AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ದಾಳಿಂಬೆ ಸಿಪ್ಪೆಯಲ್ಲಿದೆ ನಿಮಗೆ ಗೊತ್ತಿಲ್ಲದ ಪ್ರಯೋಜನಗಳು

ಹಿಮೋಗ್ಲೋಬಿನ್ ಕಡಿಮೆ ಇರುವವರಿಗೆ ವೈದ್ಯರು ಈ ಹಣ್ಣನ್ನು ಹೆಚ್ಚು ತಿನ್ನಲು ಹೇಳುತ್ತಾರೆ. ಆದರೆ ಅದೆಷ್ಟೋ ಜನರಿಗೆ ಗೊತ್ತಿಲ್ಲ ದಾಳಿಂಬೆ ಹಣ್ಣಿನ ಜೊತೆಗೆ ಅದರ ಸಿಪ್ಪೆಯಿಂದಲೂ ಹೆಚ್ಚು ಪ್ರಯೋಜನಗಳಿವೆ ಎಂದು. ಸಾಮಾನ್ಯವಾಗಿ ದಾಳಿಂಬೆ ಹಣ್ಣನ್ನು ತಿಂದು ಅದರ ಸಿಪ್ಪೆ ಕಸದ ತೊಟ್ಟಿಗೆ ಹಾಕುತ್ತಾರೆ.

Health Tips: ದಾಳಿಂಬೆ ಸಿಪ್ಪೆಯಲ್ಲಿದೆ ನಿಮಗೆ ಗೊತ್ತಿಲ್ಲದ ಪ್ರಯೋಜನಗಳು
ದಾಳಿಂಬೆ ಹಣ್ಣು
Follow us
TV9 Web
| Updated By: sandhya thejappa

Updated on: Jun 17, 2021 | 12:50 PM

ದಾಳಿಂಬೆ ಎಲ್ಲರಿಗೂ ಇಷ್ಟವಾಗುವ ಹಣ್ಣು. ಹಣ್ಣು ಬಿಡಿಸುವುದು ಕೊಂಚ ತಡವಾದರೂ, ಸ್ವಲ್ಪ ರಗಳೆಯಾದರೂ ಆರೋಗ್ಯವನ್ನು ಕಾಪಾಡಿಕೊಳ್ಳಲು ಇದು ಉತ್ತಮ ಹಣ್ಣು. ಹಿಮೋಗ್ಲೋಬಿನ್ ಕಡಿಮೆ ಇರುವವರಿಗೆ ವೈದ್ಯರು ಈ ಹಣ್ಣನ್ನು ಹೆಚ್ಚು ತಿನ್ನಲು ಹೇಳುತ್ತಾರೆ. ಆದರೆ ಅದೆಷ್ಟೋ ಜನರಿಗೆ ಗೊತ್ತಿಲ್ಲ ದಾಳಿಂಬೆ ಹಣ್ಣಿನ ಜೊತೆಗೆ ಅದರ ಸಿಪ್ಪೆಯಿಂದಲೂ ಹೆಚ್ಚು ಪ್ರಯೋಜನಗಳಿವೆ ಎಂದು. ಸಾಮಾನ್ಯವಾಗಿ ದಾಳಿಂಬೆ ಹಣ್ಣನ್ನು ತಿಂದು ಅದರ ಸಿಪ್ಪೆ ಕಸದ ತೊಟ್ಟಿಗೆ ಹಾಕುತ್ತಾರೆ. ಆದರೆ ಎಸೆಯುವ ಮುನ್ನಾ ಅದರಲ್ಲಿರುವ ಪ್ರಯೋಜಕಾರಿ ಅಂಶಗಳನ್ನು ತಿಳಿದುಕೊಳ್ಳಬೇಕು.

ಹೃದಯಕ್ಕೆ ಹೆಚ್ಚು ಪ್ರಯೋಜನಕಾರಿ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಈ ದಾಳಿಂಬೆ ಸಿಪ್ಪೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಅಧ್ಯಯನದ ಪ್ರಕಾರ, ದಾಳಿಂಬೆ ಸಿಪ್ಪೆಯಲ್ಲಿರುವ ಮೆಥನಾಲ್ ಸಾರವು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದು ಕೊಲೆಸ್ಟ್ರಾಲ್​ನ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಬಾಯಿಯಲ್ಲಿ ಹರಡುವ ರೋಗಾಣು ವಿರುದ್ಧ ಹೋರಾಟ ದಾಳಿಂಬೆ ಸಿಪ್ಪೆಗಳಲ್ಲಿ ಪಾಲಿಫೆನಾಲಿಕ್ ಫ್ಲೇವನಾಯ್ಡ್​ಗಳಿವೆ. ಇದು ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರ ವಿರುದ್ಧ ಹೋರಾಡುವ ಗುಣಗಳನ್ನು ಹೊಂದಿರುತ್ತದೆ. ಬಾಯಿಯಲ್ಲಿ ಹರಡುವ ರೋಗಾಣುಗಳನ್ನು ತೆಗೆದುಹಾಕಲು ಇದು ಸಹಾಯ ಮಾಡುತ್ತದೆ. ಕೆಟ್ಟ ಉಸಿರಾಟದ ಸಮಸ್ಯೆಯಿಂದ ತೊಂದರೆಗೀಡಾಗಿದ್ದರೆ, ದಾಳಿಂಬೆ ಸಿಪ್ಪೆಯನ್ನು ಬಾಯಿ ಫ್ರೆಶರ್ನಂತೆ ಬಳಸಬಹುದು. ದಾಳಿಂಬೆಯ ಸಿಪ್ಪೆಯನ್ನು ಒಣಗಿಸಿ ಪೇಸ್ಟ್ ಮಾಡಿ. ಒಂದು ಚಮಚ ದಾಳಿಂಬೆ ಪುಡಿಯನ್ನು ಒಂದು ಲೋಟ ನೀರಿನಲ್ಲಿ ಬೆರೆಸಿ ಬೆಳಿಗ್ಗೆ ಕುಡಿಯಿರಿ.

