ಹಲಸಿನ ಬೀಜದ ಉಪಯೋಗ ತಿಳಿದರೆ ಒಂದು ಬೀಜವನ್ನೂ ಹಾಳು ಮಾಡಲಾರಿರಿ; ಇಲ್ಲಿದೆ ವಿವರ

ಹಲಸಿನ ಹಣ್ಣು ತಿಂದು ಬೀಜ ಬೇಡವೆಂದು ಎಸೆಯುತ್ತಾರೆ. ಕಾರಣ ಅದರ ಉಪಯೋಗದ ಬಗ್ಗೆ ತಿಳಿದಿಲ್ಲ. ಎಸೆಯಲು ಹೊರಟಿರುವ ಹಲಸಿನ ಬೀಜದಿಂದ ಹೆಚ್ಚು ಉಪಯೋಗವಿದೆ. ಅವುಗಳಿಂದಲೂ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾದರೆ ಅದರ ಪ್ರಯೋಜನಗಳೇನು?

ಹಲಸಿನ ಬೀಜದ ಉಪಯೋಗ ತಿಳಿದರೆ ಒಂದು ಬೀಜವನ್ನೂ ಹಾಳು ಮಾಡಲಾರಿರಿ; ಇಲ್ಲಿದೆ ವಿವರ
ಹಲಸಿನ ಬೀಜ
Follow us
| Updated By: ಆಯೇಷಾ ಬಾನು

Updated on: May 24, 2021 | 8:16 AM

ಹಲಸಿನ ಹಣ್ಣು ಎಂದರೆ ಎಲ್ಲರ ಬಾಯಲ್ಲಿ ನೀರು ಬರುತ್ತೆ. ದೂರದ ಮರದಲ್ಲಿ ಬಿಟ್ಟ ಹಲಸಿನ ಹಣ್ಣು ಅದರ ಪರಿಮಳದಿಂದಲೇ ತನ್ನತ್ತ ಕೈಬೀಸಿ ಕರೆಯುತ್ತದೆ. ಈಗಂತೂ ಹಲಸಿನ ಹಣ್ಣಿಗೆ ಎಲ್ಲಿಲ್ಲದ ಬೇಡಿಕೆ ಇದೆ. ಲಾಕ್​ಡೌನ್​ ಜಾರಿಯಾದ ಕಾರಣ ಈ ಬಾರಿ ವ್ಯಾಪಾರ ಕಡಿಮೆಯಾಗಿದೆ ಅಷ್ಟೆ. ಯಾರಾದರೂ ಹಲಸಿನ ಹಣ್ಣು ತಿನ್ನುತ್ತಿದ್ದರೆ ಒಂದು ಎಸಳು ಕೊಡಬಾರದ ಅಂತ ಯೋಚಿಸದೇ ಇರರು.. ಹಲಸಿನ ಕಾಯಿಯ ಸಾರು ಕೂಡಾ ತುಂಬಾ ಚೆನ್ನಾಗಿ ಇರುತ್ತದೆ. ಜೊತೆಗೆ ಅದರ ಬೀಜವೂ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ ಎಂದರೆ ನೀವು ನಂಬಲೇಬೇಕು.

ಹೌದು, ಹಲಸಿನ ಹಣ್ಣು ತಿಂದು ಬೀಜ ಬೇಡವೆಂದು ಎಸೆಯುತ್ತಾರೆ. ಕಾರಣ ಅದರ ಉಪಯೋಗದ ಬಗ್ಗೆ ತಿಳಿದಿಲ್ಲ. ಎಸೆಯಲು ಹೊರಟಿರುವ ಹಲಸಿನ ಬೀಜದಿಂದ ಹೆಚ್ಚು ಉಪಯೋಗವಿದೆ. ಅವುಗಳಿಂದಲೂ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾದರೆ ಅದರ ಪ್ರಯೋಜನಗಳೇನು? ಎಂಬುದನ್ನು ಇಲ್ಲಿ  ತಿಳಿಸಲಾಗಿದೆ.

