AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಪ್ರತಿ ವರ್ಷ 10 ಸಾವಿರ ಶಿಶು ಥಲಸ್ಸೆಮಿಯಾದೊಂದಿಗೆ ಜನಿಸುತ್ತಿದೆ, ಏನಿದು ಕಾಯಿಲೆ ?

ತಲಸ್ಸೇಮಿಯಾ ಎಂಬುದು ರಕ್ತ ಕಾಯಿಲೆಯಾಗಿದ್ದು, ಇದು ದೇಹದಲ್ಲಿ ರಕ್ತ ಕಣಗಳು ಸರಿಯಾಗಿ ಉತ್ಪತ್ತಿಯಾಗದಂತೆ ತಡೆಯುತ್ತದೆ. ಈ ಕಾಯಿಲೆಗೆ ಆರಂಭಿಕ ಲಕ್ಷಣಗಳೇನು? ಹಾಗೂ ಚಿಕಿತ್ಸೆ ಎನು? ಎಂಬುದರ ಬಗ್ಗೆ ಡಾ.ಉಷ್ಮಾ ಸಿಂಗ್ ನೀಡಿರುವ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಪ್ರತಿ ವರ್ಷ 10 ಸಾವಿರ ಶಿಶು ಥಲಸ್ಸೆಮಿಯಾದೊಂದಿಗೆ ಜನಿಸುತ್ತಿದೆ, ಏನಿದು ಕಾಯಿಲೆ ?
Thalassemia ( ಸಾಂದರ್ಭಿಕ ಚಿತ್ರ)
ಅಕ್ಷತಾ ವರ್ಕಾಡಿ
|

Updated on: Aug 08, 2024 | 6:02 PM

Share

ಭಾರತದಲ್ಲಿ ಪ್ರತಿ ವರ್ಷ 10 ಸಾವಿರ ಮಕ್ಕಳು ಥಲಸ್ಸೆಮಿಯಾ ಕಾಯಿಲೆಯಿಂದ ಜನಿಸುತ್ತಿದ್ದಾರೆ. ಭಾರತದಲ್ಲಿ ತಲಸ್ಸೇಮಿಯಾ ರೋಗಿಗಳ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ವರದಿಯಾಗಿದೆ. ತಲಸ್ಸೇಮಿಯಾ ಎಂಬುದು ರಕ್ತ ಕಾಯಿಲೆಯಾಗಿದ್ದು, ದೇಹದಲ್ಲಿ ರಕ್ತ ಕಣಗಳು ಸರಿಯಾಗಿ ಉತ್ಪತ್ತಿಯಾಗದಂತೆ ತಡೆಯುತ್ತದೆ. ಇದರಿಂದಾಗಿ ದೇಹದಲ್ಲಿ ಹಿಮೋಗ್ಲೋಬಿನ್ ಸರಿಯಾಗಿ ಉತ್ಪತ್ತಿಯಾಗುವುದಿಲ್ಲ.

ಭಾರತದಲ್ಲಿ ಪ್ರತಿ ವರ್ಷ 10 ಸಾವಿರ ಮಕ್ಕಳು ಥಲಸ್ಸೆಮಿಯಾ ಕಾಯಿಲೆಯೊಂದಿಗೆ ಜನಿಸುತ್ತಿದ್ದಾರೆ ಎಂದು ಡಾ.ಉಷ್ಮಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಥಲಸ್ಸೆಮಿಯಾ ಸಂದರ್ಭದಲ್ಲಿ, ಮಗುವಿನ ದೇಹಕ್ಕೆ ನಿಯಮಿತವಾಗಿ ರಕ್ತ ವರ್ಗಾವಣೆಯ ಅಗತ್ಯವಿರುತ್ತದೆ ಸಾಕಷ್ಟು ರಕ್ತ ಪೂರೈಕೆ ರಕ್ತದ ಕೊರತೆ ಇರಬಾರದು. ರಕ್ತವನ್ನು ವರ್ಗಾವಣೆ ಮಾಡದಿದ್ದರೆ ಅದು ಬಹಳಷ್ಟು ಸಮಸ್ಯೆಗಳನ್ನು ಉಂಟುಮಾಡುತ್ತದೆ. ಥಲಸ್ಸೆಮಿಯಾ ರೋಗವು ಪೋಷಕರಿಂದ ಮಕ್ಕಳಿಗೆ ಹರಡುತ್ತದೆ. ಆದ್ದರಿಂದ ಇದು ಆನುವಂಶಿಕ ಅಸ್ವಸ್ಥತೆಯಾಗಿದೆ.

