AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಿಗ್ಗೆ ಎದ್ದ ತಕ್ಷಣ ಮೊಬೈಲ್ ನೋಡುತ್ತೀರಾ? ಈ ಅಪಾಯ ತಪ್ಪಿದ್ದಲ್ಲ

ಕೆಲವರು ಬೆಳಿಗ್ಗೆ ಎದ್ದ ತಕ್ಷಣ ಬೇರೆ ಕೆಲಸ ಮಾಡುವ ಮೊದಲು ಫೋನ್ ನೋಡುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಆದರೆ ಇದು ಅವರ ಕಣ್ಣುಗಳಿಗೆ ಹಾನಿಕಾರಕವಾಗಿದೆ. ಇದರಿಂದಾಗಿ ಅನೇಕ ರೀತಿಯ ಕಣ್ಣಿನ ಸಂಬಂಧಿತ ಸಮಸ್ಯೆಗಳು ಹೆಚ್ಚಾಗಲು ಪ್ರಾರಂಭಿಸುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದೆ. ಐಡಿಸಿ ರಿಸರ್ಚ್ ವರದಿಯ ಪ್ರಕಾರ, ಶೇಕಡಾ 80 ರಷ್ಟು ಸ್ಮಾರ್ಟ್ ಫೋನ್ ಬಳಕೆದಾರರು ಎಚ್ಚರವಾಗಿ 15 ನಿಮಿಷಗಳಲ್ಲಿ ತಮ್ಮ ಮೊಬೈಲ್ ಫೋನ್ಗಳನ್ನು ಪರಿಶೀಲಿಸುತ್ತಾರೆ. ಇದು ನಿಮ್ಮ ಕಣ್ಣುಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಆದ್ದರಿಂದ ಬೆಳಿಗ್ಗೆ ಎದ್ದು ಫೋನ್ ಬಳಸುವ ಅಭ್ಯಾಸವು ನಿಮಗೆ ಎಷ್ಟು ಹಾನಿಕಾರಕ ಎಂಬುದನ್ನು ತಿಳಿದುಕೊಳ್ಳಿ.

ಬೆಳಿಗ್ಗೆ ಎದ್ದ ತಕ್ಷಣ ಮೊಬೈಲ್ ನೋಡುತ್ತೀರಾ? ಈ ಅಪಾಯ ತಪ್ಪಿದ್ದಲ್ಲ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Nov 11, 2024 | 10:23 AM

Share

ಮೊಬೈಲ್ ಪ್ರತಿಯೊಬ್ಬರ ಜೀವನದ ಪ್ರಮುಖ ಭಾಗವಾಗಿದೆ. ಮಲಗಿದ್ದಾಗ, ಎಚ್ಚರವಾಗಿರುವಾಗ, ತಿನ್ನುವಾಗ, ಕೆಲಸ ಮಾಡುವಾಗ ಫೋನ್ ಬಳಕೆ ಮಾಡುವುದು ಆದ್ಯತೆಯ ಪಟ್ಟಿಯಲ್ಲಿರುತ್ತದೆ. ಆಗಾಗ ಯಾರ ಸಂದೇಶ ಯಾವಾಗ ಬಂದಿದೆ ಎಂಬುದನ್ನು ಪರಿಶೀಲಿಸಲು ಫೋನ್ ನೋಡುತ್ತಲೇ ಇರುತ್ತಾರೆ. ಅದರಲ್ಲಿಯೂ ಕೆಲವರು ಬೆಳಿಗ್ಗೆ ಎದ್ದ ತಕ್ಷಣ ಬೇರೆ ಕೆಲಸ ಮಾಡುವ ಮೊದಲು ಫೋನ್ ನೋಡುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಆದರೆ ಇದು ಅವರ ಕಣ್ಣುಗಳಿಗೆ ಹಾನಿಕಾರಕವಾಗಿದೆ. ಇದರಿಂದಾಗಿ ಅನೇಕ ರೀತಿಯ ಕಣ್ಣಿನ ಸಂಬಂಧಿತ ಸಮಸ್ಯೆಗಳು ಹೆಚ್ಚಾಗಲು ಪ್ರಾರಂಭಿಸುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದೆ. ಐಡಿಸಿ ರಿಸರ್ಚ್ ವರದಿಯ ಪ್ರಕಾರ, ಶೇಕಡಾ 80 ರಷ್ಟು ಸ್ಮಾರ್ಟ್ ಫೋನ್ ಬಳಕೆದಾರರು ಎಚ್ಚರವಾಗಿ 15 ನಿಮಿಷಗಳಲ್ಲಿ ತಮ್ಮ ಮೊಬೈಲ್ ಫೋನ್ಗಳನ್ನು ಪರಿಶೀಲಿಸುತ್ತಾರೆ. ಇದು ನಿಮ್ಮ ಕಣ್ಣುಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಆದ್ದರಿಂದ ಬೆಳಿಗ್ಗೆ ಎದ್ದು ಫೋನ್ ಬಳಸುವ ಅಭ್ಯಾಸವು ನಿಮಗೆ ಎಷ್ಟು ಹಾನಿಕಾರಕ ಎಂಬುದನ್ನು ತಿಳಿದುಕೊಳ್ಳಿ.

