AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ದೇವಸ್ಥಾನದಲ್ಲಿ ಸಕ್ಕರೆ ಕಾಯಿಲೆ 5 ನಿಮಿಷದಲ್ಲಿ ವಾಸಿಯಾಗುತ್ತೆ! ಕಣ್ಣ ಮುಂದೆ ನಡೆಯುತ್ತೆ ಪವಾಡ

ಸಕ್ಕರೆ ಕಾಯಿಲೆ: ಕರ್ನಾಟಕದ ನೆರೆಯ ರಾಜ್ಯವಾದ ತಮಿಳುನಾಡಿನ ತಂಜಾವೂರು ನಗರದಿಂದ 26 ಕಿ. ಮೀ. ದೂರದಲ್ಲಿರುವ ಅಮ್ಮಪೇಟೆ ಎಂಬ ಗ್ರಾಮದಲ್ಲಿ ನೆಲೆಸಿರುವ ವೀಣಿ ಕರುಂಬೇಶ್ವರ ದೇವಸ್ಥಾನ ನಿಮ್ಮ ಸಕ್ಕರೆ ಕಾಯಿಲೆಯನ್ನು ಕ್ಷಣದಲ್ಲಿ ವಾಸಿ ಮಾಡುತ್ತದೆ. ಇಡೀ ಭಾರತ ದೇಶದಲ್ಲಿಯೇ ಸಕ್ಕರೆ ಕಾಯಿಲೆ ವಾಸಿ ಮಾಡುವ ಏಕೈಕ ದೇವಸ್ಥಾನ ಇದಾಗಿದ್ದು ಇಲ್ಲಿ ನಡೆಯುವ ಪವಾಡ ಯಾರನ್ನಾದರೂ ನಿಬ್ಬೆರಗಾಗಿಸುವುದರಲ್ಲಿ ಸಂಶಯವಿಲ್ಲ. ಹಾಗಾದರೆ ಔಷಧಿಗಳಿಂದ ಗುಣಪಡಿಸಲು ಸಾಧ್ಯವಾಗದ ಕಾಯಿಲೆಯನ್ನು ಈ ದೇವಸ್ಥಾನದ ಇರುವೆಗಳು ಹೇಗೆ ಗುಣಪಡಿಸುತ್ತವೆ ಎಂಬುದನ್ನು ತಿಳಿದುಕೊಳ್ಳಿ.

ಈ ದೇವಸ್ಥಾನದಲ್ಲಿ ಸಕ್ಕರೆ ಕಾಯಿಲೆ 5 ನಿಮಿಷದಲ್ಲಿ ವಾಸಿಯಾಗುತ್ತೆ! ಕಣ್ಣ ಮುಂದೆ ನಡೆಯುತ್ತೆ ಪವಾಡ
ತಮಿಳುನಾಡಿನ ವೀಣಿ ಕರುಂಬೇಶ್ವರ ದೇವಸ್ಥಾನ
ಪ್ರೀತಿ ಭಟ್​, ಗುಣವಂತೆ
|

Updated on: May 13, 2025 | 6:55 PM

Share

ಇತ್ತೀಚಿನ ದಿನಗಳಲ್ಲಿ ಸಕ್ಕರೆ ಕಾಯಿಲೆ (Diabetes), ಜನರನ್ನು ಹೆಚ್ಚಾಗಿ ಕಾಡುತ್ತಿರುವ ಆರೋಗ್ಯ (Health) ಸಮಸ್ಯೆಗಳಲ್ಲಿ ಒಂದಾಗಿದೆ. ಜೀವನಶೈಲಿ (lifestyle) ಹಾಗೂ ಆಹಾರ ಪದ್ಧತಿಯಲ್ಲಿ ಆದಂತಹ ಬದಲಾವಣೆಗಳು ಈ ರೋಗ ಬರುವುದಕ್ಕೆ ಪ್ರಮುಖ ಕಾರಣವಾಗಿದೆ. ಇನ್ನು, ಒಮ್ಮೆ ಈ ಕಾಯಿಲೆ ಬಂದರೆ ಇದರಿಂದ ಬಚಾವಾಗಿ ಹೊರಗೆ ಬರುವುದು ಅಷ್ಟು ಸುಲಭ ಎಂದು ಹೇಳಲಾಗುತ್ತದೆ. ಆದರೆ ಈ ಒಂದು ದೇವಸ್ಥಾನದಲ್ಲಿ ದೇವರ ಪವಾಡ ಹೇಗಿದೆ ಎಂದರೆ ಬಂದಂತಹ ಸಕ್ಕರೆ ಕಾಯಿಲೆ ಕ್ಷಣದಲ್ಲಿ ಮಾಯವಾಗುತ್ತದೆ. ಹೌದು, ಕೇಳುವುದಕ್ಕೆ ಇದು ತುಂಬಾ ವಿಚಿತ್ರವಾಗಿರಬಹುದು. ಆದರೆ ಕರ್ನಾಟಕದ ನೆರೆಯ ರಾಜ್ಯವಾದ ತಮಿಳುನಾಡಿನ ತಂಜಾವೂರು ನಗರದಿಂದ 26 ಕಿ. ಮೀ. ದೂರದಲ್ಲಿರುವ ಅಮ್ಮಪೆಟ್ಟಿ ಅಥವಾ ಅಮ್ಮಪೇಟೆ ಎಂಬ ಗ್ರಾಮದಲ್ಲಿ ನೆಲೆಸಿರುವ ವೀಣಿ ಕರುಂಬೇಶ್ವರ ದೇವಸ್ಥಾನದಲ್ಲಿ (Karumbeshwara Temple in Tamil Nadu) ಈ ಆಶ್ಚರ್ಯಕರ ಘಟನೆ ಪ್ರತಿನಿತ್ಯವೂ ನಡೆಯುತ್ತದೆ. ಇಲ್ಲಿಗೆ ಬಂದಂತಹ ಸಾವಿರಾರು ಭಕ್ತರು ತಮಗಿರುವ ಸಕ್ಕರೆ ಕಾಯಿಲೆಯಿಂದ ಮುಕ್ತಿ ಪಡೆದು ಗುಣಮುಖರಾಗಿ ಹೋಗಿದ್ದಾರೆ. ಹಾಗಾದರೆ ಈ ದೇವಸ್ಥಾನದಲ್ಲಿ ಸಕ್ಕರೆ ಕಾಯಿಲೆ ಹೇಗೆ ವಾಸಿಯಾಗುತ್ತದೆ? ಔಷಧಿಗಳಿಂದ ಗುಣಪಡಿಸಲು ಸಾಧ್ಯವಾಗದ ಕಾಯಿಲೆಯನ್ನು ಈ ದೇವಸ್ಥಾನದ ಇರುವೆಗಳು ಹೇಗೆ ಗುಣಪಡಿಸುತ್ತವೆ ಎಂಬುದನ್ನು ತಿಳಿದುಕೊಳ್ಳಿ.

