AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪವಾಸದ ಸಮಯದಲ್ಲಿ ಎಳನೀರು ಕುಡಿಯಬಹುದೇ?

ಎಳನೀರು ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಕ್ಯಾಲ್ಸಿಯಂನಂತಹ ಪ್ರಮುಖ ಅಂಶಗಳನ್ನು ಒಳಗೊಂಡಿದೆ. ಇದು ಆರೋಗ್ಯಕ್ಕೆ ಬಹಳ ಅತ್ಯುತ್ತಮವಾದ ಪಾನೀಯ. ಆದರೆ, ಎಳನೀರು ಉಪವಾಸವಿದ್ದಾಗ ಅಥವಾ ಖಾಲಿ ಹೊಟ್ಟೆಯಲ್ಲಿ ಎಳನೀರು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆಯದಾ?

ಉಪವಾಸದ ಸಮಯದಲ್ಲಿ ಎಳನೀರು ಕುಡಿಯಬಹುದೇ?
ಎಳನೀರು
ಸುಷ್ಮಾ ಚಕ್ರೆ
|

Updated on: Jan 20, 2024 | 12:43 PM

Share

ಎಳನೀರು ನೈಸರ್ಗಿಕ ಗ್ಲುಕೋಸ್ ಅಂಶವನ್ನು ಒಳಗೊಂಡಿರುವುದರಿಂದ ಇದನ್ನು ಸೇವಿಸಿದರೆ ತಕ್ಷಣ ಎನರ್ಜಿ ಸಿಗುತ್ತದೆ. ಹೀಗಾಗಿ, ನಮಗೆ ತೀರಾ ಬಾಯಾರಿಕೆಯಾದಾಗ ಅಥವಾ ಹಸಿವಾದಾಗ ಎಳನೀರು ಕುಡಿಯುವುದು ಉತ್ತಮ. ಕೆಲವರು ಉಪವಾಸದ ಸಂದರ್ಭದಲ್ಲೂ ದೇಹ ನಿರ್ಜಲೀಕರಣಗೊಳ್ಳುವುದನ್ನು ತಡೆಯಲು ಮತ್ತು ವೀಕ್​ನೆಸ್ ಕಡಿಮೆ ಮಾಡಲು ಎಳನೀರು ಸೇವಿಸುತ್ತಾರೆ. ಎಳನೀರು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದ್ದು, ದೇಹವನ್ನು ಹೈಡ್ರೇಟ್ ಮಾಡಿ, ದೇಹದ ಎಲೆಕ್ಟ್ರೋಲೈಟ್ ಸಮತೋಲನವನ್ನು ಮರುಸ್ಥಾಪಿಸುತ್ತದೆ. ಆದರೆ, ಮಧ್ಯಂತರ ಅಥವಾ ದೀರ್ಘಾವಧಿಯ ಉಪವಾಸದ ಸಂದರ್ಭದಲ್ಲಿ ಎಳನೀರೊಂದನ್ನೇ ಅವಲಂಬಿಸುವುದು ಆರೋಗ್ಯಕರವಲ್ಲ. ಏಕೆಂದರೆ, ಇದು ದೇಹದಲ್ಲಿ ಸಕ್ಕರೆಯ ಅಂಶದ ಹೆಚ್ಚಳಕ್ಕೆ ಕಾರಣವಾಗುತ್ತದೆ.

ಎಲ್ಲಾ ದೇಹಗಳು ಒಂದೇ ರೀತಿ ಇರುವುದಿಲ್ಲ. ಮಧುಮೇಹದಿಂದ ಬಳಲುತ್ತಿರುವವರು ಎಳನೀರನ್ನು ಮಿತವಾಗಿ ಬಳಸುವುದು ಉತ್ತಮ. ಹಾಗೇ, ಮೂತ್ರಪಿಂಡದ ಕಾಯಿಲೆ ಇರುವವರಿಗೆ ಕೂಡ ಎಳನೀರು ಸೂಕ್ತವಲ್ಲ. ಎಳನೀರು ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಕ್ಯಾಲ್ಸಿಯಂನಂತಹ ಪ್ರಮುಖ ಅಂಶಗಳನ್ನು ಒಳಗೊಂಡಿದೆ. ಇದರ ನಿಯಮಿತ ಸೇವನೆಯು ದೇಹದಲ್ಲಿ ಆರೋಗ್ಯಕರ ಎಲೆಕ್ಟ್ರೋಲೈಟ್ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯಕವಾಗಿದೆ.

ಇದನ್ನೂ ಓದಿ: ಹೆರಿಗೆ ಬಳಿಕ ಆಲಿಯಾ ಭಟ್ ತೂಕ ಇಳಿಸಿದ್ದು ಹೇಗೆ?

ಇದರಾಚೆಗೆ, ಎಳನೀರು ಜೀರ್ಣಕಾರಿ ಆರೋಗ್ಯಕ್ಕೆ ಉಪಯುಕ್ತವಾಗಿದೆ. ಇದು ಜಠರಗರುಳಿನ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದು ಚರ್ಮದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಇದಲ್ಲದೆ, ರಕ್ತದೊತ್ತಡದ ವಿಷಯದಲ್ಲಿ ಎಳನೀರು ನಮ್ಮ ದೇಹಕ್ಕೆ ಗಣನೀಯ ಪ್ರಮಾಣದ ಪೊಟ್ಯಾಸಿಯಮ್ ಅನ್ನು ಒದಗಿಸುತ್ತದೆ, ರಕ್ತದೊತ್ತಡವನ್ನು ನೈಸರ್ಗಿಕವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬಾಳೆಹಣ್ಣಿನ 420 ಮಿಲಿ ಗ್ರಾಂಗೆ ಹೋಲಿಸಿದರೆ ಒಂದು ಕಪ್ ಎಳನೀರು ಸುಮಾರು 600 ಮಿಲಿ ಗ್ರಾಂ ಪೊಟ್ಯಾಸಿಯಮ್ ಅನ್ನು ಹೊಂದಿರುತ್ತದೆ. ಎಳನೀರಲ್ಲಿ ಸಮೃದ್ಧವಾಗಿರುವ ಉತ್ಕರ್ಷಣ ನಿರೋಧಕ ಅಂಶ ಆಕ್ಸಿಡೇಟಿವ್ ಒತ್ತಡ ಮತ್ತು ಜೀವಕೋಶದ ಹಾನಿಯನ್ನು ಕಡಿಮೆ ಮಾಡಲು ಸಹಾಯಕವಾಗಿದೆ.

ಇದನ್ನೂ ಓದಿ: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದರೆ ಏನಾಗುತ್ತೆ?

ಎಳನೀರು ಕಿಡ್ನಿ ಸ್ಟೋನ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಮೂತ್ರದ ಪೊಟ್ಯಾಸಿಯಮ್, ಕ್ಲೋರೈಡ್ ಮತ್ತು ಸಿಟ್ರೇಟ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ವ್ಯಾಯಾಮ ಅಥವಾ ವರ್ಕ್​ಔಟ್ ಮಾಡಿದ ನಂತರ ಎಳನೀರು ಕುಡಿಯುವುದರಿಂದ ನಮ್ಮ ದೇಹ ಹೈಡ್ರೇಟ್ ಆಗುತ್ತದೆ. ಬೇರೆ ಎನರ್ಜಿ ಡ್ರಿಂಕ್​ಗಳನ್ನು ಸೇವಿಸುವುದಕ್ಕಿಂತ ಎಳನೀರು ಕುಡಿಯವುದು ಹೆಚ್ಚು ಆರೋಗ್ಯಕರ.

ಆದರೆ, ನೀವು ವೈದ್ಯಕೀಯ ಸಮಸ್ಯೆಗಳನ್ನು ಹೊಂದಿದ್ದರೆ ದಯವಿಟ್ಟು ನಿಮ್ಮ ವೈದ್ಯರ ಬಳಿ ಅನುಮತಿ ಪಡೆದು ದಿನಕ್ಕೆ ಒಂದು ಕಪ್ ಎಳನೀರು ಸೇವಿಸಿ. ಎಳನೀರಿಗೆ ಹಣ್ಣುಗಳನ್ನು ಹಾಕಿ ಕೂಡ ಸೇವಿಸಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