AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer Pregnancy Care: ಗರ್ಭಿಣಿಯರು ಬೇಸಿಗೆ ಕಾಲದಲ್ಲಿ ಈ ಸಲಹೆಗಳನ್ನು ಪಾಲಿಸಿ

ಹೆಚ್ಚುತ್ತಿರುವ ತಾಪಮಾನವು ಗರ್ಭಿಣಿಯರ ಮೇಲೆ ವಿಪರೀತ ಪರಿಣಾಮ ಬೀರುತ್ತಿದೆ. ದಿನವಿಡೀ ಸಾಕಷ್ಟು ನೀರು ಕುಡಿಯುವುದು, ಸಡಿಲವಾದ ಅದರಲ್ಲಿಯೂ ತಿಳಿ ಬಣ್ಣದ ಬಟ್ಟೆಗಳನ್ನು ಧರಿಸುವುದು, ನೇರ ಸೂರ್ಯನ ಬೆಳಕಿಗೆ ದೀರ್ಘಕಾಲ ಒಡ್ಡಿಕೊಳ್ಳುವುದನ್ನು ತಪ್ಪಿಸುವುದು ಮತ್ತು ಗರಿಷ್ಠ ಶಾಖವಿರುವ ಸಮಯದಲ್ಲಿ ಮನೆಯೊಳಗೆ ಇರುವುದು ಎಲ್ಲಾ ಗರ್ಭಿಣಿಯರು ಅನುಸರಿಸಬೇಕಾದ ಕೆಲವು ಸಲಹೆಗಳಾಗಿವೆ.

Summer Pregnancy Care: ಗರ್ಭಿಣಿಯರು ಬೇಸಿಗೆ ಕಾಲದಲ್ಲಿ ಈ ಸಲಹೆಗಳನ್ನು ಪಾಲಿಸಿ
ಪ್ರೀತಿ ಭಟ್​, ಗುಣವಂತೆ
| Edited By: |

Updated on:May 10, 2024 | 5:42 PM

Share

ತಾಪಮಾನವು ಹೆಚ್ಚಾದಾಗ ಶಾಖದಿಂದ ಬಳಲುವವರು, ನಿರ್ಜಲೀಕರಣ ಸಮಸ್ಯೆ ಮತ್ತು ಶಾಖದ ಆಘಾತವು ಯಾರ ಮೇಲೂ ಪರಿಣಾಮ ಬೀರಬಹುದು. ಜೊತೆಗೆ ಹೆಚ್ಚುತ್ತಿರುವ ತಾಪಮಾನವು ಗರ್ಭಿಣಿಯರ ಮೇಲೆ ವಿಪರೀತ ಪರಿಣಾಮ ಬೀರುತ್ತಿದೆ. ದಿನವಿಡೀ ಸಾಕಷ್ಟು ನೀರು ಕುಡಿಯುವುದು, ಸಡಿಲವಾದ ಅದರಲ್ಲಿಯೂ ತಿಳಿ ಬಣ್ಣದ ಬಟ್ಟೆಗಳನ್ನು ಧರಿಸುವುದು, ನೇರ ಸೂರ್ಯನ ಬೆಳಕಿಗೆ ದೀರ್ಘಕಾಲ ಒಡ್ಡಿಕೊಳ್ಳುವುದನ್ನು ತಪ್ಪಿಸುವುದು ಮತ್ತು ಗರಿಷ್ಠ ಶಾಖವಿರುವ ಸಮಯದಲ್ಲಿ ಮನೆಯೊಳಗೆ ಇರುವುದು ಎಲ್ಲಾ ಗರ್ಭಿಣಿಯರು ಅನುಸರಿಸಬೇಕಾದ ಕೆಲವು ಸಲಹೆಗಳಾಗಿವೆ.

ಬೇಸಿಗೆಯಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳು ಯಾವುವು?

