AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರುಳಿನ ಸಮಸ್ಯೆ ಬಗ್ಗೆ ಅಸಡ್ಡೆ ಬೇಡ: ಆಯರ್ವೇದದಲ್ಲಿದೆ ಪರಿಹಾರ

ಪ್ರಪಂಚದಲ್ಲಿ 7 ರಿಂದ 10 ಪ್ರತಿಶತದಷ್ಟು ಜನರು ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರಲ್ಲಿ ಮಹಿಳೆಯರೇ ಹೆಚ್ಚು ಎನ್ನುತ್ತದೆ ಅಧ್ಯಯನ. ಅದರಲ್ಲಿ ಮುಖ್ಯವಾಗಿ ಐಬಿಎಸ್​ ಕೂಡ ಒಂದು.

ಕರುಳಿನ ಸಮಸ್ಯೆ ಬಗ್ಗೆ ಅಸಡ್ಡೆ ಬೇಡ: ಆಯರ್ವೇದದಲ್ಲಿದೆ ಪರಿಹಾರ
ಪ್ರಾತಿನಿಧಿಕ ಚಿತ್ರ
TV9 Web
| Updated By: Pavitra Bhat Jigalemane|

Updated on:Mar 12, 2022 | 11:18 AM

Share

ಬದಲಾದ ಜೀವನಶೈಲಿ, ಕೆಲಸದ ಒತ್ತಡ, ಆಹಾರ ಸೇವನೆ ಸರಿಯಾಗಿ ಆಗದೇ ಇರುವುದಿಂದ ಹೊಟ್ಟೆಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅದರಲ್ಲೂ ಮುಖ್ಯವಾಗಿ ಕರುಳಿನ ಸೋಂಕು (Gut Issue)  ಹೆಚ್ಚು ಹಿಂಸೆ ನೀಡುತ್ತದೆ. ಹೀಗಾಗಿಯೇ ದಿನದಿಂದ ದಿನಕ್ಕೆ ಐಬಿಎಸ್ (IBS)​ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಪ್ರಪಂಚದಲ್ಲಿ 7 ರಿಂದ 10 ಪ್ರತಿಶತದಷ್ಟು ಜನರು ಈ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರಲ್ಲಿ ಮಹಿಳೆಯರೇ ಹೆಚ್ಚು ಎನ್ನುತ್ತದೆ ಅಧ್ಯಯನ. ಐಬಿಎಸ್​ ಎಂದರೆ ಕರುಳಿನಲ್ಲಿ ಉಂಟಾಗುವ ಸೋಂಕು ಇದನ್ನು ಇಂಗ್ಲೀಷಿನಲ್ಲಿ Irritable Bowel Syndrome ಎಂದು ಕರೆಯುತ್ತಾರೆ. ಒಂದು ಬಾರಿ ಕರುಳಿನ ಸಮಸ್ಯೆಗಳು ಆರಂಭವಾದರೆ ಅದರಿಂದ ಇನ್ನೂ ಹಲವು ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ಅದನ್ನು ಗುಣಪಡಿಸಿಕೊಳ್ಳುವುದು ಅಗತ್ಯವಾಗಿದೆ.  ಆಯುರ್ವೇದದಲ್ಲಿ ಈ ರೀತಿಯ ಕರುಳಿನ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ಈ ರೀತಿ ಕರುಳಿನ ಸಮಸ್ಯೆಗಳ ಲಕ್ಷಣಗಳನ್ನು ಮೊದಲು ತಿಳಿದುಕೊಳ್ಳಿ.

ಕರುಳಿನ ಸಮಸ್ಯೆಯ ಲಕ್ಷಣಗಳು:

  1. ಹೊಟ್ಟೆನೋವು
  2. ಮಲಬದ್ಧತೆ
  3. ಅತಿಸಾರ
  4. ಕರುಳಿನ ಚಲನೆಗಳಲ್ಲಿನ ಬದಲಾವಣೆ
  5. ಹೊಟ್ಟೆ ಉಬ್ಬರ
  6. ಆಹಾರ ಸೇರದಿರುವುದು
  7. ಆಯಾಸ ಮತ್ತು ನಿದ್ರಿಸಲು ತೊಂದರೆ ಇತ್ಯಾದಿ

ಈ ರೀತಿಯ ಕರುಳಿನ ಸಮಸ್ಯೆಗಳಿಗೆ ಆಯುರ್ವೀದ ತಜ್ಞೆ ಡಾ ದೀಕ್ಷಾ ಭಾವಸರ್ ಒಂದಷ್ಟು ಸಲಹೆಗಳನ್ನು ನೀಡಿದ್ದಾರೆ ಇಲ್ಲಿದೆ ಮಾಹಿತಿ

