AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Depression: ಖಿನ್ನತೆಯ ಈ ಲಕ್ಷಣಗಳನ್ನು ಕಡೆಗಣಿಸಬೇಡಿ, ತುರ್ತು ಚಿಕಿತ್ಸೆ ಅಗತ್ಯವಿರಬಹುದು

ಖಿನ್ನತೆ ( Depression)ಎಂಬುದು ದುರ್ಬಲತೆ ಅಥವಾ ಮಾನಸಿಕ ಅಸ್ಥಿರತೆ ಅಲ್ಲ. ಇದು ಮಧುಮೇಹ, ರಕ್ತದ ಒತ್ತಡ ಅಥವಾ ಹೃದಯ ಸಮಸ್ಯೆಯಂತೆಯೇ ಒಂದು ಕಾಯಿಲೆಯಾಗಿದೆ.

Depression: ಖಿನ್ನತೆಯ ಈ ಲಕ್ಷಣಗಳನ್ನು ಕಡೆಗಣಿಸಬೇಡಿ, ತುರ್ತು ಚಿಕಿತ್ಸೆ ಅಗತ್ಯವಿರಬಹುದು
ಖಿನ್ನತೆ
Follow us
TV9 Web
| Updated By: ನಯನಾ ರಾಜೀವ್

Updated on: Jun 10, 2022 | 11:54 AM

ಖಿನ್ನತೆ ( Depression)ಎಂಬುದು ದುರ್ಬಲತೆ ಅಥವಾ ಮಾನಸಿಕ ಅಸ್ಥಿರತೆ ಅಲ್ಲ. ಇದು ಮಧುಮೇಹ, ರಕ್ತದ ಒತ್ತಡ ಅಥವಾ ಹೃದಯ ಸಮಸ್ಯೆಯಂತೆಯೇ ಒಂದು ಕಾಯಿಲೆಯಾಗಿದೆ. ಖಿನ್ನತೆ ಯಾರಿಗಾದರೂ, ಯಾವ ವಯಸ್ಸಿನಲ್ಲಾದರೂ ಕಾಣಿಸಿಕೊಳ್ಳಬಹುದು. ನಿಮಗಿಷ್ಟವಲ್ಲದ ಸಣ್ಣಪುಟ್ಟ ವಿಚಾರಗಳು ಕೂಡ ನಿಮ್ಮನ್ನು ಖಿನ್ನತೆಗೆ ದೂಡಬಹುದು. ಯಾವುದೋ ಒಂದು ವಿಚಾರವು ಬಹುದಿನಗಳಿಂದ ನಿಮ್ಮನ್ನು ಕಾಡುತ್ತಿದ್ದರೆ ನಿಮಗೆ ಖಿನ್ನತೆ ಉಂಟಾಗಬಹುದು.

ನಿಮ್ಮ ಜೀವನದಲ್ಲಿ ಬೇಸರದ ಸಂಗತಿಗಳು ನಡೆದಾಗ ದುಃಖವಾಗುವುದು ಸಹಜ, ಆದರೆ ಅದೇ ನೋವನ್ನು ನೀವು ಎರಡು ವಾರಗಳಿಗಿಂತ ಹೆಚ್ಚು ದಿನಗಳಿಗೆ ಕೊಂಡೊಯ್ದರೆ ಅದರಿಂದ ನಿಮ್ಮ ಮಾನಸಿಕ ಸ್ಥಿತಿ ಹದಗೆಟ್ಟು ಖಿನ್ನತೆಗೆ ಒಳಗಾಗುವ ಸಾಧ್ಯತೆ ಇದೆ.

ಒಂದೊಮ್ಮೆ ನಿಮಗೆ ಖಿನ್ನತೆ ಉಂಟಾದರೆ ದಿನನಿತ್ಯದ ಚಟುವಟಿಕೆಗಳಲ್ಲಿ ಆಲೋಚಿಸುವ, ಭಾವಿಸುವಂತಹ ರೀತಿಯು ಬದಲಾಗುತ್ತದೆ. ಖಿನ್ನತೆಯು ನಿಮ್ಮ ವೃತ್ತಿ, ಭಾವನೆಗಳು, ವರ್ತನೆ, ಶಿಕ್ಷಣ, ಊಟ, ನಿದ್ರೆ, ಸಂಬಂಧಗಳು ಹೀಗೆ ಎಲ್ಲದರ ಮೇಲೂ ಪರಿಣಾಮವನ್ನು ಬೀರುತ್ತದೆ.

