AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಆಲೋಚನೆಯಿಂದ ಹೊರಬರುವುದು ಹೇಗೆ? ಇಲ್ಲಿದೆ ಸಲಹೆ

ಪ್ರೀತಿಯಲ್ಲಿ ಮೋಸಹೋಗಿದ್ದರೆ, ಹತ್ತಿರದವರನ್ನು ಕಳೆದುಕೊಂಡಿದ್ದರೆ, ಸಾಲದಬಾಧೆ ಹೆಚ್ಚಾದರೆ ದೀರ್ಘಕಾಲದ ಖಿನ್ನತೆಯಿಂದ ಬಳಲುತ್ತಿದ್ದರೆ ಆತ್ಮಹತ್ಯೆಯಂತಹ ಕೆಟ್ಟ ಯೋಚನೆಗಳನ್ನು ಜನರು ತಲೆಯಲ್ಲಿ ತುಂಬಿಕೊಳ್ಳುತ್ತಾರೆ.

ಆತ್ಮಹತ್ಯೆ ಆಲೋಚನೆಯಿಂದ ಹೊರಬರುವುದು ಹೇಗೆ? ಇಲ್ಲಿದೆ ಸಲಹೆ
Depression
TV9 Web
| Edited By: |

Updated on: Aug 13, 2022 | 12:24 PM

Share

ಪ್ರೀತಿಯಲ್ಲಿ ಮೋಸಹೋಗಿದ್ದರೆ, ಹತ್ತಿರದವರನ್ನು ಕಳೆದುಕೊಂಡಿದ್ದರೆ, ಸಾಲದಬಾಧೆ ಹೆಚ್ಚಾದರೆ ದೀರ್ಘಕಾಲದ ಖಿನ್ನತೆಯಿಂದ ಬಳಲುತ್ತಿದ್ದರೆ ಆತ್ಮಹತ್ಯೆಯಂತಹ ಕೆಟ್ಟ ಯೋಚನೆಗಳನ್ನು ಜನರು ತಲೆಯಲ್ಲಿ ತುಂಬಿಕೊಳ್ಳುತ್ತಾರೆ. ಆದರೆ ಎಲ್ಲಾ ಸಮಸ್ಯೆಗಳಿಗೂ ಒಂದು ಪರಿಹಾರವಿದೆ ಎಂಬುದನ್ನು ಮರೆತಿರುತ್ತಾರೆ.

ಒಂದು ಸಲ ಆ ಕೆಟ್ಟ ಯೋಚನೆಯಿಂದ ಹೊರಬಂದರೆ ಅಯ್ಯೋ ತಾನು ಎಂಥಾ ದೊಡ್ಡ ತಪ್ಪು ಮಾಡುತ್ತಿದ್ದೆ ಎಂಬುದು ಅವರ ಅರಿವಿಗೆ ಬರುತ್ತದೆ. ನೋವನ್ನು ಸಹಿಸಲಾಗದೆ, ಇನ್ನು ಸಾವೇ ಪರಿಹಾರ ಎಂದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸುತ್ತಾರೆ. ಆದರೆ ವಾಸ್ತವವಾಗಿ ಇದು ತಾತ್ಕಾಲಿಕ.

ಈ ಸಮಯದಲ್ಲಿ ನೀವು ಆ ಯೋಚನೆಯನ್ನು ಬದಲಿಸಿದರೆ ಉತ್ತಮ ಭವಿಷ್ಯವು ನಿಮ್ಮ ಮುಂದಿರುತ್ತದೆ. ಒಂದು ವಿಷಯ ನೆನಪಿಟ್ಟುಕೊಳ್ಳಿ ನಿಮ್ಮ ಭಾವನೆಗಳು ನಿರಂತರವಾಗಿ ಬದಲಾಗುತ್ತಿರುತ್ತವೆ. ಹಾಗೆಯೇ ನಿಮ್ಮ ಸಮಸ್ಯೆಗಳು ಕೂಡ ಇಂದಲ್ಲಾ ನಾಳೆ ಕೊನೆಗೊಳ್ಳಲೇ ಬೇಕಲ್ಲವೆ.

