AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿಯರೇ… ಅವಧಿ ಪೂರ್ವ ಹೆರಿಗೆ ಆಗ್ಬಾರ್ದು ಅಂದ್ರೆ ನೀವು ಸೀಮೆ ಬದನೆಕಾಯಿಯನ್ನು ಸೇವಿಸಬೇಕಂತೆ

ಸೀಮೆ ಬದನೆಯ ಆರೋಗ್ಯ ಪ್ರಯೋಜನ: ಸೀಮೆ ಬದನೆ ಬಗ್ಗೆ ನಿಮಗೆ ತಿಳಿದಿರಬಹುದು. ಇದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಆದರೆ ಇದರ ಪ್ರಯೋಜನಗಳ ಬಗ್ಗೆ ಅಷ್ಟಾಗಿ ಯಾರಿಗೂ ತಿಳಿದಿಲ್ಲ. ಬೊಜ್ಜು ಸೇರಿ ಮಾರಕ ಕ್ಯಾನ್ಸರ್ ತಡೆಗೂ ಇದು ಸಹಕಾರಿ. ಹಾಗಾದರೆ ಇವುಗಳನ್ನು ಸೇವನೆ ಮಾಡಿದರೆ ಎಷ್ಟೆಲ್ಲಾ ಲಾಭಗಳಿವೆ? ಯಾಕೆ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ಗರ್ಭಿಣಿಯರೇ... ಅವಧಿ ಪೂರ್ವ ಹೆರಿಗೆ ಆಗ್ಬಾರ್ದು ಅಂದ್ರೆ ನೀವು ಸೀಮೆ ಬದನೆಕಾಯಿಯನ್ನು ಸೇವಿಸಬೇಕಂತೆ
ಸೀಮೆ ಬದನೆImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 22, 2025 | 7:03 PM

Share

ಪ್ರತಿನಿತ್ಯ ನಾವು ಅಡುಗೆಗೆ ವಿವಿಧ ರೀತಿಯ ತರಕಾರಿಗಳನ್ನು ಬಳಸುತ್ತೇವೆ. ಅವು ನಾಲಿಗೆಗೆ ರುಚಿ ನೀಡುವುದು ಮಾತ್ರವಲ್ಲ, ಆರೋಗ್ಯಕ್ಕೂ ಕೂಡ ಬಹಳ ಪ್ರಯೋಜನಕಾರಿಯಾಗಿದೆ. ಇಂತಹ ತರಕಾರಿಗಳಲ್ಲಿ ಸೀಮೆ ಬದನೆಯೂ (Chayote) ಒಂದು. ಇವುಗಳಲ್ಲಿ ಸಾಕಷ್ಟು ಆರೋಗ್ಯ (Health) ಪ್ರಯೋಜನಗಳಿವೆ. ಸೋರೆಕಾಯಿ (Bottle Gourd /Sorakaya) ಜಾತಿಗೆ ಸೇರಿದ ಈ ತರಕಾರಿ ಪೋಷಕಾಂಶಗಳ ಆಗರವಾಗಿದ್ದು, ಬೊಜ್ಜು ಸೇರಿ ಮಾರಕ ಕ್ಯಾನ್ಸರ್ ತಡೆಗೂ ಸಹಕಾರಿಯಾಗಿದೆ. ಹಾಗಾದರೆ ಇವುಗಳನ್ನು ಸೇವನೆ ಮಾಡಿದರೆ ಎಷ್ಟೆಲ್ಲಾ ಲಾಭಗಳಿವೆ? ಯಾಕೆ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ಹೃದಯದ ಆರೋಗ್ಯಕ್ಕೆ ಪೂರಕ

ಫೈಟೊಕೆಮಿಕಲ್‌ಗಳು ಸೀಮೆ ಬದನೆಯಲ್ಲಿ ಹೆಚ್ಚಿರುವುದರಿಂದ ರಕ್ತದ ಹರಿವು ಸುಧಾರಣೆ ಮತ್ತು ರಕ್ತದ ಒತ್ತಡ ನಿಯಂತ್ರಿಸಲು ಸಹಕಾರಿಯಾಗಲಿದೆ. ಹಾಗೆಯೇ ಇದರಲ್ಲಿರುವ ಮೈರಿಸೆಟಿನ್ ಕೊಲೆಸ್ಟ್ರಾಲ್ , ಉರಿಯೂತ, ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಕ್ಯಾನ್ಸರ್‌ನಂತಹ ಮಾರಕ ರೋಗಗಳ ತಡೆಗೆ ನೆರವಾಗಲಿದೆ.

ಚರ್ಮದ ಕ್ಯಾನ್ಸರ್ ತಡೆಗೆ ರಾಮಬಾಣ

ಸೀಮೆ ಬದನೆಯ ಒಳ ಮತ್ತು ಹೊರ ಭಾಗದ ಸಿಪ್ಪೆಯಲ್ಲಿ ಕ್ಯಾನ್ಸರ್ ತಡೆಯಬಲ್ಲ ಆಂಟಿಆಕ್ಸಿಡೆಂಟ್ಗಳು ಹೇರಳವಾಗಿದ್ದು, ಚರ್ಮದ ಕ್ಯಾನ್ಸರ್ ತಡೆಗೆ ಇದು ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ.

