AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಯಾಗಿ ವಾಯು ಮಾಲಿನ್ಯಕ್ಕೆ ಒಗ್ಗಿಕೊಳ್ಳುವುದು ಮೂಳೆ ಹಾನಿಗೆ ಕಾರಣವಾಗಬಹುದು

ಋತುಬಂಧಕ್ಕೊಳಗಾದ ಮಹಿಳೆಯರು ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ, 50 ವರ್ಷಕ್ಕಿಂತ ಮೇಲ್ಪಟ್ಟ ಇಬ್ಬರು ಮಹಿಳೆಯರಲ್ಲಿ ಒಬ್ಬರು ಆಸ್ಟಿಯೊಪೊರೋಸಿಸ್ ಕಾರಣದಿಂದಾಗಿ ಮೂಳೆ ಮುರಿತವನ್ನು ಅನುಭವಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಅತಿಯಾಗಿ ವಾಯು ಮಾಲಿನ್ಯಕ್ಕೆ ಒಗ್ಗಿಕೊಳ್ಳುವುದು ಮೂಳೆ ಹಾನಿಗೆ ಕಾರಣವಾಗಬಹುದು
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on:Feb 24, 2023 | 2:49 PM

Share

ಅತಿಯಾಗಿ ವಾಯು ಮಾಲಿನ್ಯಕ್ಕೆ ಒಗ್ಗಿಕೊಳ್ಳುವುದು ಮೂಳೆಗಳ ನಷ್ಟಕ್ಕೆ ಕಾರಣವಾಗಬಹುದು: ಸಂಶೋಧನೆ 1.6 ಲಕ್ಷಕ್ಕೂ ಹೆಚ್ಚು ಋತುಬಂಧಕ್ಕೊಳಗಾದ ಮಹಿಳೆಯರ ಆರೋಗ್ಯದ ಮೇಲೆ ನಡೆಸಿದ ಸಂಶೋಧನೆಯೂ ಅತಿಯಾಗಿ ವಾಯು ಮಾಲಿನ್ಯಕ್ಕೆ ಒಗ್ಗಿಕೊಳ್ಳುವುದು ಮೂಳೆಗಳ ನಷ್ಟಕ್ಕೆ ಕಾರಣವಾಗಬಹುದು ಎಂದು ತಿಳಿಸಿದೆ.ಅಧ್ಯಯನದ ಪ್ರಕಾರ, ನೈಟ್ರಸ್ ಆಕ್ಸೈಡ್‌ಗಳಂತಹ ವಾಯು ಮಾಲಿನ್ಯಕಾರಕಗಳ ಹೆಚ್ಚಿದ ಮಟ್ಟಗಳು ಋತುಬಂಧಕ್ಕೊಳಗಾದ ಮಹಿಳೆಯರಲ್ಲಿ ಮೂಳೆ ಹಾನಿಗೆ ಕಾರಣವಾಗುತ್ತದೆ ಎಂದು ತಿಳಿಸಿದೆ.

ಅಮೆರಿಕದ ಕೊಲಂಬಿಯಾ ಯೂನಿವರ್ಸಿಟಿ ಮೇಲ್‌ಮ್ಯಾನ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್‌ನ ವಿಜ್ಞಾನಿಗಳ ಪ್ರಕಾರ, ನೈಟ್ರಸ್ ಆಕ್ಸೈಡ್‌ಗಳು ವಯಸ್ಸಾಗುತ್ತಾ ಹೋದಂತೆ ಮಹಿಳೆಯರಲ್ಲಿ ಸಾಮಾನ್ಯವಾಗಿ ಕಂಡುಬರುವ ಬೆನ್ನು ನೋವಿಗಿಂತ ಎರಡು ಪಟ್ಟು ಹಾನಿಯುಂಟುಮಾಡುತ್ತದೆ ಎಂದು ಕಂಡುಬಂದಿದೆ.ಇ-ಕ್ಲಿನಿಕಲ್ ಮೆಡಿಸಿನ್ ಜರ್ನಲ್‌ನಲ್ಲಿ ಪ್ರಕಟವಾದ ಇತ್ತೀಚಿನ ಸಂಶೋಧನೆಯು ವಾಯುಮಾಲಿನ್ಯ ಮತ್ತು ಮೂಳೆ ಖನಿಜ ಸಾಂದ್ರತೆಯ ನಡುವಿನ ಸಂಪರ್ಕವನ್ನು ನಿರ್ದಿಷ್ಟವಾಗಿ ಋತುಬಂಧಕ್ಕೊಳಗಾದ ಮಹಿಳೆಯರಲ್ಲಿ ಮತ್ತು ಮೂಳೆ ಫಲಿತಾಂಶಗಳ ಮೇಲೆ ವಾಯು ಮಾಲಿನ್ಯದ ಮಿಶ್ರಣಗಳ ಪರಿಣಾಮಗಳ ಕುರಿತು ಸಂಕ್ಷಿಪ್ತವಾಗಿ ವಿವರಿಸಲಾಗಿದೆ.

ಇದನ್ನೂ ಓದಿ: ಮಹಿಳೆಯರಲ್ಲಿ ಕಂಡುಬರುವ ಕ್ಯಾನ್ಸರ್​​ನ ಆರಂಭಿಕ ಲಕ್ಷಣಗಳನ್ನು ತಿಳಿದುಕೊಳ್ಳಿ

1.6 ಲಕ್ಷಕ್ಕೂ ಹೆಚ್ಚು ಋತುಬಂಧಕ್ಕೊಳಗಾದ ಮಹಿಳೆಯರ ಜನಾಂಗೀಯವಾಗಿ ವೈವಿಧ್ಯಮಯ ಗುಂಪಿನ ಮಹಿಳೆಯರ ಹೆಲ್ತ್​​​ ಇನಿಶಿಯೇಟಿವ್ ಅಧ್ಯಯನದಿಂದ ಸಂಗ್ರಹಿಸಿದ ಡೇಟಾವನ್ನು ಆಧರಿಸಿ ಒಟ್ಟಾರೆ ಅಧ್ಯಯನವನ್ನು ಸಿದ್ಧಪಡಿಸಲಾಗಿದೆ. ಭಾಗವಹಿಸುವವರ ಮನೆ ವಿಳಾಸಗಳ ಆಧಾರದ ಮೇಲೆ ಅವರು ವಾಯು ಮಾಲಿನ್ಯ ಮಾನ್ಯತೆಗಳನ್ನು ಅಂದಾಜಿಸಿದ್ದಾರೆ. ಋತುಬಂಧಕ್ಕೊಳಗಾದ ಮಹಿಳೆಯರು ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ, 50 ವರ್ಷಕ್ಕಿಂತ ಮೇಲ್ಪಟ್ಟ ಇಬ್ಬರು ಮಹಿಳೆಯರಲ್ಲಿ ಒಬ್ಬರು ಆಸ್ಟಿಯೊಪೊರೋಸಿಸ್ ಕಾರಣದಿಂದಾಗಿ ಮೂಳೆ ಮುರಿತವನ್ನು ಅನುಭವಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:49 pm, Fri, 24 February 23

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!