ಥಲಸ್ಸೆಮಿಯಾದ ರೋಗ ಲಕ್ಷಣಗಳು:

ಥಲಸ್ಸೆಮಿಯಾವನ್ನು ಎದುರಿಸಲು, ಅದರ ಲಕ್ಷಣಗಳನ್ನು ತಿಳಿದುಕೊಳ್ಳುವುದು ಮುಖ್ಯ ಎಂದು ಡಾ. ಉಷ್ಮಾ ಹೇಳುತ್ತಾರೆ. ಚರ್ಮ ಮತ್ತು ಕಣ್ಣು ಹಳದಿ ಬಣ್ಣಕ್ಕೆ ತಿರುಗಿದರೆ ಅದು ಈ ರೋಗದ ಆರಂಭಿಕ ಲಕ್ಷಣಗಳಾಗಿರಬಹುದು. ಥಲಸ್ಸೆಮಿಯಾ ಚಿಕಿತ್ಸೆಗೆ ಬಹುಮುಖಿ ವಿಧಾನದ ಅಗತ್ಯವಿದೆ. ಈ ರೋಗದ ಸೌಮ್ಯ ರೋಗಲಕ್ಷಣಗಳನ್ನು ಹೊಂದಿರುವ ರೋಗಿಗಳಿಗೆ ನಿಯಮಿತ ಮೇಲ್ವಿಚಾರಣೆಯ ಅಗತ್ಯವಿರುತ್ತದೆ, ಆದಾಗ್ಯೂ, ತೀವ್ರವಾದ ಥಲಸ್ಸೆಮಿಯಾ ಪ್ರಮುಖ ಪ್ರಕರಣಗಳಲ್ಲಿ, ಆಗಾಗ್ಗೆ ರಕ್ತ ವರ್ಗಾವಣೆಯ ಅಗತ್ಯವಿರುತ್ತದೆ. ರಕ್ತವನ್ನು ವರ್ಗಾವಣೆ ಮಾಡದಿದ್ದರೆ ಮಗುವಿನ ಜೀವಕ್ಕೆ ಅಪಾಯವಿದೆ.

ಇದನ್ನೂ ಓದಿ: ಮಗುವಿಗೆ ಸ್ತನ್ಯಪಾನ ಮಾಡುವುದರಿಂದ ಸ್ತನ ಕ್ಯಾನ್ಸರ್ ಅಪಾಯ ತಪ್ಪಿಸಬಹುದು

ಥಲಸ್ಸೆಮಿಯಾಗೆ ಚಿಕಿತ್ಸೆ ಏನು?

ಮೂಳೆ ಮಜ್ಜೆಯ ಕಸಿ ಥಲಸ್ಸೆಮಿಯಾ ಚಿಕಿತ್ಸೆಯಾಗಿದೆ. ಅಸ್ಥಿಮಜ್ಜೆ ಕಸಿ ಮಾಡುವುದರಿಂದ ಈ ರೋಗದ ರೋಗಿಗಳನ್ನು ಉಳಿಸಬಹುದು. ಆದಾಗ್ಯೂ, ಈ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆ ಎಷ್ಟು ಹೆಚ್ಚುತ್ತಿದೆ ಎಂಬುದಕ್ಕೆ ಹೋಲಿಸಿದರೆ ಮೂಳೆ ಮಜ್ಜೆಯ ಕಸಿ ಬಹಳ ಕಡಿಮೆ. ದಾನಿಗಳ ಕೊರತೆ ಮತ್ತು ಜನರಲ್ಲಿ ಅರಿವಿನ ಕೊರತೆಯಿಂದ ಇದು ಸಂಭವಿಸುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!