ಇದನ್ನೂ ಓದಿ
Image
ಮುಟ್ಟಿದರೆ ಮುನಿಯುವ ಈ ಗಿಡದಲ್ಲಿದೆ ಹಲವು ಪ್ರಯೋಜನ
Image
ಗರ್ಭಾವಸ್ಥೆಯಲ್ಲಿ ಪತಿಯ ಬೆಂಬಲ ಹೇಗಿರಬೇಕು?
Image
ಬೆಳಗ್ಗೆ ಬೇಗ ಏಳಬೇಕು ಎಂದು ಅಲಾರಾಂ ಇಡುವವರು ಈ ಸ್ಟೋರಿ ತಪ್ಪದೆ ಓದಿ
Image
ಈ ಒಂದು ಗಿಡದ ಎಲೆ ದೇಹ ಆರೋಗ್ಯಕ್ಕೆ ರಕ್ಷಣಾ ಕವಚ

ದೇಹದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣ

ಸೀಮೆ ಬದನೆ ದೇಹದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸಲು ಒಂದು ಉತ್ತಮ ತರಕಾರಿಯಾಗಿದೆ. ಫೈಬರ್ ಅಂಶ ಇದರಲ್ಲಿ ಹೆಚ್ಚಾಗಿದ್ದು, ಟೈಪ್ 2 ಡಯಾಬಿಟಿಸ್ ರೋಗಿಗಳು ಸೇವಿಸಬಹುದಾದ ಉತ್ತಮ ತರಕಾರಿಗಳಲ್ಲಿ ಇದೂ ಒಂದಾಗಿದೆ.

ಲಿವರ್ ಆರೋಗ್ಯ ಕಾಪಾಡುತ್ತೆ ಸೀಮೆ ಬದನೆ

ಲಿವರ್‌ನಲ್ಲಿ ಅನಗತ್ಯ ಕೊಬ್ಬು ಶೇಖರಣೆಯಾಗದಂತೆ ತಡೆಯುವ ಸಾಮರ್ಥ್ಯ ಈ ಸೀಮೆ ಬದನೆಗೆ ಇದೆ. ಜೊತೆಗೆ ಗರ್ಭಿಣಿಯರ ಆರೋಗ್ಯ ವೃದ್ಧಿಗೂ ಇದೊಂದು ಉತ್ತಮ ತರಕಾರಿಯಾಗಿದ್ದು, ಇದರಲ್ಲಿನ ಬಿ9 ಪ್ರೊಟೀನ್ ಭ್ರೂಣದ ಬೆಳವಣಿಗೆಗೆ ಅದರಲ್ಲೂ ಮೆದುಳು ಮತ್ತು ಬೆನ್ನುಹುರಿಯ ಬೆಳವಣಿಗೆಗೆ ನೆರವಾಗಲಿದೆ. ಇದರಿಂದಾಗಿ ಅವಧಿ ಪೂರ್ವ ಮಗು ಹುಟ್ಟುವ ಸಾಧ್ಯತೆ ಕಡಿಮೆಯಾಗುತ್ತದೆ.​ ಅಧ್ಯಯನದ ಪ್ರಕಾರ ಲ್ಯುಕೇಮಿಯಾ ಮತ್ತು ಗರ್ಭಕಂಠದ ಕ್ಯಾನ್ಸರ್’ನಂತಹ ಕೆಲವು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ನಿಧಾನಗೊಳಿಸುವ ಅಗತ್ಯ ಪೋಷಕಾಂಶಗಳನ್ನು ಸೀಮೆ ಬದನೆಕಾಯಿ ಹೊಂದಿದೆ.

ಇದನ್ನೂ ಓದಿ: Health Tips: ಕಾಡು ಬದನೆಕಾಯಿ ಪ್ರಯೋಜನ ಕೇಳಿದ ಮೇಲೆ ಇದನ್ನು ತಿಂದೆ ತಿನ್ನುತ್ತೀರಿ!

ಸೀಮೆ ಬದನೆಯಲ್ಲಿರುವ ಆಂಟಿಆಕ್ಸಿಡೆಂಟ್ಗಳು ಮತ್ತು ಪೋಷಕಾಂಶಗಳು ಜೀವಕೋಶಗಳ ಮೇಲಾಗುವ ಹಾನಿ ತಪ್ಪಿಸಲು ನೆರವಾಗುತ್ತವೆ. ಇದರಿಂದ ದೇಹದ ವಯಸ್ಸಾಗುವಿಕೆ ನಿಧಾನಗೊಳ್ಳಲಿದೆ ಎಂಬುದನ್ನ ಹಲವು ಅಧ್ಯಯನಗಳು ಹೇಳಿವೆ. ಅಲ್ಲದೆ ಉರಿಯೂತ ಸಮಸ್ಯೆಗೂ ಈ ಸೀಮೆ ಬದನೆ ರಾಮಬಾಣ. ವಿಟಮಿನ್ ಸಿ ಇದರಲ್ಲಿ ಸಮೃದ್ಧವಾಗಿದ್ದು ಮಳೆಗಾಲ ಮತ್ತು ಚಳಿಗಾಲದಲ್ಲಿ ಸಾಮಾನ್ಯವಾಗಿ ಕಂಡು ಬರುವ ವಿವಿಧ ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕುಗಳ ವಿರುದ್ಧ ಹೋರಾಡಲು ಈ ತರಕಾರಿ ನಿಮಗೆ ನೆರವಾಗಲಿದೆ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್