AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಲದಲ್ಲಿ ಬೆಳಿಗ್ಗೆ ಎದ್ದ ತಕ್ಷಣ ಈ ಒಂದು ಕೆಲಸವನ್ನ ತಪ್ಪದೆ ಮಾಡಿ; ಯಾವ ರೋಗವೂ ಬರಲ್ಲ

ಮಳೆಗಾಲದಲ್ಲಿ, ವಾತಾವರಣದಲ್ಲಿ ತೇವಾಂಶ ಹೆಚ್ಚಾಗಿರುವುದರಿಂದ, ಬ್ಯಾಕ್ಟೀರಿಯಾ, ವೈರಸ್‌ ಮತ್ತು ಶಿಲೀಂಧ್ರಗಳು ವೇಗವಾಗಿ ಬೆಳೆಯಲು ಪ್ರಾರಂಭಿಸುತ್ತದೆ. ಹಾಗಾಗಿ ಈ ಸಮಯದಲ್ಲಿ ಯಾವ ರೋಗವೂ ಬರಬಾರದು, ಆರೋಗ್ಯವಾಗಿರಬೇಕು ಎಂದು ಬಯಸುವವರು, ಇಂದಿನಿಂದಲೇ ಬೆಳಿಗ್ಗೆ ಎದ್ದ ತಕ್ಷಣ ಬೆಚ್ಚಗಿನ ನೀರನ್ನು ಕುಡಿಯಲು ಪ್ರಾರಂಭಿಸಿ. ಈ ಸಣ್ಣ ಅಭ್ಯಾಸದಿಂದ ಅನೇಕ ರೋಗಗಳಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಬಹುದು. ಜೊತೆಗೆ, ಯಾಕೆ ಮಳೆಗಾಲದಲ್ಲಿ ಬಿಸಿಯಾಗಿರುವ ನೀರನ್ನು ಕುಡಿಯಬೇಕು? ಅದರಿಂದ ಸಿಗುವ ಪ್ರಯೋಜನಗಳೇನು? ಈ ರೀತಿಯ ಆಸಕ್ತಿದಾಯಕ ವಿಷಯಗಳನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಳೆಗಾಲದಲ್ಲಿ ಬೆಳಿಗ್ಗೆ ಎದ್ದ ತಕ್ಷಣ ಈ ಒಂದು ಕೆಲಸವನ್ನ ತಪ್ಪದೆ ಮಾಡಿ; ಯಾವ ರೋಗವೂ ಬರಲ್ಲ
Warm Water
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jul 25, 2025 | 7:35 AM

Share

ಮಳೆಗಾಲದ (Monsoon) ವಾತಾವರಣ ಬಹಳ ಖುಷಿ ಕೊಡುತ್ತದೆ. ತಂಪಾದ ಗಾಳಿ, ಮೋಡ, ಮಳೆ ಎಲ್ಲವೂ ಮನಸ್ಸಿಗೆ ಹಿತವಾಗಿರುತ್ತದೆ. ಆದರೆ ಈ ಸಮಯದಲ್ಲಿ, ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಕೂಡ ಬಹಳ ಮುಖ್ಯವಾಗುತ್ತದೆ. ಚಿಕ್ಕ ಚಿಕ್ಕ ವಿಷಯಗಳನ್ನು ಕೂಡ ನಿರ್ಲಕ್ಷಿಸುವಂತಿಲ್ಲ. ಅದರಲ್ಲಿಯೂ ಆಹಾರ, ನೀರು ಇವೆಲ್ಲವೂ ಸರಿಯಾದ ರೀತಿಯಲ್ಲಿ ಸೇವನೆ ಮಾಡಬೇಕಾಗುತ್ತದೆ. ಹೇಗೆ, ಬೇಸಿಗೆ ಕಾಲದಲ್ಲಿ ತಣ್ಣೀರನ್ನು ಕುಡಿಯುತ್ತೇವೆಯೋ ಹಾಗೆಯೇ ಮಳೆ ಬರುವ ಸಮಯದಲ್ಲಿ ಬೆಚ್ಚಗಿನ ನೀರನ್ನು ಕುಡಿಯಬೇಕಾಗುತ್ತದೆ. ಆದರೆ ತಂಪಾದ ವಾತಾವರಣದಲ್ಲಿ ಜನರು ಬಾಯಾರಿಕೆ ಆಗುವುದಿಲ್ಲ ಎಂದು ನೀರು ಕುಡಿಯುವುದನ್ನೇ ಕಡಿಮೆ ಮಾಡುತ್ತಾರೆ. ಇನ್ನು ಕೆಲವರು ಬಿಸಿ ನೀರನ್ನು ಕುಡಿಯಲು ಇಷ್ಟಪಡದೆ ಸಿಕ್ಕ ಸಿಕ್ಕಲ್ಲಿ ನೀರು ಕುಡಿಯುತ್ತಾರೆ. ಆದರೆ ನಿಮಗೆ ತಿಳಿದಿರಲಿ ಮಳೆಗಾಲದಲ್ಲಿ ಬೆಚ್ಚಗಿನ ಅಥವಾ ಬಿಸಿಯಾಗಿರುವ ನೀರನ್ನು (Warm Water) ಕುಡಿಯುವುದು ಬಹಳ ಮುಖ್ಯ. ಅದರಲ್ಲಿಯೂ ಬೆಳಿಗ್ಗೆ ಎದ್ದ ತಕ್ಷಣ ಬೆಚ್ಚಗಿನ ನೀರನ್ನು ಕುಡಿಯುವುದು ನಮ್ಮ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಯಾಕೆ ಮಳೆಗಾಲದಲ್ಲಿ ಬಿಸಿಯಾಗಿರುವ ನೀರನ್ನು ಕುಡಿಯಬೇಕು? ಬಿಸಿನೀರು ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆಗೆ ಹೇಗೆ ಸಹಾಯ ಮಾಡುತ್ತದೆಯೇ? ಬೆಳಿಗ್ಗೆ ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಸಿಗುವ ಪ್ರಯೋಜನಗಳೇನು? ಈ ರೀತಿಯ ಆಸಕ್ತಿದಾಯಕ ವಿಷಯಗಳನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಳೆಗಾಲದಲ್ಲಿ, ವಾತಾವರಣದಲ್ಲಿ ತೇವಾಂಶ ಹೆಚ್ಚಾಗಿರುವುದರಿಂದ, ಬ್ಯಾಕ್ಟೀರಿಯಾ, ವೈರಸ್‌ ಮತ್ತು ಶಿಲೀಂಧ್ರಗಳು ವೇಗವಾಗಿ ಬೆಳೆಯಲು ಪ್ರಾರಂಭಿಸುತ್ತದೆ. ಈ ಸಮಯದಲ್ಲಿ ಸೋಂಕುಗಳ ಅಪಾಯ ಹೆಚ್ಚಾಗಲು ಇದೇ ಕಾರಣ. ಮಾತ್ರವಲ್ಲ ಶೀತ, ಕೆಮ್ಮು, ಗಂಟಲು ನೋವು, ಹೊಟ್ಟೆ ನೋವು, ಅತಿಸಾರ ಮತ್ತು ವೈರಲ್ ಕಾಯಿಲೆಗಳು ಬೇಗನೆ ಹರಡುತ್ತವೆ. ಇಂತಹ ಪರಿಸ್ಥಿತಿಯಲ್ಲಿ, ಬಿಸಿನೀರನ್ನು ಕುಡಿಯುವ ಅಭ್ಯಾಸ ಬೆಳೆಸಿಕೊಂಡರೆ, ಹಲವು ರೋಗಗಳು ಬರುವುದನ್ನು ತಡೆಗಟ್ಟಬಹುದು.

ಜೀರ್ಣಶಕ್ತಿ ಹೆಚ್ಚಾಗುತ್ತದೆ

ದೆಹಲಿಯ ಏಮ್ಸ್‌ನ ಗ್ಯಾಸ್ಟ್ರೋ ತಜ್ಞೆ ಡಾ. ಅನನ್ಯ ಗುಪ್ತಾ ಅವರ ಪ್ರಕಾರ, ಮಳೆಗಾಲದಲ್ಲಿ ಬಿಸಿನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುವುದಲ್ಲದೆ, ರೋಗ ನಿರೋಧಕ ಶಕ್ತಿಯೂ ಬಲಗೊಳ್ಳುತ್ತದೆ. ಬಿಸಿನೀರು ಕುಡಿದಾಗ, ಅದು ದೇಹದೊಳಗೆ ಹೋಗಿ ಸಂಗ್ರಹವಾದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದು ಹೊಟ್ಟೆಯನ್ನು ಶುದ್ಧೀಕರಿಸುತ್ತದೆ ಮತ್ತು ಗ್ಯಾಸ್ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ. ಮಳೆಗಾಲದಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ, ಬಿಸಿನೀರು ತುಂಬಾ ಪ್ರಯೋಜನಕಾರಿಯಾಗಿದೆ.

