AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರುಳಿನ ಸಮಸ್ಯೆ ಬಗ್ಗೆ ಅಸಡ್ಡೆ ಬೇಡ: ಆಯರ್ವೇದದಲ್ಲಿದೆ ಪರಿಹಾರ

ಪ್ರಪಂಚದಲ್ಲಿ 7 ರಿಂದ 10 ಪ್ರತಿಶತದಷ್ಟು ಜನರು ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರಲ್ಲಿ ಮಹಿಳೆಯರೇ ಹೆಚ್ಚು ಎನ್ನುತ್ತದೆ ಅಧ್ಯಯನ. ಅದರಲ್ಲಿ ಮುಖ್ಯವಾಗಿ ಐಬಿಎಸ್​ ಕೂಡ ಒಂದು.

ಕರುಳಿನ ಸಮಸ್ಯೆ ಬಗ್ಗೆ ಅಸಡ್ಡೆ ಬೇಡ: ಆಯರ್ವೇದದಲ್ಲಿದೆ ಪರಿಹಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 12, 2022 | 11:18 AM

Share

ಬದಲಾದ ಜೀವನಶೈಲಿ, ಕೆಲಸದ ಒತ್ತಡ, ಆಹಾರ ಸೇವನೆ ಸರಿಯಾಗಿ ಆಗದೇ ಇರುವುದಿಂದ ಹೊಟ್ಟೆಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅದರಲ್ಲೂ ಮುಖ್ಯವಾಗಿ ಕರುಳಿನ ಸೋಂಕು (Gut Issue)  ಹೆಚ್ಚು ಹಿಂಸೆ ನೀಡುತ್ತದೆ. ಹೀಗಾಗಿಯೇ ದಿನದಿಂದ ದಿನಕ್ಕೆ ಐಬಿಎಸ್ (IBS)​ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಪ್ರಪಂಚದಲ್ಲಿ 7 ರಿಂದ 10 ಪ್ರತಿಶತದಷ್ಟು ಜನರು ಈ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರಲ್ಲಿ ಮಹಿಳೆಯರೇ ಹೆಚ್ಚು ಎನ್ನುತ್ತದೆ ಅಧ್ಯಯನ. ಐಬಿಎಸ್​ ಎಂದರೆ ಕರುಳಿನಲ್ಲಿ ಉಂಟಾಗುವ ಸೋಂಕು ಇದನ್ನು ಇಂಗ್ಲೀಷಿನಲ್ಲಿ Irritable Bowel Syndrome ಎಂದು ಕರೆಯುತ್ತಾರೆ. ಒಂದು ಬಾರಿ ಕರುಳಿನ ಸಮಸ್ಯೆಗಳು ಆರಂಭವಾದರೆ ಅದರಿಂದ ಇನ್ನೂ ಹಲವು ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ಅದನ್ನು ಗುಣಪಡಿಸಿಕೊಳ್ಳುವುದು ಅಗತ್ಯವಾಗಿದೆ.  ಆಯುರ್ವೇದದಲ್ಲಿ ಈ ರೀತಿಯ ಕರುಳಿನ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ಈ ರೀತಿ ಕರುಳಿನ ಸಮಸ್ಯೆಗಳ ಲಕ್ಷಣಗಳನ್ನು ಮೊದಲು ತಿಳಿದುಕೊಳ್ಳಿ.

ಕರುಳಿನ ಸಮಸ್ಯೆಯ ಲಕ್ಷಣಗಳು:

  1. ಹೊಟ್ಟೆನೋವು
  2. ಮಲಬದ್ಧತೆ
  3. ಅತಿಸಾರ
  4. ಕರುಳಿನ ಚಲನೆಗಳಲ್ಲಿನ ಬದಲಾವಣೆ
  5. ಹೊಟ್ಟೆ ಉಬ್ಬರ
  6. ಆಹಾರ ಸೇರದಿರುವುದು
  7. ಆಯಾಸ ಮತ್ತು ನಿದ್ರಿಸಲು ತೊಂದರೆ ಇತ್ಯಾದಿ

ಈ ರೀತಿಯ ಕರುಳಿನ ಸಮಸ್ಯೆಗಳಿಗೆ ಆಯುರ್ವೀದ ತಜ್ಞೆ ಡಾ ದೀಕ್ಷಾ ಭಾವಸರ್ ಒಂದಷ್ಟು ಸಲಹೆಗಳನ್ನು ನೀಡಿದ್ದಾರೆ ಇಲ್ಲಿದೆ ಮಾಹಿತಿ

