AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ನಿದ್ರೆ ಅಂದರೆ ಹಲವು ತೊಂದರೆ; ನಿದ್ರಾಹೀನತೆಯಿಂದ ಬಳಲುತ್ತಿರುವವರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ

ದೇಹದ ತೂಕವನ್ನು ಹೆಚ್ಚಿಸಲು ನಿದ್ರಾಹೀನತೆಯೂ ಕಾರಣವಾಗುತ್ತದೆ. ಸರಿಯಾದ ನಿದ್ರೆ ಇಲ್ಲದೆ, ದೇಹದ ಚಯಾಪಚಯ ಕ್ರಿಯೆ ನಿಧಾನವಾಗುತ್ತದೆ.

ಕಡಿಮೆ ನಿದ್ರೆ ಅಂದರೆ ಹಲವು ತೊಂದರೆ; ನಿದ್ರಾಹೀನತೆಯಿಂದ ಬಳಲುತ್ತಿರುವವರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ
ಪ್ರಾತಿನಿಧಿಕ ಚಿತ್ರ
TV9 Web
| Updated By: shruti hegde|

Updated on: Jun 21, 2021 | 9:49 AM

Share

ಜೀವನಶೈಲಿಯಲ್ಲಿನ ಬದಲಾವಣೆ, ವೃತ್ತಿ ಜೀವನದಲ್ಲಿನ ಏರುಪೇರು, ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು ಮತ್ತು ರಾತ್ರಿ ಪಾಳಿಯಲ್ಲಿನ ಉದ್ಯೋಗ, ಮೊಬೈಲ್ ಅತಿಯಾಗಿ ಬಳಸುವುದು, ತಂತ್ರಜ್ಞಾನದ ಅವಲಂಬನೆ, ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚಿನ ಸಮಯ ಕಳೆಯುವುದು, ಓಟಿಟಿ ಪ್ಲಾಟ್​ಫಾರ್ಮ್​ಗಳಿಗೆ ದಾಸರಾಗುವುದು ಆ ಮೂಲಕ ರಾತ್ರಿಯಿಡಿ ಎಚ್ಚರ ಇರುವುದು ನಿದ್ರಾಹೀನತೆಗೆ ಕಾರಣವಾಗುತ್ತದೆ. ಆದರೆ ನಿದ್ರೆಯನ್ನು ನಿರ್ಲಕ್ಷಿಸುವುದರಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅವಶ್ಯಕವಾಗಿ ತಿಳಿದುಕೊಳ್ಳಿ ಮತ್ತು ಇದರಿಂದ ಉಂಟಾಗುವ ಅಪಾಯದಿಂದ ದೂರವಿರಿ.

* ದೇಹದ ತೂಕವನ್ನು ಹೆಚ್ಚಿಸಲು ನಿದ್ರಾಹೀನತೆಯೂ ಕಾರಣವಾಗುತ್ತದೆ. ಸರಿಯಾದ ನಿದ್ರೆ ಇಲ್ಲದೆ, ದೇಹದ ಚಯಾಪಚಯ ನಿಧಾನವಾಗುತ್ತದೆ. ಈ ಕಾರಣದಿಂದಾಗಿ, ಆಹಾರದಿಂದ ಪಡೆದ ಕ್ಯಾಲೊರಿಗಳನ್ನು ಸರಿಯಾಗಿ ಖರ್ಚು ಮಾಡಲಾಗುವುದಿಲ್ಲ. ಇದು ಕೊಬ್ಬನ್ನು ದೇಹಕ್ಕೆ ಪ್ರವೇಶಿಸಲು ಅನುವು ಮಾಡಿಕೊಡುತ್ತದೆ ಮತ್ತು ಆ ಮೂಲಕ ಹೆಚ್ಚುವರಿ ತೂಕವನ್ನು ನೀಡುತ್ತದೆ.

