AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eye Health: ಕಣ್ಣಿನ ಆರೋಗ್ಯದ ಮೇಲೆ ಮಧುಮೇಹದ ಪ್ರಭಾವ

ಕಣ್ಣಿನ ಆರೋಗ್ಯಕ್ಕೆ ಸಂಬಂಧಿಸಿದಂತೆ ಮಧುಮೇಹ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಈ ಲೇಖನದಲ್ಲಿ ತಿಳಿದುಕೊಳ್ಳಿ.

Eye Health: ಕಣ್ಣಿನ ಆರೋಗ್ಯದ ಮೇಲೆ ಮಧುಮೇಹದ ಪ್ರಭಾವ
ಕಣ್ಣಿನ ಆರೋಗ್ಯದ ಮೇಲೆ ಮಧುಮೇಹದ ಪರಿಣಾಮImage Credit source: iapb.org
ಅಕ್ಷತಾ ವರ್ಕಾಡಿ
|

Updated on: Jun 24, 2023 | 1:28 PM

Share

ಮಧುಮೇಹವು ದೀರ್ಘಕಾಲದ ಚಯಾಪಚಯ ಅಸ್ವಸ್ಥತೆಯಾಗಿದ್ದು, ಇದು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಮಧುಮೇಹ,ಡಯಾಬಿಟೀಸ್,ಶುಗರ್‌ ಎಂದು ನಾನಾ ವಿಧದಲ್ಲಿ ಕರೆಯುತ್ತಾರೆ. ರಕ್ತದಲ್ಲಿ ಗ್ಲುಕೋಸ್‌ ಅಥವಾ ಸಕ್ಕರೆ ಅಂಶವು ಹೆಚ್ಚಾಗುವುದೇ ಇದಕ್ಕೆ ಪ್ರಮುಖ ಕಾರಣ. ಆದರೆ ಕಣ್ಣಿನ ಆರೋಗ್ಯಕ್ಕೆ ಸಂಬಂಧಿಸಿದಂತೆ ಮಧುಮೇಹ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದನ್ನು ಈ ಲೇಖನದಲ್ಲಿ ತಿಳಿದುಕೊಳ್ಳಿ.

ಕಣ್ಣಿನ ಮೇಲೆ ಮಧುಮೇಹದ ಪರಿಣಾಮಗಳು:

ಡಯಾಬಿಟಿಕ್ ರೆಟಿನೋಪತಿ:

ಮಧುಮೇಹಕ್ಕೆ ಸಂಬಂಧಿಸಿದ ಸಾಮಾನ್ಯ ಕಣ್ಣಿನ ಸಮಸ್ಯೆಗಳಲ್ಲಿ ಒಂದು ಡಯಾಬಿಟಿಕ್ ರೆಟಿನೋಪತಿ. ಈ ಸ್ಥಿತಿಯು ಕಣ್ಣಿನ ಹಿಂಭಾಗದಲ್ಲಿರುವ ಬೆಳಕಿನ ಸೂಕ್ಷ್ಮ ಅಂಗಾಂಶವಾದ ರೆಟಿನಾದಲ್ಲಿನ ರಕ್ತನಾಳಗಳ ಮೇಲೆ ಪರಿಣಾಮ ಬೀರುತ್ತದೆ. ಮಧುಮೇಹ ಹೊಂದಿರುವ ವ್ಯಕ್ತಿಗಳಲ್ಲಿ ದೀರ್ಘಕಾಲದ ಅಧಿಕ ರಕ್ತದ ಸಕ್ಕರೆಯ ಮಟ್ಟವು ರೆಟಿನಾದೊಳಗಿನ ಸಣ್ಣ ರಕ್ತನಾಳಗಳಿಗೆ ಹಾನಿ ಮಾಡುತ್ತದೆ. ಇದು ಅಸ್ಪಷ್ಟ ಅಥವಾ ವಿಕೃತ ದೃಷ್ಟಿಗೆ ಕಾರಣವಾಗಬಹುದು. ಚಿಕಿತ್ಸೆ ನೀಡದೆ ಬಿಟ್ಟರೆ ಸಂಪೂರ್ಣ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಡಯಾಬಿಟಿಕ್ ಮ್ಯಾಕ್ಯುಲರ್ ಎಡಿಮಾ:

ಕಣ್ಣುಗಳ ಮೇಲೆ ಪರಿಣಾಮ ಬೀರುವ ಮಧುಮೇಹದ ಮತ್ತೊಂದು ಪ್ರಮುಖ ಭಾಗವೆಂದರೆ ಡಯಾಬಿಟಿಕ್ ಮ್ಯಾಕ್ಯುಲರ್ ಎಡಿಮಾ (DME). ಮ್ಯಾಕುಲಾ ರೆಟಿನಾದ ಮಧ್ಯಭಾಗದಲ್ಲಿರುವ ಒಂದು ಸಣ್ಣ ಪ್ರದೇಶವಾಗಿದ್ದು, ತೀಕ್ಷ್ಣವಾದ ಮತ್ತು ಸ್ಪಷ್ಟವಾದ ದೃಷ್ಟಿಗೆ ಕಾರಣವಾಗಿದೆ. ಡಯಾಬಿಟಿಕ್ ರೆಟಿನೋಪತಿಯಲ್ಲಿ, ಹಾನಿಗೊಳಗಾದ ರಕ್ತನಾಳಗಳು ಮಕ್ಯುಲಾವನ್ನು ಪ್ರವೇಶಿಸಲು ದ್ರವವನ್ನು ಉಂಟುಮಾಡಬಹುದು ಮತ್ತು ಮ್ಯಾಕುಲಾ ಊದಿಕೊಳ್ಳಬಹುದು. ಇದರಿಂದಾಗಿ ಒದಲು ಮತ್ತು ಮುಖಗಳನ್ನು ಗುರುತಿಸಲು ಕಷ್ಟವಾಗುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: ಹವಾಮಾನ ಬದಲಾವಣೆಯು ಹೊಟ್ಟೆ ಉಬ್ಬರಕ್ಕೆ ಕಾರಣವಾಗಬಹುದು; ಪೌಷ್ಟಿಕತಜ್ಞರ ಸಲಹೆಗಳು ಇಲ್ಲಿವೆ

ಕಣ್ಣಿನ ಪೊರೆ:

ಕಣ್ಣಿನ ಪೊರೆಯು ಕಣ್ಣಿನೊಳಗಿನ ಮಸೂರದ ಮೇಲೆ ಪೊರೆಯಂತೆ ಹುಟ್ಟಿಕೊಳ್ಳುತ್ತದೆ. ಕಾಲ ಕ್ರಮೇಣ ಇದು ದೃಷ್ಟಿ ದೋಷಕ್ಕೆ ಕಾರಣವಾಗುತ್ತದೆ. ಮಧುಮೇಹವು ಮಸೂರದ ಪ್ರೋಟೀನ್‌ಗಳ ಚಯಾಪಚಯವನ್ನು ಬದಲಾಯಿಸುವ ಮೂಲಕ ಕಣ್ಣಿನ ಪೊರೆಗಳಿಗೆ ಕಾರಣವಾಗಬಹುದು. ಆದ್ದರಿಂದ, ಮಧುಮೇಹ ಹೊಂದಿರುವ ಜನರು ಕಿರಿಯ ವಯಸ್ಸಿನಲ್ಲಿ ಕಣ್ಣಿನ ಪೊರೆಗಳಂತಹ ಲಕ್ಷಣಗಳು ಕಂಡು ಬರುತ್ತವೆ.

ಇಂತಹ ಸಮಸ್ಯೆಯಿಂದ ನೀವು ಹೊರಬರಲು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು, ಆರೋಗ್ಯಕರ ಆಹಾರದ ಸೇವನೆ ಅಗತ್ಯವಾಗಿದೆ ಇದರ ಜೊತೆಗೆ 6ತಿಂಗಳಿಗೊಮ್ಮೆ ನೇತ್ರಶಾಸ್ತ್ರಜ್ಞರನ್ನು ಭೇಟಿ ಮಾಡಿ ನಿಯಮಿತ ಕಣ್ಣಿನ ಪರೀಕ್ಷೆ ಮಾಡಿಸಿಕೊಳ್ಳುವುದು ಅಗತ್ಯವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?