ಪುದೀನಾ ನೀರು: ಪುದೀನವು ಚಯಾಪಚಯವನ್ನು ಸುಧಾರಿಸುತ್ತದೆ ಮತ್ತು ಕರುಳಿನ ಉರಿಯೂತವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಪ್ರತಿದಿನ ಪುದೀನಾ ನೀರನ್ನು ಸೇವಿಸಿ ಕರುಳಿನ ಕಿರಿಕಿರಿಯನ್ನು ನಿವಾರಿಸಿಕೊಳ್ಳಿ

ಮಜ್ಜಿಗೆ: ಕರುಳಿನ ಸಮಸ್ಯೆ ಇರುವವರಿಗೆ ಮಜ್ಜಿಗೆ ಉತ್ತಮ ಆಹಾರವಾಗಿದೆ. ಕರುಳಿನ ಸಮಸ್ಯೆಯಿಂದ ಮೂಲವ್ಯಾದಿಯಂತಹ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಇದಕ್ಕಾಗಿ ಮಜ್ಜಿಗೆ ಕರುಳನ್ನು ತಂಪುಗೊಳಿಸಿ ಸಮಸ್ಯೆಯನ್ನು ನಿವಾರಿಸುತ್ತದೆ.

ಬಿಲ್ವ ಪತ್ರೆ ಕಾಯಿ /ಹಣ್ಣು: ಕರುಳಿನ ಸಮಸ್ಯೆಗೆ ಬಿಲ್ವಪತ್ರೆ ಉತ್ತಮ ಪರಿಹಾರವಾಗಿದೆ. IBS, ಅಲ್ಸರೇಟಿವ್ ಕೊಲೈಟಿಸ್ ಮತ್ತು ಕರುಳಿನ ಆರೋಗ್ಯ ಸಮಸ್ಯೆಗಳಿಗೆ ಬಿಲ್ವ ಅತ್ಯುತ್ತಮ ಆಹಾರವಾಗಿದೆ.

ಗ್ಲುಟನ್, ಹಾಲು, ಡೀಪ್ ಫ್ರೈಡ್​ ಆಹಾರಗಳನ್ನು ಸೇವಿಸದಿರಿ: ಹಾಲು, ಡೀಪ್ ಫ್ರೈಡ್ ಆಹಾರಗಳು ಜೀರ್ಣಿಸಿಕೊಳ್ಳಲು ಕಷ್ಟ ಮತ್ತು ಕರುಳಿನಲ್ಲಿ ಉರಿಯೂತವನ್ನು ಹೆಚ್ಚಿಸುತ್ತದೆ. ಆದ್ದರಿಂದ ಚಯಾಪಚಯವು ಉತ್ತಮಗೊಳ್ಳುವವರೆಗೆ ಈ ರೀತಿಯ ಆಹಾರಗಳನ್ನು ತಪ್ಪಿಸುವುದು ಉತ್ತಮ.

ಪ್ರತಿದಿನ ಪ್ರಾಣಾಯಾಮ ಮತ್ತು ಧ್ಯಾನವನ್ನು ಅಭ್ಯಾಸ ಮಾಡಿ: ಎಲ್ಲಾ ಕರುಳಿನ ಅಸ್ವಸ್ಥತೆಗಳಲ್ಲಿ, ವಿಶೇಷವಾಗಿ IBS ನಲ್ಲಿ ಒತ್ತಡವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರಾಣಾಯಾಮ, ಧ್ಯಾನ, ಸೂರ್ಯನ ಬೆಳಕು, ಉತ್ತಮ ಸಂಗೀತವನ್ನು ಆಲಿಸುವುದು, ನಿಮ್ಮ ಪ್ರೀತಿಪಾತ್ರರ ಜೊತೆ ಸಮಯ ಕಳೆಯುವುದು, ಓದುವುದು, ಬೆಳಿಗ್ಗೆ ಮತ್ತು ಮಲಗುವ ಸಮಯದಲ್ಲಿ ಗ್ಯಾಜೆಟ್‌ಗಳಿಂದ ದೂರವಿರುವುದು ಇತ್ಯಾದಿಗಳು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರಿಂದ ಕರುಳಿನ ಸಮಸ್ಯೆಯನ್ನೂ ಕೂಡ ನಿವಾರಿಸಬಹುದು.

ಇದನ್ನೂ ಓದಿ:

ಗರ್ಭಾವಸ್ಥೆಯಲ್ಲಿ ಸ್ಟ್ರೆಚ್ ಮಾರ್ಕ್ ಏಕೆ ಉಂಟಾಗುತ್ತದೆ? ವೈದ್ಯರ ಸಲಹೆ ಇಲ್ಲಿದೆ ಗಮನಿಸಿ

Published On - 11:14 am, Sat, 12 March 22

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು