AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bone Cancer: ಮೂಳೆಗಳ ಕ್ಯಾನ್ಸರ್​ನ ಲಕ್ಷಣಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

ಮೂಳೆಯ ಕ್ಯಾನ್ಸರ್​ ನಿಮ್ಮ ದೇಹದಲ್ಲಿರುವ ಮೂಳೆಗಳನ್ನು ದುರ್ಬಲಗೊಳಿಸುತ್ತವೆ. ಹೀಗಾಗಿ ಆಗಾಗ ಮುರಿತ ಕಾಣಿಸಿಕೊಳ್ಳುತ್ತದೆ. ಜತೆಗೆ ವಿಪರೀತ ನೋವು ಕೂಡ ಉಂಟಾಗುತ್ತದೆ

Bone Cancer: ಮೂಳೆಗಳ ಕ್ಯಾನ್ಸರ್​ನ ಲಕ್ಷಣಗಳೇನು ಗೊತ್ತಾ? ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 10, 2022 | 11:10 AM

Share

ಮೂಳೆ, ಮಾಂಸಗಳ ಭಾಗವಾಗಿರುವ ನಮ್ಮ ದೇಹವು ಆಗಾಗ ಹಲವು ರೋಗಗಳಿಗೆ ತುತ್ತಾಗುತ್ತವೆ. ಕೆಲವು ದೀರ್ಘಕಾಲದ ಕಾಯಿಲೆಗಳಾದರೆ ಇನ್ನು ಕೆಲವು ಬೇಗನೆ ಗುಣಮುಖವಾಗುವ ಕಾಯಿಲೆಗಳು. ಇತ್ತೀಚಿನ ದಿನಗಳಲ್ಲಿ ಅತೀ ವೇಗವಾಗಿ ಹರಡುತ್ತಿರುವ ದೀರ್ಘಕಾಲದ ಕಾಯಿಲೆಯಲ್ಲಿ ಕ್ಯಾನ್ಸರ್ (Cancer)​ ಕೂಡ ಒಂದು. ಕ್ಯಾನ್ಸರ್​ಗಳಲ್ಲಿ ಹಲವು ವಿಧ. ಮೂಳೆ ಕ್ಯಾನ್ಸರ್​, ಸ್ತನ ಕ್ಯಾನ್ಸರ್​, ಶ್ವಾಸಕೋಶದ ಕ್ಯಾನ್ಸರ್, ಅನ್ನ ನಾಳದ ಕ್ಯಾನ್ಸರ್​, ಬ್ಲಡ್​ ಕ್ಯಾನ್ಸರ್​ ಇತ್ಯಾದಿ. ಬದಲಾದ ಜೀವನ ಶೈಲಿ, ಒತ್ತಡ, ಅಸಮಂಜಸ ಆಹಾರ ಪದ್ಧತಿಗಳಿಂದ ದೇಹಕ್ಕೆ ಕ್ಯಾನ್ಸರ್​ ತಗುಲುತ್ತದೆ. ಇದು ಒಮ್ಮೆ ಬಂದ ಮೇಲೆ ಶಾಶ್ವತ ಪರಿಹಾರವಿಲ್ಲ. ಆದರೆ ಅದನ್ನು ದೈನಂದಿನ ಅಭ್ಯಾಸಗಳಿಂದ ನಿಯಂತ್ರಿಸಬಹುದಾಗಿದೆ. ಕ್ಯಾನ್ಸರ್​ ಎಂದರೆ ಎಲ್ಲವೂ ಅಪಾಯಕಾರಿಯೇ, ಅವುಗಳಲ್ಲಿ ಒಂದು ಮೂಳೆಗಳ ಕ್ಯಾನ್ಸರ್ (Bone Cancer)​. ಮೂಳೆಗಳ ಕ್ಯಾನ್ಸರ್​ನಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಸಮಸ್ಯೆ ಎಂದರೆ ಸಂಧಿವಾತ, ಆಸ್ಟಿಯೊಪೊರೋಸಿಸ್, ಮೂಳೆಯ ಪ್ಯಾಗೆಟ್ಸ್ ಕಾಯಿಲೆ, ಸ್ಕೋಲಿಯೋಸಿಸ್, ಗೌಟ್.

