AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cancer: ರಾಜ್ಯದ ಐಪಿಎಸ್ ಅಧಿಕಾರಿಯೊಬ್ಬರು ಕ್ಯಾನ್ಸರ್​​ಗೆ ಬಲಿ: ದೇಶದಲ್ಲಿ ಹೇಗಿದೆ ಕ್ಯಾನ್ಸರ್​ ಮಹಾಮಾರಿ ಕಾಟ

ಯುವಕರು, ವಯಸ್ಸಾದವರಲ್ಲಿ ಕ್ಯಾನ್ಸರ್​​ ಕಂಡುಬಂದರೆ ಅವರಿಗೆ ಅದರ ಅರಿವಾಗುತ್ತದೆ. ಕ್ಯಾನ್ಸರ್​​ನಿಂದ ದೇಹದಲ್ಲಾಗುವ ಬದಲಾವಣೆಗಳನ್ನು ಅವರು ಗಮನಿಸಬಹುದು. ತಕ್ಷಣವೇ ಆರಂಭಿಕ ಹಂತದಲ್ಲಿಯೇ ಚಿಕಿತ್ಸೆ ಪಡೆದರೆ ಬಹುತೇಕ ಪ್ರಕರಣಗಳಲ್ಲಿ ಸಾವನ್ನು ಜಯಿಸಬಹುದಾಗಿದೆ. ಆದರೆ ಮಕ್ಕಳಲ್ಲಿ ಹಾಗೆ ಹೇಳಲು ಬರುವುದಿಲ್ಲ. ಹಾಗಾದರೆ ಮಕ್ಕಳಲ್ಲಿ ವಿಶೇಷವಾಗಿ ಕ್ಯಾನ್ಸರ್ ಮಾರಿಯನ್ನು ಪತ್ತೆ ಹಚ್ಚುವುದು

Cancer: ರಾಜ್ಯದ ಐಪಿಎಸ್ ಅಧಿಕಾರಿಯೊಬ್ಬರು ಕ್ಯಾನ್ಸರ್​​ಗೆ ಬಲಿ: ದೇಶದಲ್ಲಿ ಹೇಗಿದೆ ಕ್ಯಾನ್ಸರ್​ ಮಹಾಮಾರಿ ಕಾಟ
Cancer: ರಾಜ್ಯದ ಐಪಿಎಸ್ ಅಧಿಕಾರಿಯೊಬ್ಬರು ಕ್ಯಾನ್ಸರ್​​ಗೆ ಬಲಿ: ದೇಶದಲ್ಲಿ ಹೇಗಿದೆ ಕ್ಯಾನ್ಸರ್​ ಮಹಾಮಾರಿ ಕಾಟ
TV9 Web
| Updated By: ಸಾಧು ಶ್ರೀನಾಥ್​|

Updated on: Sep 27, 2021 | 10:01 AM

Share

ನಿನ್ನೆ ರಾಜ್ಯದಲ್ಲಿ ಯುವ ಐಪಿಎಸ್ ಅಧಿಕಾರಿಯೊಬ್ಬರು ಕ್ಯಾನ್ಸರ್​​ಗೆ ಬಲಿಯಾಗಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಅಗಾಧ ಸಾಧನೆಗಳಾಗಿದ್ದರೂ ಕ್ಯಾನ್ಸರ್​ ಮಹಾಮಾರಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಕ್ಯಾನ್ಸರ್​ಗೆ ಯಾವುದೇ ವಯಸ್ಸು, ಜಾತಿ, ಬಡವ ಬಲ್ಲಿದ ಎಂಬ ಬೇಧ ಭಾವ ಇಲ್ಲ. ಮಕ್ಕಳಲ್ಲಿ ಅಂದರೆ 14 ವರ್ಷದೊಳಗಿನ ಬಾಲಕ-ಬಾಲಕಿಯರನ್ನು ಕ್ಯಾನ್ಸರ್ ಹೆಚ್ಚಾಗಿ ಬಾಧಿಸದು. ಒಂದೊಮ್ಮೆ ಕಾಡಿದರೂ ಸಕಾಲದಲ್ಲಿ ಸಮಗ್ರ ಚಿಕಿತ್ಸೆ ನೀಡಿದರೆ ಮಕ್ಕಳು ಕ್ಯಾನ್ಸರ್​​ನಿಂದ ಗುಣಮುಖರಾಗುತ್ತಾರೆ. ಆದರೂ ನೂರಾಋಉ ಮಕ್ಕಳು ದೇಶದಲ್ಲಿ ಕ್ಯಾನ್ಸರ್​​ಗೆ ಬಲಿಯಾಗುತ್ತಿದ್ದಾರೆ.

