AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಟೆಗಟ್ಟಲೆ ಕುಳಿತು ಕೆಲಸ ಮಾಡುವವರಲ್ಲಿ ಸೈಲೆಂಟ್ ಹಾರ್ಟ್ ಅಟ್ಯಾಕ್ ಬರುವುದನ್ನು ತಡೆಯಲು ಈ ರೀತಿ ಮಾಡಬೇಕು!

ನೀವು ಕೂಡ ಆಫೀಸ್ನಲ್ಲಿ ಕುಳಿತು ಗಂಟೆಗಟ್ಟಲೆ ಡೆಸ್ಕ್ ಕೆಲಸ ಮಾಡುತ್ತಿದ್ದೀರಾ? ಹಾಗಾದರೆ ಜಾಗರೂಕರಾಗಿರಿ. ಸರಿಯಾದ ರೀತಿಯಲ್ಲಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದಿದ್ದರೆ, ಹೃದಯಾಘಾತದಂತಹ ಅಪಾಯಗಳು ಬರುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಸೈಲೆಂಟ್ ಹಾರ್ಟ್ ಅಟ್ಯಾಕ್ ಎಷ್ಟು ಸದ್ದಿಲ್ಲದೆ ಬರುತ್ತದೆಯೋ ಅಷ್ಟು ಅಪಾಯಕಾರಿಯಾಗಿರುತ್ತದೆ. ಹಾಗಾಗಿ ಸಣ್ಣ ಆರೋಗ್ಯಕರ ಅಭ್ಯಾಸಗಳಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಿ. ಹಾಗಾದರೆ ಹೃದಯಾಘಾತವನ್ನು ತಡೆಯುವುದು ಹೇಗೆ? ಯಾರಿಗೆ ಹೆಚ್ಚು ಅಪಾಯಕಾರಿ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಗಂಟೆಗಟ್ಟಲೆ ಕುಳಿತು ಕೆಲಸ ಮಾಡುವವರಲ್ಲಿ ಸೈಲೆಂಟ್ ಹಾರ್ಟ್ ಅಟ್ಯಾಕ್ ಬರುವುದನ್ನು ತಡೆಯಲು ಈ ರೀತಿ ಮಾಡಬೇಕು!
Prolonged Sitting And Silent Heart Attacks
ಪ್ರೀತಿ ಭಟ್​, ಗುಣವಂತೆ
|

