AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಎದೆ ಹಾಲಿನಷ್ಟೇ ಶಕ್ತಿ ಇರುವ ಮೇಕೆ ಹಾಲನ್ನು ಕುಡಿಯಿರಿ, ಈ ಎಲ್ಲಾ ಪ್ರಯೋಜನಗಳನ್ನು ಪಡೆಯಿರಿ

ಸಾಮಾನ್ಯವಾಗಿ ಎಲ್ಲರೂ ಹಸುವಿನ ಹಾಲು ಮತ್ತು ಎಮ್ಮೆ ಹಾಲನ್ನು ಕುಡಿಯುತ್ತಾರೆ. ಆಡಿನ ಹಾಲು ಕುಡಿಯುವವರು ತುಂಬಾ ವಿರಳ. ಆ ಹಾಲಿನ ಬಗ್ಗೆ ಅಷ್ಟಾಗಿ ಗೊತ್ತಿರದವರು ಇದನ್ನು ಸೇವನೆ ಮಾಡಲು ಹಿಂಜರಿಯುತ್ತಾರೆ. ಆರೋಗ್ಯ ತಜ್ಞರು ಕೂಡ ಆಡಿನ ಹಾಲು ಹಸುವಿನ ಹಾಲಿಗಿಂತ ಉತ್ತಮ ಎಂದು ಹೇಳುತ್ತಾರೆ. ಮಾತ್ರವಲ್ಲ ಈ ಹಾಲಿನಲ್ಲಿ ತಾಯಿಯ ಎದೆ ಹಾಲಿನಷ್ಟೇ ಶಕ್ತಿ ಇದೆ. ಹಾಗಾಗಿ ಇವುಗಳನ್ನು ಎಲ್ಲರೂ ಸೇವನೆ ಮಾಡಬಹುದು. ಇದರಲ್ಲಿ ಕ್ಯಾಲ್ಸಿಯಂ, ಪೊಟ್ಯಾಸಿಯಮ್, ವಿಟಮಿನ್ ಎ ಸಮೃದ್ಧವಾಗಿದೆ. ಹಾಗಾದರೆ ಇದರ ಸೇವನೆಯಿಂದ ಸಿಗುವ ಪ್ರಯೋಜನಗಳೇನು? ನಮ್ಮ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ.

ತಾಯಿಯ ಎದೆ ಹಾಲಿನಷ್ಟೇ ಶಕ್ತಿ ಇರುವ ಮೇಕೆ ಹಾಲನ್ನು ಕುಡಿಯಿರಿ, ಈ ಎಲ್ಲಾ ಪ್ರಯೋಜನಗಳನ್ನು ಪಡೆಯಿರಿ
Goat Milk
ಪ್ರೀತಿ ಭಟ್​, ಗುಣವಂತೆ
|

Updated on: Jul 17, 2025 | 6:15 PM

Share

ಪ್ರತಿನಿತ್ಯ ಹಸುವಿನ ಹಾಲು (Milk) ಮತ್ತು ಎಮ್ಮೆ ಹಾಲು ಕುಡಿಯುವುದು ಸಹಜ ಆದರೆ ಎಂದಾದರೂ ಆಡು ಅಥವಾ ಮೇಕೆ ಹಾಲನ್ನು (Goat Milk) ಟ್ರೈ ಮಾಡಿದ್ದೀರಾ? ಬಹಳ ಕಡಿಮೆ ಜನ ಆಡಿನ ಹಾಲನ್ನು ಕುಡಿಯುತ್ತಾರೆ. ಇದು ಒಂದು ಆರೋಗ್ಯಕರ ಪಾನೀಯವಾಗಿದ್ದು, ಹಲವಾರು ಪೋಷಕಾಂಶಗಳನ್ನು ಹೊಂದಿದೆ. ಹಾಗಾಗಿಯೇ ಆರೋಗ್ಯ (Health) ತಜ್ಞರು ಆಡಿನ ಹಾಲು ಹಸುವಿನ ಹಾಲಿಗಿಂತ ಉತ್ತಮ ಎಂದು ಹೇಳುತ್ತಾರೆ. ಇದರಲ್ಲಿ ಕ್ಯಾಲ್ಸಿಯಂ, ಪೊಟ್ಯಾಸಿಯಮ್, ವಿಟಮಿನ್ ಎ ಸಮೃದ್ಧವಾಗಿದೆ. ಹಸುವಿನ ಹಾಲಿಗೆ ಹೋಲಿಸಿದರೆ ಆಡಿನ ಹಾಲಿನಲ್ಲಿ ಪ್ರೋಟೀನ್ ಪ್ರಮಾಣ ತುಸು ಹೆಚ್ಚಾಗಿರುತ್ತದೆ ಮತ್ತು ಇದರ ರಚನೆ ಕೂಡ ಭಿನ್ನವಾಗಿದೆ. ಈ ಹಾಲಿನಲ್ಲಿ ತಾಯಿಯ ಎದೆ ಹಾಲಿನಷ್ಟೇ ಶಕ್ತಿ ಇದೆ. ಹಾಗಾದರೆ ಇದರ ಸೇವನೆಯಿಂದ ಸಿಗುವ ಪ್ರಯೋಜನಗಳೇನು? ನಮ್ಮ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ.

ಆಡಿನ ಹಾಲು ಹಲವಾರು ರೀತಿಯ ಔಷಧೀಯ ಗುಣಗಳನ್ನು ಹೊಂದಿದೆ. ಇದರಲ್ಲಿ ಕ್ಯಾಲ್ಸಿಯಂ, ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಆದ್ದರಿಂದ, ಈ ಹಾಲನ್ನು ನಿಯಮಿತವಾಗಿ ಕುಡಿಯುವುದರಿಂದ ಅನೇಕ ರೋಗಗಳಿಂದ ದೂರವಿರಬಹುದು ಎಂದು ತಜ್ಞರು ಹೇಳುತ್ತಾರೆ. ಆಡಿನ ಹಾಲು ಸುಲಭವಾಗಿ ಜೀರ್ಣವಾಗುತ್ತದೆ. ಮಾತ್ರವಲ್ಲ ಅಲರ್ಜಿ ಅಂಶವು ಕಡಿಮೆ ಇರುತ್ತದೆ.

ಆಡು ಅಥವಾ ಮೇಕೆ ಹಾಲಿನ ಆರೋಗ್ಯ ಪ್ರಯೋಜನಗಳು:

ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ:

ಹೃದಯಾಘಾತ, ಪಾರ್ಶ್ವವಾಯು ಮತ್ತು ಇತರ ರಕ್ತನಾಳ ಸಂಬಂಧಿ ಕಾಯಿಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಆಡಿನ ಹಾಲಿನಲ್ಲಿರುವ ಪೊಟಾಶಿಯಂ ಅಂಶವು ರಕ್ತದೊತ್ತಡ ನಿವಾರಣೆ ಮಾಡುತ್ತದೆ.

ಇದನ್ನೂ ಓದಿ
Image
ಪ್ರತಿ ರಾತ್ರಿ ಎರಡು ಬೆಳ್ಳುಳ್ಳಿ ಎಸಳು ತಿಂದರೆ, ಈ ಎಲ್ಲಾ ಕಾಯಿಲೆಗಳು ಮಾಯ
Image
ನೆನೆಸಿಟ್ಟ ವಾಲ್ನಟ್ಸ್ ತಿನ್ನುವ ಅಭ್ಯಾಸ ನಿಮಗಿದ್ರೆ ಈ ಸ್ಟೋರಿ ಓದಿ
Image
ಪ್ರತಿನಿತ್ಯ  ಒಂದು ಲವಂಗ ಸೇವನೆ ಮಾಡಿದರೆ ನಿಮ್ಮ ಜೀವನವೇ ಬದಲಾಗುತ್ತೆ!
Image
ಮೆದುಳು ಚುರುಕಾಗಿ ಕೆಲಸ ಮಾಡಲು ತಪ್ಪದೆ ಈ ಆಹಾರಗಳನ್ನು ಸೇವನೆ ಮಾಡಿ

ಜೀರ್ಣಿಸಿಕೊಳ್ಳುವುದು ಸುಲಭ:

ಆಡಿನ ಹಾಲನ್ನು ಸುಲಭವಾಗಿ ಜೀರ್ಣಿಸಿಕೊಳ್ಳಬಹುದಾಗಿದೆ. ಇದು ಯಾವುದೇ ರೀತಿಯ ಅಸ್ವಸ್ಥತೆಗಳಿರಲಿ ಅವುಗಳನ್ನು ಕಡಿಮೆ ಮಾಡಿ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:

ಆಡಿನ ಹಾಲಿನಲ್ಲಿ ಸೆಲೆನಿಯಮ್, ಸತು ಮತ್ತು ವಿಟಮಿನ್ ಎ ಮತ್ತು ಸಿ ಇರುತ್ತದೆ. ಇವು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತವೆ. ಮಾತ್ರವಲ್ಲ ಸೋಂಕುಗಳಿಂದ ನಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ.

