AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Food Safety Day 2025: ತಳ್ಳುಗಾಡಿಗಳಲ್ಲಿ ಸಿಗುವ ಆಹಾರ ರುಚಿಯಾಗಿರುತ್ತೆ ಎನ್ನುವವರು ಈ ಸ್ಟೋರಿ ಓದಿ

ವಿಶ್ವ ಆಹಾರ ಸುರಕ್ಷತೆ ದಿನ: ತಂತ್ರಜ್ಞಾನ ಆಧಾರಿತ ವ್ಯವಸ್ಥೆಯಲ್ಲಿ ಮಾನವ ಹಿಂದೆಂದಿಗಿಂತಲೂ ಶರವೇಗದ ಸಾಧನೆ ಮಾಡುತ್ತಿದ್ದಾನೆ. ಇವೆಲ್ಲ ಹೆಮ್ಮೆ ವಿಷಯವೇ ಆದರೆ ಮಾಲಿನ್ಯ, ಕಲುಷಿತ ವಾಗುತ್ತಿರುವ ನೀರು ಹಾಗೂ ಆಹಾರಗಳು ನಮ್ಮ ಎಲ್ಲ ಸಾಧನೆಗಳನ್ನು ಶೂನ್ಯಕ್ಕೆ ತಂದಿಳಿಸುತ್ತದೆ. ಅದರಲ್ಲಿಯೂ ಜನ ತಾವು ಸೇವಿಸುವ ಆಹಾರದ ಬಗ್ಗೆ ಹೆಚ್ಚಿನ ಗಮನ ಹರಿಸದಿದ್ದಾಗ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಲೇ ಇರುತ್ತದೆ. ಹಾಗಾಗಿ ನಾವು ಆಹಾರ ಸೇವನೆ ಮಾಡುವುದರೊಂದಿಗೆ ಅವುಗಳ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಬೇಕಾಗುತ್ತದೆ.

World Food Safety Day 2025: ತಳ್ಳುಗಾಡಿಗಳಲ್ಲಿ ಸಿಗುವ ಆಹಾರ ರುಚಿಯಾಗಿರುತ್ತೆ ಎನ್ನುವವರು ಈ ಸ್ಟೋರಿ ಓದಿ
ವಿಶ್ವ ಆಹಾರ ಸುರಕ್ಷತೆ ದಿನImage Credit source: Getty Images
Follow us
ಪ್ರೀತಿ ಭಟ್​, ಗುಣವಂತೆ
|

Updated on: Jun 06, 2025 | 9:43 PM

ಮನುಷ್ಯನಿಗೆ ಎಷ್ಟೇ ದುಡ್ಡಿದ್ದರೂ ಆರೋಗ್ಯ ಸರಿಯಿಲ್ಲ ಎಂದರೆ ಏನಿದ್ದು ಏನು ಪ್ರಯೋಜನ ಎಂಬತಾಗುತ್ತದೆ. ಇನ್ನು ನಮ್ಮ ಆರೋಗ್ಯ (Health) ಕಾಪಾಡಿಕೊಳ್ಳಲು ನಾವು ಸೇವನೆ ಮಾಡುವ ಆಹಾರವೇ ಬಹಳ ಮುಖ್ಯವಾಗುತ್ತದೆ. ಕೇವಲ ಆಹಾರಕ್ರಮ ಸರಿಯಾಗಿ ಇದ್ದರೆ ಸಾಲುವುದಿಲ್ಲ ಅವುಗಳ ಸುರಕ್ಷತೆಯ ಬಗ್ಗೆಯೂ ಗಮನ ಹರಿಸಬೇಕಾಗುತ್ತದೆ. ಏಕೆಂದರೆ ಶಾಲೆ, ಹಾಸ್ಟೆಲ್‌, ಹೋಟೆಲ್‌ ಸೇರಿದಂತೆ ಹಲವೆಡೆ ಆಹಾರ ಸೇವಿಸಿಯೇ ಅಸ್ವಸ್ಥಗೊಳ್ಳುತ್ತಿರುವ ಘಟನೆಗಳು ರಾಜ್ಯದಲ್ಲಿ ನಡೆಯುತ್ತಿರುವುದರಿಂದ ಕಲುಷಿತ ಆಹಾರಗಳ ಬಗ್ಗೆ ಜನರಿಗೆ ಸರಿಯಾದ ಅರಿವು ಮೂಡಿಸುವುದು ಬಹಳ ಅನಿವಾರ್ಯವಾಗಿದೆ. ಈ ಕಾರಣಕ್ಕಾಗಿಯೇ ವಿಶ್ವ ಆರೋಗ್ಯ ಸಂಸ್ಥೆಯು (WHO) ಜೂನ್ 7 ಅನ್ನು ವಿಶ್ವ ಆಹಾರ ಸುರಕ್ಷತಾ ದಿನವನ್ನಾಗಿ (World Food Safety Day) ಆಚರಿಸುತ್ತ ಬಂದಿದೆ.

ಬೀದಿಬದಿ ಆಹಾರ ಸೇವನೆ ಮಾಡಿದರೆ ಏನಾಗುತ್ತದೆ?

ತಂತ್ರಜ್ಞಾನ ಆಧಾರಿತ ವ್ಯವಸ್ಥೆಯಲ್ಲಿ ಮಾನವ ಹಿಂದೆಂದಿಗಿಂತಲೂ ಶರವೇಗದ ಸಾಧನೆ ಮಾಡುತ್ತಿದ್ದಾನೆ. ಇವೆಲ್ಲ ಹೆಮ್ಮೆ ವಿಷಯವೇ ಆದರೆ ಮಾಲಿನ್ಯ, ಕಲುಷಿತ ವಾಗುತ್ತಿರುವ ನೀರು ಹಾಗೂ ಆಹಾರಗಳು ನಮ್ಮ ಎಲ್ಲ ಸಾಧನೆಗಳನ್ನು ಶೂನ್ಯಕ್ಕೆ ತಂದಿಳಿಸುತ್ತದೆ. ಜನ ತಾವು ಸೇವಿಸುವ ಆಹಾರ ಬಗ್ಗೆ ಅವುಗಳ ಸ್ವಚ್ಛತೆಯ ಬಗ್ಗೆ ಗಮನ ಹರಿಸದಿರುವುದು ಆರೋಗ್ಯ ಸಮಸ್ಯೆ ಹೆಚ್ಚಳವಾಗುವುದಕ್ಕೆ ಕಾರಣವಾಗಿದೆ. ಬೀದಿಬದಿ ತಳ್ಳುಗಾಡಿಗಳಲ್ಲಿ ಸಿಗುವ ಆಹಾರಗಳು ಬಹಳ ರುಚಿಯಾಗಿರುತ್ತದೆ ಎಂದು ಅವುಗಳನ್ನೇ ಹೆಚ್ಚು ಹೆಚ್ಚು ಸೇವನೆ ಮಾಡುತ್ತಾರೆ. ಅಂಗಡಿಯವನು ಬಳಸಿದ ಎಣ್ಣೆಯನ್ನೇ ಪದೇ ಪದೆ ಬಳಸಿ ಬಜ್ಜಿ, ಬೋಂಡಾ ಮಾಡುತ್ತಿದ್ದರೆ ಅವನು ಮಾಡುವ ಆಹಾರವೇ ನಮಗೆ ತಿನ್ನಬೇಕು ಎನಿಸುತ್ತದೆ. ಆದರೆ ಈ ರೀತಿಯ ಅಭ್ಯಾಸವೇ ಆರೋಗ್ಯದ ಗಂಭೀರ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂಬುದನ್ನು ನಾವು ಮರೆಯುತ್ತಿದ್ದೇವೆ. ಈ ರೀತಿ ಕಲುಷಿತ ಆಹಾರವನ್ನು ಸೇವನೆ ಮಾಡುವುದರಿಂದ ದೇಹವನ್ನು ಪ್ರವೇಶಿಸುವ ಬ್ಯಾಕ್ಟೀರಿಯಾ, ವೈರಸ್‌ಗಳು, ಪರಾವಲಂಬಿಗಳು ಅಥವಾ ರಾಸಾಯನಿಕ ಪದಾರ್ಥಗಳಿಂದ ಊಹಿಸಲೂ ಅಸಾಧ್ಯವಾದಷ್ಟು ರೋಗಗಳು ಹರಡುತ್ತವೆ.

