Health Care: ನಿಮ್ಮ ಆರೋಗ್ಯ ಸುಧಾರಣೆಗೆ ಈ ಆಹಾರ ಪದಾರ್ಥಗಳನ್ನು ಸೇವಿಸಿ

ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಲು ನೀವು ಸೇವಿಸಬಹುದಾದ ಕೆಲವು ಆಹಾರ ಪದಾರ್ಥಗಳು ಈ ಕೆಳಗಿನಂತಿದೆ. ಯಾವುವು ಎಂಬುದನ್ನು ತಿಳಿದುಕೊಳ್ಳಿ.

Health Care: ನಿಮ್ಮ ಆರೋಗ್ಯ ಸುಧಾರಣೆಗೆ ಈ ಆಹಾರ ಪದಾರ್ಥಗಳನ್ನು ಸೇವಿಸಿ
ಪ್ರಾತಿನಿಧಿಕ ಚಿತ್ರ
Follow us
| Edited By: preethi shettigar

Updated on: Nov 13, 2021 | 8:46 AM

ಮಧುಮೇಹ ಸಮಸ್ಯೆ ಇರುವವರು ತಮ್ಮ ಆಹಾರ ಪದ್ಧತಿಯಲ್ಲಿ ಕೆಲವು ಬದಲಾವಣೆ ಮತ್ತು ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಯ ಮೂಲಕ ಅರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ. ಹೀಗಿರುವಾಗ ನೀವು ತರಕಾರಿಗಳು, ಪೌಷ್ಟಿಕ ಆಹಾರವನ್ನು ಸೇವಿಸಬೇಕು. ಅಂದಹಾಗೆ ಮಧುಮೇಹ ಸಮಸ್ಯೆ ಇರುವವರು ಸೇವಿಸಬಹುದಾದ ಆಹಾರ ಪದಾರ್ಥಗಳು ಯಾವುವು ಎಂಬುದು ಈ ಕೆಳಗಿನಂತಿದೆ ತಿಳಿಯೋಣ. ಇವು ನಿಮ್ಮ ಆರೋಗ್ಯ ಸುಧಾರಣೆಗೆ ಸಹಾಯ ಮಾಡುತ್ತವೆ. 

ಮಧುಮೇಹವು ದೇಹದಲ್ಲಿ ಇನ್ಸುಲಿನ್ ನಿರೋಧಕವಾಗಿರುವ ಸ್ಥಿತಿಯನ್ನು ಸೂಚಿಸುತ್ತದೆ. ಮಧುಮೇಹ ಸಮಸ್ಯೆ ಇರುವವರಿಗೆ ಕಡಿಮೆ ಕಾರ್ಬೋಹೈಡ್ರೇಟ್, ಹೆಚ್ಚಿನ ಪ್ರೋಟೀನ್ ಮತ್ತು ಹೆಚ್ಚಿನ ಫೈಬರ್ ಆಹಾರವನ್ನು ಅನುಸರಿಸುವುದರ ಜೊತೆಗೆ ದೇಹದ ತೂಕವನ್ನು ನಿಯಂತ್ರಣದಲ್ಲಿಡಲು ಯೋಗ್ಯವಾದ ವ್ಯಾಯಾಮವನ್ನು ಮಾಡುವುದು ಒಳ್ಳೆಯದು. ಹಾಗಿರುವಾಗ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಲು ನೀವು ಸೇವಿಸಬಹುದಾದ ಕೆಲವು ಆಹಾರ ಪದಾರ್ಥಗಳು ಈ ಕೆಳಗಿನಂತಿದೆ.

ಎಲೆಕೋಸು ಎಲೆಕೋಸು ಫೈಬರ್ ಅಂಶದಿಂದ ಸಮೃದ್ಧವಾಗಿರುತ್ತದೆ. ಜೊತೆಗೆ ವಿಟಮಿನ್ ಕೆ ಅಂಶದಿಂದ ಸಮೃದ್ಧವಾಗಿರುವ ಆಹಾರ ಪದಾರ್ಥವಾಗಿದೆ. ಉತ್ಕರ್ಷಣ ನಿರೋಧಕಗಳನ್ನು ಹೊಂದಿರುವುದರಿಂದ ನಿಮ್ಮ ಆರೋಗ್ಯ ಸುಧಾರಣೆಗೆ ಸಹಾಯ ಮಾಡುತ್ತದೆ.

ಹೂಕೋಸು ಇದು ಗ್ಲೊಕೋಸಿನೋಲೆಟ್​ಗಳು ಮತ್ತು ಐಸೋಥಿಯೋಸೈನೇಟ್​ಗಳಂಥಹ ಉತ್ಕರ್ಷಣ ನಿರೋಧಕಗಳ ಸಮೃದ್ಧ ಮೂಲವಾಗಿದೆ. ಇದು ಮೆದುಳಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಜೊತೆಗೆ ನರಗಳ ಆರೋಗ್ಯವನ್ನು ಸುಧಾರಿಸುವ ಸಾಮರ್ಥ್ಯವನ್ನು ಹೊಂದಿದೆ. ಹಾಗಾಗಿ ನಿಮ್ಮ ಅಡುಗೆಯಲ್ಲಿ ನೀವು ಹೂಕೋಸನ್ನು ಸೇರಿಸಿ.

ಟೊಮ್ಯಾಟೊ ಫೈಬರ್ ಅಂಶದಿಂದ ಸಮೃದ್ಧವಾಗಿರುವ ಟೊಮ್ಯಾಟೊದಲ್ಲಿ ಲೈಕೋಪೀನ್ ಮತ್ತಿ ವಿಟಮಿನ್ ಸಿ ಅಂಶ ಕಂಡು ಬರುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಟೊಮ್ಯಾಟೊ ಪೊಟ್ಯಾಶಿಯಮ್ ಅಂಶದ ಉತ್ತಮ ಮೂಲವಾಗಿದೆ. ಇದು ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ. ಆದಾಗ್ಯೂ ಮೂತ್ರಪಿಂಡದ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವವರು ವೈದ್ಯರ ಸಮಹೆಯ ಬಳಿಕ ಟೊಮ್ಯಾಟೊ ಸೇವಿಸಿ.

ಬೆಂಡೆಕಾಯಿ ಬೆಂಡೆಕಾಯಿ ಫೈಬರ್, ವಿಟಮಿನ್ ಸಿ, ಫೋಲಿಕ್ ಆಮ್ಲ, ಕ್ಯಾರೊಟಿನಾಯ್ಡ್​ಗಳು ಮತ್ತು ಮೆಗ್ನೀಶಿಯಮ್ ಸಮೃದ್ಧ ಮೂಲವಾಗಿದೆ. ಬೆಂಡೆಕಾಯಿಯಲ್ಲಿರುವ ಫೈಬರ್ ಅಂಶವು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಬೆಂಡೆಕಾಯಿಯನ್ನು ಸೇವಿಸಿ.

ಇದನ್ನೂ ಓದಿ:

Health Tips: ಸೀತಾಫಲ ಹಣ್ಣು ಆರೋಗ್ಯಕ್ಕೆ ಎಷ್ಟು ಉತ್ತಮ ಗೊತ್ತೇ?

Health Tips: ಕೈ ಸೆಳೆತ ಸಮಸ್ಯೆ ಕಾಡುತ್ತಿದೆಯಾ? ಕಾರಣಗಳೇನು ಗೊತ್ತಾ?

ತಾಜಾ ಸುದ್ದಿ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