ಚರ್ಮದ ಆರೋಗ್ಯಕ್ಕೆ ಒಳ್ಳೆಯದು:

ಆಡಿನ ಹಾಲಿನಲ್ಲಿ ಆಲ್ಫಾ ಹೈಡ್ರಾಕ್ಸಿ ಆಮ್ಲಗಳಿವೆ. ಇವು ಚರ್ಮದ ಹೊಳಪು ಮತ್ತು ರಕ್ಷಣೆಗೆ ಪ್ರಯೋಜನಕಾರಿಯಾಗಿದೆ. ಮಾತ್ರವಲ್ಲ ಇದು ಚರ್ಮವನ್ನು ಮೃದುವಾಗಿಸಲು ಸಹ ಸಹಾಯ ಮಾಡುತ್ತದೆ.

ಮೆದುಳಿಗೆ ಪೋಷಣೆ ನೀಡುತ್ತದೆ:

ಆಡಿನ ಹಾಲಿನಲ್ಲಿ ಒಮೆಗಾ- 3 ಕೊಬ್ಬಿನಾಮ್ಲಗಳಿವೆ. ಇವು ಮೆದುಳಿನ ಬೆಳವಣಿಗೆ ಮತ್ತು ಸ್ಮರಣಶಕ್ತಿಗೆ ಬಹಳ ಒಳ್ಳೆಯದು.

ಮೂಳೆಗಳ ಆರೋಗ್ಯಕ್ಕೆ ಒಳ್ಳೆಯದು:

ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಸಮೃದ್ಧವಾಗಿರುವ ಮೇಕೆ ಹಾಲು ನಮ್ಮ ಮೂಳೆಯ ಬಲವನ್ನು ಹೆಚ್ಚಿಸುತ್ತದೆ. ಜೊತೆಗೆ ಆಸ್ಟಿಯೊಪೊರೋಸಿಸ್‌ನಂತಹ ದೇಹದ ಸಮಸ್ಯೆಗಳನ್ನು ತಡೆಯುತ್ತದೆ.

ಇದನ್ನೂ ಓದಿ: ನಿಮ್ಮ ಹೊಟ್ಟೆ ಕರಗಿಸಬೇಕು ಅಂದ್ರೆ ಚಹಾ ಜೊತೆ ಈ ತಿಂಡಿಗಳನ್ನು ಅಪ್ಪಿತಪ್ಪಿಯೂ ತಿನ್ನಬೇಡಿ

ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ:

ಮೇಕೆ ಹಾಲು ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡುವ ಗುಣಗಳನ್ನು ಹೊಂದಿದೆ. ಇದು ಪಿತ್ತರಸದ ಸಮಸ್ಯೆಗಳನ್ನು ನಿವಾರಿಸುತ್ತದೆ. ಮೇಕೆ ಹಾಲಿನಲ್ಲಿ ಕ್ಯಾಲ್ಸಿಯಂ, ವಿಟಮಿನ್ ಎ ಮತ್ತು ಬಿ6 ಸಮೃದ್ಧವಾಗಿದೆ. ಇದನ್ನು ಕುಡಿಯುವುದರಿಂದ ಹೃದಯ ಮತ್ತು ಮೂಳೆಗಳ ಆರೋಗ್ಯ ಸುಧಾರಿಸುತ್ತದೆ. ಮಾತ್ರವಲ್ಲ ಇದು ಊತವನ್ನು ಕಡಿಮೆ ಮಾಡುತ್ತದೆ. ಆತಂಕವನ್ನು ನಿವಾರಿಸುತ್ತದೆ. ರಕ್ತಹೀನತೆಯ ಸಮಸ್ಯೆಗಳು ತಡೆಯಲು ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