* ಉತ್ತಮ ಜೀರ್ಣಕ್ರಿಯೆ ಜೀರ್ಣಕ್ರಿಯೆ ಸರಿಯಾಗದೆ ಇದ್ದಾಗ ದೇಹದ ಸಮತೋಲನ ಹದಗೆಡುತ್ತದೆ. ಮನಸ್ಸಿಗೆ ಕಿರಿಕಿರಿಯಾಗುವ ಜೊತೆಗೆ ದೇಹ ಭಾರವಾದಂತೆ ಭಾಸವಾಗುತ್ತದೆ. ಹೀಗಾಗಿ ಜೀರ್ಣಕ್ರಿಯೆಯಾಗಲು ಹರಸಾಹಸಡುತ್ತಾರೆ. ಈ ಜೀರ್ಣಕ್ರಿಯೆಗೆ ಹಲಸಿನ ಬೀಜ ಹೆಚ್ಚು ಸಹಾಯಕವಾಗಿದೆ. ಇದನ್ನು ಸ್ವತಃ ತಜ್ಞರು ಕೂಡಾ ತಿಳಿಸಿದ್ದಾರೆ. ಅಜೀರ್ಣದಿಂದ ಒದ್ದಾಡುವರಿಗೆ ಹಲಸಿನ ಬೀಜಗಳು ರಾಮಬಾಣದಂತೆ ಕಾರ್ಯನಿರ್ವಹಿಸುತ್ತದೆ. ಹಲಸಿನ ಬೀಜಗಳನ್ನು ಬೇಯಿಸಿ ತಿಂದಾಗ ಉತ್ತಮವಾಗಿ ಜೀರ್ಣಕ್ರಿಯೆ ಆಗುತ್ತದೆ.

* ಕಣ್ಣಿನ ಸಮಸ್ಯೆ ನಿವಾರಿಸುವುದು ಈಗೀಗಂತೂ 10 ವರ್ಷ ದಾಟುತಿದ್ದಂತೆ ಎರಡು ಕಣ್ಣಿಗೆ ಕನ್ನಡಕ ಬಂದುಬಿದ್ದಿರುತ್ತದೆ. ಹೆಚ್ಚಾಗಿ ಟಿವಿ, ಮೊಬೈಲ್, ಕಂಪ್ಯೂಟರ್ ನೋಡುವುದರಿಂದ ಕಣ್ಣಿನ ಮೇಲೆ ಹೆಚ್ಚು ಒತ್ತಡ ಬೀಳುತ್ತದೆ. ಇದರಿಂದ ಕಣ್ಣಿನ ಹಲವಾರು ಸಮಸ್ಯೆಗಳು ಹುಟ್ಟುಕೊಳ್ಳುತ್ತದೆ. ಹೀಗಾಗಿ ಕಣ್ಣಿನ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಇದಕ್ಕೆ ಹಲಸಿನ ಬೀಜವೂ ಸಹಕಾರಿಯಾಗಿದೆ. ಹಲಸಿನ ಬೀಜದಲ್ಲಿ ವಿಟಮಿನ್ ಎ ಇರುವುದರಿಂದ ಕಣ್ಣಿನ ತೊಂದರೆಗಳನ್ನು ನಿವಾರಿಸುತ್ತದೆ. ಅದರಲ್ಲೂ ಮುಖ್ಯವಾಗಿ ಇರುಳುಗಣ್ಣು ತೊಂದರೆಗೆ ಇದು ಉತ್ತಮವಾಗಿದೆ.

* ಕೂದಲು ಉದ್ದವಾಗಿ ಬೆಳೆಯುತ್ತದೆ ಹೆಣ್ಣು ಮಕ್ಕಳು ಲಕ್ಷಣವಾಗಿ ಕಾಣವುದು ಉದ್ದವಾದ ಕೂದಲಿಂದ. ಕೂದಲು ದಟ್ಟವಾಗಿ, ಉದ್ದವಾಗಿ ಬೆಳೆಯಲು ಮಾಡುವ ಪ್ರಯತ್ನಗಳು ಒಂದೆರಡಲ್ಲ. ಯಾರೇ ಏನೇ ಹೇಳಿದರೂ ಆ ಪ್ರಯೋಗವನ್ನು ಮಹಿಳೆಯರು ಮಾಡಲೇಬೇಕು. ಯಾಕೆಂದರೆ ಹುಡುಗಿಯರು ಕೂದಲಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಆದರೂ ಕೆಲವೊಮ್ಮೆ ಕೆಲಸದ ಒತ್ತಡ, ಕಿರಿ ಕಿರಿಯಿಂದ ಕೂದಲು ಆರೈಕೆ ಮಾಡಲು ಆಗುವುದಿಲ್ಲ. ಬುಡ ಸಮೇತ ಉದುರವ ಕೂದಲನ್ನು ನೋಡಿ ಭಯಗೊಳ್ಳುವ ಹೆಣ್ಣು ಮಕ್ಕಳ ನೆರವಿಗೆ ಹಲಿಸನ ಬೀಜವಿದೆ. ಹಲಸಿನ ಬೀಜಗಳಲ್ಲಿ ಕಬ್ಬಿಣದ ಅಂಶ ಇರುವುದರಿಂದ ಕೂದಲಿನ ಸಮಸ್ಯೆಗಳನ್ನು ನಿವಾರಿಸುತ್ತದೆ. ದೇಹದ ರಕ್ತ ಸಂಚಾರ ಸರಾಗವಾಗಿ ಆಗುವುದರಿಂದ ಕೂದಲು ಚೆನ್ನಾಗಿ ಬೆಳೆಯುತ್ತದೆ.

