AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ 2ನೇ ಅತೀ ದೊಡ್ಡ ಮಣಿಪಾಲ ಹಾಸ್ಪೈಸ್ ಆ್ಯಂಡ್‌ ರೆಸ್ಪೈಟ್ ಸೆಂಟರ್‌ ಉದ್ಘಾಟನೆ

ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮತ್ತು ಇಂಡಿಯನ್ ಅಸೋಸಿಯೇಷನ್ ​​ಆಫ್ ಪ್ಯಾಲಿಯೇಟಿವ್ ಕೇರ್ ಸೇರಿದಂತೆ ವಿವಿಧ ಎನ್ ಜಿ ಓ ಗಳ ಸಹಯೋಗದಲ್ಲಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ದೇಶದ 2ನೇ ಅತೀ ದೊಡ್ಡದಾದ, ಮಣಿಪಾಲ ಹಾಸ್ಪೈಸ್ ಆ್ಯಂಡ್‌ ರೆಸ್ಪೈಟ್ ಸೆಂಟರ್‌ (ಎಂಎಚ್‌ಆರ್‌ಸಿ) (MHRC) ಅನ್ನು ಆರಂಭಿಸಿದೆ. ಇದು ಎ. 30ರಂದು ಉದ್ಘಾಟನೆಗೊಳ್ಳಲಿದ್ದು ಜುಲೈನಿಂದ ಸೇವೆ ಪ್ರಾರಂಭಿಸಲಿದೆ.

ದೇಶದ 2ನೇ ಅತೀ ದೊಡ್ಡ ಮಣಿಪಾಲ ಹಾಸ್ಪೈಸ್ ಆ್ಯಂಡ್‌ ರೆಸ್ಪೈಟ್ ಸೆಂಟರ್‌ ಉದ್ಘಾಟನೆ
ಮಣಿಪಾಲ ಹಾಸ್ಪೈಸ್ ಆ್ಯಂಡ್‌ ರೆಸ್ಪೈಟ್ ಸೆಂಟರ್‌ ಉದ್ಘಾಟನೆImage Credit source: Google
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 28, 2025 | 6:06 PM

Share

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ದೇಶದ 2ನೇ ಅತೀ ದೊಡ್ಡದಾದ, ಮಣಿಪಾಲ ಹಾಸ್ಪೈಸ್ ಆ್ಯಂಡ್‌ ರೆಸ್ಪೈಟ್ ಸೆಂಟರ್‌ (ಎಂಎಚ್‌ಆರ್‌ಸಿ) (MHRC) ಅನ್ನು ಆರಂಭಿಸಿದೆ. ಇದನ್ನು ಎ. 30ರಂದು ಆಂಧ್ರಪ್ರದೇಶದ ರಾಜ್ಯಪಾಲ ಹಾಗೂ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಸ್‌. ಅಬ್ದುಲ್‌ ನಜೀರ್‌ ಉದ್ಘಾಟಿಸಲಿದ್ದಾರೆ. ಈ ಕೇಂದ್ರ ಜುಲೈನಿಂದ ಸೇವೆ ಪ್ರಾರಂಭಿಸಲಿದೆ ಎಂದು ಮಾಹೆ ವಿವಿ ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಹೇಳಿದ್ದಾರೆ.

ಮಾಹೆಯ ಆಡಳಿತ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಣಮಟ್ಟದ ಶಿಕ್ಷಣ ಮತ್ತು ಸಂಶೋಧನೆಯನ್ನು ಒದಗಿಸುವುದರ ಜೊತೆ ಜೊತೆಗೆ ಸಮಾಜಕ್ಕೆ ನೆರವಾಗುವ ಮತ್ತು ಮಾನವೀಯ ಮೌಲ್ಯವನ್ನು ಎತ್ತಿಹಿಡಿಯುವ ಕೆಲಸವನ್ನು ಮಾಹೆ ಮಾಡುತ್ತಿದೆ. ಕ್ಯಾನ್ಸರ್‌ ಅಥವಾ ಕ್ಯಾನ್ಸರೇತರ ರೋಗಕ್ಕೆ ತುತ್ತಾಗಿ ದೀರ್ಘ‌ಕಾಲದಿಂದ ನೋವು ಅನುಭವಿಸುತ್ತಿರುವವರಿಗೆ ಜೀವನದ ಅಂತಿಮ ಹಂತದಲ್ಲಿ ಉತ್ತಮ ಆರೈಕೆ ಜತೆಗೆ ನೋವು ಉಪಶಮನಕ್ಕೆ ಮಾಹೆ ಎಂಎಚ್‌ಆರ್‌ಸಿ ಆರಂಭಿಸುತ್ತಿದೆ ಎಂದರು.

