AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಆಹಾರಗಳು ತುಂಬಾ ರುಚಿಯಾಗಿರುತ್ತೆ ಅಂತ ತಿಂದ್ರೆ ಕಿಡ್ನಿ ಕಳೆದುಕೊಳ್ಳುತ್ತೀರಿ ಹುಷಾರ್!

ದೇಹದ ಭಾಗಗಳಲ್ಲಿ ಮೂತ್ರಪಿಂಡಗಳು ಬಹಳ ಮುಖ್ಯ. ಹಾಗಾಗಿ ಮೂತ್ರಪಿಂಡಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಇಲ್ಲದಿದ್ದರೆ, ನಾವು ಸೇವಿಸುವ ಆಹಾರ ನಮಗರಿವಿಲ್ಲದಂತೆ ಮೂತ್ರಪಿಂಡದ ಸಮಸ್ಯೆಗಳಿಗೆ ಕಾರಣವಾಗಬಹುದು. ಆದರೂ ನಾವು ಇಷ್ಟಪಟ್ಟು ಸೇವಿಸುವ ಈ 5 ಆಹಾರಗಳನ್ನು ಪದೇ ಪದೇ ಸೇವನೆ ಮಾಡಿದರೆ ಮೂತ್ರಪಿಂಡಗಳಿಗೆ ಹಾನಿಯಾಗುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಆ ಆಹಾರಗಳು ಯಾವವು? ಆ ಆಹಾರಗಳ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಯಾವ ರೀತಿಯ ಸಮಸ್ಯೆಗಳು ಉಂಟಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಈ ಆಹಾರಗಳು ತುಂಬಾ ರುಚಿಯಾಗಿರುತ್ತೆ ಅಂತ ತಿಂದ್ರೆ ಕಿಡ್ನಿ ಕಳೆದುಕೊಳ್ಳುತ್ತೀರಿ ಹುಷಾರ್!
Kidney
ಪ್ರೀತಿ ಭಟ್​, ಗುಣವಂತೆ
|

Updated on: Jul 12, 2025 | 7:24 PM

Share

ಮನುಷ್ಯನ ದೇಹದಲ್ಲಿ ಮೂತ್ರಪಿಂಡಗಳು ಬಹಳ ಮುಖ್ಯವಾದ ಕಾರ್ಯ ನಿರ್ವಹಿಸುತ್ತವೆ. ನಮ್ಮ ದೇಹದಿಂದ ತ್ಯಾಜ್ಯ ಮತ್ತು ಹೆಚ್ಚುವರಿ ದ್ರವವನ್ನು ತೆಗೆದುಹಾಕುವುದರ ಜೊತೆಗೆ ರಕ್ತ ಪೂರೈಕೆಗೆ ಅಗತ್ಯವಾದ ನೀರು, ಲವಣಗಳು ಮತ್ತು ಖನಿಜಗಳನ್ನು ನಿರ್ವಹಿಸುವಲ್ಲಿ ಸಹಾಯ ಮಾಡುತ್ತವೆ. ಹಾಗಾಗಿ ಮೂತ್ರಪಿಂಡ ಅಥವಾ ಕಿಡ್ನಿ (Kidney) ಆರೋಗ್ಯದ ಬಗ್ಗೆ ಬಹಳ ಕಾಳಜಿ ವಹಿಸಬೇಕಾಗುತ್ತದೆ. ಇಲ್ಲವಾದಲ್ಲಿ ನಾವು ಪ್ರತಿನಿತ್ಯ ಸೇವಿಸುವ ಆಹಾರವು ಮೂತ್ರಪಿಂಡದ ಸಮಸ್ಯೆಗೆ ಮತ್ತು ನಾನಾ ರೀತಿಯ ರೋಗಗಳಿಗೆ ಕಾರಣವಾಗಬಹುದು. ಅದರಲ್ಲಿಯೂ ಮಧುಮೇಹ (diabetes) ಮತ್ತು ಅಧಿಕ ರಕ್ತದೊತ್ತಡ (Hypertension) ಇರುವವರಿಗೆ ಮೂತ್ರಪಿಂಡದ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹಾಗಾಗಿ ನಮ್ಮ ಆರೋಗ್ಯ ಕಾಪಾಡಿಕೊಳ್ಳುವ ಜವಾಬ್ಧಾರಿಯನ್ನು ನಾವೇ ತೆಗೆದುಕೊಳ್ಳಬೇಕಾಗುತ್ತದೆ. ಆದರೆ ನಮಗೆ ತಿಳಿದೋ, ತಿಳಿಯದೆಯೋ ನಾವು ಸೇವಿಸುವ ಈ 5 ಆಹಾರಗಳು ಮೂತ್ರಪಿಂಡಗಳಿಗೆ ಹಾನಿ ಮಾಡುತ್ತದೆ. ಹಾಗಾದರೆ ಅವು ಯಾವುವು? ಸೇವನೆ ಮಾಡುವುದರಿಂದ ಯಾವ ರೀತಿಯ ಸಮಸ್ಯೆಗಳು ಉಂಟಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಸಂಸ್ಕರಿಸಿದ ಮಾಂಸ:

ನಿಮಗೆ ತಿಳಿದಿರಬಹುದು ಸಂಸ್ಕರಿಸಿದ ಮಾಂಸವು ಹೆಚ್ಚಿನ ಸೋಡಿಯಂ ಮಟ್ಟವನ್ನು ಹೊಂದಿರುತ್ತದೆ. ಹಾಗಾಗಿ ನಿಯಮಿತವಾಗಿ ಸೇವನೆ ಮಾಡುವುದರಿಂದ ಅಧಿಕ ರಕ್ತದೊತ್ತಡದ ಅಪಾಯ ಹೆಚ್ಚಾಗುತ್ತದೆ ಮಾತ್ರವಲ್ಲ ಇದನ್ನು ತಿನ್ನುವುದರಿಂದ ಮೂತ್ರಪಿಂಡಗಳ ಮೇಲೆ ಹೆಚ್ಚುವರಿ ಒತ್ತಡ ಉಂಟಾಗುತ್ತದೆ. ಪ್ರಾಣಿ ಪ್ರೋಟೀನ್‌ಗಳ ಅತಿಯಾದ ಸೇವನೆಯು ಮೂತ್ರಪಿಂಡದ ಕಾಯಿಲೆಗೆ ಕಾರಣವಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇನ್ನು ಸಂಸ್ಕರಿಸಿದ ಮಾಂಸದಿಂದ ಮಾತ್ರವಲ್ಲ, ಸಂಸ್ಕರಿಸಿದ ಆಹಾರವನ್ನು ಅತಿಯಾಗಿ ಸೇವನೆ ಮಾಡುವುದು ಕೂಡ ಒಳ್ಳೆಯದಲ್ಲ. ಇದನ್ನು ಸೇವಿಸುವುದರಿಂದ ಟೈಪ್ 2 ಮಧುಮೇಹದ ಬೆಳವಣಿಗೆಗೆ ಕಾರಣವಾಗಬಹುದು. ಈ ಆಹಾರಗಳಲ್ಲಿ ಸಕ್ಕರೆ, ಸೋಡಿಯಂ ಮತ್ತು ಕೊಬ್ಬು ಅಧಿಕವಾಗಿರುತ್ತದೆ. ಪರಿಣಾಮವಾಗಿ, ಮೂತ್ರಪಿಂಡಗಳು ಹಾನಿಗೊಳಗಾಗಬಹುದು.

ಮೇಯನೇಸ್:

ಇದನ್ನು ಸಲಾಡ್ ಅಥವಾ ಸ್ಯಾಂಡ್‌ವಿಚ್‌ಗಳಲ್ಲಿ ಯಥೇಚ್ಛವಾಗಿ ಬಳಸುವುದನ್ನು ನೀವು ನೋಡಿರಬಹುದು. ಇದನ್ನು ಅತಿಯಾಗಿ ಸೇವಿಸಿದರೆ, ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮಗೆ ಗೊತ್ತಾ? ಒಂದು ಚಮಚ ಮೇಯನೇಸ್ 103 ಕ್ಯಾಲೊರಿಗಳನ್ನು ಹೊಂದಿರುತ್ತದೆ ಮತ್ತು ಹೆಚ್ಚಿನ ಪ್ರಮಾಣದ ಸ್ಯಾಚುರೇಟೆಡ್ ಕೊಬ್ಬನ್ನು ಹೊಂದಿರುತ್ತದೆ. ಇದು ತೂಕ ಹೆಚ್ಚಾಗಲು ಕಾರಣವಾಗುವುದಲ್ಲದೆ ಮೂತ್ರಪಿಂಡದ ಸಮಸ್ಯೆಗಳಿಗೂ ಕಾರಣವಾಗುತ್ತದೆ. ಇದರ ಬದಲು ಇದರಂತೆ ರುಚಿ ನೀಡುವ ಗ್ರೀಕ್ ಮೊಸರನ್ನು ಬಳಸಿ.

ಇದನ್ನೂ ಓದಿ
Image
ಕೇವಲ 5 ಮುನ್ನೆಚ್ಚರಿಕೆಗಳನ್ನು ಅನುಸರಿಸಿ, ಹೃದಯಾಘಾತ ಸಂಭವಿಸುವುದಿಲ್ಲ
Image
ಮಧುಮೇಹಿಗಳು ಯಾವ ತರಕಾರಿ ತಿನ್ನಬಾರದು ಗೊತ್ತಾ?
Image
ಪೇರಳೆ ಹಣ್ಣು ಇಷ್ಟನಾ? ಆದ್ರೆ ನಿಮಗೆ ಈ ಖಾಯಿಲೆ ಇದ್ರೆ ತಿನ್ನಬೇಡಿ
Image
ರಾತ್ರಿ ಮಲಗುವ ಮೊದಲು ಈ ಕೆಲಸಗಳನ್ನು ತಪ್ಪಿಯೂ ಮಾಡಬೇಡಿ

ಹುರಿದ ಆಲೂಗಡ್ಡೆ:

ಅನೇಕ ಜನರು ಆಲೂಗಡ್ಡೆಯಿಂದ ತಯಾರಿಸಿದ ಫ್ರೆಂಚ್ ಫ್ರೈಸ್ ಮತ್ತು ಚಿಪ್ಸ್ ತಿನ್ನಲು ಇಷ್ಟಪಡುತ್ತಾರೆ. ಆದರೆ ಅವುಗಳನ್ನು ಅತಿಯಾಗಿ ಸೇವಿಸುವುದರಿಂದ ದೇಹಕ್ಕೆ ಹಾನಿಯಾಗಬಹುದು. ಇವುಗಳ ಅತಿಯಾದ ಸೇವನೆ ನಮ್ಮ ಕಿಡ್ನಿಯ ಆರೋಗ್ಯವನ್ನು ಹಾಳು ಮಾಡಬಹುದು. ಹಾಗಾಗಿ ಹೃದಯ ಮತ್ತು ಮೂತ್ರಪಿಂಡದಂತಹ ಕಾಯಿಲೆಗಳನ್ನು ತಪ್ಪಿಸಲು, ಹುರಿದ ಆಹಾರಗಳಿಂದ ಅದರಲ್ಲಿಯೂ ಆಲೂಗಡ್ಡೆಯಿಂದ ದೂರವಿರಬೇಕು. ಜೊತೆಗೆ ಮೂತ್ರಪಿಂಡದ ಕಾಯಿಲೆ ಇರುವವರು ಆಲೂಗಡ್ಡೆಯಲ್ಲಿ ಹೆಚ್ಚಿನ ಪೊಟ್ಯಾಸಿಯಮ್ ಅಂಶವಿರುವುದರಿಂದ ಅದರ ಸೇವನೆಯನ್ನು ಮಿತಿಗೊಳಿಸಬೇಕೆಂದು ವೈದ್ಯರು ಶಿಫಾರಸು ಮಾಡುತ್ತಾರೆ.

ಇದನ್ನೂ ಓದಿ: Kidney Disease: ಬೆಳಗ್ಗಿನ ಸಮಯದಲ್ಲಿ ಈ ರೀತಿಯಾಗುವುದು ಕಿಡ್ನಿ ಸಮಸ್ಯೆಯ ಲಕ್ಷಣ

ಸೋಡಾ:

ನೀವು ಇಷ್ಟಪಟ್ಟು ಕುಡಿಯುವ ಸೋಡಾಗಳಲ್ಲಿ ಸಕ್ಕರೆ ಮಟ್ಟ ಹೆಚ್ಚಾಗಿರುತ್ತದೆ. ಇದರಲ್ಲಿ ಯಾವುದೇ ಪೌಷ್ಟಿಕಾಂಶದ ಮೌಲ್ಯಗಳಿಲ್ಲ. ಮಾತ್ರವಲ್ಲ ಇದರಲ್ಲಿನ ಹೆಚ್ಚುವರಿ ಕ್ಯಾಲೊರಿಗಳು ತೂಕ ಹೆಚ್ಚಾಗಲು ಕಾರಣವಾಗಬಹುದು. ಇದನ್ನು ಆಗಾಗ ಸೇವಿಸುವುದರಿಂದ ಮೂಳೆಗಳು ದುರ್ಬಲಗೊಳ್ಳಬಹುದು. ಜೊತೆಗೆ ಮೂತ್ರಪಿಂಡ ಕಾಯಿಲೆ, ಮೆಟಬಾಲಿಕ್ ಸಿಂಡ್ರೋಮ್ ಮತ್ತು ಹಲ್ಲಿನ ಸಮಸ್ಯೆಗಳಿಗೆ ಕಾರಣವಾಗಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