AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಉತ್ತಮ ಆರೋಗ್ಯಕ್ಕಾಗಿ ಈ ಸಲಹೆಗಳು; ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸುಲಭ ಮಾರ್ಗಗಳು

ನಮ್ಮಲ್ಲಿ ಶಕ್ತಿ ಹೆಚ್ಚಿಸಿಕೊಳ್ಳಲು ಪೌಷ್ಟಿಕ ಆಹಾರ ಸೇವನೆ ಅತ್ಯವಶ್ಯಕ. ಇವುಗಳನ್ನು ನಿಮ್ಮ ದಿನನಿತ್ಯದ ಚಟುವಟಿಕೆಯನ್ನು ಅಳವಡಿಸಿಕೊಳ್ಳುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.

Health Tips: ಉತ್ತಮ ಆರೋಗ್ಯಕ್ಕಾಗಿ ಈ ಸಲಹೆಗಳು; ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸುಲಭ ಮಾರ್ಗಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 02, 2021 | 8:41 AM

Share

ಪ್ರಸ್ತುತ ಪರಿಸ್ಥಿತಿಯಲ್ಲಿ ಆರೋಗ್ಯವನ್ನು ಎಷ್ಟು ಕಾಳಜಿಯಿಂದ ನೋಡಿಕೊಂಡರೂ ಸಾಲದು. ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ. ದೇಹದಲ್ಲಿನ ವೈರಸ್​ಗಳ ವಿರುದ್ಧ ಹೋರಾಡಲು ಇದು ಸಹಾಯ ಮಾಡುತ್ತದೆ. ಹಾಗಾಗಿ ನಮ್ಮಲ್ಲಿ ಶಕ್ತಿ ಹೆಚ್ಚಿಸಿಕೊಳ್ಳಲು ಪೌಷ್ಟಿಕ ಆಹಾರ ಸೇವನೆ ಅತ್ಯವಶ್ಯಕ. ಇವುಗಳನ್ನು ನಿಮ್ಮ ದಿನನಿತ್ಯದ ಚಟುವಟಿಕೆಯನ್ನು ಅಳವಡಿಸಿಕೊಳ್ಳುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.

ನೀರು ಕುಡಿಯುವುದು ನೀರನ್ನು ಹೆಚ್ಚು ಸೇವಿಸುವುದು ಮತ್ತು ಹೈಡ್ರೇಟ್ ಆಗಿರುವುದು ಆರೋಗ್ಯಕರ ಜೀವನಕ್ಕೆ ಮುಖ್ಯವಾಗಿದೆ. ಇದು ಚಯಾಪಚಯ ಕ್ರಿಯೆಯನ್ನು ವೇಗಗೊಳಿಸುತ್ತದೆ. ಇದು ದೇಹದಲ್ಲಿನ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿರಿಸಲು ಸಹಾಯಕವಾಗಿದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಹಸಿರು ತರಕಾರಿಗಳು ಯಾವಾಗಲೂ ಹಸಿರು ತರಕಾರಿಗಳ ಸೇವನೆ ಆರೋಗ್ಯಕ್ಕೆ ಉತ್ತಮ. ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ. ಜೀವಸತ್ವಗಳು, ಖನಿಜಗಳು, ಫೈಬರ್, ಪ್ರೊಟೀನ್​ಗಳನ್ನು ನೀಡುತ್ತದೆ. ನಮ್ಮನ್ನು ಶಕ್ತಿಯುತವಾಗಿಸಲು ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇದು ಸಹಾಯಕವಾಗಿದೆ.

ಹಣ್ಣಿನ ರಸ ಸೇವನೆ ಹಣ್ಣುಗಳ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ನಮ್ಮ ಆಹಾರದಲ್ಲಿ ಅಗತ್ಯವಾದ ಪೌಷ್ಟಿಕಾಂಶವನ್ನು ಪಡೆಯಲು ಹಣ್ಣುಗಳು ಉತ್ತಮ ಮಾರ್ಗ. ಹಣ್ಣುಗಳನ್ನು ಸೇವಿಸುವ ಮೂಲಕ ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ. ಇಲ್ಲವೇ ರುಚಿಯಾದ ಜ್ಯೂಸ್ ಸೇವನೆಯ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ.

ಗಿಡಮೂಲಿಕೆ ಕಷಾಯ ದಾಲ್ಚಿನ್ನಿ, ಜೀರಿಗೆ, ಅರಿಶಿಣ ಮತ್ತು ಅಡಿಗೆ ಮಸಾಲೆಗಳು ಯಾವಾಗಲೂ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ರುಚಿಯ ಜತೆಗೆ ಗಿಡಮೂಲಿಕೆಗಳನ್ನು ಹಾಗೂ ಮಸಾಲೆಗಳನ್ನು ಔಷಧಿಯಾಗಿ ಬಳಸಬಹುದಾಗಿದೆ. ಸಾಂಕ್ರಾಮಿಕ ರೋಗ ಹರಡುತ್ತಿರುವ ಇಂತಹ ಸಮಯದಲ್ಲಿ ಗಿಡಮೂಲಿಕೆಗಳಿಂದ ತಯಾರಿಸಿದ ಕಷಾಯ ಆರೋಗ್ಯಕ್ಕೆ ಒಳ್ಳೆಯದು. ದೇಹದಲ್ಲಿ ಉರಿಯೂತ, ಬ್ಯಾಕ್ಟೀರಿಯಾ ವಿರುದ್ಧ ಹೋರಾಡಲು ಇದು ಸಹಾಯ ಮಾಡುತ್ತದೆ.

ಇದನ್ನೂ ಓದಿ:

Health Tips: ಮನೆಯ ಹಿತ್ತಲಲ್ಲಿ ಬೆಳೆಯುವ ಈ ಸಸ್ಯಗಳಲ್ಲಿ ಅಡಗಿದೆ ಅನೇಕ ಆರೋಗ್ಯಕರ ಗುಣ

Health Tips: ಅಂಜೂರ ಹಣ್ಣು ಮತ್ತು ಹಾಲು ಸೇವನೆಯ ಆರೋಗ್ಯ ಪ್ರಯೋಜನಗಳು

(These 5 easy ways to increase immunity power check in kannada)

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