105 ಹಾಸಿಗೆ ವ್ಯವಸ್ಥೆ

ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ), ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮತ್ತು ಇಂಡಿಯನ್ ಅಸೋಸಿಯೇಷನ್ ​​ಆಫ್ ಪ್ಯಾಲಿಯೇಟಿವ್ ಕೇರ್ ಸೇರಿದಂತೆ ವಿವಿಧ ಎನ್ ಜಿ ಓ ಗಳ ಸಹಯೋಗದಲ್ಲಿ ಈ ಕೇಂದ್ರ ಕಾರ್ಯನಿರ್ವಹಿಸಲಿದೆ. ತರಬೇತಿ ಪಡೆದ ವೈದ್ಯರು, ನರ್ಸ್, ಮನಶಾಸ್ತ್ರಜ್ಞರು, ಸಮಾಜಿಕ ಕಾರ್ಯಕರ್ತರನ್ನು ಈ ಕೇಂದ್ರ ಒಳಗೊಂಡಿರಲಿದೆ. ಜೊತೆಗೆ 105 ಹಾಸಿಗೆ ವ್ಯವಸ್ಥೆ ಇರುವ ಆರೈಕೆ ಮತ್ತು ಉಪಶಮನ ಕೇಂದ್ರ ಇದಾಗಿದ್ದು, ಆರಂಭದಲ್ಲಿ 35 ಹಾಸಿಗೆ ಸೇವೆಗೆ ಲಭ್ಯ ಇರಲಿದೆ. ಅನಂತರ ಹಂತ ಹಂತವಾಗಿ ಎಲ್ಲ ಬೆಡ್‌ ಸೇವೆಗೆ ಲಭ್ಯವಿರಲಿದೆ.

ಮಾಹೆಯ ಉಪಕುಲಪತಿ ಲೆ| ಜ| ಡಾ. ಎಂ.ಡಿ.ವೆಂಕಟೇಶ್‌ ಮಾತನಾಡಿ, ಹಾವಂಜೆ ಪರಿಸರದಲ್ಲಿ ಎಂಎಚ್‌ಆರ್‌ಸಿ ನಿರ್ಮಾಣಗೊಂಡಿರುವುದು ಜನರಿಗೆ ನೆರವು ನೀಡುವುದಕ್ಕಾಗಿದೆ. ಈ ರೀತಿಯ ಆರೋಗ್ಯ ಸೇವೆ ನೀಡುವುದು ನಮ್ಮ ಧ್ಯೇಯ. ಅದಕ್ಕಾಗಿಯೇ ಸುಮಾರು 65 ಕೋ. ರೂ. ವೆಚ್ಚದಲ್ಲಿ ಮೂಲಸೌಕರ್ಯ ಒದಗಿಸುತ್ತಿದ್ದೇವೆ. ಆರೈಕೆ ಪಡೆಯುವವರಿಗೆ ಪೂರ್ಣ ಸೇವೆ ಉಚಿತವಾಗಿದೆ. ಆದರೆ ಕಸ್ತೂರ್ಬಾ ಆಸ್ಪತ್ರೆಯ ಪಾಲಿಟೇಟಿವ್‌ ಕೇರ್‌ ವಿಭಾಗದಲ್ಲಿ ರೋಗಿಯನ್ನು ಪರಿಶೀಲಿಸಿ ಅಲ್ಲಿಂದ ಶಿಫಾರಸು ಪಡೆದ ಅನಂತರದಲ್ಲಿ ಆರೈಕೆ ಕೇಂದ್ರ ದಾಖಲಿಸಲಾಗುತ್ತದೆ ಎಂದರು.

ಇದನ್ನೂ ಓದಿ: ಚೀನಾದಲ್ಲಿ ರಿಮೋಟ್ ಕಂಟ್ರೋಲ್ ಹಾಸಿಗೆ, ಏನಿದರ ವಿಶೇಷತೆ? ಇಲ್ಲಿದೆ ಮಾಹಿತಿ

ಮಾಹೆಯ ಸಹ ಕುಲಪತಿ ಡಾ| ಶರತ್‌ ಕೆ. ರಾವ್‌ , ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಉಪಶಾಮಕ ಔಷಧ ಮತ್ತು ಸಪೋರ್ಟಿವ್‌ ಕೇರ್‌ ವಿಭಾಗದ ಮುಖ್ಯಸ್ಥ ಡಾ. ನವೀನ್‌ ಸಾಲಿನ್ಸ್‌ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು. ಸಹ ಕುಲಪತಿ ಡಾ. ನಾರಾಯಣ ಸಭಾಹಿತ್‌, ಸಿಒಒ ಡಾ. ರವಿರಾಜ್‌ ಎನ್‌.ಎಸ್‌., ಕುಲಸಚಿವ ಡಾ. ಗಿರಿಧರ್‌ ಪಿ. ಕಿಣಿ, ಎಂಎಚ್‌ಆರ್‌ಸಿ ನಿರ್ದೇಶಕಿ ಡಾ. ಸೀಮಾ ರಾಜೇಶ್‌ ರಾವ್‌, ಕೆಎಂಸಿ ಡೀನ್‌ ಡಾ. ಪದ್ಮರಾಜ್‌ ಹೆಗ್ಡೆ, ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್‌ ಶೆಟ್ಟಿ, ಪಿಆರ್‌ ನಿರ್ದೇಶಕ ಭರತ್‌ ಕುಮಾರ್‌ ಉಪಸ್ಥಿತರಿದ್ದರು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