ಇದನ್ನೂ ಓದಿ: ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ? ಇಲ್ಲಿದೆ ನೋಡಿ ಡಾ. ಭರತ್ ಸಲಹೆ

ಇದನ್ನೂ ಓದಿ
Image
ಮೆದುಳಿನ ಆರೋಗ್ಯಕ್ಕೆ ವೀಳ್ಯದ ಎಲೆ, ಜೇನುತುಪ್ಪ ಬೆಸ್ಟ್!
Image
ಎಚ್ಚರ.... ದೇಹದಲ್ಲಿ ಈ ಬದಲಾವಣೆ ಕಂಡ್ರೆ ಅದು ಲಿವರ್ ಕ್ಯಾನ್ಸರ್ ಲಕ್ಷಣ
Image
ಚರ್ಮ ಒಣಗುವುದು ಈ ಗಂಭೀರ ಕಾಯಿಲೆಯ ಲಕ್ಷಣ
Image
ಗೋಧಿ ಬದಲು ಗ್ಲುಟನ್‌ ಫ್ರೀ ಆಗಿರುವ ಈ ಹಿಟ್ಟಿನಿಂದ ಚಪಾತಿ ಮಾಡಿ ನೋಡಿ

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಅಂಕಿ ಅಂಶಗಳ ಪ್ರಕಾರ, ವಿಶ್ವಾದ್ಯಂತ ಪ್ರತಿ ಹತ್ತು ಜನರಲ್ಲಿ ಒಬ್ಬರು ಕಲುಷಿತ ಆಹಾರ ಸೇವನೆ ಮಾಡಿ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಹೊರಗಡೆ ಆಹಾರ ಸೇವನೆ ಮಾಡಿ ಐದು ವರ್ಷದೊಳಗಿನ ಮಕ್ಕಳಲ್ಲಿ ಬೇರೆ ಬೇರೆ ರೀತಿಯ ರೋಗಗಳು ಹರಡುತ್ತಿವೆ. ಅದಲ್ಲದೆ ಅಸುರಕ್ಷಿತ ಆಹಾರದಿಂದ ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ಸಾವು ಸಂಭವಿಸುತ್ತಿವೆ. ನಮ್ಮ ಬಳಿ ಕೊಂಡುಕೊಳ್ಳಲು ಬಹಳ ದುಡ್ಡಿದೆ ಆದರೆ ನಾವು ಸೇವನೆ ಮಾಡುವ ಆಹಾರ ದಿನದಿಂದ ದಿನಕ್ಕೆ ಕಲಬೆರಕೆಯಾಗುತ್ತಿದೆ. ಯಾವುದೇ ಶಕ್ತಿ ನಿಮ್ಮ ತಿಂಡಿ ಊಟಗಳಿಂದ ಸಿಗುವುದಿಲ್ಲ. ಹಾಗಾಗಿ ನಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರೆ ನಾವು ಸೇವನೆ ಮಾಡುವ ಆಹಾರವೂ ಚೆನ್ನಾಗಿರಬೇಕು. ಬಾಯಿಯ ರುಚಿಗಾಗಿ ಆರೋಗ್ಯ ಹಾಳು ಮಾಡಿಕೊಳ್ಳಬೇಡಿ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