ಪುದೀನಾ ನೀರು: ಪುದೀನವು ಚಯಾಪಚಯವನ್ನು ಸುಧಾರಿಸುತ್ತದೆ ಮತ್ತು ಕರುಳಿನ ಉರಿಯೂತವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಪ್ರತಿದಿನ ಪುದೀನಾ ನೀರನ್ನು ಸೇವಿಸಿ ಕರುಳಿನ ಕಿರಿಕಿರಿಯನ್ನು ನಿವಾರಿಸಿಕೊಳ್ಳಿ

ಮಜ್ಜಿಗೆ: ಕರುಳಿನ ಸಮಸ್ಯೆ ಇರುವವರಿಗೆ ಮಜ್ಜಿಗೆ ಉತ್ತಮ ಆಹಾರವಾಗಿದೆ. ಕರುಳಿನ ಸಮಸ್ಯೆಯಿಂದ ಮೂಲವ್ಯಾದಿಯಂತಹ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಇದಕ್ಕಾಗಿ ಮಜ್ಜಿಗೆ ಕರುಳನ್ನು ತಂಪುಗೊಳಿಸಿ ಸಮಸ್ಯೆಯನ್ನು ನಿವಾರಿಸುತ್ತದೆ.

ಬಿಲ್ವ ಪತ್ರೆ ಕಾಯಿ /ಹಣ್ಣು: ಕರುಳಿನ ಸಮಸ್ಯೆಗೆ ಬಿಲ್ವಪತ್ರೆ ಉತ್ತಮ ಪರಿಹಾರವಾಗಿದೆ. IBS, ಅಲ್ಸರೇಟಿವ್ ಕೊಲೈಟಿಸ್ ಮತ್ತು ಕರುಳಿನ ಆರೋಗ್ಯ ಸಮಸ್ಯೆಗಳಿಗೆ ಬಿಲ್ವ ಅತ್ಯುತ್ತಮ ಆಹಾರವಾಗಿದೆ.

ಗ್ಲುಟನ್, ಹಾಲು, ಡೀಪ್ ಫ್ರೈಡ್​ ಆಹಾರಗಳನ್ನು ಸೇವಿಸದಿರಿ: ಹಾಲು, ಡೀಪ್ ಫ್ರೈಡ್ ಆಹಾರಗಳು ಜೀರ್ಣಿಸಿಕೊಳ್ಳಲು ಕಷ್ಟ ಮತ್ತು ಕರುಳಿನಲ್ಲಿ ಉರಿಯೂತವನ್ನು ಹೆಚ್ಚಿಸುತ್ತದೆ. ಆದ್ದರಿಂದ ಚಯಾಪಚಯವು ಉತ್ತಮಗೊಳ್ಳುವವರೆಗೆ ಈ ರೀತಿಯ ಆಹಾರಗಳನ್ನು ತಪ್ಪಿಸುವುದು ಉತ್ತಮ.

ಪ್ರತಿದಿನ ಪ್ರಾಣಾಯಾಮ ಮತ್ತು ಧ್ಯಾನವನ್ನು ಅಭ್ಯಾಸ ಮಾಡಿ: ಎಲ್ಲಾ ಕರುಳಿನ ಅಸ್ವಸ್ಥತೆಗಳಲ್ಲಿ, ವಿಶೇಷವಾಗಿ IBS ನಲ್ಲಿ ಒತ್ತಡವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರಾಣಾಯಾಮ, ಧ್ಯಾನ, ಸೂರ್ಯನ ಬೆಳಕು, ಉತ್ತಮ ಸಂಗೀತವನ್ನು ಆಲಿಸುವುದು, ನಿಮ್ಮ ಪ್ರೀತಿಪಾತ್ರರ ಜೊತೆ ಸಮಯ ಕಳೆಯುವುದು, ಓದುವುದು, ಬೆಳಿಗ್ಗೆ ಮತ್ತು ಮಲಗುವ ಸಮಯದಲ್ಲಿ ಗ್ಯಾಜೆಟ್‌ಗಳಿಂದ ದೂರವಿರುವುದು ಇತ್ಯಾದಿಗಳು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರಿಂದ ಕರುಳಿನ ಸಮಸ್ಯೆಯನ್ನೂ ಕೂಡ ನಿವಾರಿಸಬಹುದು.

ಇದನ್ನೂ ಓದಿ:

ಗರ್ಭಾವಸ್ಥೆಯಲ್ಲಿ ಸ್ಟ್ರೆಚ್ ಮಾರ್ಕ್ ಏಕೆ ಉಂಟಾಗುತ್ತದೆ? ವೈದ್ಯರ ಸಲಹೆ ಇಲ್ಲಿದೆ ಗಮನಿಸಿ

Published On - 11:14 am, Sat, 12 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