Updated on: Sep 04, 2025 | 3:33 PM

Share

ನೀವು ಕೂಡ ಆಫೀಸ್ ನಲ್ಲಿ ಕುಳಿತು ಗಂಟೆಗಟ್ಟಲೆ ಕೆಲಸ ಮಾಡುತ್ತೀರಾ? ಮನೆಗೆ ಬಂದರೂ ಕೆಲಸ ಮುಗಿಯೋದಿಲ್ವಾ? ಇದು ಒಬ್ಬರಿಬ್ಬರ ಸಮಸ್ಯೆಯಲ್ಲ. ಇತ್ತೀಚಿಗೆ, ಸಮಯದ ಪರಿವಿಲ್ಲದೆ ಕೆಲಸ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಇದರ ಪರಿಣಾಮ ಅವರ ಪೂರ್ತಿ ಜೀವನಶೈಲಿ (Lifestyle) ಬದಲಾಗಿರುತ್ತದೆ. ಆದರೆ ಈ ರೀತಿಯ ಅಭ್ಯಾಸವು ಆರೋಗ್ಯದ ಮೇಲೆ ಗಂಭೀರವಾದ ಪರಿಣಾಮ ಬೀರುತ್ತದೆ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಜೊತೆಗೆ, ದೀರ್ಘಕಾಲ ಕುಳಿತುಕೊಂಡಿರುವುದರಿಂದ ಹೃದಯದ ಆರೋಗ್ಯ (Heart health) ಹಾಳಾಗುತ್ತದೆ. ಇದರ ಪರಿಣಾಮ ಸೈಲೆಂಟ್ ಆಗಿ ಸಂಭವಿಸುವ ಹೃದಯಾಘಾತದ (Silent Heart Attack) ಅಪಾಯ ಹೆಚ್ಚಾಗುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ನಿರಂತರವಾಗಿ ಕುಳಿತುಕೊಳ್ಳುವುದನ್ನು ಧೂಮಪಾನ ಮಾಡಿದಷ್ಟೇ ಹಾನಿ ಮಾಡುತ್ತದೆ ಎಂಬುದನ್ನು ಮರೆಯಬಾರದು. ಹಾಗಾದರೆ ದೀರ್ಘಕಾಲ ಕುಳಿತುಕೊಂಡಿರುವ ಅಭ್ಯಾಸ ಹೃದಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ? ಯಾಕೆ ಒಳ್ಳೆಯದಲ್ಲ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೃದಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ತುಂಬಾ ಸಮಯದ ವರೆಗೆ ಚಲನೆ ಇಲ್ಲದೆಯೇ, ಕುಳಿತಲ್ಲಿಯೇ ಕುಳಿತುಕೊಳ್ಳುವುದರಿಂದ ರಕ್ತ ಪರಿಚಲನೆ ನಿಧಾನವಾಗುತ್ತದೆ, ಇದರ ಪರಿಣಾಮವಾಗಿ, ರಕ್ತ ಮತ್ತು ಆಮ್ಲಜನಕ ಹೃದಯವನ್ನು ಸರಿಯಾಗಿ ತಲುಪುವುದಿಲ್ಲ. ಈ ಸ್ಥಿತಿಯು ಹೃದಯಾಘಾತ ಮತ್ತು ಪಾರ್ಶ್ವವಾಯುವಿನ ಅಪಾಯವನ್ನು ಹೆಚ್ಚಿಸುತ್ತದೆ. ಮಾತ್ರವಲ್ಲ ಈ ರೀತಿ ನಿರಂತರವಾಗಿ ಕುಳಿತುಕೊಳ್ಳುವುದರಿಂದ ಬೊಜ್ಜು, ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಬೆನ್ನು ನೋವು ಮುಂತಾದ ಸಮಸ್ಯೆಗಳಿಗೂ ಕಾರಣವಾಗಬಹುದು. ಕುಳಿತುಕೊಳ್ಳುವುದರಿಂದ ಹೃದಯಾಘಾತವಾಗದಿದ್ದರೂ ಆ ಅಪಾಯವನ್ನು ಹೆಚ್ಚಿಸುತ್ತದೆ, ಅದರಲ್ಲಿಯೂ ಈಗಾಗಲೇ ಹಲವು ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವವರಿಗೆ ಈ ರೀತಿಯ ಅಪಾಯ ಕಂಡುಬರುವುದು ಹೆಚ್ಚಾಗಿರುತ್ತದೆ.

ಸೈಲೆಂಟ್ ಹಾರ್ಟ್ ಅಟ್ಯಾಕ್ ಎಂದರೇನು?

ಸಾಮಾನ್ಯವಾಗಿ ಸೈಲೆಂಟ್ ಹಾರ್ಟ್ ಅಟ್ಯಾಕ್ ಅನ್ನು ಮೌನ ಹೃದಯಾಘಾತ ಎಂದು ಕರೆಯಲಾಗುತ್ತದೆ. ಇದರಲ್ಲಿ ಎದೆ ನೋವು, ಬೆವರುವುದು ಮತ್ತು ಉಸಿರಾಟದ ತೊಂದರೆಯಂತಹ ಸ್ಪಷ್ಟ ಲಕ್ಷಣಗಳು ಕಂಡುಬರುವುದಿಲ್ಲ. ಬದಲಾಗಿ ಈ ರೀತಿಯ ಲಕ್ಷಣಗಳು ಬಹಳ ಸೌಮ್ಯವಾಗಿರಬಹುದು ಅಥವಾ ಕಾಣಿಸಿಕೊಳ್ಳದೆಯೇ ಇರಬಹುದು. ಹೃದಯಕ್ಕೆ ರಕ್ತದ ಹರಿವು ನಿಂತಿದ್ದರೂ ಸಹ, ದೇಹವು ಗಮನಾರ್ಹ ಎಚ್ಚರಿಕೆಗಳನ್ನು ನೀಡುವುದಿಲ್ಲ. ಅನೇಕ ಜನರು ಇದನ್ನು ಆಯಾಸ ಅಥವಾ ಒತ್ತಡ ಎಂದು ಭಾವಿಸಿ ನಿರ್ಲಕ್ಷಿಸುತ್ತಾರೆ.

ಹೆಚ್ಚು ಅಪಾಯಕಾರಿ ಏಕೆ?

ಸೈಲೆಂಟ್ ಹಾರ್ಟ್ ಅಟ್ಯಾಕ್ ದೊಡ್ಡ ಸಮಸ್ಯೆ ಎಂದರೆ ರೋಗಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ. ಇದರಿಂದ ರೋಗಿಗೆ ಸಕಾಲಿಕ ವೈದ್ಯಕೀಯ ನೆರವು ಸಿಗುವುದಿಲ್ಲ. ಹೃದಯವು ತೀವ್ರವಾಗಿ ಹಾನಿಗೊಳಗಾದ ನಂತರವೇ ಇದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಹಾಗಾಗಿ ಇದು ಸಾವಿನ ಅಪಾಯವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಪ್ರತಿದಿನ ಈ 6 ಆಹಾರ ಸೇವನೆ ಮಾಡಿ, ಹೃದಯಕ್ಕೆ ರಕ್ಷಣೆಯಾಗಿ ನಿಲ್ಲುತ್ತದೆ

ಹೆಚ್ಚಿನ ಅಪಾಯದಲ್ಲಿರುವವರು ಯಾರು?

  • ಗಂಟೆಗಟ್ಟಲೆ ಕುಳಿತು ಡೆಸ್ಕ್ ಕೆಲಸ ಮಾಡುವ ಉದ್ಯೋಗಿಗಳು
  • ಬೊಜ್ಜು ಹೊಂದಿರುವವರು ಅಥವಾ ಹೊಟ್ಟೆಯ ಸುತ್ತ ಕೊಬ್ಬು ಹೊಂದಿರುವವರು
  • ಅಧಿಕ ರಕ್ತದೊತ್ತಡ ಅಥವಾ ಮಧುಮೇಹ ಹೊಂದಿರುವ ರೋಗಿಗಳು
  • ಹೆಚ್ಚು ಧೂಮಪಾನ ಮಾಡುವವರು ಅಥವಾ ಮದ್ಯಪಾನ ಮಾಡುವ ವ್ಯಕ್ತಿಗಳು
  • ತೀವ್ರ ಒತ್ತಡ ಮತ್ತು ನಿದ್ರಾಹೀನತೆಯಿಂದ ಬಳಲುತ್ತಿರುವವರು.

ತಡೆಗಟ್ಟುವುದು ಹೇಗೆ?

ಈ ಅಪಾಯವನ್ನು ಕಡಿಮೆ ಮಾಡಲು, ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡುವುದು ಅವಶ್ಯಕ. ಪ್ರತಿದಿನ ಲಘು ವ್ಯಾಯಾಮ ಮತ್ತು ವಾಕಿಂಗ್ ಮಾಡುವುದನ್ನು ಮರೆಯಬೇಡಿ. ಜೊತೆಗೆ ಪ್ರತಿನಿತ್ಯ ಸಮತೋಲಿತ ಆಹಾರವನ್ನು ಸೇವನೆ ಮಾಡಿ. ಪ್ರತಿ 30 ರಿಂದ 40 ನಿಮಿಷಗಳಿಗೊಮ್ಮೆ ಎದ್ದು ಸ್ವಲ್ಪ ನಡೆದಾಡುವುದು ಒಳ್ಳೆಯದು. ಸಾಧ್ಯವಾದಷ್ಟು ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರಿ. ಕನಿಷ್ಠ 7- 8 ಗಂಟೆಗಳ ಕಾಲ ನಿದ್ರೆ ಮಾಡಿ. ನಿಯಮಿತ ತಪಾಸಣೆ ಮಾಡಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