ಭಾರತದಲ್ಲಿ ಬಾಲ್ಯದ ಕಾಲದಲ್ಲಿ ಮಕ್ಕಳಿಗೆ ಕ್ಯಾನ್ಸರ್​ ಯಾವ ಪ್ರಮಾಣದಲ್ಲಿ ಕಾಡುತ್ತಿದೆ. ಅದರ ಲಕ್ಷಣಗಳು ಏನು? ಯಾವ ಪ್ರಮಾಣದಲ್ಲಿ ಕಾಡುತ್ತಿದೆ ಎಂದು ನೋಡುವ ಮುನ್ನ… ಪ್ರತಿ ವರ್ಷ ವಿಶ್ಯದಾದ್ಯಂತ 3 ಲಕ್ಷಕ್ಕೂಹೆಚ್ಚು ಮಕ್ಕಳಲ್ಲಿ ಕ್ಯಾನ್ಸರ್​​ ಕಾಡುತ್ತದೆ. ಭಾರತದಲ್ಲಿಯೂ ಪ್ರತಿ ವರ್ಷ ಕನಿಷ್ಠ ಅರ್ಧ ಲಕ್ಷದಷ್ಟು ಮಕ್ಕಳಲ್ಲಿ ಕ್ಯಾನ್ಸರ್​​ ಕಂಡುಬರುತ್ತದೆ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಶೇ. 80-90 ಮಂದಿ ಕ್ಯಾನ್ಸರ್​​ನಿಂದ ಗುಣಮುಖರಾಗುತ್ತಾರೆ.

ಯುವಕರು, ವಯಸ್ಸಾದವರಲ್ಲಿ ಕ್ಯಾನ್ಸರ್​​ ಕಂಡುಬಂದರೆ ಅವರಿಗೆ ಅದರ ಅರಿವಾಗುತ್ತದೆ. ಕ್ಯಾನ್ಸರ್​​ನಿಂದ ದೇಹದಲ್ಲಾಗುವ ಬದಲಾವಣೆಗಳನ್ನು ಅವರು ಗಮನಿಸಬಹುದು. ತಕ್ಷಣವೇ ಆರಂಭಿಕ ಹಂತದಲ್ಲಿಯೇ ಚಿಕಿತ್ಸೆ ಪಡೆದರೆ ಬಹುತೇಕ ಪ್ರಕರಣಗಳಲ್ಲಿ ಸಾವನ್ನು ಜಯಿಸಬಹುದಾಗಿದೆ. ಆದರೆ ಮಕ್ಕಳಲ್ಲಿ ಹಾಗೆ ಹೇಳಲು ಬರುವುದಿಲ್ಲ. ಬನ್ನೀ ಹಾಗಾದರೆ ಮಕ್ಕಳಲ್ಲಿ ವಿಶೇಷವಾಗಿ ಕ್ಯಾನ್ಸರ್ ಮಾರಿಯನ್ನು ಪತ್ತೆ ಹಚ್ಚುವುದು (Cancer symptoms in children) ಹೇಗೆ ತಿಳಿಯೋಣ:​

1. ನಿರಂತರ, ವಿವರಿಸಲಾಗದ ದೇಹ ತೂಕ ಕಡಿಮೆಯಾಗುವುದು 2. ತಲೆ ನೋವು, ಬೆಳಗಿನ ವೇಳೆಯೇ ವಾಂತಿ ಬರುವುದು 3. ಮೂಳೆಗಳು, ಕೀಲುಗಳು, ಬೆನ್ನು ಅಥವಾ ಕಾಲುಗಳಲ್ಲಿ ಊತ, ನಿರಂತರ ನೋವು ಕಾಣಿಸುವುದು 4. ಹೊಟ್ಟೆ, ಎದೆ ಭಾಗ, ಪೃಷ್ಠ ಅಥವಾ ಕಂಕುಳಲ್ಲಿ ಗಡ್ಡೆ, ಗಂಟು ಕಾಣಿಸಿಕೊಳ್ಳುವುದು 5. ಕಣ್ಣು ಗುಡ್ಡೆಯಲ್ಲಿ ಬಿಳಿ ಬಣ್ಣ ಮೂಡುವುದು ಅಥವಾ ಕಣ್ಣಿನ ದೃಷ್ಟಿ ಕುಂದುವುದು 6. ಸೋಂಕು ಇಲ್ಲದಿದ್ದರೂ ಜ್ವರ ಮತ್ತೆ ಮತ್ತೆ ಬರುವುದು 7. ಇದ್ದಕ್ಕಿದ್ದಂತೆ ಗಾಯ ಆಗುವುದು, ರಕ್ತ ಸುರಿಯುವುದು 8. ಕಳೆಗುಂದುವುದು ಅಥವಾ ದೀರ್ಘಕಾಲದ ಬಳಲಿಕೆ ಕಂಡುಬರುವುದು

Also Read: ಕ್ಯಾನ್ಸರ್ ಚಿಕಿತ್ಸೆ ಪಡೆದು ಮತ್ತೆ ಒಂದಾದ 3 ವರ್ಷದ ಸ್ನೇಹಿತರು; ಮನಕಲಕುವ ವಿಡಿಯೊ ನೋಡಿ Also Read: ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ರೇಡಿಯೋ ಥೆರಪಿ ಚಿಕಿತ್ಸೆ ಪುನಾರಂಭ.. ತಪ್ಪಿತು ಕ್ಯಾನ್ಸರ್ ರೋಗಿಗಳ ಪರದಾಟ (Symptoms of Childhood Cancer in india)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