* ಇತ್ತೀಚಿನ ದಿನಗಳಲ್ಲಿ ಅನೇಕ ಜನರಲ್ಲಿ ಕೋಪ, ಹತಾಶೆ ಮತ್ತು ಒತ್ತಡ ಹೆಚ್ಚುತ್ತಿದೆ. ನಿದ್ರಾಹೀನತೆಯೂ ಇದಕ್ಕೆ ಒಂದು ಪ್ರಮುಖ ಕಾರಣವಾಗಿ ಎಂದು ವಿಜ್ಞಾನಿಗಳು ಹೇಳುತ್ತಾರೆ. ನಿದ್ರೆ ಸರಿಯಾಗಿ ಆದರೆ ಮಾತ್ರ ಆ ದಿನ ಚೆನ್ನಾಗಿರುತ್ತದೆ. ಇಲ್ಲವಾದಲ್ಲಿ ಕಿರಿಕಿರಿ ಎದುರಾಗುತ್ತದೆ.

* ನಿದ್ರಾಹೀನತೆ ಇರುವವರಲ್ಲಿ ಬೇಗನೆ ಮಧುಮೇಹ ಬರುವ ಸಾಧ್ಯತೆ ಇದೆ. ನಿದ್ರೆ ಸರಿಯಾಗಿ ಆಗದಿದ್ದಾಗ ದೇಹದಲ್ಲಿ ಇನ್ಸುಲಿನ್ ಪ್ರತಿರೋಧ ಹೆಚ್ಚಾಗುತ್ತದೆ. ಮೇದೋಜ್ಜೀರಕ ಗ್ರಂಥಿಯಿಂದ ಉತ್ಪತ್ತಿಯಾಗುವ ಇನ್ಸುಲಿನ್ ಅನ್ನು ದೇಹವು ಸರಿಯಾಗಿ ಹೀರಿಕೊಳ್ಳುವುದಿಲ್ಲ, ಇದು ಮಧುಮೇಹಕ್ಕೆ ಕಾರಣವಾಗಬಹುದು.

* ಸರಿಯಾದ ನಿದ್ರೆ ಪಡೆಯಲು ವಿಫಲವಾದರೆ ಥೈರಾಯ್ಡ್ ಕಾಯಿಲೆಗೆ ತುತ್ತಾಗಬೇಕಾಗುತ್ತದೆ. ಅಲ್ಲದೆ ನಿದ್ರೆಯಿಂದ ದೂರವಾದವರಲ್ಲಿ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚಾಗುತ್ತದೆ.

* ನಿದ್ರಾಹೀನತೆಯಿಂದಾಗಿ ಒಣ ಚರ್ಮ, ಕೂದಲು ಉದುರುತ್ತದೆ. ಅಲ್ಲದೆ ಚರ್ಮಕ್ಕೆ ಸಂಬಂಧಿಸಿದ ಇತರ ಕಾಯಿಲೆಗಳಿಗೂ ಕೂಡ ನಿದ್ರಾಹೀನತೆ ದಾರಿ ಮಾಡಿಕೊಡುತ್ತದೆ.

ಇದನ್ನೂ ಓದಿ:

Health Benefits: ಹಾಲು ಕುಡಿಯುವ ಅಭ್ಯಾಸ ಇದೆಯೇ? ಹಾಗಿದ್ದರೆ ಸೇವಿಸುವ ಸಮಯದ ಬಗ್ಗೆ ತಿಳಿಯವುದನ್ನು ಮರೆಯಬೇಡಿ

Health Tips: ಮನೆಯಲ್ಲೇ ಇದೆ ಮದ್ದು; ಬೆನ್ನು ನೋವಿನ ಉಪಶಮನಕ್ಕಾಗಿ ಸರಳ ವಿಧಾನ

Health Tips: ಕೆಮ್ಮು ಮತ್ತು ಮನೆಮದ್ದು; ಅಡುಗೆ ಮನೆಯಲ್ಲಿರುವ ಪದಾರ್ಥಗಳೇ ಮಳೆಗಾಲಕ್ಕೆ ಔಷಧಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!