  1. ಸಾಕಷ್ಟು ನೀರು ಕುಡಿಯಿರಿ: ಋತುಮಾನಕ್ಕೆ ಅನುಗುಣವಾಗಿ ದೇಹವನ್ನು ತೇವಾಂಶದಿಂದಿರಿಸಿ. ನಿರ್ಜಲೀಕರಣವನ್ನು ತಡೆಗಟ್ಟಲು, ಪ್ರತಿದಿನ ಕನಿಷ್ಠ 8 ರಿಂದ 10 ಲೋಟ ನೀರನ್ನು ಕುಡಿಯಿರಿ. ಇಲ್ಲವಾದಲ್ಲಿ ಇದು ತಲೆತಿರುಗುವಿಕೆ, ಆಯಾಸ ಮತ್ತಿತರ ತೊಡಕುಗಳಿಗೆ ಕಾರಣವಾಗಬಹುದು.
  2.  ಸನ್​ಸ್ಕ್ರೀನ್​​ ಹಚ್ಚಿ:ಹೊರಗೆ ಹೋಗುವಾಗ ಹೆಚ್ಚಿನ ಎಸ್ಪಿಎಫ್ (ಕನಿಷ್ಠ 30) ನೊಂದಿಗೆ ಸನ್ಸ್ಕ್ರೀನ್ ಹಚ್ಚುವ ಮೂಲಕ ನಿಮ್ಮ ಚರ್ಮವನ್ನು ಹಾನಿಕಾರಕ ಕಿರಣಗಳಿಂದ ರಕ್ಷಿಸಿಕೊಳ್ಳಿ.
  3. ತಂಪಾಗಿರಿ: ಸಾಧ್ಯವಾದಾಗಲೆಲ್ಲಾ ತಂಪಾದ, ಹವಾನಿಯಂತ್ರಿತ ಕೋಣೆಗಳಲ್ಲಿ ಇರಿ. ಆ ಮೂಲಕ ದೇಹ ಹೆಚ್ಚು ಬಿಸಿಯಾಗುವುದನ್ನು ತಪ್ಪಿಸಿ. ಮನೆಯಲ್ಲಿ ಆರಾಮದಾಯಕ ತಾಪಮಾನವನ್ನು ಕಾಪಾಡಿಕೊಳ್ಳಲು ಫ್ಯಾನ್ ಗಳು ಅಥವಾ ಪೋರ್ಟಬಲ್ ಏರ್ ಕೂಲರ್ ಗಳನ್ನು ಬಳಸಿ. ಅಗತ್ಯವಿದ್ದರೆ ನಿಮ್ಮ ದೇಹದ ತಾಪಮಾನವನ್ನು ಕಡಿಮೆ ಮಾಡಲು ತಂಪಾದ ನೀರಿನಲ್ಲಿ ಸ್ನಾನ ಮಾಡಿ.
  4. ಸಡಿಲವಾದ ಬಟ್ಟೆಗಳನ್ನು ಧರಿಸಿ: ಹತ್ತಿ ಅಥವಾ ಲಿನಿನ್ ನಂತಹ ಬೇಸಿಗೆ ಸ್ನೇಹಿ ಬಟ್ಟೆಗಳನ್ನು ಅಂದರೆ ಹಗುರವಾದ, ಸಡಿಲವಾದ ಬಟ್ಟೆಗಳನ್ನು ಆರಿಸಿ. ಇದು ನಿಮ್ಮ ದೇಹಕ್ಕೆ ಗಾಳಿಯ ಹರಿವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಅತಿಯಾಗಿ ಬೆವರುವುದನ್ನು ತಡೆಯುತ್ತದೆ.
  5. ವಿರಾಮ ತೆಗೆದುಕೊಳ್ಳಿ ಮತ್ತು ವಿಶ್ರಾಂತಿ ಪಡೆಯಿರಿ: ವಿಶ್ರಾಂತಿ ಪಡೆಯಲು ಆಗಾಗ ವಿರಾಮ ತೆಗೆದುಕೊಳ್ಳಿ, ವಿಶೇಷವಾಗಿ ನೀವು ದಣಿದಿದ್ದರೆ ಅಥವಾ ದೇಹ ಬಿಸಿಯಾಗಿದ್ದರೆ ಅತಿಯಾದ ವ್ಯಾಯಾಮ ಮತ್ತು ಶ್ರಮದಾಯಕ ದೈಹಿಕ ಚಟುವಟಿಕೆಗಳನ್ನು ತಪ್ಪಿಸಿ.

