುನೀತಾ ವಿಲಿಯಮ್ಸ್ ಅವರ ಆಹಾರ ಹೇಗಿತ್ತು ಗೊತ್ತಾ?

3. ಎಳನೀರು

ಎಳನೀರು ನೈಸರ್ಗಿಕವಾಗಿ ಬಾಯಾರಿಕೆಯನ್ನು ನೀಗಿಸುವ ಪಾನೀಯವಾಗಿದ್ದು, ಇದು ಪೊಟ್ಯಾಸಿಯಮ್, ಸೋಡಿಯಂ ಮತ್ತು ಮೆಗ್ನೀಸಿಯಮ್ನಂತಹ ಎಲೆಕ್ಟ್ರೋಲೈಟ್ಗಳಿಂದ ಸಮೃದ್ಧವಾಗಿದೆ. ಜೊತೆಗೆ ಎಳನೀರು, ಬಿಸಿ ವಾತಾವರಣದಲ್ಲಿ ದ್ರವಗಳನ್ನು ಮರುಪೂರಣ ಮಾಡಲು ಸಹಾಯ ಮಾಡುತ್ತದೆ ಮತ್ತು ದೇಹವನ್ನು ಹೈಡ್ರೇಟ್ ಆಗಿರಿಸುತ್ತದೆ. ಇದು ಉತ್ಕರ್ಷಣ ನಿರೋಧಕಗಳ ಅತ್ಯುತ್ತಮ ಮೂಲವಾಗಿದೆ.

ಇದನ್ನೂ ಓದಿ: ಎಚ್ಚರ: ಬೆಕ್ಕುಗಳಿಗೆ ವಕ್ಕರಿಸಿದೆ ಮಾರಣಾಂತಿಕ ಎಫ್​ಪಿವಿ ವೈರಸ್

4. ಪುದೀನಾ

ಪುದೀನಾದಲ್ಲಿ ಮೆಂಥಾಲ್ ಇದ್ದು, ಇದು ದೇಹವನ್ನು ತಂಪಾಗಿ ಇಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಯನ್ನು ಉತ್ತೇಜಿಸಲು ಮತ್ತು ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಇದು ಪ್ರಯೋಜನಕಾರಿಯಾಗಿದೆ. ಪುದೀನಾವನ್ನು ಸ್ಮೂಥಿ ಅಥವಾ ಸಲಾಡ್ಗಳಿಗೆ ಸೇರಿಸಬಹುದು ಅಥವಾ ಇದರಿಂದ ಜ್ಯೂಸ್ ತಯಾರಿಸಿಕೊಳ್ಳಬಹುದು.

5. ಮೊಸರು

ಮೊಸರು ಕರುಳಿಗೆ ಪ್ರೋಬಯಾಟಿಕ್ಗಳನ್ನು ಒದಗಿಸಿ ದೇಹವನ್ನು ತಂಪಾಗಿಸುವ ಆಹಾರವಾಗಿದೆ. ಮೊಸರಿನ ಸೇವನೆಯು ದೇಹದ ಶಾಖ, ಉರಿಯೂತ ಮತ್ತು ಕರುಳಿನ ಸಂಬಂಧಿತ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದನ್ನು ಲಘು ಆಹಾರವಾಗಿ, ಸ್ಮೂಥಿಗಳಲ್ಲಿ ಸೇವಿಸಬಹುದು.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