AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸಾಂಕ್ರಾಮಿಕವು ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಮಧುಮೇಹ ಹೆಚ್ಚಿಸಿದೆ: ಅಧ್ಯಯನ

ಕೋವಿಡ್-19 ಸಾಂಕ್ರಾಮಿಕ ರೋಗ ಪ್ರಾರಂಭವಾದ ನಂತರದ ವರ್ಷದಲ್ಲಿ ಟೈಪ್-2 ಮಧುಮೇಹದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಲೇ ಇದೆ ಎಂದು ಸಂಶೋಧನೆಯೊಂದು ತಿಳಿಸಿದೆ.

ಕೋವಿಡ್ ಸಾಂಕ್ರಾಮಿಕವು ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಮಧುಮೇಹ ಹೆಚ್ಚಿಸಿದೆ: ಅಧ್ಯಯನ
ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಮಧುಮೇಹ
ಅಕ್ಷತಾ ವರ್ಕಾಡಿ
|

Updated on: Jun 17, 2023 | 1:02 PM

Share

ನ್ಯೂಯಾರ್ಕ್: ಕೋವಿಡ್-19 ಸಾಂಕ್ರಾಮಿಕ ರೋಗ ಪ್ರಾರಂಭವಾದ ನಂತರದ ವರ್ಷದಲ್ಲಿ ಟೈಪ್-2 ಮಧುಮೇಹದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಲೇ ಇದೆ ಎಂದು ಸಂಶೋಧನೆಯೊಂದು ತಿಳಿಸಿದೆ. ಅಮೆರಿಕಾದ ಇಲಿನಾಯ್ಸ್‌ನಲ್ಲಿ ನಡೆದ ಎಂಡೋಕ್ರೈನ್ ಸೊಸೈಟಿಯ ವಾರ್ಷಿಕ ಸಭೆಯಲ್ಲಿ ಹಿಂದಿನ ಎರಡು ವರ್ಷಗಳಿಗಿಂತ ಹೆಚ್ಚು ಗರ್ಭಿಣಿಯರು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಗರ್ಭಾವಸ್ಥೆಯ ಮಧುಮೇಹವನ್ನು ಹೆಚ್ಚು ಅಭಿವೃದ್ಧಿಪಡಿಸಿದ್ದಾರೆ ಎಂದು ತೋರಿಸಿದೆ.

ಮೊದಲ ಅಧ್ಯಯನದಲ್ಲಿ, ಓಹಿಯೋದ ಕೊಲಂಬಸ್‌ನಲ್ಲಿರುವ ನೇಷನ್‌ವೈಡ್ ಚಿಲ್ಡ್ರನ್ಸ್ ಆಸ್ಪತ್ರೆಯ ಸಂಶೋಧಕರು, ಕೋವಿಡ್-19 ಸಾಂಕ್ರಾಮಿಕದ ಮೊದಲ ವರ್ಷದಲ್ಲಿ, ಮನೆಯಲ್ಲಿಯೇ ಉಳಿದುಕೊಂಡಿದ್ದರಿಂದ, ಜೊತೆಗೆ ಅನೇಕ ಅಂಶಗಳು ಮಕ್ಕಳು ಹೆಚ್ಚು ತಿನ್ನಲು ಹಾಗೂ ಅನಾರೋಗ್ಯಕರ ಆಹಾರಗಳತ್ತ ಮುಖಮಾಡಿರುವುದೇ ತೂಕ ಹೆಚ್ಚಾಗಲು ಕಾರಣವಾಗಿದೆ. ಇದು ಟೈಪ್-2 ಮಧುಮೇಹದ ಹೆಚ್ಚಿನ ಪ್ರಕರಣಗಳಿಗೆ ಕಾರಣವಾಯಿತು ಎಂದು ಸಂಶೋಧನೆ ತಿಳಿಸಿವೆ.

ಇದನ್ನೂ ಓದಿ: ಮೊಳಕೆಯೊಡೆದ ಬೆಳ್ಳುಳ್ಳಿಯನ್ನು ಲಘುವಾಗಿ ಪರಿಗಣಿಸಬೇಡಿ, ಈ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಅದು ದಿವ್ಯ ಔಷಧ

ಎರಡನೇ ಅಧ್ಯಯನ ಆಸ್ಟ್ರೇಲಿಯಾದ ಸಿಡ್ನಿ ವಿಶ್ವವಿದ್ಯಾಲಯದ ತಂಡವು ಕೋವಿಡ್ -19 ರ ಹಿಂದಿನ ಎರಡು ವರ್ಷಗಳಲ್ಲಿ ನಡೆದ 14,663 ಗರ್ಭಧಾರಣೆಗಳಲ್ಲಿ ಮಧುಮೇಹ ಪತ್ತೆಯಾಗಿದೆ. ಅದರಲ್ಲಿ 6,890 ಮಹಿಳೆಯರು ಮೊದಲ ವರ್ಷದಲ್ಲಿ ಮತ್ತು 6,654 ಮಹಿಳೆಯರು ಎರಡನೇ ವರ್ಷದಲ್ಲಿ ಎಂದು ತಿಳಿದುಬಂದಿದೆ.

“ಜನಸಂಖ್ಯೆಯಲ್ಲಿನ ಬದಲಾವಣೆಗಳು ಮತ್ತು ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದ ಬದಲಾವಣೆಗಳಿಂದಾಗಿ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಗರ್ಭಾವಸ್ಥೆಯ ಮಧುಮೇಹವು ಹೆಚ್ಚು ಸಾಮಾನ್ಯವಾಗಿದೆ ಎಂದು ತೋರುತ್ತದೆ, ಇದು ವಿಶ್ವಾದ್ಯಂತ ತಾಯಂದಿರು ಮತ್ತು ಅವರ ಮಕ್ಕಳಿಗೆ ಗಮನಾರ್ಹವಾದ ಅಲ್ಪಾವಧಿಯ ಮತ್ತು ದೀರ್ಘಕಾಲೀನ ಪರಿಣಾಮವನ್ನು ಬೀರುತ್ತದೆ” ಎಂದು ಸಂಶೋಧಕರು ತಿಳಿಸಿದ್ದಾರೆ.

ಆರೋಗ್ಯಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?