AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿ ಬದಿಯಲ್ಲಿ ಮಾಡುವ ಬಜ್ಜಿ ತಿಂದರೆ ಈ ಕಾಯಿಲೆಗಳು ಬರುವುದು ಖಂಡಿತ!

ಬೀದಿ ಆಹಾರಗಳನ್ನು ಸೇವನೆ ಮಾಡುವುದು ಅನೇಕರಿಗೆ ಅಭ್ಯಾಸವಾಗಿರುತ್ತದೆ. ಆದರೆ ನಾಲಿಗೆಯ ರುಚಿಗಿಂತ ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಈ ಆಹಾರಗಳು ರುಚಿ ನೀಡಬಹುದು, ಆದರೆ ಅವುಗಳ ತಯಾರಿಕೆಯಲ್ಲಿ ಶುಚಿತ್ವ ಮತ್ತು ಗುಣಮಟ್ಟ ಕೊರತೆಯಿದ್ದರೆ, ಆರೋಗ್ಯ ಸಮಸ್ಯೆಗಳು ಬರುವುದು ನಿಶ್ಚಿತ. ಹಾಗಾದರೆ ಹೊರಗಡೆ ಸಿಗುವ ಬಜ್ಜಿ, ಬೋಂಡಾ ಇನ್ನಿತರ ಕರಿದ ಆಹಾರಗಳ ಸೇವನೆ ಮಾಡುವುದರಿಂದ ಉಂಟಾಗುವ ಸಂಭಾವ್ಯ ಸಮಸ್ಯೆಗಳು ಯಾವವು? ಏಕೆ ಹೊರಗಿನ ಆಹಾರ ನಮ್ಮ ದೇಹಕ್ಕೆ ಒಳ್ಳೆಯದಲ್ಲ ಎಂಬುದನ್ನು ತಿಳಿದುಕೊಳ್ಳಿ.

ಬೀದಿ ಬದಿಯಲ್ಲಿ ಮಾಡುವ ಬಜ್ಜಿ ತಿಂದರೆ ಈ ಕಾಯಿಲೆಗಳು ಬರುವುದು ಖಂಡಿತ!
ಸಾಂದರ್ಭಿಕ ಚಿತ್ರImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 13, 2025 | 3:45 PM

Share

ರಸ್ತೆ ಬದಿಯ ಅಂಗಡಿಗಳಲ್ಲಿ ಸಿಗುವ ಬಜ್ಜಿ, ತಿಂಡಿ ತಿನಿಸುಗಳು ಬಹಳ ರುಚಿಕರ ಮತ್ತು ಕೈಗೆಟುಕುವ ದರದಲ್ಲಿ ಸಿಗುತ್ತದೆ. ಹಾಗಾಗಿ ಇವುಗಳನ್ನು ಪದೇ ಪದೇ ಸೇವನೆ ಮಾಡುವವರ ಸಂಖ್ಯೆ ಹೆಚ್ಚಾಗಿಯೇ ಇರುತ್ತದೆ. ಆದರೆ ಇವುಗಳನ್ನು ಆಗಾಗ ಸೇವನೆ ಮಾಡುವುದರಿಂದ ಆರೋಗ್ಯ (Health) ಸಮಸ್ಯೆಗಳು ಉಂಟಾಗಬಹುದು. ಏಕೆಂದರೆ ಈ ಆಹಾರಗಳನ್ನು ತಯಾರಿಸಲು ಬಳಸುವ ಪದಾರ್ಥ, ಅಡುಗೆ ವಿಧಾನಗಳು ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಹಾಗಾದರೆ ಬೀದಿ ಬದಿಯ ವ್ಯಾಪಾರಿಗಳು ಮಾಡುವ ಬಜ್ಜಿ, ಬೋಂಡಾ ಇನ್ನಿತರ ಕರಿದ ಆಹಾರಗಳ (Fried food) ಸೇವನೆ ಮಾಡುವುದರಿಂದ ಉಂಟಾಗುವ ಸಂಭಾವ್ಯ ಸಮಸ್ಯೆಗಳು ಯಾವವು? ಏಕೆ ಹೊರಗಿನ ಆಹಾರ (food) ನಮ್ಮ ದೇಹಕ್ಕೆ ಒಳ್ಳೆಯದಲ್ಲ ಎಂಬುದನ್ನು ತಿಳಿದುಕೊಳ್ಳಿ.

ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ?

ರಸ್ತೆ ಬದಿಯ ಅಂಗಡಿಗಳಲ್ಲಿ ಸ್ವಚ್ಛತೆ ಅಷ್ಟಾಗಿ ಇರುವುದಿಲ್ಲ. ಅವರು ಬಳಸುವ ನೀರು, ಅಡುಗೆ ಪಾತ್ರೆಗಳು ಹೇಗಿರುತ್ತವೆ ಎಂಬುದು ತಿಳಿದಿರುವುದಿಲ್ಲ. ಅವರ ಕೈಗಳು ಸ್ವಚ್ಛವಾಗಿರುವುದಿಲ್ಲ, ಹಾಗಾಗಿ ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳು ಆಹಾರದೊಂದಿಗೆ ಬೆರೆಯಬಹುದು. ಬಳಿಕ ಇವು ವಾಂತಿ, ಅತಿಸಾರ ಮತ್ತು ಹೊಟ್ಟೆ ನೋವಿನಂತಹ ಸಮಸ್ಯೆಗಳಿಗೆ ಕಾರಣವಾಗುತ್ತವೆ. ಕೆಲವು ಸಂದರ್ಭಗಳಲ್ಲಿ, ಹೆಪಟೈಟಿಸ್ ಎ ಮತ್ತು ಸಾಲ್ಮೊನೆಲ್ಲಾದಂತಹ ತೀವ್ರವಾದ ಸೋಂಕುಗಳು ಸಹ ಉಂಟಾಗಬಹುದು. ಇನ್ನು ಆಹಾರ ಕರಿದಂತಹ ಎಣ್ಣೆಯ ಗುಣಮಟ್ಟವೂ ಕೂಡ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಏಕೆಂದರೆ ಎಣ್ಣೆಯನ್ನು ಪದೇ ಪದೇ ಬಿಸಿ ಮಾಡುವುದರಿಂದ ಇದು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಜೊತೆಗೆ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ಹೆಚ್ಚುವರಿಯಾಗಿ, ಕಡಿಮೆ- ಗುಣಮಟ್ಟದ ಅಥವಾ ಕಲಬೆರಕೆ ಎಣ್ಣೆಯನ್ನು ಬಳಸುವುದರಿಂದ ಜೀರ್ಣಕಾರಿ ಸಮಸ್ಯೆಗಳು ಮತ್ತು ಯಕೃತ್ತಿನ ಒತ್ತಡ ಉಂಟಾಗುತ್ತದೆ.

ಇದನ್ನೂ ಓದಿ: Vaginitis: ಮಹಿಳೆಯರೇ ಯೋನಿಯಲ್ಲಿ ಈ ಲಕ್ಷಣ ಕಂಡುಬಂದಾಗ ನಿರ್ಲಕ್ಷಿಸಬೇಡಿ

ಇದನ್ನೂ ಓದಿ
Image
ಈ 3 ಮೀನುಗಳನ್ನು ಫ್ರೀ ಕೊಟ್ಟರೂ ತಿನ್ನಬೇಡಿ
Image
ಬೆಲ್ಲದ ಅನ್ನ ಸೇವನೆ ಮಾಡಿದರೆ ಈ ಕಾಯಿಲೆ ಹತ್ತಿರವೂ ಬರಲ್ಲ
Image
ಫಸ್ಟ್ ನೈಟ್ ನಲ್ಲಿ ಮಲ್ಲಿಗೆ ಇಡುವುದು ಇದೆ ಕಾರಣಕ್ಕೆ!
Image
ಪ್ರತಿದಿನ ನೀವು ಮಾಡುವ ಈ ತಪ್ಪುಗಳೇ ರಾತ್ರಿ ನಿದ್ರೆಯನ್ನು ಹಾಳುಮಾಡುತ್ತೆ

ಬಜ್ಜಿ, ಬೋಂಡಾ ತಿಂದರೆ ಈ ಮೂರು ಆರೋಗ್ಯ ಸಮಸ್ಯೆ ಬರುವುದು ನಿಶ್ಚಿತ;

ಹೊರಗಡೆ ಸಿಗುವಂತಹ ಆಹಾರಗಳನ್ನು ಆಗಾಗ ಸೇವನೆ ಮಾಡುವುದರಿಂದ ಮುಖ್ಯವಾಗಿ ಮೂರು ರೀತಿಯ ಅಪಾಯಗಳು ಉಂಟಾಗುತ್ತವೆ. ಒಂದು ತೂಕ ಹೆಚ್ಚಾಗುವುದಕ್ಕೆ ಕಾರಣವಾಗುತ್ತದೆ. ಜೊತೆಗೆ ಬೊಜ್ಜು ಮುಂತಾದ ಸಮಸ್ಯೆಗಳಿಗೆ ಕಾರಣವಾಗುತ್ತವೆ. ಇನ್ನು ಈ ಆಹಾರಗಳಲ್ಲಿ ಕಂಡುಬರುವ ಹೆಚ್ಚಿನ ಕೊಬ್ಬು ಮತ್ತು ಉಪ್ಪಿನ ಅಂಶ ರಕ್ತದೊತ್ತಡ ಮತ್ತು ಮಧುಮೇಹದಂತಹ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಅದಲ್ಲದೆ ಇಂತಹ ಆಹಾರಗಳು ಜೀರ್ಣವಾಗಲು ಸಮಯ ತೆಗೆದುಕೊಳ್ಳುವುದರಿಂದ ಜೀರ್ಣಕಾರಿ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಇನ್ನು ಎಣ್ಣೆ ಮತ್ತು ಮಸಾಲೆಗಳ ಬಳಕೆಯೂ ಸಹ ಅಜೀರ್ಣ, ಎದೆಯುರಿಯಂತಹ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಜೊತೆಗೆ ಕೆಲವು ಅಂಗಡಿಗಳಲ್ಲಿ ಸಂಸ್ಕರಿಸಿದ ಹಿಟ್ಟು ಮತ್ತು ಕಲಬೆರಕೆ ಪದಾರ್ಥಗಳ ಬಳಕೆ ಮಾಡುವುದರಿಂದ ಜೀರ್ಣಾಂಗ ವ್ಯವಸ್ಥೆಯ ಮೇಲೆ ಒತ್ತಡವನ್ನು ಹೆಚ್ಚಿಸುತ್ತದೆ. ರಸ್ತೆ ಬದಿಯ ಅಂಗಡಿಗಳಲ್ಲಿ ಬಳಸುವ ವಸ್ತುಗಳು ಯಾವಾಗಲೂ ತಾಜಾ ಅಥವಾ ಉತ್ತಮ ಗುಣಮಟ್ಟದ್ದಾಗಿರುವುದಿಲ್ಲ. ಕೆಲವು ಸಂದರ್ಭಗಳಲ್ಲಿ, ಕಲಬೆರಕೆ ಬಣ್ಣ, ಸಂರಕ್ಷಕಗಳನ್ನು ಬಳಸಿರುತ್ತಾರೆ. ಇವು ಚರ್ಮದ ಮೇಲೆ ದದ್ದುಗಳು, ಉಸಿರಾಟದ ಸಮಸ್ಯೆಗೂ ಕಾರಣವಾಗಬಹುದು. ಹಾಗಾಗಿ ಹೊರಗಡೆ ಸಿಗುವ ಆಹಾರಗಳ ಸೇವನೆ ಮಾಡುವಾಗ ಎಚ್ಚರವಿರಲಿ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್