ವಿಜ್ಞಾನಿಗಳೇ ಪವಾಡ ನೋಡಿ ನಿಬ್ಬೆರಗಾಗಿದ್ದಾರೆ!

ಇಡೀ ಭಾರತ ದೇಶದಲ್ಲಿ ಸಕ್ಕರೆ ಕಾಯಿಲೆ ವಾಸಿ ಮಾಡುವ ಏಕೈಕ ದೇವಸ್ಥಾನ ತಮಿಳುನಾಡಿನ ಅಮ್ಮಪೆಟ್ಟಿ ಅಥವಾ ಅಮ್ಮಪೇಟೆ ಎಂಬ ಗ್ರಾಮದಲ್ಲಿದೆ. ಈ ದೇವಸ್ಥಾನದಲ್ಲಿ ಸುಮಾರು 5000 ವರ್ಷಕ್ಕೂ ಹಳೆಯದಾದ ಶಿವಲಿಂಗವಿದೆ. ಇದನ್ನು ಭಗವಾನ್ ಶ್ರೀ ಕೃಷ್ಣನೇ ಪ್ರತಿಷ್ಠಾಪನೆ ಮಾಡಿದ ಎಂಬ ನಂಬಿಕೆ ಇದೆ. ಹಾಗಾಗಿ ಈ ದೇವಸ್ಥಾನದಲ್ಲಿ ಅಷ್ಟು ಶಕ್ತಿ ಇದೆ ಎಂದು ಜನ ನಂಬುತ್ತಾರೆ. ಭಾರತ ಮಾತ್ರವಲ್ಲ ವಿದೇಶಗಳಿಂದಲೂ ಇಲ್ಲಿಗೆ ಭಕ್ತರು ಬಂದು ಸಕ್ಕರೆ ಕಾಯಿಲೆಯಿಂದ ಮುಕ್ತಿ ಪಡೆದಿದ್ದಾರೆ. ಇನ್ನು ಇಲ್ಲಿ ನಡೆಯುವ ಪವಾಡದ ಬಗ್ಗೆ ಹಲವಾರು ರೀತಿಯ ಸಂಶೋಧನೆಗಳು ನಡೆದಿದ್ದು ಸ್ವತಃ ವಿಜ್ಞಾನಿಗಳೇ ಇಲ್ಲಿನ ಪವಾಡ ನೋಡಿ ನಿಬ್ಬೆರಗಾಗಿದ್ದಾರೆ. ಪರೀಕ್ಷೆ ನಡೆಸಿ ಭಕ್ತರು ಗುಣಮುಖರಾಗಿರುವ ಬಗ್ಗೆ ಮಾಹಿತಿ ಕಲೆ ಹಾಕಿ ಈ ವಿಷಯ ಸತ್ಯ ಎಂಬುದನ್ನು ಸಾಬೀತು ಪಡಿಸಿದ್ದಾರೆ.