ಇದನ್ನೂ ಓದಿ
Image
ಪ್ರತಿ ರಾತ್ರಿ ಎರಡು ಬೆಳ್ಳುಳ್ಳಿ ಎಸಳು ತಿಂದರೆ, ಈ ಎಲ್ಲಾ ಕಾಯಿಲೆಗಳು ಮಾಯ
Image
ನೆನೆಸಿಟ್ಟ ವಾಲ್ನಟ್ಸ್ ತಿನ್ನುವ ಅಭ್ಯಾಸ ನಿಮಗಿದ್ರೆ ಈ ಸ್ಟೋರಿ ಓದಿ
Image
ಪ್ರತಿನಿತ್ಯ  ಒಂದು ಲವಂಗ ಸೇವನೆ ಮಾಡಿದರೆ ನಿಮ್ಮ ಜೀವನವೇ ಬದಲಾಗುತ್ತೆ!
Image
ಮೆದುಳು ಚುರುಕಾಗಿ ಕೆಲಸ ಮಾಡಲು ತಪ್ಪದೆ ಈ ಆಹಾರಗಳನ್ನು ಸೇವನೆ ಮಾಡಿ

ಕಫವನ್ನು ನಿವಾರಿಸುತ್ತದೆ

ಬೆಚ್ಚಗಿನ ನೀರು ಕುಡಿಯುವುದರಿಂದ ಗಂಟಲು ಮತ್ತು ಎದೆಯಲ್ಲಿ ಸಿಲುಕಿರುವ ಲೋಳೆಯ ಅಂಶವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಮಾತ್ರವಲ್ಲ ಇದು ಉಸಿರಾಟವನ್ನು ಸುಲಭಗೊಳಿಸುತ್ತದೆ. ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಹೆಚ್ಚಾಗಿ ಕಂಡುಬರುವುದರಿಂದ ಇಂತಹ ಸಂದರ್ಭಗಳಲ್ಲಿ, ಬೆಚ್ಚಗಿನ ನೀರು ಕುಡಿಯುವುದು ತುಂಬಾ ಪ್ರಯೋಜನಕಾರಿ. ಇದು ಗಂಟಲಿನ ಆರೋಗ್ಯ ಕಾಪಾಡುತ್ತದೆ ಜೊತೆಗೆ ಸೋಂಕುಗಳು ಉಲ್ಬಣಗೊಳ್ಳುವುದನ್ನು ತಡೆಯುತ್ತದೆ. ಹೆಚ್ಚುವರಿಯಾಗಿ, ಬೆಚ್ಚಗಿನ ನೀರು ಚರ್ಮಕ್ಕೂ ಒಳ್ಳೆಯದು. ದೇಹವು ಒಳಗಿನಿಂದ ಶುದ್ಧವಾಗಿದ್ದಾಗ, ಮುಖದ ಹೊಳಪು ಕೂಡ ಚೆನ್ನಾಗಿರುತ್ತದೆ.

ಇದನ್ನೂ ಓದಿ: ಮಳೆಗಾಲದಲ್ಲೂ ಐಸ್ ಕ್ರೀಮ್ ತಿನ್ನುವವರು ಈ ಸ್ಟೋರಿ ಮಿಸ್ ಮಾಡ್ದೆ ಓದಿ

ದೇಹದ ನಿರ್ವಿಶೀಕರಣ

ಅನೇಕರು ಬೆಳಿಗ್ಗೆ ಎದ್ದ ತಕ್ಷಣ ನಿಂಬೆ ಮತ್ತು ಜೇನುತುಪ್ಪದೊಂದಿಗೆ ಬೆರೆಸಿದ ಬೆಚ್ಚಗಿನ ನೀರನ್ನು ಕುಡಿಯುತ್ತಾರೆ. ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ ಮಾತ್ರವಲ್ಲದೆ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಮಳೆಗಾಲದಲ್ಲಿಯೂ ಈ ಅಭ್ಯಾಸವನ್ನು ಮುಂದುವರಿಸಬಹುದು. ವಿಶೇಷವಾಗಿ ನಾವು ಹೊರಗಿನ ಆಹಾರವನ್ನು ಹೆಚ್ಚಾಗಿ ಸೇವಿಸಿದಾಗ ಅಥವಾ ನಮ್ಮ ಜೀರ್ಣಕ್ರಿಯೆಗೆ ತೊಂದರೆಯಾದಾಗ ಬೆಚ್ಚಗಿನ ನೀರು ಕುಡಿಯುವುದರಿಂದ ಪರಿಹಾರ ಸಿಗುತ್ತದೆ. ಆದರೆ ತುಂಬಾ ಬಿಸಿಯಾಗಿರುವ ನೀರನ್ನು ಕುಡಿಯಬಾರದು ಏಕೆಂದರೆ ಇದು ಗಂಟಲು ಮತ್ತು ಹೊಟ್ಟೆಯ ಒಳಪದರವನ್ನು ಹಾನಿಗೊಳಿಸುತ್ತದೆ. ಆದ್ದರಿಂದ, ಯಾವಾಗಲೂ ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ. ದಿನಕ್ಕೆ ಕನಿಷ್ಠ 2 ರಿಂದ 3 ಬಾರಿ ಬೆಚ್ಚಗಿನ ನೀರನ್ನು ಕುಡಿಯುವುದು ಬಹಳ ಒಳ್ಳೆಯದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