AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸಾಂಕ್ರಾಮಿಕವು ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಮಧುಮೇಹ ಹೆಚ್ಚಿಸಿದೆ: ಅಧ್ಯಯನ

ಕೋವಿಡ್-19 ಸಾಂಕ್ರಾಮಿಕ ರೋಗ ಪ್ರಾರಂಭವಾದ ನಂತರದ ವರ್ಷದಲ್ಲಿ ಟೈಪ್-2 ಮಧುಮೇಹದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಲೇ ಇದೆ ಎಂದು ಸಂಶೋಧನೆಯೊಂದು ತಿಳಿಸಿದೆ.

ಕೋವಿಡ್ ಸಾಂಕ್ರಾಮಿಕವು ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಮಧುಮೇಹ ಹೆಚ್ಚಿಸಿದೆ: ಅಧ್ಯಯನ
ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಮಧುಮೇಹ
ಅಕ್ಷತಾ ವರ್ಕಾಡಿ
|

Updated on: Jun 17, 2023 | 1:02 PM

Share

ನ್ಯೂಯಾರ್ಕ್: ಕೋವಿಡ್-19 ಸಾಂಕ್ರಾಮಿಕ ರೋಗ ಪ್ರಾರಂಭವಾದ ನಂತರದ ವರ್ಷದಲ್ಲಿ ಟೈಪ್-2 ಮಧುಮೇಹದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಲೇ ಇದೆ ಎಂದು ಸಂಶೋಧನೆಯೊಂದು ತಿಳಿಸಿದೆ. ಅಮೆರಿಕಾದ ಇಲಿನಾಯ್ಸ್‌ನಲ್ಲಿ ನಡೆದ ಎಂಡೋಕ್ರೈನ್ ಸೊಸೈಟಿಯ ವಾರ್ಷಿಕ ಸಭೆಯಲ್ಲಿ ಹಿಂದಿನ ಎರಡು ವರ್ಷಗಳಿಗಿಂತ ಹೆಚ್ಚು ಗರ್ಭಿಣಿಯರು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಗರ್ಭಾವಸ್ಥೆಯ ಮಧುಮೇಹವನ್ನು ಹೆಚ್ಚು ಅಭಿವೃದ್ಧಿಪಡಿಸಿದ್ದಾರೆ ಎಂದು ತೋರಿಸಿದೆ.

ಮೊದಲ ಅಧ್ಯಯನದಲ್ಲಿ, ಓಹಿಯೋದ ಕೊಲಂಬಸ್‌ನಲ್ಲಿರುವ ನೇಷನ್‌ವೈಡ್ ಚಿಲ್ಡ್ರನ್ಸ್ ಆಸ್ಪತ್ರೆಯ ಸಂಶೋಧಕರು, ಕೋವಿಡ್-19 ಸಾಂಕ್ರಾಮಿಕದ ಮೊದಲ ವರ್ಷದಲ್ಲಿ, ಮನೆಯಲ್ಲಿಯೇ ಉಳಿದುಕೊಂಡಿದ್ದರಿಂದ, ಜೊತೆಗೆ ಅನೇಕ ಅಂಶಗಳು ಮಕ್ಕಳು ಹೆಚ್ಚು ತಿನ್ನಲು ಹಾಗೂ ಅನಾರೋಗ್ಯಕರ ಆಹಾರಗಳತ್ತ ಮುಖಮಾಡಿರುವುದೇ ತೂಕ ಹೆಚ್ಚಾಗಲು ಕಾರಣವಾಗಿದೆ. ಇದು ಟೈಪ್-2 ಮಧುಮೇಹದ ಹೆಚ್ಚಿನ ಪ್ರಕರಣಗಳಿಗೆ ಕಾರಣವಾಯಿತು ಎಂದು ಸಂಶೋಧನೆ ತಿಳಿಸಿವೆ.

ಇದನ್ನೂ ಓದಿ: ಮೊಳಕೆಯೊಡೆದ ಬೆಳ್ಳುಳ್ಳಿಯನ್ನು ಲಘುವಾಗಿ ಪರಿಗಣಿಸಬೇಡಿ, ಈ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಅದು ದಿವ್ಯ ಔಷಧ

ಎರಡನೇ ಅಧ್ಯಯನ ಆಸ್ಟ್ರೇಲಿಯಾದ ಸಿಡ್ನಿ ವಿಶ್ವವಿದ್ಯಾಲಯದ ತಂಡವು ಕೋವಿಡ್ -19 ರ ಹಿಂದಿನ ಎರಡು ವರ್ಷಗಳಲ್ಲಿ ನಡೆದ 14,663 ಗರ್ಭಧಾರಣೆಗಳಲ್ಲಿ ಮಧುಮೇಹ ಪತ್ತೆಯಾಗಿದೆ. ಅದರಲ್ಲಿ 6,890 ಮಹಿಳೆಯರು ಮೊದಲ ವರ್ಷದಲ್ಲಿ ಮತ್ತು 6,654 ಮಹಿಳೆಯರು ಎರಡನೇ ವರ್ಷದಲ್ಲಿ ಎಂದು ತಿಳಿದುಬಂದಿದೆ.

“ಜನಸಂಖ್ಯೆಯಲ್ಲಿನ ಬದಲಾವಣೆಗಳು ಮತ್ತು ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದ ಬದಲಾವಣೆಗಳಿಂದಾಗಿ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಗರ್ಭಾವಸ್ಥೆಯ ಮಧುಮೇಹವು ಹೆಚ್ಚು ಸಾಮಾನ್ಯವಾಗಿದೆ ಎಂದು ತೋರುತ್ತದೆ, ಇದು ವಿಶ್ವಾದ್ಯಂತ ತಾಯಂದಿರು ಮತ್ತು ಅವರ ಮಕ್ಕಳಿಗೆ ಗಮನಾರ್ಹವಾದ ಅಲ್ಪಾವಧಿಯ ಮತ್ತು ದೀರ್ಘಕಾಲೀನ ಪರಿಣಾಮವನ್ನು ಬೀರುತ್ತದೆ” ಎಂದು ಸಂಶೋಧಕರು ತಿಳಿಸಿದ್ದಾರೆ.

ಆರೋಗ್ಯಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?