ಬೇಸಿಗೆಯಲ್ಲಿ ಆರೋಗ್ಯಕವಾಗಿರಲು ಏನನ್ನು ತಪ್ಪಿಸಬೇಕು?

  1. 1. ಅತಿಯಾಗಿ ವ್ಯಾಯಾಮ ಮಾಡಬೇಡಿ: ಶಾಖ ಹೆಚ್ಚಾಗಿರುವ ಸಮಯದಲ್ಲಿ ಹೊರಾಂಗಣ ಚಟುವಟಿಕೆಗಳನ್ನು ಮಿತಿಗೊಳಿಸಿ. ಅಗತ್ಯವಾಗಿ ಹೋಗಬೇಕಾದರೆ, ಮುಂಜಾನೆ ಅಥವಾ ಸಂಜೆಯ ತಂಪಾದ ಸಮಯದಲ್ಲಿ ಚಟುವಟಿಕೆಗಳನ್ನು ನಿಗದಿಪಡಿಸಿ.
  2. ಊಟವನ್ನು ತಪ್ಪಿಸಬೇಡಿ: ಪ್ರತಿದಿನ ಸಮತೋಲಿತ ಆಹಾರವನ್ನು ಸೇವಿಸಿ. ಊಟ ಬಿಡುವುದನ್ನು ತಪ್ಪಿಸಿ, ಏಕೆಂದರೆ ಇದು ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಏರಿಳಿತಗಳಿಗೆ ಕಾರಣವಾಗಬಹುದು ಮತ್ತು ಶಾಖ ಸಂಬಂಧಿತ ಅಪಾಯವನ್ನು ಹೆಚ್ಚಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.
  3. ಕೆಫೀನ್ ಮತ್ತು ಸಕ್ಕರೆ ಪಾನೀಯಗಳನ್ನು ಮಿತಿಗೊಳಿಸಿ: ನೀವು ಕೆಫೀನ್ ಮತ್ತು ಸಕ್ಕರೆ ಪಾನೀಯಗಳನ್ನು ಪ್ರೀತಿಸುತ್ತಿದ್ದರೆ, ಅದರ ಸೇವನೆಯನ್ನು ಕಡಿಮೆ ಮಾಡಿ, ಏಕೆಂದರೆ ಇದು ನಿರ್ಜಲೀಕರಣಕ್ಕೆ ಕಾರಣವಾಗಬಹುದು. ಆದ್ದರಿಂದ, ಮೂರು ಅಥವಾ ನಾಲ್ಕು ಕಪ್ ಕಾಫಿ ಅಥವಾ ಚಹಾವನ್ನು ಸೇವಿಸುವ ಬದಲು, ನೀರು, ಗಿಡಮೂಲಿಕೆ ಚಹಾ ಅಥವಾ ಹಣ್ಣಿನ ರಸಗಳನ್ನು ಸೇವಿಸಿ ಎಂದು ತಜ್ಞರು ಸಲಹೆ ನೀಡುತ್ತಾರೆ.
  4.  ಕೆಲವು ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ತಲೆತಿರುಗುವಿಕೆ, ವಾಕರಿಕೆ, ಹೃದಯ ಬಡಿತ ವೇಗವಾಗುವುದು ಅಥವಾ ಅತಿಯಾದ ಬೆವರುವಿಕೆಯಂತಹ ಶಾಖ ಸಂಬಂಧಿತ ಸಮಸ್ಯೆಗಳನ್ನು ನಿರ್ಲಕ್ಷಿಸಬೇಡಿ ಜೊತೆಗೆ ಈ ಬಗ್ಗೆ ಜಾಗರೂಕರಾಗಿರಿ. ಯಾವುದೇ ರೋಗಲಕ್ಷಣಗಳು ಕಂಡು ಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:10 pm, Thu, 9 May 24

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