ನಾರಿನ ಅಂಗಾಂಶ, ಕಾರ್ಟಿಲೇಜ್​ ಮತ್ತು ಕ್ಯಾಲ್ಸಿಯಂನಿಂದ ಮೂಳೆಗಳು ರಚನೆಯಾಗುತ್ತವೆ. ಈ ಮೂಳೆಗಳಿಗೆ ಕ್ಯಾನ್ಸರ್​ ಕೋಶಗಳು ಹರಡಿ ಮೂಳೆಗಳ ಕ್ಯಾನ್ಸರ್​​ ಕಾಯಿಲೆಗೆ ಕಾರಣವಾಗುತ್ತದೆ. ಒಮ್ಮೆ ಮೂಳೆಗಳ ಕ್ಯಾನ್ಸರ್​ ಬಂದ ಮೇಲೆ ಮೂಳೆಗಳು ಶಕ್ತಿಯನ್ನು ಕಳೆದುಕೊಳ್ಳುತ್ತವೆ. ಇದರಿಂದ ಮೂಳೆಗಳ ಮುರಿತ ಅಥವಾ ಮೂಳೆಗಳಿಗೆ ಹಾನಿಯಾಗಿ ವಿಪರೀತ ನೋವು ಕಾಣಿಸಿಕೊಳ್ಳುತ್ತದೆ. ಆದರೆ ಆರಂಭದ ಹಂತಗಳಲ್ಲಿ ಇದು ಅಷ್ಟಾಗಿ ಗೊತ್ತಾಗುವುದಿಲ್ಲ. ಹೀಗಾಗಿ ಮೂಳೆಗಳಲ್ಲಿ ನೋವು ಕಾಣಿಸಿಕೊಂಡು  ಕ್ರಮೇಣ ಹೆಚ್ಚಾಗುತ್ತದೆ. ಹೀಗೆ ನೋವು ತೀವ್ರವಾದರೆ ವೈದ್ಯರನ್ನು ಸಂಪರ್ಕಿಸುವುದು ಒಳಿತು. ಹಾಗಾದರೆ ಮೂಳೆಗಳ ಕ್ಯಾನ್ಸರ್​ನ ಲಕ್ಷಣಗಳೇನು? ಇಲ್ಲಿದೆ ನೋಡಿ ಮಾಹಿತಿ

ಆಗಾಗ ಮುರಿತ ಕಾಣಿಸಿಕೊಳ್ಳವುದು: ಮೂಳೆಯ ಕ್ಯಾನ್ಸರ್​ ನಿಮ್ಮ ದೇಹದಲ್ಲಿರುವ ಮೂಳೆಗಳನ್ನು ದುರ್ಬಲಗೊಳಿಸುತ್ತವೆ. ಹೀಗಾಗಿ ಆಗಾಗ ಮುರಿತ ಕಾಣಿಸಿಕೊಳ್ಳುತ್ತದೆ. ಜತೆಗೆ ವಿಪರೀತ ನೋವು ಕೂಡ ಉಂಟಾಗುತ್ತದೆ. ಇದರಿಂದ ನಿಮಗೆ ಮೂಳೆಯ ಕ್ಯಾನ್ಸರ್​ನ ಲಕ್ಷಣ ಎಂದು ಗೊತ್ತಾಗುತ್ತದೆ.

ನಿರಂತರ ನೋವು: ನಿಮ್ಮ  ಮೊಣಕೈ, ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳುತ್ತಿದ್ದರೆ ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡರೆ ಸರಿಹೋಗುತ್ತದೆ. ಆದರೆ ಮೂಳೆಯ ಕ್ಯಾನ್ಸರ್​ ಆಗಿದ್ದರೆ ಮೊಣಕೈ ಸೇರಿದಂತೆ ದೇಹದ ಗಂಟುಗಳಲ್ಲಿ ವಿಪರೀತ ಮತ್ತು ನಿರಂತರ ನೋವು ಕಾಣಿಸಿಕೊಳ್ಳುತ್ತದೆ. ಈ ರೀತಿ ನೋವು ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಒಳಿತಾಗಿದೆ.

ಮೂಳೆಗಳಲ್ಲಿ ಊತ: ದೇಹದ ವಿವಿಧ ಭಾಗಗಳಲ್ಲಿ ಆಗಾಗ ಊತ ಕಾಣಿಸಿಕೊಳ್ಳುತ್ತದೆ. ಸಾಮಾನ್ಯವಾಗಿ ಗಾಯಗಳಾಗಿದ್ದರೆ ಮಾತ್ರ ಊತ ಕಂಡುಬರುತ್ತದೆ. ಮೂಳೆಗಳ ಕ್ಯಾನ್ಸರ್​ನ ಲಕ್ಷಣವಾಗಿದ್ದರೆ ದೇಹದಲ್ಲಿ ಅನಗತ್ಯ ಊತಗಳು, ಗಡ್ಡೆಯಂತಹ ರಚನೆಗಳು ಮೂಡುತ್ತವೆ. ಇಂತಹ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.

ಮರಗಟ್ಟುವಿಕೆ: ಕೆಲವೊಮ್ಮೆ ನಿಶ್ಯಕ್ತಿಯಿಂದಲೂ ದೇಹದ ಭಾಗಗಳಲ್ಲಿ ಮರಗಟ್ಟುವಿಕೆ ಕಾಣಿಸಿಕೊಳ್ಳುತ್ತದೆ. ಇದು ಅತಿಯಾದರೆ ವೈದ್ಯರಲ್ಲಿ ಪರೀಕ್ಷಿಸಿಕೊಳ್ಳುವುದು ಉತ್ತಮ. ಏಕೆಂದರೆ ಈ ರೀತಿ ದೇಹದ ವಿವಿಧ ಭಾಗಗಳಲ್ಲಿ ಆಗಾಗ ಮರಗಟ್ಟುವಿಕೆ ಕಾಣಿಸಿಕೊಳ್ಳುವುದೂ ಕೂಡ ಮೂಳೆಗಳ ಕ್ಯಾನ್ಸರ್​ನ ಒಂದು ಲಕ್ಷಣವಾಗಿದೆ. ಹೀಗಾಗಿ ಆರೊಗ್ಯ, ದೈನಂದಿನ ಚಲನವಲದಲ್ಲಿ ಸ್ವಲ್ಪ ಬದಲಾವಣೆಯಾಗುತ್ತಿದ್ದರೂ ಹೆಚ್ಚು ಗಮನಹರಿಸಿ.

ಬಿಗಿತದ ಅನುಭವ: ಮೂಳೆಗಳಲ್ಲಿ ಆಗಾಗ ಬಿಗಿದ ಅನುಭವವಾಗುತ್ತದೆ. ಅಂದರೆ ಸಂಧಿಗಳಲ್ಲಿ ನೋವು ಕಾಣಿಸಿಕೊಂಡು ದೇಹದ ಭಾಗಗಳನ್ನು ಅಲುಗಾಡಿಸಲೂ ಕಷ್ಟ ಎನ್ನಿಸುವ ಸ್ಥಿತಿ ಎದುರಾಗುತ್ತದೆ. ಈ ರೀತಿಯ ಲಕ್ಷಣಗಳನ್ನು ನಿರ್ಲಕ್ಷಿಸಿವುದು ಒಳಿತಲ್ಲ. ಹೀಗಾಗಿ ಅಂತಹ ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಲೇಬೇಕು.

ಇದನ್ನೂ ಓದಿ:

Air Pollution ವಾಯುಮಾಲಿನ್ಯದಿಂದ ಆರೋಗ್ಯ ಕಾಪಾಡಿಕೊಳ್ಳಲು ಹೀಗೆ ಮಾಡಿ

Published On - 11:10 am, Thu, 10 February 22

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