AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಸ್ ಸೋಂಕು ಹರಡುವಿಕೆ ತಡೆಯುವಲ್ಲಿ ಮಾಸ್ಕ್​​ನಿಂದ ಹೆಚ್ಚಿನ ಪ್ರಯೋಜನವಿಲ್ಲ; ಸಂಶೋಧನೆ

ಪ್ರಪಂಚದಾದ್ಯಂತದ ವಿಶ್ವವಿದ್ಯಾನಿಲಯಗಳ 12 ಸಂಶೋಧಕರ ನೇತೃತ್ವದ ಸಂಶೋಧನೆಯು ಕೋವಿಡ್ -19 ಹರಡುವಿಕೆಯನ್ನು ತಡೆಯುವಲ್ಲಿ ಫೇಸ್​​ ಮಾಸ್ಕ್​​ಗಳು ದೊಡ್ಡ ಮಟ್ಟದ ಪರಿಣಾಮವನ್ನು ಬೀರಿಲ್ಲ ಎಂದು ತಿಳಿಸಿದೆ.

ವೈರಸ್ ಸೋಂಕು ಹರಡುವಿಕೆ ತಡೆಯುವಲ್ಲಿ ಮಾಸ್ಕ್​​ನಿಂದ ಹೆಚ್ಚಿನ ಪ್ರಯೋಜನವಿಲ್ಲ; ಸಂಶೋಧನೆ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on:Feb 15, 2023 | 5:52 PM

Share

ಕೊರೋನಾ(Covid-19) ಸಾಂಕ್ರಾಮಿಕ ವಿಶ್ವದಾದ್ಯಂತ ಸಾಕಷ್ಟು ಸಾವು ನೋವಿಗೆ ಕಾರಣವಾಗಿದೆ. ಜೊತೆಗೆ ಆ ಸಮಯದಲ್ಲಿ ಮಾಸ್ಕ್(Face Masks) ಧರಿಸುವುದನ್ನು ಕಡ್ಡಾಯಗೊಳಿಸಲಾಗಿತ್ತು. ಈಗಾಲೂ ಕೂಡ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್​​ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಇತ್ತೀಚಿನ ಸಂಶೋಧನೆಯೊಂದು ಸಾಂಕ್ರಾಮಿಕ ರೋಗ ಹರಡುವಲ್ಲಿ ಫೇಸ್​​ ಮಾಸ್ಕ್​​ಗಳು ದೊಡ್ಡ ಮಟ್ಟದ ಪ್ರಯೋಜನವನ್ನು ನೀಡಿಲ್ಲ ಎಂದು ಬಹಿರಂಗಪಡಿಸಿದೆ.

ಪ್ರಪಂಚದಾದ್ಯಂತದ ವಿಶ್ವವಿದ್ಯಾನಿಲಯಗಳ 12 ಸಂಶೋಧಕರ ನೇತೃತ್ವದ ಸಂಶೋಧನೆಯ  ಕೊಕ್ರೇನ್ ಲೈಬ್ರರಿ ಪ್ರಕಟಿಸಿದ ವಿಮರ್ಶೆಯು ಕೋವಿಡ್ -19 ಹರಡುವಿಕೆಯನ್ನು ತಡೆಯುವಲ್ಲಿ ಫೇಸ್​​ ಮಾಸ್ಕ್​​ಗಳು ರೋಗವನ್ನು ತಡೆಯುವಲ್ಲಿ ದೊಡ್ಡ ಮಟ್ಟದ ಪರಿಣಾಮವನ್ನು ಬೀರಿಲ್ಲ ಎಂದು ತಿಳಿಸಿದ್ದಾರೆ.  ಕೋವಿಡ್​​ 19 ಸಾವಿರಾರು ಸಾವು ನೋವುಗಳಿಗೆ ಕಾರಣವಾಗಿದೆ. ಆದರೆ ಫೇಸ್​ ಮಾಸ್ಕ್​​​ ಧರಿಸುವುದರಿಂದ ಉಸಿರಾಟದ ವೈರಸ್‌ಗಳ ಹರಡುವಿಕೆಯನ್ನು ತಡೆಯಬಹುದೇ ಎಂಬುದಕ್ಕೆ ಸಾಕಷ್ಟು ಪುರಾವೆಗಳಿಲ್ಲ. ಜೊತೆಗೆ ವೈದ್ಯಕೀಯ ಅಥವಾ ಶಸ್ತ್ರ ಚಿಕಿತ್ಸೆಯಲ್ಲಿ ಬಳಸುವ ಮಾಸ್ಕ್​​​ ಮತ್ತು N95 ನಡುವೆ ಯಾವುದೇ ಸ್ಪಷ್ಟ ವ್ಯತ್ಯಾಸವಿಲ್ಲ ಎಂದು ಅಧ್ಯಯನವು ಹೇಳಿಕೊಂಡಿದೆ.

ಇದನ್ನೂ ಓದಿ: ಕುಸಿಯುತ್ತಿರುವ ಜನಸಂಖ್ಯೆ, ಬಂಜೆತನಕ್ಕೆ ಉಚಿತ ಚಿಕಿತ್ಸೆ ನೀಡ್ತಿದೆ ಈ ದೇಶ

ಆದರೆ ಸೆಪ್ಟೆಂಬರ್​​ನಲ್ಲಿ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಶನ್ (CDC)ನ ನಿರ್ದೇಶಕ ಡಾ ರಾಬರ್ಟ್ ರೆಡ್‌ಫೀಲ್ಡ್ ಫೇಸ್ ಮಾಸ್ಕ್‌ಗಳು ನಮ್ಮಲ್ಲಿರುವ ಪ್ರಮುಖ ಶಕ್ತಿಶಾಲಿ ಆರೋಗ್ಯ ಸಾಧನವಾಗಿದೆ ಎಂದು ಹೇಳಿದ್ದರು. ಆದರೆ ಇದೀಗಾ ನಡೆಸಿದ ಕೊಕ್ರೇನ್ ಲೈಬ್ರರಿ ಪ್ರಕಟಿಸಿದ ವಿಮರ್ಶೆಯು ಯಾವುದೇ ಅಧಿಕ ಮಟ್ಟದ ಪ್ರಯೋಜನವನ್ನು ಹೊಂದಿಲ್ಲ ಎಂದು ತಿಳಿಸಿದೆ. ಈ ಸಂಶೋಧನೆಗೆ ಕೋವಿಡ್​​ 19 ಹೊರತು ಪಡಿಸಿ, 2009ರ H1N1 ಕಾಯಿಲೆ, ಹಾಗೂ 2016ವರೆಗಿನ ಸಮಯದಲ್ಲಿನ ಸಾಂಕ್ರಾಮಿಕ ರೋಗಗಳ ಡೇಟಾವನ್ನು ಸಂಗ್ರಹಿಸಿ, ಈ ಫಲಿತಾಂಶವನ್ನು ಪ್ರಕಟಿಸಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:52 pm, Wed, 15 February 23

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..