ಜರ್ನಲ್ ಆಫ್ ನ್ಯೂರಲ್ ಟ್ರಾನ್ಸ್ಮಿಷನ್ನಲ್ಲಿ 2007 ರ ವರದಿಯ ಪ್ರಕಾರ, ನೀವು ಬೆಳಿಗ್ಗೆ ಎದ್ದ ತಕ್ಷಣ ಮೊಬೈಲ್ ನೋಡುವುದು ಅವುಗಳ ಬೆಳಕಿಗೆ ಒಡ್ಡಿಕೊಳ್ಳುವುದು ದೇಹದಲ್ಲಿ ಮೆಲಟೋನಿನ್ ಮಟ್ಟವನ್ನು ಹೆಚ್ಚಿಸುತ್ತದೆ. ಇದು ನಿಮ್ಮ ನಿದ್ರೆಯ ಚಕ್ರವನ್ನು ನಿಯಂತ್ರಿಸುವ ಹಾರ್ಮೋನ್ ಆಗಿದ್ದು ದೇಹದಲ್ಲಿ ಈ ಹಾರ್ಮೋನ್ ಮಟ್ಟವು ಹೆಚ್ಚಾಗುವುದರಿಂದ, ವ್ಯಕ್ತಿಯು ಹೆಚ್ಚು ನಿದ್ರೆ ಮಾಡಲು ಪ್ರಾರಂಭಿಸುತ್ತಾನೆ, ಇದರಿಂದ ದೇಹಕ್ಕೆ ಆಲಸ್ಯ ಹೆಚ್ಚಾಗಲು ಪ್ರಾರಂಭಿಸುತ್ತದೆ.

ನಿದ್ರೆಯ ತೊಂದರೆಗಳು: ಸಂಶೋಧನೆಯ ಪ್ರಕಾರ, ನೀವು ಮಲಗುವ ಮೊದಲು ಅಥವಾ ಬೆಳಿಗ್ಗೆ ಎಚ್ಚರಗೊಂಡ ಬಳಿಕ ಯಾವುದೇ ರೀತಿಯ ಗ್ಯಾಜೆಟ್ ಅನ್ನು ಬಳಸಿದರೆ, ಅದು ನಿಮ್ಮ ಜೈವಿಕ ಗಡಿಯಾರವನ್ನು ಸಂಕೀರ್ಣಗೊಳಿಸುತ್ತದೆ. ವಾಸ್ತವದಲ್ಲಿ ನೀಲಿ ಬೆಳಕು ರೆಟಿನಾದ ಫೋಟೋರೆಸೆಪ್ಟಿವ್ ಕೋಶಗಳನ್ನು ಹೀರಿಕೊಳ್ಳುತ್ತವೆ. ಇದರಿಂದಾಗಿ ವ್ಯಕ್ತಿಯು ಸಂಪೂರ್ಣವಾಗಿ ನಿದ್ರೆ ಮಾಡಲು ಸಾಧ್ಯವಾಗುವುದಿಲ್ಲ ಇದರಿಂದ ನಿದ್ರೆ ಸರಿಯಾಗಿ ಆಗುವುದಿಲ್ಲ.