* ಚರ್ಮದ ಸುಕ್ಕು ಕಡಿಮೆಯಾಗುತ್ತದೆ ನನಗೆ ವಯಸ್ಸಾಗಿದೆ ಎಂದು ಯಾರು ಹೇಳಿಕೊಳ್ಳುತ್ತಾರೆ ಹೇಳಿ. ಎಲ್ಲರೂ ಯಂಗ್ ಆ್ಯಂಡ್ ಎನರ್ಜಿಟಿಕ್ ಆಗಿ ಕಾಣಬೇಕಂತಲೇ ಯೋಚಿಸುತ್ತಾರೆ. ಮುಖದ ಮೇಲೆ ಸುಕ್ಕು ಕಂಡುಬಂದಾಗ ಚೆನ್ನಾಗಿ ಕಾಣಲ್ಲ ಅಂತ ಸಿಕ್ಕ ಸಿಕ್ಕ ಕ್ರೀಂ ಗಳನೆಲ್ಲಾ ಹಚ್ಚುತ್ತಾರೆ. ಅದೇನೆ ಇರಲಿ.. ಹಲಸಿನ ಹಣ್ಣಿನ ಬೀಜ ಕೂಡಾ ಮುಖದ ಸುಕ್ಕನ್ನು ನಿವಾರಣೆ ಮಾಡುತ್ತದೆ. ಹಲಸಿನ ಬೀಜವನ್ನು ಪುಡಿ ಮಾಡಿ ತಣ್ಣನೆಯ ಹಾಲಿನೊಂದಿಗೆ ಬೆರೆಸಿ ಮುಖಕ್ಕೆ ಹಚ್ಚಿಕೊಂಡರೆ ಮುಖದ ಸುಕ್ಕು ನಿವಾರಣೆಯಾಗುವುದು. ಈ ಪ್ರಯೋಗವನ್ನು ಸುಮಾರು 15 ರಿಂದ 20 ದಿನಗಳು ಮಾಡಿದರೆ ಉತ್ತಮ ಫಲಿತಾಂಶ ದೊರಕುತ್ತದೆ.

*ಲೈಂಗಿಕತೆ ಉತ್ತಮವಾಗಿರುತ್ತದೆ ಮನುಷ್ಯನಿಗೆ ನೀರು, ಆಹಾರ, ನಿದ್ರೆ ಎಷ್ಟು ಮುಖ್ಯವೋ ಅಷ್ಟೇ ಲೈಂಗಿಕತೆಯು ಅಷ್ಟೇ ಮುಖ್ಯವಾಗಿದೆ. ಈ ಲೈಂಗಿಕತೆಯನ್ನು ಮೂಲಭೂತ ಬೇಡಿಕೆಯೆಂದು ಪರಿಗಣಿಸಲಾಗಿದೆ. ಬದುಕಲ್ಲಿ ಲೈಂಗಿಕತೆ ತೃಪ್ತಿಯಾಗದಿದ್ದರೆ ಆ ವ್ಯಕ್ತಿ ಬದುಕಲ್ಲಿ ಒಂದಲ್ಲ ಒಂದು ಸಮಸ್ಯೆಗಳು ಹುಟ್ಟಿಕೊಳ್ಳುತ್ತವೆ. ಹೀಗಾಗಿ ಲೈಂಗಿಕ ತೃಪ್ತಿ ಮುಖ್ಯವಾಗಿದೆ. ಆದರೆ ಬ್ಯುಸಿ ಲೈಫಿನ ಜನರಿಗೆ ಲೈಂಗಿಕ ಆಸಕ್ತಿ ಕಡಿಮೆಯಾಗಿರುತ್ತದೆ. ಅಂತವರಿಗೆ ಈ ಹಲಸಿನ ಹಣ್ಣಿನ ಬೀಜ ಸಹಾಯಕವಾಗಿದೆ.

ಇದನ್ನೂ ಓದಿ

Covid-19: ಕೊರೊನಾ ಸೋಂಕು ಗಂಭೀರ ಹಂತಕ್ಕೆ ಹೋಗದಂತೆ ತಡೆಯಲು ಈ ಸೂಚನೆಗಳನ್ನು ಪಾಲಿಸಿ

Health Tips: ಪ್ರತಿನಿತ್ಯ ವಾಯುವಿಹಾರ ಅಭ್ಯಾಸ ರೂಢಿಯಲ್ಲಿರಲಿ; ನೆಮ್ಮದಿ ಹಾಳು ಮಾಡುವ ಕಾಯಿಲೆಗಳಿಂದ ದೂರವಿರಿ

(Benifts Of Jackfruit Jackfruit Seeds)

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