ಕೋವಿಡ್ ಸಾಂಕ್ರಾಮಿಕವು ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಮಧುಮೇಹ ಹೆಚ್ಚಿಸಿದೆ: ಅಧ್ಯಯನ

ಕೋವಿಡ್-19 ಸಾಂಕ್ರಾಮಿಕ ರೋಗ ಪ್ರಾರಂಭವಾದ ನಂತರದ ವರ್ಷದಲ್ಲಿ ಟೈಪ್-2 ಮಧುಮೇಹದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಲೇ ಇದೆ ಎಂದು ಸಂಶೋಧನೆಯೊಂದು ತಿಳಿಸಿದೆ.

ಕೋವಿಡ್ ಸಾಂಕ್ರಾಮಿಕವು ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಮಧುಮೇಹ ಹೆಚ್ಚಿಸಿದೆ: ಅಧ್ಯಯನ
ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಮಧುಮೇಹ
Follow us
|

Updated on: Jun 17, 2023 | 1:02 PM

ನ್ಯೂಯಾರ್ಕ್: ಕೋವಿಡ್-19 ಸಾಂಕ್ರಾಮಿಕ ರೋಗ ಪ್ರಾರಂಭವಾದ ನಂತರದ ವರ್ಷದಲ್ಲಿ ಟೈಪ್-2 ಮಧುಮೇಹದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಲೇ ಇದೆ ಎಂದು ಸಂಶೋಧನೆಯೊಂದು ತಿಳಿಸಿದೆ. ಅಮೆರಿಕಾದ ಇಲಿನಾಯ್ಸ್‌ನಲ್ಲಿ ನಡೆದ ಎಂಡೋಕ್ರೈನ್ ಸೊಸೈಟಿಯ ವಾರ್ಷಿಕ ಸಭೆಯಲ್ಲಿ ಹಿಂದಿನ ಎರಡು ವರ್ಷಗಳಿಗಿಂತ ಹೆಚ್ಚು ಗರ್ಭಿಣಿಯರು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಗರ್ಭಾವಸ್ಥೆಯ ಮಧುಮೇಹವನ್ನು ಹೆಚ್ಚು ಅಭಿವೃದ್ಧಿಪಡಿಸಿದ್ದಾರೆ ಎಂದು ತೋರಿಸಿದೆ.

ಮೊದಲ ಅಧ್ಯಯನದಲ್ಲಿ, ಓಹಿಯೋದ ಕೊಲಂಬಸ್‌ನಲ್ಲಿರುವ ನೇಷನ್‌ವೈಡ್ ಚಿಲ್ಡ್ರನ್ಸ್ ಆಸ್ಪತ್ರೆಯ ಸಂಶೋಧಕರು, ಕೋವಿಡ್-19 ಸಾಂಕ್ರಾಮಿಕದ ಮೊದಲ ವರ್ಷದಲ್ಲಿ, ಮನೆಯಲ್ಲಿಯೇ ಉಳಿದುಕೊಂಡಿದ್ದರಿಂದ, ಜೊತೆಗೆ ಅನೇಕ ಅಂಶಗಳು ಮಕ್ಕಳು ಹೆಚ್ಚು ತಿನ್ನಲು ಹಾಗೂ ಅನಾರೋಗ್ಯಕರ ಆಹಾರಗಳತ್ತ ಮುಖಮಾಡಿರುವುದೇ ತೂಕ ಹೆಚ್ಚಾಗಲು ಕಾರಣವಾಗಿದೆ. ಇದು ಟೈಪ್-2 ಮಧುಮೇಹದ ಹೆಚ್ಚಿನ ಪ್ರಕರಣಗಳಿಗೆ ಕಾರಣವಾಯಿತು ಎಂದು ಸಂಶೋಧನೆ ತಿಳಿಸಿವೆ.

ಇದನ್ನೂ ಓದಿ: ಮೊಳಕೆಯೊಡೆದ ಬೆಳ್ಳುಳ್ಳಿಯನ್ನು ಲಘುವಾಗಿ ಪರಿಗಣಿಸಬೇಡಿ, ಈ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಅದು ದಿವ್ಯ ಔಷಧ

ಎರಡನೇ ಅಧ್ಯಯನ ಆಸ್ಟ್ರೇಲಿಯಾದ ಸಿಡ್ನಿ ವಿಶ್ವವಿದ್ಯಾಲಯದ ತಂಡವು ಕೋವಿಡ್ -19 ರ ಹಿಂದಿನ ಎರಡು ವರ್ಷಗಳಲ್ಲಿ ನಡೆದ 14,663 ಗರ್ಭಧಾರಣೆಗಳಲ್ಲಿ ಮಧುಮೇಹ ಪತ್ತೆಯಾಗಿದೆ. ಅದರಲ್ಲಿ 6,890 ಮಹಿಳೆಯರು ಮೊದಲ ವರ್ಷದಲ್ಲಿ ಮತ್ತು 6,654 ಮಹಿಳೆಯರು ಎರಡನೇ ವರ್ಷದಲ್ಲಿ ಎಂದು ತಿಳಿದುಬಂದಿದೆ.

“ಜನಸಂಖ್ಯೆಯಲ್ಲಿನ ಬದಲಾವಣೆಗಳು ಮತ್ತು ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದ ಬದಲಾವಣೆಗಳಿಂದಾಗಿ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಗರ್ಭಾವಸ್ಥೆಯ ಮಧುಮೇಹವು ಹೆಚ್ಚು ಸಾಮಾನ್ಯವಾಗಿದೆ ಎಂದು ತೋರುತ್ತದೆ, ಇದು ವಿಶ್ವಾದ್ಯಂತ ತಾಯಂದಿರು ಮತ್ತು ಅವರ ಮಕ್ಕಳಿಗೆ ಗಮನಾರ್ಹವಾದ ಅಲ್ಪಾವಧಿಯ ಮತ್ತು ದೀರ್ಘಕಾಲೀನ ಪರಿಣಾಮವನ್ನು ಬೀರುತ್ತದೆ” ಎಂದು ಸಂಶೋಧಕರು ತಿಳಿಸಿದ್ದಾರೆ.

ಆರೋಗ್ಯಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

ತಾಜಾ ಸುದ್ದಿ
ಬೆಳಗಾವಿ ಬಳಿ ಘಾಟ್ ರಸ್ತೆಯಲ್ಲಿ ಕುಡುಕನ ಹುಚ್ಚಾಟ, ವಾಹನ ಸವಾರಿಗೆ ಸಮಸ್ಯೆ
ಬೆಳಗಾವಿ ಬಳಿ ಘಾಟ್ ರಸ್ತೆಯಲ್ಲಿ ಕುಡುಕನ ಹುಚ್ಚಾಟ, ವಾಹನ ಸವಾರಿಗೆ ಸಮಸ್ಯೆ
ಅವೈಜ್ಞಾನಿಕ ಕಾಮಗಾರಿಯಿಂದ ಅಡಕೆ ತೋಟಗಳಿಗೆ ನೀರು ನುಗ್ಗಿ ಬೆಳೆಗಾರರಿಗೆ ನಷ್ಟ
ಅವೈಜ್ಞಾನಿಕ ಕಾಮಗಾರಿಯಿಂದ ಅಡಕೆ ತೋಟಗಳಿಗೆ ನೀರು ನುಗ್ಗಿ ಬೆಳೆಗಾರರಿಗೆ ನಷ್ಟ
ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ
ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ
ಬಿಜೆಪಿ ಕೋಮುವಾದಿ ಅಲ್ಲವೆಂದು ದೇವೇಗೌಡರಿಗೆ ತಡವಾಗಿ ಗೊತ್ತಾಯಿತು: ಆರ್ ಅಶೋಕ
ಬಿಜೆಪಿ ಕೋಮುವಾದಿ ಅಲ್ಲವೆಂದು ದೇವೇಗೌಡರಿಗೆ ತಡವಾಗಿ ಗೊತ್ತಾಯಿತು: ಆರ್ ಅಶೋಕ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