ಹೆಚ್ಚಿದ ಒತ್ತಡ: ನೀವು ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ಫೋನ್ ಅನ್ನು ಪರಿಶೀಲಿಸಲು ಪ್ರಾರಂಭಿಸಿದರೆ, ಅದು ನಿಮಗೆ ಒತ್ತಡ ಮತ್ತು ಆತಂಕವನ್ನು ಉಂಟು ಮಾಡಲು ಪ್ರಾರಂಭಿಸುತ್ತದೆ. ವಾಸ್ತವದಲ್ಲಿ ಒಂದೇ ಸಮಯದಲ್ಲಿ ಅನೇಕ ಸಂದೇಶಗಳು, ಇ- ಮೇಲ್ ಗಳು ಮತ್ತು ವಿವಿಧ ರೀತಿಯ ನೋಟಿಫಿಕೇಶನ್ ನಿಮಗೆ ಕಳವಳಕ್ಕೆ ಕಾರಣವಾಗಬಹುದು. ನೀವು ಮಾನಸಿಕ ಒತ್ತಡದಿಂದ ದಿನವನ್ನು ಪ್ರಾರಂಭಿಸಿದರೆ, ದಿನವಿಡೀ ಒತ್ತಡದಲ್ಲಿರಬೇಕಾಗುತ್ತದೆ. ಒಂದೆಡೆ, ಮೊಬೈಲ್ ನಿಂದ ಹೊರಬರುವ ನೀಲಿ ಬೆಳಕು ನಿಮ್ಮ ರೆಟಿನಾವನ್ನು ಹಾನಿಗೊಳಿಸುತ್ತದೆ ಮತ್ತೊಂದೆಡೆ, ಆತಂಕವು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಮೆದುಳು ಮಾತ್ರವಲ್ಲ ದೇಹದ ಬೇರೆ ಭಾಗಗಳೂ ನೆನಪುಗಳನ್ನು ಸಂಗ್ರಹಿಸುತ್ತವೆ: ಹೊಸ ಸಂಶೋಧನೆ

ಕಣ್ಣುಗಳಲ್ಲಿ ಶುಷ್ಕತೆ: ಮೊಬೈಲ್ ಫೋನ್ ನ ಪರದೆಯನ್ನು ನೋಡುವ ಮೂಲಕ ದಿನವನ್ನು ಪ್ರಾರಂಭಿಸುವುದರಿಂದ ಕಣ್ಣುಗಳಲ್ಲಿ ಶುಷ್ಕತೆ ಹೆಚ್ಚಾಗುತ್ತದೆ. ಇದಲ್ಲದೆ, ಕಣ್ಣಿನ ದೃಷ್ಟಿಯ ಮೇಲೂ ಪರಿಣಾಮ ಬೀರಲು ಪ್ರಾರಂಭಿಸುತ್ತದೆ. ಅಲ್ಲದೆ ಕಣ್ಣುಗಳಲ್ಲಿ ಮಾಕ್ಯುಲರ್ ಕ್ಷೀಣತೆಯ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ ವಯಸ್ಸು ಹೆಚ್ಚಾದಂತೆ ನಿಯಮಿತವಾಗಿ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವುದು ಬಹಳ ಮುಖ್ಯ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​