ಇದನ್ನೂ ಓದಿ: ಬೇಸಿಗೆಯಲ್ಲಿ ಮೊಟ್ಟೆ ಸೇವನೆ ಬೇಡ, ಅಪ್ಪಿತಪ್ಪಿಯೂ ಈ ಸಮಸ್ಯೆ ಇರುವವರು ತಿನ್ನಲೇಬೇಡಿ

ಇದನ್ನೂ ಓದಿ
Image
ಕೆಂಪು ಅಥವಾ ಹಸಿರು ಸೇಬು ಆರೋಗ್ಯಕ್ಕೆ ಯಾವುದು ಒಳ್ಳೆಯದು?
Image
ಟಾಯ್ಲೇಟ್‌ ಶೀಟ್‌ಗಿಂತಲೂ ಅಧಿಕ ಬ್ಯಾಕ್ಟೀರಿಯಾ ಬೆಡ್ ಶೀಟ್‌ನಲ್ಲಿರುತ್ತೆ!
Image
ಮಹಿಳೆಯರೇ ಯೋನಿಯಲ್ಲಿ ಈ ಲಕ್ಷಣ ಕಂಡುಬಂದಾಗ ನಿರ್ಲಕ್ಷಿಸಬೇಡಿ
Image
ಈ 3 ಮೀನುಗಳನ್ನು ಫ್ರೀ ಕೊಟ್ಟರೂ ತಿನ್ನಬೇಡಿ

ಸಕ್ಕರೆ ಕಾಯಿಲೆ ಹೇಗೆ ವಾಸಿಯಾಗುತ್ತೆ?

ಇಲ್ಲಿ ಬರುವಂತಹ ಭಕ್ತರು ತಮ್ಮ ಸಕ್ಕರೆ ಕಾಯಿಲೆಯನ್ನು ವಾಸಿ ಮಾಡಿಕೊಳ್ಳಲು ಕೇವಲ ಅರ್ಧ ಕೆಜಿ ರವೆ ಮತ್ತು ಸಕ್ಕರೆಯನ್ನು ಸಮ ಪ್ರಮಾಣದಲ್ಲಿ ತೆಗೆದುಕೊಂಡು ಅದನ್ನು ಮಿಶ್ರಣ ಮಾಡಿ ತೆಗೆದುಕೊಂಡು ಹೋಗಬೇಕು. ಬಳಿಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪೂಜೆ ಮಾಡಿದ ರವೆ ಮತ್ತು ಸಕ್ಕರೆಯ ಮಿಶ್ರಣವನ್ನು ದೇವಸ್ಥಾನದ ಹೊರಭಾಗದಲ್ಲಿ ಹಾಕಬೇಕು. ಅಲ್ಲಿ ಇರುವೆಗಳು ಬಂದು ರವೆಯನ್ನು ಬೇರೆ ಮಾಡಿ ಸಕ್ಕರೆಯನ್ನು ಮಾತ್ರ ತಿಂದು ಹೋಗುತ್ತದೆ. ಈ ಪವಾಡವನ್ನು ನೋಡಲು ಲಕ್ಷಾಂತರ ಸಂಖ್ಯೆಯಲ್ಲಿ ಜನ ಬರುತ್ತಾರೆ. ಇದು ಕೇಳುವುದಕ್ಕೆ ಸ್ವಲ್ಪ ವಿಚಿತ್ರವೆನಿಸಿದರೂ ಕೂಡ ಇದನ್ನು ನೀವು ನಂಬಲೇ ಬೇಕು. ಇಲ್ಲಿ ಬಂದಂತಹ ಇರುವೆಗಳು ಸಕ್ಕರೆ ತೆಗೆದುಕೊಂಡು ಹೋಗುವಾಗ ದೇಹದಲ್ಲಿರುವ ಸಕ್ಕರೆ ಅಂಶ ಕಡಿಮೆ ಆಗುತ್ತದೆ ಇದನ್ನು ಖುದ್ದಾಗಿ ವೈದ್ಯರೇ ಬಂದು ಪರೀಕ್ಷಿಸಿ ನೋಡಿದ್ದು, ಇರುವೆ ಸಕ್ಕರೆ ತಿನ್ನುತ್ತಿದ್ದಂತೆ ಸಕ್ಕರೆ ಹಾಕಿದವರ ದೇಹದಲ್ಲಿ ಸಕ್ಕರೆ ಅಂಶ ಕಡಿಮೆ ಆಗಿರುವುದನ್ನು ನೋಡಿ ನಿಬ್ಬೆರಗಾಗಿದ್ದಾರೆ. ಅದಲ್ಲದೆ ಈ ರೀತಿ ಈ ಪವಾಡ ನಡೆಯುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ. ಇಲ್ಲಿರುವ ಇರುವೆಗಳು ದೇವರ ಇರುವೆಗಳು ಎಂದೇ ಪ್ರಖ್ಯಾತಗೊಂಡಿದೆ. ಇನ್ನು ಮೊಘಲ ರಾಜರು ಈ ದೇವಸ್ಥಾನವನ್ನು ಆಕ್ರಮಿಸಲು ಬಂದಾಗ ಈ ಇರುವೆಗಳೇ ದೇವಸ್ಥಾನ ರಕ್ಷಿಸಿದ್ದವು ಎಂಬ ನಂಬಿಕೆ ಇದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