ಆತ್ಮಹತ್ಯೆಯಂತಹ ಕೆಟ್ಟ ಆಲೋಚನೆಗಳಿಂದ ದೂರಬರಲು ಸಲಹೆ

-ಪ್ರತಿದಿನ ನಿಮ್ಮ ಪ್ರೀತಿಪಾತ್ರರೊಂದಿಗೆ ಸಮಯ ಕಳೆಯಿರಿ. ನೇರವಾಗಿ ಭೇಟಿಯಾಗಲು ಆದ್ಯತೆ ನೀಡಿ ಅದೂ ಸಾಧ್ಯವಾಗದಿದ್ದರೆ ಫೋನ್‌ನಲ್ಲಿ ಮಾತನಾಡಿ. ನಿಮ್ಮ ಎಲ್ಲಾ ನೋವುಗಳನ್ನು ಅವರೊಂದಿಗೆ ಹಂಚಿಕೊಳ್ಳಿ.

-ನಿಮ್ಮ ಆತ್ಮೀಯ ಸ್ನೇಹಿತರು ಅಥವಾ ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಿರಿ.

-ಸಹಾಯವಾಣಿಗೆ ಕರೆ ಮಾಡಿ ನಿಮ್ಮ ಸಮಸ್ಯೆಯನ್ನು ವಿವರಿಸಿ.

-ಪ್ರತಿ ದಿನ ಕನಿಷ್ಠ 20 ರಿಂದ 40 ನಿಮಿಷ ಬಿಸಿಲಿನಲ್ಲಿ ಇರಿ ಅಥವಾ ಉದ್ಯಾನವನಕ್ಕೆ ಹೋಗಿ ಸಣ್ಣ ವಾಕಿಂಗ್ ಮಾಡಿ

-ನಿಮ್ಮ ಭಾವನೆಗಳು ನಿಯಂತ್ರಣದಲ್ಲಿಲ್ಲದಿದ್ದರೂ ಕೂಡಾ ಸಾಧ್ಯವಾದಷ್ಟು ಸಾಮಾನ್ಯ ದಿನಚರಿಯನ್ನು ಕಾಪಾಡಿಕೊಳ್ಳಿ.

-10 ನಿಮಿಷಗಳ ವ್ಯಾಯಾಮಗಳು ನಿಮ್ಮ ಮನಸ್ಥಿತಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತವೆ.

-ದುಃಖ ಭರಿತ ಸಂಗೀತವನ್ನು ಆಲಿಸಬೇಡಿ. ಕೆಲವು ಹಳೆಯ ಫೋಟೋಗಳನ್ನು ನೋಡಬೇಡಿ, ಹಳೆಯ ಪತ್ರಗಳನ್ನು ಓದಬೇಡಿ.

– ನಿಮಗೆ ಖುಷಿ ಕೊಡುತ್ತದೆ ಎನ್ನುವ ವಿಷಯಗಳ ಕಡೆಗೆ ಹೆಚ್ಚು ಸಮಯವನ್ನು ಮೀಸಲಿಡಿ.

– ನೀವು ಯಾವ ಗುರಿಯನ್ನು ಸಾಧಿಸಬೇಕು ಎಂದುಕೊಂಡಿದ್ದೀರೋ ಅದರತ್ತ ಹೆಜ್ಜೆ ಹಾಕಿ.

ಈ ಕೆಲಸವನ್ನು ಮಾಡಬೇಡಿ

– ಒಂಟಿಯಾಗಿ ಒಂದೆಡೆ ಕೂರಬೇಡಿ

– ಮದ್ಯ ಮತ್ತು ಡ್ರಗ್ಸ್ ಖಿನ್ನತೆಯನ್ನು ಹೆಚ್ಚಿಸುತ್ತವೆ. ನಿಮ್ಮ ಸಮಸ್ಯೆಯನ್ನು ಪರಿಹರಿಸುವ ಸಾಮರ್ಥ್ಯವನ್ನು ಕುಂಠಿತಗೊಳಿಸುತ್ತದೆ.

-ಆತ್ಮಹತ್ಯೆ ಮಾಡಿಕೊಂಡರೆ ಸಮಸ್ಯೆ ಪರಿಹಾರವಾಗುವುದಿಲ್ಲ. ಅದರಿಂದ ಸಮಸ್ಯೆ ಮತ್ತಷ್ಟು ಉಲ್ಬಣಿಸಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?