AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold benefits: ಚಿನ್ನದ ಆಭರಣಗಳನ್ನು ಧರಿಸುವುದರಿಂದ ಸಿಗುತ್ತೆ ಆರೋಗ್ಯ ಪ್ರಯೋಜನ

ಹಬ್ಬವಾಗಿರಲಿ ಅಥವಾ ವಿವಾಹ ಸಮಾರಂಭವಾಗಿರಲಿ, ಚಿನ್ನದ ಆಭರಣಗಳಿಲ್ಲದೆ ಆಗುವುದಿಲ್ಲ. ಇದು ಮಹಿಳೆಯರ ಸೌಂದರ್ಯವನ್ನು ದ್ವಿಗುಣಗೊಳಿಸುವುದು ಮಾತ್ರವಲ್ಲ ಇದನ್ನು ಧರಿಸುವುದರಿಂದ ಅನೇಕ ರೀತಿಯ ಪ್ರಯೋಜನಗಳಿವೆ. ಹೌದು. ಚಿನ್ನದ ಆಭರಣ ಸೌಂದರ್ಯ ಹೆಚ್ಚಿಸುವುದು ಮಾತ್ರವಲ್ಲ ಆರೋಗ್ಯದ ದೃಷ್ಠಿಯಿಂದಲೂ ಇದು ಬಹಳ ಪ್ರಯೋಜನಕಾರಿಯಾಗಿದೆ. ಹಿಂದಿನ ಕಾಲದಲ್ಲಿ, ಚಿನ್ನ ಮತ್ತು ಬೆಳ್ಳಿಯನ್ನು ರೋಗಗಳ ಚಿಕಿತ್ಸೆಯಲ್ಲಿ ಬಳಸಲಾಗುತ್ತಿತ್ತು. ಚಿನ್ನವು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಣೆ ಮಾಡುವ ಶಕ್ತಿಯನ್ನು ಹೊಂದಿದೆ. ಹಾಗಾದರೆ ಇದರಿಂದ ಯಾವ ರೀತಿಯ ಪ್ರಯೋಜನಗಳಿವೆ ತಿಳಿದುಕೊಳ್ಳಿ.

Gold benefits: ಚಿನ್ನದ ಆಭರಣಗಳನ್ನು ಧರಿಸುವುದರಿಂದ ಸಿಗುತ್ತೆ ಆರೋಗ್ಯ ಪ್ರಯೋಜನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 20, 2025 | 4:02 PM

Share

ನಮ್ಮ ದೇಶದಲ್ಲಿ ಚಿನ್ನದ ಆಭರಣ (Gold Jewelry) ಗಳನ್ನು ಧರಿಸುವುದು ಹಳೆಯ ಸಂಪ್ರದಾಯ ಮಾತ್ರವಲ್ಲ, ಸ್ಥಾನಮಾನದ ಸಂಕೇತವೂ ಆಗಿದೆ. ಹಬ್ಬವಾಗಿರಲಿ ಅಥವಾ ವಿವಾಹ (Marriage) ಸಮಾರಂಭವಾಗಿರಲಿ, ಚಿನ್ನದ ಆಭರಣಗಳಿಲ್ಲದೆ ಆಗುವುದಿಲ್ಲ. ಇದು ಮಹಿಳೆಯರ ಸೌಂದರ್ಯವನ್ನು ದ್ವಿಗುಣಗೊಳಿಸುವುದು ಮಾತ್ರವಲ್ಲ ಇದನ್ನು ಧರಿಸುವುದರಿಂದ ಅನೇಕ ರೀತಿಯ ಪ್ರಯೋಜನಗಳಿವೆ. ಹೌದು. ಚಿನ್ನದ ಆಭರಣ ಸೌಂದರ್ಯ (Beauty) ಹೆಚ್ಚಿಸುವುದು ಮಾತ್ರವಲ್ಲ ಆರೋಗ್ಯದ ದೃಷ್ಠಿಯಿಂದಲೂ ಇದು ಬಹಳ ಪ್ರಯೋಜನಕಾರಿಯಾಗಿದೆ. ಹಿಂದಿನ ಕಾಲದಲ್ಲಿ, ಚಿನ್ನ (Gold) ಮತ್ತು ಬೆಳ್ಳಿಯನ್ನು ರೋಗಗಳ ಚಿಕಿತ್ಸೆಯಲ್ಲಿ ಬಳಸಲಾಗುತ್ತಿತ್ತು. ಚಿನ್ನವು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಣೆ ಮಾಡುವ ಶಕ್ತಿಯನ್ನು ಹೊಂದಿದೆ. ಹಾಗಾದರೆ ಇದರಿಂದ ಯಾವ ರೀತಿಯ ಪ್ರಯೋಜನಗಳಿವೆ ತಿಳಿದುಕೊಳ್ಳಿ.

