AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pumpkin Benefits: ಕ್ಯಾನ್ಸರ್ ನಿಂದ ಪುರುಷರ ಲೈಂಗಿಕ ಸಮಸ್ಯೆ ತಡೆಗಟ್ಟುವ ವರೆಗೆ; ಈ ತರಕಾರಿಯೇ ಬೆಸ್ಟ್ ಮೆಡಿಸಿನ್

ಸಿಹಿ ಕುಂಬಳದ ಆರೋಗ್ಯ ಪ್ರಯೋಜನ: ಸಿಹಿ ಕುಂಬಳದ ಬೀಜವನ್ನು ಜನ ಯಥೇಚ್ಛವಾಗಿ ಸೇವನೆ ಮಾಡುವುದನ್ನು ನೋಡಿರಬಹುದು. ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು ಹಾಗಾಗಿ ಇದರ ಸೇವನೆ ಮಾಡುತ್ತಾರೆ. ಆದ್ರೆ ಅದರಕ್ಕಿಂತ ಹೆಚ್ಚಿನ ಪ್ರಯೋಜನ ಸಿಹಿ ಕುಂಬಳದಲ್ಲಿಯೇ ಇದೆ ಎಂಬುದು ಜನರಿಗೆ ತಿಳಿದಿಲ್ಲ. ಹೌದು, ನೈಸರ್ಗಿಕ ಆಹಾರಗಳ ಪೈಕಿ ಸಿಹಿ ಕುಂಬಳಕಾಯಿ ಮನುಷ್ಯನ ಬೆಸ್ಟ್ ಫ್ರೆಂಡ್. ಸಾಮಾನ್ಯವಾಗಿ ವರ್ಷಪೂರ್ತಿ ದೊರೆಯುವ ಈ ತರಕಾರಿ ಪುರುಷರ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಹೇಗೆ ಅಂತೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Pumpkin Benefits: ಕ್ಯಾನ್ಸರ್ ನಿಂದ ಪುರುಷರ ಲೈಂಗಿಕ ಸಮಸ್ಯೆ ತಡೆಗಟ್ಟುವ ವರೆಗೆ; ಈ ತರಕಾರಿಯೇ ಬೆಸ್ಟ್ ಮೆಡಿಸಿನ್
ಚೀನಿಕಾಯಿಯ ಉಪಯೋಗImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jun 27, 2025 | 4:00 PM

Share

ಆರೋಗ್ಯ ಪ್ರತಿಯೊಬ್ಬ ಮನುಷ್ಯನಿಗೂ ಅವಶ್ಯಕ. ಇದನ್ನು ಕಾಪಾಡಿಕೊಳ್ಳಲು ಹರಸಾಹಸ ಪಡುವ ಅಗತ್ಯವಿಲ್ಲ. ಆದರೆ ನಾವು ಮಾಡುವಂತಹ ಕೆಲಸಗಳನ್ನು ಸರಿಯಾಗಿ ಮಾಡಿದರೆ ಸಾಕಾಗುತ್ತದೆ. ಹಾಗೆಯೇ ಪ್ರತಿನಿತ್ಯ ಯೋಗ, ವ್ಯಾಯಾಮ (exercise), ಧ್ಯಾನ ಮಾಡುವದರ ಜೊತೆ ಜೊತೆಗೆ ಉತ್ತಮ ಆಹಾರ ಪದ್ದತಿ ಅನುಸರಿಸುವುದು ಕೂಡ ಬಹಳ ಮುಖ್ಯವಾಗುತ್ತದೆ. ಇನ್ನು ನೈಸರ್ಗಿಕ ಆಹಾರಗಳ ಪೈಕಿ ಸಿಹಿ ಕುಂಬಳಕಾಯಿ (pumpkin) ಮನುಷ್ಯನ ಬೆಸ್ಟ್ ಫ್ರೆಂಡ್ ಎಂದರೆ ತಪ್ಪಾಗಲಾರದು. ಆದರೆ ಇವುಗಳ ಬಗ್ಗೆ ಸರಿಯಾದ ಮಾಹಿತಿ ಇರದ ಕಾರಣ ಇವುಗಳ ಸೇವನೆ ಮಾಡುವುದಕ್ಕೆ ಜನ ಅಷ್ಟು ಮುತುವರ್ಜಿ ವಹಿಸುವುದಿಲ್ಲ. ಕೆಲವೆಡೆ ಚೀನಿಕಾಯಿ ಎಂದೂ ಕರೆಯಲ್ಪಡುವ ಸಿಹಿ ಕುಂಬಳಕಾಯಿ ವರ್ಷಪೂರ್ತಿ ಲಭ್ಯವಿದ್ದು ಪೋಷಕಾಂಶಗಳಿಂದ ಕೂಡಿರುತ್ತವೆ. ನಿಜ ಹೇಳಬೇಕೆಂದರೆ ಇದರಿಂದ ಪುರುಷರ ಆರೋಗ್ಯಕ್ಕೆ (Men’s Health) ಹೆಚ್ಚು ಪ್ರಯೋಜನ ಸಿಗುತ್ತದೆ. ಹೇಗೆ ಅಂತೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಸಿಹಿ ಕುಂಬಳಕಾಯಿ ಅಥವಾ ಕೆಂಪು ಕುಂಬಳಕಾಯಿ ಇದು ಪೌಷ್ಟಿಕಾಂಶ ಭರಿತ ತರಕಾರಿಯಾಗಿದೆ. ಇದು ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದು ಮತ್ತು ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಅಲ್ಲದೆ, ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಇದು ಸಹಕಾರಿ. ಮಾತ್ರವಲ್ಲ ಪುರುಷರ ಫಲವತ್ತತೆ ಹೆಚ್ಚಿಸಲು ಕೂಡ ಇದು ಸಹಾಯ ಮಾಡುತ್ತದೆ. ಇಂಡಿಯನ್ ಜರ್ನಲ್ ಆಫ್ ಯೂರಾಲಜಿಯಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಸಿಹಿ ಕುಂಬಳಕಾಯಿ ಬೀಜ ಸೇವನೆಯು ಪ್ರಾಸ್ಟೇಟ್ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದು ಪುರುಷರ ಲೈಂಗಿಕ ಆರೋಗ್ಯಕ್ಕೆ ಬಹಳ ಮುಖ್ಯವಾಗಿದ್ದು ಇದನ್ನು ಸಾಮಾನ್ಯವಾಗಿ ಪ್ರಾಸ್ಟೇಟ್ ಗ್ರಂಥಿಯನ್ನು ಬಲಪಡಿಸಲು ಮತ್ತು ಪುರುಷರಲ್ಲಿನ ಆರೋಗ್ಯಕರ ಹಾರ್ಮೋನ್ ಕಾರ್ಯವನ್ನು ಉತ್ತೇಜಿಸಲು ಬಳಸಲಾಗುತ್ತದೆ.