ಖಿನ್ನತೆಯ ಲಕ್ಷಣಗಳು ಹೀಗಿರಲಿವೆ

ಕೆಲಸದಲ್ಲಿ ಆಸಕ್ತಿ ಕಳೆದುಕೊಳ್ಳುವುದು: ಕೆಲಸದಲ್ಲಿ ಆಸಕ್ತಿ ಕಳೆದುಕೊಳ್ಳುವುದು, ಸುಸ್ತು, ಇಷ್ಟ ಪಟ್ಟು ಮಾಡುವ ಕೆಲಸಗಳಲ್ಲಿ ನಿರಾಸಕ್ತಿ, ಆತ್ಮವಿಶ್ವಾಸ ಕಳೆದುಕೊಳ್ಳುವುದು, ಖಿನ್ನತೆಯ ಪ್ರಮುಖ ಲಕ್ಷಣಗಳಲ್ಲಿ ಹೆಚ್ಚು ದುಃಖ ಅಥವಾ ಬೇಸರ, ದಿನನಿತ್ಯದ ಚಟುವಟಿಕೆಗಳನ್ನು ಮಾಡಲು ಕಷ್ಟ ಪಡುವುದು, ಅತಿಯಾಗಿ ತಿನ್ನುವುದು, ಅಪರಾಧಿ ಭಾವನೆ, ನಿದ್ರೆ ಬಾರದಿರುವುದು ಇವೆಲ್ಲವೂ ಸೇರಿವೆ.

ಈ ವಿಷಯಗಳು ಖಿನ್ನತೆಯನ್ನು ಉಂಟುಮಾಡಬಹುದು ಕೆಲಸ, ಕೌಟುಂಬಿಕ ಅಥವಾ ವೈವಾಹಿಕ ಸಮಸ್ಯೆಗಳು, ಹಣಕಾಸಿನ ವಿಚಾರಗಳು, ದೈಹಿಕ ಆರೋಗ್ಯ ಸಮಸ್ಯೆಗಳು, ಪರಿಪೂರ್ಣತೆಯ ಬಯಕೆ, ವ್ಯಕ್ತಿತ್ವದ ಚಿಂತೆ, ಮಾದಕ ವಸ್ತುಗಳ ಚಟ, ಶಾಲೆಕಾಲೇಜು ಮತ್ತು ಕೆಲಸ ಮಾಡುವ ಸ್ಥಳದಲ್ಲಿ ಸ್ಪರ್ಧೆ ಇವೆಲ್ಲವೂ ಖಿನ್ನತೆಯನ್ನು ಉಂಟುಮಾಡುವ ಸಾಮಾನ್ಯ ವಿಷಯಗಳಾಗಿವೆ. ಜೀವನದಲ್ಲಿನ ಒತ್ತಡ, ಅಹಿತಕರ ಘಟನೆಗಳು ಹೀಗೆ ಹಲವು ಕಾರಣಗಳಿಂದ ಖಿನ್ನತೆ ಕಾಣಿಸಿಕೊಳ್ಳಬಹುದು.

ಓವರ್​ಥಿಂಕಿಂಗ್: ಒಂದೇ ವಿಷಯಗಳ ಬಗ್ಗೆ ಹೆಚ್ಚು ಆಲೋಚಿಸುವುದರಿಂದ ಕೂಡ ಖಿನ್ನತೆ ಉಂಟಾಗಬಹುದು. ಒಂದೊಮ್ಮೆ ಮನಸ್ಸಿನಲ್ಲಿ ನಕಾರಾತ್ಮಕ ಭಾವನೆಗಳು ಮೂಡಿದಲ್ಲಿ ಮಾನಸಿಕ ಸಮಸ್ಯೆಗಳು ಕಾಡಲಿವೆ.

ಭಾವನೆಗಳನ್ನು ಹಂಚಿಕೊಳ್ಳಲು ಸಾಧ್ಯವಾಗುವುದಿಲ್ಲ: ಖಿನ್ನತೆ ಮನಸ್ಸಿಗೆ ಸಂಬಂಧಿಸಿದ್ದರಿಂದ ಜನರು ಅದರ ಬಗ್ಗೆ ಮುಕ್ತವಾಗಿ ಮಾತನಾಡಲು ಹಿಂಜರಿಯುತ್ತಾರೆ. ಕೆಲವರಂತೂ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರೆ ಅಪಹಾಸ್ಯಕ್ಕೆ ಒಳಗಾಗಬಹುದು. ಖಿನ್ನತೆಯ ಲಕ್ಷಣಗಳಿರುವ ಜನರೊಂದಿಗೆ ಮುಕ್ತವಾಗಿ ಮಾತನಾಡಬೇಕು ಅಥವಾ ಮನೋವೈದ್ಯರಲ್ಲಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಬೇಕು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್