AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diabetes: ಮಧುಮೇಹಿಗಳು ಸಹ ಈ ಸಿಹಿ ಹಣ್ಣನ್ನು ತಿನ್ನಬಹುದು, ಆರೋಗ್ಯಕ್ಕೆ ಯಾವುದೇ ಹಾನಿಯಿಲ್ಲ

ಒಮ್ಮೆ ಮಧುಮೇಹ ಕಾಣಿಸಿಕೊಂಡರೆ ಜೀವನದುದ್ದಕ್ಕೂ ನಿಮ್ಮನ್ನು ಕಾಡುತ್ತಲೇ ಇರುತ್ತದೆ, ಮಧುಮೇಹವನ್ನು ಕಡಿಮೆ ಮಾಡಬಹುದೇ ಹೊರತು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ಹೆಚ್ಚು ಖಾರ, ಸಿಹಿ, ಹೆಚ್ಚು ಉಪ್ಪು ಮಿಶ್ರತ ಪದಾರ್ಥಗಳನ್ನು ಸೇವಿಸಬಾರದು.

Diabetes: ಮಧುಮೇಹಿಗಳು ಸಹ ಈ ಸಿಹಿ ಹಣ್ಣನ್ನು ತಿನ್ನಬಹುದು, ಆರೋಗ್ಯಕ್ಕೆ ಯಾವುದೇ ಹಾನಿಯಿಲ್ಲ
Custard Apple
TV9 Web
| Updated By: ನಯನಾ ರಾಜೀವ್|

Updated on: Sep 01, 2022 | 12:56 PM

Share

ಒಮ್ಮೆ ಮಧುಮೇಹ ಕಾಣಿಸಿಕೊಂಡರೆ ಜೀವನದುದ್ದಕ್ಕೂ ನಿಮ್ಮನ್ನು ಕಾಡುತ್ತಲೇ ಇರುತ್ತದೆ, ಮಧುಮೇಹವನ್ನು ಕಡಿಮೆ ಮಾಡಬಹುದೇ ಹೊರತು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ಹೆಚ್ಚು ಖಾರ, ಸಿಹಿ, ಹೆಚ್ಚು ಉಪ್ಪು ಮಿಶ್ರತ ಪದಾರ್ಥಗಳನ್ನು ಸೇವಿಸಬಾರದು.

ಸಾಮಾನ್ಯವಾಗಿ, ಮಧುಮೇಹ ರೋಗಿಗಳಿಗೆ ಸಿಹಿ ಪದಾರ್ಥಗಳಿಂದ ದೂರವಿರಲು ಸಲಹೆ ನೀಡಲಾಗುತ್ತದೆ, ಇದು ಮಾವು ಮತ್ತು ಅನಾನಸ್‌ನಂತಹ ಸಿಹಿ ಹಣ್ಣುಗಳನ್ನು ಒಳಗೊಂಡಿರುತ್ತದೆ. ಆದರೆ ಮಧುಮೇಹ ರೋಗಿಗಳಿಗೆ ಹಾನಿಕಾರಕವಲ್ಲದ ಇಂತಹ ಸಿಹಿ ಹಣ್ಣು ಯಾವುದಾದರೂ ಇದೆಯೇ? ತಿಳಿಯೋಣ.

ಸೀತಾಫಲ ಸೀತಾಫಲವು ಸೆಪ್ಟೆಂಬರ್ ತಿಂಗಳಲ್ಲಿ ಮಾರುಕಟ್ಟೆಗಳಲ್ಲಿ ಲಭ್ಯವಾಗಲು ಪ್ರಾರಂಭಿಸುತ್ತದೆ, ಅದರ ರುಚಿ ಅನೇಕ ಜನರನ್ನು ಆಕರ್ಷಿಸುತ್ತದೆ. ಇಂಗ್ಲಿಷ್​ನಲ್ಲಿ ಇದನ್ನು Custard Apple ಎನ್ನುತ್ತಾರೆ. ಅದನ್ನು ತಿನ್ನುವುದು ಸುಲಭವಲ್ಲ. ಏಕೆಂದರೆ ಮೊದಲು ಅದರ ಸಿಪ್ಪೆಯನ್ನು ಸುಲಿದು ನಂತರ ತಿರುಳಿನಿಂದ ಬೀಜಗಳನ್ನು ತೆಗೆದ ನಂತರ ತಿನ್ನಬೇಕು. ಇದರ ಸೇವನೆ ತುಸು ಕಷ್ಟವಾದರೂ ತುಂಬಾ ರುಚಿ.

ಸೀತಾಫಲದಲ್ಲಿ ಕಂಡುಬರುವ ಪೋಷಕಾಂಶಗಳು ಸೀತಾಫಲವು ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕ ಹೇರಳವಾಗಿರುವುದರಿಂದ ಪೋಷಕಾಂಶಗಳ ಶಕ್ತಿ ಕೇಂದ್ರವೆಂದು ಪರಿಗಣಿಸಲಾಗುತ್ತದೆ. ಇದರಲ್ಲಿ ವಿಟಮಿನ್ ಎ, ವಿಟಮಿನ್ ಸಿ, ಕಬ್ಬಿಣ, ಪೊಟ್ಯಾಸಿಯಮ್, ತಾಮ್ರ ಮತ್ತು ಮೆಗ್ನೀಸಿಯಮ್ ಸಮೃದ್ಧವಾಗಿದೆ.

ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ ಸೀತಾಫಲದಲ್ಲಿ ವಿಟಮಿನ್ B6 ಹೆಚ್ಚಾಗಿದ್ದು, ಈ ಹಣ್ಣಿನಲ್ಲಿರುವ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಮಧುಮೇಹ ರೋಗಿಗಳು ಕೊತ್ತಂಬರಿ ಸೊಪ್ಪನ್ನು ತಿನ್ನಬೇಕು ಏಕೆಂದರೆ ಇದು ಅವರ ಆರೋಗ್ಯವನ್ನು ಉತ್ತಮವಾಗಿಡಲು ಸಹಾಯ ಮಾಡುತ್ತದೆ.

ತೂಕ ನಷ್ಟದಲ್ಲಿ ಪರಿಣಾಮಕಾರಿ ಸೀತಾಫಲದಲ್ಲಿ ಫೈಬರ್ ಹೇರಳವಾಗಿ ಕಂಡುಬರುತ್ತದೆ, ಈ ಕಾರಣದಿಂದಾಗಿ ಹೊಟ್ಟೆಯು ದೀರ್ಘಕಾಲದವರೆಗೆ ತುಂಬಿದ ಅನುಭವವನ್ನು ನೀಡುತ್ತದೆ. ಈ ಸಂದರ್ಭದಲ್ಲಿ ನೀವು ಅತಿಯಾಗಿ ತಿನ್ನುವುದನ್ನು ತಪ್ಪಿಸುತ್ತೀರಿ ಮತ್ತು ಇದು ನಿಮ್ಮ ತೂಕದ ಮೇಲೆ ಪರಿಣಾಮ ಬೀರುತ್ತದೆ, ಇದು ಕ್ರಮೇಣ ಕಡಿಮೆಯಾಗಲು ಪ್ರಾರಂಭಿಸುತ್ತದೆ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್