ಶುದ್ಧ ಚಿನ್ನವು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ ಎಂದು ಕೆಲವು ಅಧ್ಯಯನಗಳು ಸಾಬೀತುಪಡಿಸಿವೆ, ಇದು ದೇಹದ ತಾಪಮಾನವನ್ನು ನಿಯಂತ್ರಿಸಲು ಸಹಾಯ ಮಾಡುವುದಲ್ಲದೆ, ತಾಪಮಾನದಿಂದ ಬರುವ ಜ್ವರ, ಶೀತ ಅಥವಾ ಬಿಸಿಯಾದ ಅನುಭವ ನೀಡುವಂತಹ ಸಮಸ್ಯೆಗಳನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ. ಆಕ್ಯುಪಂಕ್ಚರ್ ಚಿಕಿತ್ಸೆಯಲ್ಲಿ, ನೋವನ್ನು ಕಡಿಮೆ ಮಾಡಲು ಚಿನ್ನದ ತುದಿಗಳನ್ನು ಹೊಂದಿರುವ ಸೂಜಿಗಳನ್ನು ಬಳಸಲಾಗುತ್ತದೆ. ಹಾಗಾದರೆ ದೇಹದ ಮೇಲೆ ಚಿನ್ನವನ್ನು ಧರಿಸುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ಇಲ್ಲಿದೆ.

  • ಶುದ್ಧ ಚಿನ್ನದ ಆಭರಣಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತವೆ. ಆ ಮೂಲಕ ಚಿನ್ನ ನಮ್ಮನ್ನು ಸೋಂಕುಗಳಿಂದ ರಕ್ಷಿಸುತ್ತದೆ.
  • ದೇಹದ ಮೇಲಿನ ಗಾಯಗಳಿಗೆ ಚಿಕಿತ್ಸೆ ನೀಡಲು ಚಿನ್ನವನ್ನು ಬಳಸಲಾಗುತ್ತದೆ. ಗಾಯಕ್ಕೆ ಚಿನ್ನವನ್ನು ಹಚ್ಚಿದಾಗ, ಅದು ಸೋಂಕನ್ನು ತಡೆಯುತ್ತದೆ ಮತ್ತು ಗಾಯವನ್ನು ತ್ವರಿತವಾಗಿ ಗುಣಪಡಿಸುತ್ತದೆ.
  • ಚಿನ್ನವು ನಿಮ್ಮ ಚರ್ಮಕ್ಕೆ ತುಂಬಾ ಒಳ್ಳೆಯದು. ಇದು ಚರ್ಮದ ಉಷ್ಣತೆಯನ್ನು ಕಡಿಮೆ ಮಾಡಿ ವಿಶ್ರಾಂತಿ ನೀಡುತ್ತದೆ. ಇದು ದೇಹದ ಜೀವಕೋಶಗಳನ್ನು ಪುನರುತ್ಪಾದಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಚಿನ್ನವನ್ನು ಅನೇಕ ಚರ್ಮದ ಆರೈಕೆ ಮತ್ತು ಸೌಂದರ್ಯ ಉತ್ಪನ್ನಗಳಲ್ಲಿ ಸಹ ಬಳಸಲಾಗುತ್ತದೆ.
  • ಮುಟ್ಟಿನ ಹಂತದಲ್ಲಿರುವ ಮಹಿಳೆಯರಿಗೆ ಚಿನ್ನದ ಆಭರಣಗಳನ್ನು ಧರಿಸುವುದು ತುಂಬಾ ಪ್ರಯೋಜನಕಾರಿ. ಇವು ಹೆಣ್ಣು ಕಷ್ಟದ ದಿನಗಳಲ್ಲಿ ಎದುರಿಸುವಂತಹ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತವೆ.
  • ಕಿವಿಗಳಲ್ಲಿ ಚಿನ್ನದ ಕಿವಿಯೋಲೆ ಮತ್ತು ಜುಮ್ಕಾಗಳನ್ನು ಧರಿಸುವುದರಿಂದ ಸ್ತ್ರೀರೋಗ ಸಮಸ್ಯೆಗಳು, ಕಿವಿಗೆ ಸಂಬಂಧಿಸಿದ ರೋಗಗಳು, ಖಿನ್ನತೆ ಇತ್ಯಾದಿಗಳಿಂದ ಪರಿಹಾರ ನೀಡುತ್ತದೆ.
  • ಚಿನ್ನವನ್ನು ಧರಿಸುವುದರಿಂದ ಮನಸ್ಸಿನ ಏಕಾಗ್ರತೆ ಹೆಚ್ಚಾಗುತ್ತದೆ. ಇದಕ್ಕಾಗಿ, ತೋರುಬೆರಳಿಗೆ ಚಿನ್ನವನ್ನು ಧರಿಸಬೇಕು.
  • ಚಿನ್ನದ ಬಳಕೆಯು ಮಾದಕ ವ್ಯಸನವನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಮಾದಕ ವ್ಯಸನವನ್ನು ಕಡಿಮೆ ಮಾಡಲು ಚಿನ್ನವನ್ನು ಔಷಧಿಗಳಲ್ಲಿ ಬಳಸಲಾಗುತ್ತದೆ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