ಸಿಹಿ ಕುಂಬಳಕಾಯಿಯ ಪ್ರಯೋಜನಗಳು:

ಕಣ್ಣಿನ ಆರೋಗ್ಯ:

ಸಿಹಿ ಕುಂಬಳಕಾಯಿಯಲ್ಲಿರುವ ಬೀಟಾ ಕ್ಯಾರೋಟಿನ್ ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದು.

ಇದನ್ನೂ ಓದಿ
Image
ಅಬ್ಸ್ಟ್ರಕ್ಟಿವ್ ಸ್ಲೀಪ್ ಅಪ್ನಿಯಾ ಲಕ್ಷಣಗಳು ಹೇಗಿರುತ್ತೆ ಗೊತ್ತಾ?
Image
ಎಸಿಯಲ್ಲಿ ಗಂಟೆಗಟ್ಟಲೆ ಸಮಯ ಕಳೆಯುವವರಿಗೆ ಈ ಸಮಸ್ಯೆ ತಪ್ಪಿದ್ದಲ್ಲ
Image
ರಾತ್ರಿ ಈ ರೀತಿ ಲಕ್ಷಣ ಕಂಡು ಬರುವುದು ಕಿಡ್ನಿ ಫೇಲ್ಯೂರ್ ಆಗುವ ಮುನ್ಸೂಚನೆ

ಕ್ಯಾನ್ಸರ್ ತಡೆಗಟ್ಟುವಿಕೆ:

ಸಿಹಿ ಕುಂಬಳಕಾಯಿ ಬೀಜಗಳಲ್ಲಿ ಉತ್ಕರ್ಷಣ ನಿರೋಧಕಗಳು ಹೇರಳವಾಗಿರುವುದರಿಂದ, ಕ್ಯಾನ್ಸರ್ ಬರುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.

ಹೃದಯದ ಆರೋಗ್ಯ:

ಇದರಲ್ಲಿರುವ ಪೊಟ್ಯಾಸಿಯಮ್ ಮತ್ತು ಕರಗುವ ನಾರುಗಳು ಹೃದಯದ ಆರೋಗ್ಯವನ್ನು ಸುಧಾರಿಸುತ್ತವೆ.

ಚಯಾಪಚಯ ಶಕ್ತಿ ವೃದ್ಧಿ:

ಸಿಹಿ ಕುಂಬಳಕಾಯಿ ಬೀಜಗಳು ಚಯಾಪಚಯವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.

ರಕ್ತದಲ್ಲಿನ ಸಕ್ಕರೆ ನಿಯಂತ್ರಣ:

ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನದಲ್ಲಿಡಲು ಸಹಕಾರಿಯಾಗಿದೆ.

ಇದನ್ನೂ ಓದಿ: Pumpkin Benefits: ಕಣ್ಣಿನ ಸಮಸ್ಯೆಯಿಂದ ರೋಗನಿರೋಧಕ ಶಕ್ತಿಯವರೆಗೆ; ಚೀನಿಕಾಯಿಯ ಉಪಯೋಗಗಳಿವು

ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ನಿಯಂತ್ರಣ:

ಸಿಹಿ ಕುಂಬಳಕಾಯಿ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಹಾಗಾಗಿ ಸಿಹಿ ಕುಂಬಳಕಾಯಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವುದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಹಾಗಂತ ಅಗತ್ಯಕ್ಕಿಂತ ಹೆಚ್ಚು ಇದರ ಸೇವನೆ ಮಾಡಬೇಡಿ. ಬದಲಾಗಿ ನಿಯಮಿತವಾಗಿ ಇದರ ಸೇವನೆ ಮಾಡಿ. ಇದರಿಂದ ಸಿಗುವ ಪ್ರಯೋಜನಗಳನ್ನು ಪಡೆದುಕೊಳ್ಳಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!