Eye Health: ಕಣ್ಣಿನ ಆರೋಗ್ಯದ ಮೇಲೆ ಮಧುಮೇಹದ ಪ್ರಭಾವ

ಕಣ್ಣಿನ ಆರೋಗ್ಯಕ್ಕೆ ಸಂಬಂಧಿಸಿದಂತೆ ಮಧುಮೇಹ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಈ ಲೇಖನದಲ್ಲಿ ತಿಳಿದುಕೊಳ್ಳಿ.

Eye Health: ಕಣ್ಣಿನ ಆರೋಗ್ಯದ ಮೇಲೆ ಮಧುಮೇಹದ ಪ್ರಭಾವ
ಕಣ್ಣಿನ ಆರೋಗ್ಯದ ಮೇಲೆ ಮಧುಮೇಹದ ಪರಿಣಾಮImage Credit source: iapb.org
Follow us
|

Updated on: Jun 24, 2023 | 1:28 PM

ಮಧುಮೇಹವು ದೀರ್ಘಕಾಲದ ಚಯಾಪಚಯ ಅಸ್ವಸ್ಥತೆಯಾಗಿದ್ದು, ಇದು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಮಧುಮೇಹ,ಡಯಾಬಿಟೀಸ್,ಶುಗರ್‌ ಎಂದು ನಾನಾ ವಿಧದಲ್ಲಿ ಕರೆಯುತ್ತಾರೆ. ರಕ್ತದಲ್ಲಿ ಗ್ಲುಕೋಸ್‌ ಅಥವಾ ಸಕ್ಕರೆ ಅಂಶವು ಹೆಚ್ಚಾಗುವುದೇ ಇದಕ್ಕೆ ಪ್ರಮುಖ ಕಾರಣ. ಆದರೆ ಕಣ್ಣಿನ ಆರೋಗ್ಯಕ್ಕೆ ಸಂಬಂಧಿಸಿದಂತೆ ಮಧುಮೇಹ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಈ ಲೇಖನದಲ್ಲಿ ತಿಳಿದುಕೊಳ್ಳಿ.

ಕಣ್ಣಿನ ಮೇಲೆ ಮಧುಮೇಹದ ಪರಿಣಾಮಗಳು:

ಡಯಾಬಿಟಿಕ್ ರೆಟಿನೋಪತಿ:

ಮಧುಮೇಹಕ್ಕೆ ಸಂಬಂಧಿಸಿದ ಸಾಮಾನ್ಯ ಕಣ್ಣಿನ ಸಮಸ್ಯೆಗಳಲ್ಲಿ ಒಂದು ಡಯಾಬಿಟಿಕ್ ರೆಟಿನೋಪತಿ. ಈ ಸ್ಥಿತಿಯು ಕಣ್ಣಿನ ಹಿಂಭಾಗದಲ್ಲಿರುವ ಬೆಳಕಿನ ಸೂಕ್ಷ್ಮ ಅಂಗಾಂಶವಾದ ರೆಟಿನಾದಲ್ಲಿನ ರಕ್ತನಾಳಗಳ ಮೇಲೆ ಪರಿಣಾಮ ಬೀರುತ್ತದೆ. ಮಧುಮೇಹ ಹೊಂದಿರುವ ವ್ಯಕ್ತಿಗಳಲ್ಲಿ ದೀರ್ಘಕಾಲದ ಅಧಿಕ ರಕ್ತದ ಸಕ್ಕರೆಯ ಮಟ್ಟವು ರೆಟಿನಾದೊಳಗಿನ ಸಣ್ಣ ರಕ್ತನಾಳಗಳಿಗೆ ಹಾನಿ ಮಾಡುತ್ತದೆ. ಇದು ಅಸ್ಪಷ್ಟ ಅಥವಾ ವಿಕೃತ ದೃಷ್ಟಿಗೆ ಕಾರಣವಾಗಬಹುದು. ಚಿಕಿತ್ಸೆ ನೀಡದೆ ಬಿಟ್ಟರೆ ಸಂಪೂರ್ಣ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಡಯಾಬಿಟಿಕ್ ಮ್ಯಾಕ್ಯುಲರ್ ಎಡಿಮಾ:

ಕಣ್ಣುಗಳ ಮೇಲೆ ಪರಿಣಾಮ ಬೀರುವ ಮಧುಮೇಹದ ಮತ್ತೊಂದು ಪ್ರಮುಖ ಭಾಗವೆಂದರೆ ಡಯಾಬಿಟಿಕ್ ಮ್ಯಾಕ್ಯುಲರ್ ಎಡಿಮಾ (DME). ಮ್ಯಾಕುಲಾ ರೆಟಿನಾದ ಮಧ್ಯಭಾಗದಲ್ಲಿರುವ ಒಂದು ಸಣ್ಣ ಪ್ರದೇಶವಾಗಿದ್ದು, ತೀಕ್ಷ್ಣವಾದ ಮತ್ತು ಸ್ಪಷ್ಟವಾದ ದೃಷ್ಟಿಗೆ ಕಾರಣವಾಗಿದೆ. ಡಯಾಬಿಟಿಕ್ ರೆಟಿನೋಪತಿಯಲ್ಲಿ, ಹಾನಿಗೊಳಗಾದ ರಕ್ತನಾಳಗಳು ಮಕ್ಯುಲಾವನ್ನು ಪ್ರವೇಶಿಸಲು ದ್ರವವನ್ನು ಉಂಟುಮಾಡಬಹುದು ಮತ್ತು ಮ್ಯಾಕುಲಾ ಊದಿಕೊಳ್ಳಬಹುದು. ಇದರಿಂದಾಗಿ ಒದಲು ಮತ್ತು ಮುಖಗಳನ್ನು ಗುರುತಿಸಲು ಕಷ್ಟವಾಗುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: ಹವಾಮಾನ ಬದಲಾವಣೆಯು ಹೊಟ್ಟೆ ಉಬ್ಬರಕ್ಕೆ ಕಾರಣವಾಗಬಹುದು; ಪೌಷ್ಟಿಕತಜ್ಞರ ಸಲಹೆಗಳು ಇಲ್ಲಿವೆ

ಕಣ್ಣಿನ ಪೊರೆ:

ಕಣ್ಣಿನ ಪೊರೆಯು ಕಣ್ಣಿನೊಳಗಿನ ಮಸೂರದ ಮೇಲೆ ಪೊರೆಯಂತೆ ಹುಟ್ಟಿಕೊಳ್ಳುತ್ತದೆ. ಕಾಲ ಕ್ರಮೇಣ ಇದು ದೃಷ್ಟಿ ದೋಷಕ್ಕೆ ಕಾರಣವಾಗುತ್ತದೆ. ಮಧುಮೇಹವು ಮಸೂರದ ಪ್ರೋಟೀನ್‌ಗಳ ಚಯಾಪಚಯವನ್ನು ಬದಲಾಯಿಸುವ ಮೂಲಕ ಕಣ್ಣಿನ ಪೊರೆಗಳಿಗೆ ಕಾರಣವಾಗಬಹುದು. ಆದ್ದರಿಂದ, ಮಧುಮೇಹ ಹೊಂದಿರುವ ಜನರು ಕಿರಿಯ ವಯಸ್ಸಿನಲ್ಲಿ ಕಣ್ಣಿನ ಪೊರೆಗಳಂತಹ ಲಕ್ಷಣಗಳು ಕಂಡು ಬರುತ್ತವೆ.

ಇಂತಹ ಸಮಸ್ಯೆಯಿಂದ ನೀವು ಹೊರಬರಲು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು, ಆರೋಗ್ಯಕರ ಆಹಾರದ ಸೇವನೆ ಅಗತ್ಯವಾಗಿದೆ ಇದರ ಜೊತೆಗೆ 6ತಿಂಗಳಿಗೊಮ್ಮೆ ನೇತ್ರಶಾಸ್ತ್ರಜ್ಞರನ್ನು ಭೇಟಿ ಮಾಡಿ ನಿಯಮಿತ ಕಣ್ಣಿನ ಪರೀಕ್ಷೆ ಮಾಡಿಸಿಕೊಳ್ಳುವುದು ಅಗತ್ಯವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?