ಊಟದ ನಂತರ ಸಿಹಿ ತಿನ್ನಬೇಕೆಂಬ ಬಯಕೆಗೆ ನಿಜವಾದ ಕಾರಣ ಏನು ಗೊತ್ತಾ?

ಸಿಹಿತಿಂಡಿಗಳನ್ನು ತಿನ್ನುವುದು ದೇಹಕ್ಕೆ ತಾತ್ಕಾಲಿಕವಾಗಿ ಮನಸ್ಸಿಗೆ ಶಾಂತಿ ಮತ್ತು ಶಕ್ತಿಯನ್ನು ನೀಡುತ್ತದೆ, ಅದಕ್ಕಾಗಿಯೇ ಕೆಲವರು ಹೆಚ್ಚು ದಣಿವಾದಾಗ ಅಥವಾ ಒತ್ತಡದಲ್ಲಿದ್ದಾಗ ಸಿಹಿಯಾದ ಆಹಾರಗಳ ಸೇವನೆ ಮಾಡುವುದಕ್ಕೆ ಇಷ್ಟಪಡುತ್ತಾರೆ. ಆದರೆ ಸಿಹಿಯ ಅತಿಯಾದ ಸೇವನೆ ದೇಹದ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ಮರೆಯಬಾರದು. ಅದರಲ್ಲಿಯೂ ಕೆಲವರಿಗೆ ಊಟದ ನಂತರ ಸಿಹಿ ತಿನ್ನಬೇಕು ಎಂದು ಹಲವರಿಗೆ ಅನಿಸುತ್ತದೆ. ಇದಕ್ಕೆ ಕಾರಣಗಳು ಹಲವಾರಿದ್ದರು ಕೂಡ ಅದನ್ನು ನಿಯಂತ್ರಿಸುವ ಮಾರ್ಗಗಳತ್ತ ಗಮನ ಹರಿಸಬೇಕು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಊಟದ ನಂತರ ಸಿಹಿ ತಿನ್ನಬೇಕೆಂಬ ಬಯಕೆಗೆ ನಿಜವಾದ ಕಾರಣ ಏನು ಗೊತ್ತಾ?
Sweet Cravings

Updated on: Feb 05, 2026 | 11:22 PM

ಸಾಮಾನ್ಯವಾಗಿ ಕೆಲವರಿಗೆ ಸಿಹಿ ತಿಂಡಿ ಸೇವನೆ ಮಾಡುವುದು ಎಂದರೆ ಬಲು ಇಷ್ಟ. ಅವರು ತಮ್ಮ ಒತ್ತಡ ನಿವಾರಿಸಿಕೊಳ್ಳಲು, ಸಂತೋಷ ಹಂಚಿಕೊಳ್ಳಲು ಹೀಗೆ ನಾನಾ ಕಾರಣಗಳಿಗೆ ಸಿಹಿ ತಿಂದು ಖುಷಿ ಪಡುತ್ತಾರೆ. ಆದರೆ ಇನ್ನು ಕೆಲವರು ಊಟ, ತಿಂಡಿ ಆದ ನಂತರ ಸಿಹಿತಿಂಡಿ ತಿನ್ನುವ ಅಭ್ಯಾಸ (Sweet Cravings) ಇಟ್ಟುಕೊಂಡಿರುತ್ತಾರೆ. ಕೆಲವು ಮನೆಗಳಲ್ಲಿ ಇದೊಂದು ಸಂಪ್ರದಾಯದಂತೆ ಮುಂದುವರೆದುಕೊಂಡು ಬಂದಿದೆ. ಆದರೆ ಊಟವಾದ ನಂತರ ಯಾಕೆ ಸಿಹಿ ತಿಂಡಿ ಸೇವನೆ ಮಾಡುತ್ತಾರೆ ಎಂದು ಎಂದಾದರೂ ಯೋಚಿಸಿದ್ದೀರಾ… ಇದಕ್ಕೆ ಕಾರಣಗಳು ಹಲವಾರಿದ್ದರು ಕೂಡ ಅದನ್ನು ನಿಯಂತ್ರಿಸುವ ಮಾರ್ಗಗಳತ್ತ ಗಮನ ಹರಿಸಬೇಕು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಊಟದ ನಂತರ ಸಿಹಿ ತಿನ್ನಲು ಮನಸ್ಸಾಗುವುದಕ್ಕೆ ಕಾರಣವೇನು?

ಕೆಲವರಿಗೆ ಸಿಹಿತಿಂಡಿ ತಿನ್ನಬೇಕು ಎಂಬ ಬಯಕೆ ಹೆಚ್ಚಾಗಿರುತ್ತದೆ. ಇನ್ನು ಹಲವರಿಗೆ ಆರೋಗ್ಯ ಸಮಸ್ಯೆಗಳಿಂದಾಗಿ ಸಿಹಿತಿಂಡಿಗಳನ್ನು ತಿನ್ನುವ ಆಸೆ ಉಂಟಾಗುತ್ತದೆ. ಅದರಲ್ಲಿಯೂ ಸಕ್ಕರೆ ಮಟ್ಟದಲ್ಲಿನ ಏರಿಳಿತ ಕೂಡ ಇದಕ್ಕೆ ಒಂದು ಪ್ರಮುಖ ಕಾರಣವಾಗಿದೆ. ಜೊತೆಗೆ ಆಹಾರದಲ್ಲಿ ಹೆಚ್ಚಿನ ಪ್ರಮಾಣದ ಸಂಸ್ಕರಿಸಿದ ಕಾರ್ಬೋಹೈಡ್ರೇಟ್‌ಗಳು ಇದ್ದಾಗ, ಸಕ್ಕರೆ ಮಟ್ಟ ಕಡಿಮೆಯಾಗುತ್ತವೆ. ಆಗ ದೇಹವು ಶಕ್ತಿಗಾಗಿ ಹೆಚ್ಚಿನ ಸಕ್ಕರೆಯನ್ನು ಬಯಸುತ್ತದೆ, ಇದರ ಪರಿಣಾಮವಾಗಿ ಸಿಹಿ ತಿಂಡಿಗಳ ಬಯಕೆ ಉಂಟಾಗುತ್ತದೆ. ಅಷ್ಟೇ ಅಲ್ಲ, ಈ ರೀತಿ ಸಿಹಿ ತಿನ್ನಬೇಕು ಎಂದು ಅನಿಸುವುದಕ್ಕೆ ಒಂದು ಪ್ರಮುಖ ಕಾರಣವೆಂದರೆ ಪೌಷ್ಟಿಕಾಂಶದ ಕೊರತೆಯಾಗಿದೆ. ದೇಹದಲ್ಲಿ ಪೋಷಕಾಂಶಗಳ ಕೊರತೆಯಾದಾಗ ಸಿಹಿತಿಂಡಿ ತಿನ್ನಬೇಕು ಎಂಬ ಹಂಬಲ ಹೆಚ್ಚಾಗುತ್ತದೆ.

ಇದನ್ನೂ ಓದಿ: ಪದೇ ಪದೇ ಸಿಹಿತಿಂಡಿ ತಿನ್ನಬೇಕು ಅನಿಸುತ್ತಾ? ಹಾಗಿದ್ರೆ ಈ ವಿಷಯಗಳನ್ನು ನೀವು ತಿಳಿಯಲೇಬೇಕು!

ಕೆಲವರಿಗೆ ಪದೇ ಪದೇ ಬಾಯಾರಿಕೆಯಾಗುತ್ತದೆ ಅಂತವರು ಅದನ್ನು ಹಸಿವು ಎಂದು ತಪ್ಪಾಗಿ ತಿಳಿಯುತ್ತಾರೆ. ಈ ರೀತಿಯಾಗುವ ನಿರ್ಜಲೀಕರಣ ಕೂಡ ದೇಹವನ್ನು ಸಿಹಿತಿಂಡಿ ತಿನ್ನಬೇಕು ಎಂಬ ಬಯಕೆಗೆ ಕಾರಣವಾಗಬಹುದು. ಕೆಲವೊಮ್ಮೆ ದೇಹ ದಣಿದಿದ್ದಾಗಲೂ ಕೂಡ, ದೇಹ ಅಗತ್ಯ ಶಕ್ತಿ ಪಡೆಯಲು ಅಥವಾ ದಣಿವನ್ನು ನಿವಾರಿಸಿಕೊಳ್ಳಲು ಸಿಹಿಯಾಗಿರುವ ಆಹಾರ ಸೇವಿಸಲು ದೇಹ ಬಯಸುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us