ಮುಟ್ಟಿನ ನೋವು ನಿವಾರಣೆ ಇತ್ತೀಚೆಗೆ ಬಹಳಷ್ಟು ಹೆಣ್ಣು ಮಕ್ಕಳು ಅನಿಯಮಿತ ಮುಟ್ಟಿನಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಎರಡು ಮೂರು ತಿಂಗಳಿಗೊಮ್ಮೆ ಮುಟ್ಟಾಗುತ್ತಿದ್ದಾರೆ. ಮುಟ್ಟಾದಾಗ ವಿಪರೀತ ಹೊಟ್ಟೆ ನೋವಾಗುವುದು. ಆ ನೋವಿಗೆ ದಾಳಿಂಬೆ ಸಿಪ್ಪೆ ಮದ್ದಾಗಿದೆ. ಒಂದು ಲೋಟದ ನೀರಿಗೆ ಒಂದು ಚಮಚ ದಾಳಿಂಬೆ ಸಿಪ್ಪೆಯ ಪುಡಿಯನ್ನು ಹಾಕಿ, ಬೆರೆಸಿ ಕುಡಿಯಬೇಕು. ಇದರಿಂದ ಹೊಟ್ಟೆ ನೋವು ಕಡಿಮೆಯಾಗುವ ಜೊತೆಗೆ ಹೆಚ್ಚು ರಕ್ತಸ್ರಾವ ಆಗುತ್ತಿದ್ದರೂ ನಿಯಂತ್ರಣಕ್ಕೆ ತರುವುದು.

ಮುಖದ ಸುಕ್ಕು ಮುಖದಲ್ಲಿ ಸುಕ್ಕು, ನೆರಿಗೆಯಿಂದ ವಯಸ್ಸಾದಂತೆ ಕಾಣುತ್ತಾರೆ. ಹಾಗಾಗಿ ಮುಖದ ಮೇಲಿರುವ ಸುಕ್ಕನ್ನು ಕಡಿಮೆ ಮಾಡಲು ದಾಳಿಂಬೆ ಸಿಪ್ಪೆ ಹೆಚ್ಚು ಪ್ರಯೋಜನಕಾರಿಯಾಗಿದೆ. ದಾಳಿಂಬೆ ಸಿಪ್ಪೆಯ ಪುಡಿಯನ್ನು ರೋಸ್ ವಾಟರ್​ನೊಂದಿಗೆ ಚೆನ್ನಾಗಿ ಮಿಶ್ರಣ ಮಾಡಿ. ರೆಡಿಯಾದ ಪೇಸ್ಟ್ನ ಮುಖಕ್ಕೆ ಹಚ್ಚಿ. ಹಚ್ಚಿದ ಪೇಸ್ಟ್ ಒಣಗಿದ ಬಳಿಕ ತಣ್ಣೀರಿನಿಂದ ಮುಖವನ್ನು ತೊಳೆಯಿರಿ.

ಸನ್ ಟ್ಯಾನ್ಗೆ ಪರಿಹಾರ ಬಿಸಿಲಿಗೆ ಹೋದರೆ ಟ್ಯಾನ್ ಆಗುವುದು ಸಹಜ. ಟ್ಯಾನ್ ಆದರೆ ಸೌಂದರ್ಯ ಕಡಿಮೆಯಾಗುವುದು ನಿಜ. ಟ್ಯಾನ್ ಆಯ್ತು ಅಂತ ಭಯಪಡುವ ಅಗತ್ಯವಿಲ್ಲ. ಇದಕ್ಕೆ ಪರಿಹಾರ ಮನೆಯಲ್ಲೆ ಇದೆ. ದಾಳಿಂಬೆ ಸಿಪ್ಪೆಯನ್ನು ಸನ್ ಸ್ಕ್ರೀನ್​ನಂತೆ ಬಳಸಬಹುದು. ಒಣ ಸಿಪ್ಪೆಯನ್ನು ಎಣ್ಣೆಯೊಂದಿಗೆ ಬೆರೆಸಿ, ಮುಖಕ್ಕೆ ಹಚ್ಚಬೇಕು. ಇದರಿಂದ ಟ್ಯಾನ್ ಕಡಿಮೆಯಾಗುತ್ತದೆ.

Health Tips: ನೇರಳೆ ಹಣ್ಣಿನ ಬೀಜದಿಂದಲೂ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

Health Tips: ಮೊಬೈಲ್ ಮುಖದ ಸೌಂದರ್ಯವನ್ನು ಕಸಿದುಕೊಳ್ಳುತ್ತದೆ; ಅತಿಯಾಗಿ ಸ್ಮಾರ್ಟ್​ ಫೋನ್ ಬಳಸುವವರು ಈ ವಿಷಯದ ಬಗ್ಗೆ ಎಚ್ಚರ ವಹಿಸಿ

(There are many benefits of pomegranate peel)

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