AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಧಾರಣೆಗೆ ಪದೇ ಪದೇ ಸಮಸ್ಯೆ ಆಗ್ತಾ ಇದ್ದರೆ ಚಿಂತೆ ಮಾಡಬೇಡಿ, ವಾರಕ್ಕೊಮ್ಮೆ ಈ ಒಂದು ಹಣ್ಣನ್ನು ಸೇವಿಸಿ

ಮಹಿಳೆಯರ ಆರೋಗ್ಯ: ಆವಕಾಡೊ ಹಣ್ಣು ಸ್ವಲ್ಪ ದುಬಾರಿಯಾದರೂ ಕೂಡ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದು ಮಹಿಳೆಯರ ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಅದಕ್ಕಾಗಿಯೇ ವೈದ್ಯರು ಇದನ್ನು ಯಥೇಚ್ಛವಾಗಿ ಸೇವನೆ ಮಾಡಿ ಎಂದು ಹೇಳುತ್ತಾರೆ. ಈ ಹಣ್ಣಿನಲ್ಲಿರುವ ಔಷಧೀಯ ಗುಣಗಳು ಮಹಿಳೆಯರಿಗೆ ಸಂಬಂಧ ಪಟ್ಟ ಸಮಸ್ಯೆಗಳಿಗೆ ಪರಿಹಾರ ನೀಡಲು ಸಹಕಾರಿಯಾಗಿದೆ. ಹಾಗಾದರೆ ಮಹಿಳೆಯರು ಆವಕಾಡೊ ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಗರ್ಭಧಾರಣೆಗೆ ಪದೇ ಪದೇ ಸಮಸ್ಯೆ ಆಗ್ತಾ ಇದ್ದರೆ ಚಿಂತೆ ಮಾಡಬೇಡಿ, ವಾರಕ್ಕೊಮ್ಮೆ ಈ ಒಂದು ಹಣ್ಣನ್ನು ಸೇವಿಸಿ
Avocado
ಪ್ರೀತಿ ಭಟ್​, ಗುಣವಂತೆ
|

Updated on: Aug 06, 2025 | 3:32 PM

Share

ಆವಕಾಡೊ (Avocado) ಹಣ್ಣಿನ ಬಗ್ಗೆ ಯಾರು ತಾನೇ ಕೇಳಿಲ್ಲ ಹೇಳಿ? ಇದೊಂದು ಪೋಷಕಾಂಶಗಳಿಂದ ಸಮೃದ್ಧವಾಗಿರುವ ಹಣ್ಣು. ಮಾತ್ರವಲ್ಲ ಮಹಿಳೆಯರ ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಹೌದು. ಆರೋಗ್ಯ ತಜ್ಞರು ಹೇಳುವ ಪ್ರಕಾರ ಹಾರ್ಮೋನುಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಆವಕಾಡೊಗಳು ಬಹಳ ಅವಶ್ಯಕವಾಗಿದೆ. ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಮ್ಮೆಯಾದರೂ ಈ ಹಣ್ಣನ್ನು ಮಹಿಳೆಯರು ಸೇವನೆ ಮಾಡಬೇಕು. ಅದರಲ್ಲಿಯೂ ಮುಟ್ಟಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವರು ಇದನ್ನು ಸೇವನೆ ಮಾಡುವುದರಿಂದ ಯಾವುದೇ ರೀತಿಯ ಔಷಧಗಳಿಲ್ಲದೆ ಪರಿಹಾರ ಪಡೆಯಬಹುದಾಗಿದೆ. ಹಾಗಾದರೆ ಮಹಿಳೆಯರು ಆವಕಾಡೊ ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

  • ಆವಕಾಡೊವನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಮುಟ್ಟನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮಾತ್ರವಲ್ಲ ಋತುಚಕ್ರದ ಸಮಯದಲ್ಲಿ ಕಂಡುಬರುವ ಹೊಟ್ಟೆ ನೋವನ್ನು ಕೂಡ ನಿವಾರಿಸುತ್ತದೆ.
  • ಆವಕಾಡೊ ಚರ್ಮಕ್ಕೆ ಒಳ್ಳೆಯದು. ಇದರಲ್ಲಿ ವಿಟಮಿನ್ ಇ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು ಅವು ಚರ್ಮವನ್ನು ಮೃದುವಾಗಿ, ಕಾಂತಿಯುತವಾಗಿ ಮತ್ತು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತವೆ.
  • ಆವಕಾಡೊ ಹಣ್ಣು ಹಾರ್ಮೋನುಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಮಾತ್ರವಲ್ಲ ಈ ಹಣ್ಣುಗಳಲ್ಲಿ ಆರೋಗ್ಯಕರ ಮೋನೋಸಾಚುರೇಟೆಡ್ ಕೊಬ್ಬುಗಳು ಸಮೃದ್ಧವಾಗಿದ್ದು ಮಹಿಳೆಯರ ಹಾರ್ಮೋನುಗಳನ್ನು ಸಮತೋಲನಗೊಳಿಸುವಲ್ಲಿ ಅವು ಉಪಯುಕ್ತವಾಗಿವೆ.
  • ಆವಕಾಡೊ ಗರ್ಭಧಾರಣೆಗೂ ಒಳ್ಳೆಯದು. ಇದರಲ್ಲಿರುವ ಹೆಚ್ಚಿನ ಫೋಲಿಕ್ ಆಮ್ಲದ ಅಂಶವು ಗರ್ಭಧಾರಣೆಯ ಮೊದಲು ಮತ್ತು ಆ ಸಮಯದಲ್ಲಿ ತುಂಬಾ ಉಪಯುಕ್ತವಾಗಿದೆ. ಇದು ಭ್ರೂಣದ ಬೆಳವಣಿಗೆಗೂ ಕೂಡ ಸಹಾಯ ಮಾಡುತ್ತದೆ. ಹಾಗಾಗಿ ಗರ್ಭಿಣಿಯರು ಕೂಡ ಇದನ್ನು ಸೇವನೆ ಮಾಡಬಹುದು.
  • ಈ ಹಣ್ಣು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಮಾತ್ರವಲ್ಲ ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹೀಗಾಗಿ, ಇದು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
  • ಈ ಹಣ್ಣುಗಳು ಮೂಳೆಗಳನ್ನು ಬಲವಾಗಿಡುತ್ತದೆ. ಮಾತ್ರವಲ್ಲ, ಈ ಆವಕಾಡೊಗಳು ಹಣ್ಣಿನಲ್ಲಿ ವಿಟಮಿನ್ ಕೆ, ಕ್ಯಾಲ್ಸಿಯಂ ಮತ್ತು ರಂಜಕ ಸಮೃದ್ಧವಾಗಿದ್ದು, ಮೂಳೆಗಳ ಬಲಕ್ಕೆ ಅವಶ್ಯಕವಾಗಿದೆ.
  • ಆವಕಾಡೊ ಹಣ್ಣಿನಲ್ಲಿ ಹೆಚ್ಚಿನ ಫೈಬರ್ ಅಂಶವಿರುವುದರಿಂದ, ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಮಲಬದ್ಧತೆಯಂತಹ ಸಮಸ್ಯೆಗೆ ಮುಕ್ತಿ ನೀಡುವುದಕ್ಕೆ ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!