AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಆಲೋಚನೆಯಿಂದ ಹೊರಬರುವುದು ಹೇಗೆ? ಇಲ್ಲಿದೆ ಸಲಹೆ

ಪ್ರೀತಿಯಲ್ಲಿ ಮೋಸಹೋಗಿದ್ದರೆ, ಹತ್ತಿರದವರನ್ನು ಕಳೆದುಕೊಂಡಿದ್ದರೆ, ಸಾಲದಬಾಧೆ ಹೆಚ್ಚಾದರೆ ದೀರ್ಘಕಾಲದ ಖಿನ್ನತೆಯಿಂದ ಬಳಲುತ್ತಿದ್ದರೆ ಆತ್ಮಹತ್ಯೆಯಂತಹ ಕೆಟ್ಟ ಯೋಚನೆಗಳನ್ನು ಜನರು ತಲೆಯಲ್ಲಿ ತುಂಬಿಕೊಳ್ಳುತ್ತಾರೆ.

ಆತ್ಮಹತ್ಯೆ ಆಲೋಚನೆಯಿಂದ ಹೊರಬರುವುದು ಹೇಗೆ? ಇಲ್ಲಿದೆ ಸಲಹೆ
Depression
TV9 Web
| Updated By: ನಯನಾ ರಾಜೀವ್|

Updated on: Aug 13, 2022 | 12:24 PM

Share

ಪ್ರೀತಿಯಲ್ಲಿ ಮೋಸಹೋಗಿದ್ದರೆ, ಹತ್ತಿರದವರನ್ನು ಕಳೆದುಕೊಂಡಿದ್ದರೆ, ಸಾಲದಬಾಧೆ ಹೆಚ್ಚಾದರೆ ದೀರ್ಘಕಾಲದ ಖಿನ್ನತೆಯಿಂದ ಬಳಲುತ್ತಿದ್ದರೆ ಆತ್ಮಹತ್ಯೆಯಂತಹ ಕೆಟ್ಟ ಯೋಚನೆಗಳನ್ನು ಜನರು ತಲೆಯಲ್ಲಿ ತುಂಬಿಕೊಳ್ಳುತ್ತಾರೆ. ಆದರೆ ಎಲ್ಲಾ ಸಮಸ್ಯೆಗಳಿಗೂ ಒಂದು ಪರಿಹಾರವಿದೆ ಎಂಬುದನ್ನು ಮರೆತಿರುತ್ತಾರೆ.

ಒಂದು ಸಲ ಆ ಕೆಟ್ಟ ಯೋಚನೆಯಿಂದ ಹೊರಬಂದರೆ ಅಯ್ಯೋ ತಾನು ಎಂಥಾ ದೊಡ್ಡ ತಪ್ಪು ಮಾಡುತ್ತಿದ್ದೆ ಎಂಬುದು ಅವರ ಅರಿವಿಗೆ ಬರುತ್ತದೆ. ನೋವನ್ನು ಸಹಿಸಲಾಗದೆ, ಇನ್ನು ಸಾವೇ ಪರಿಹಾರ ಎಂದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸುತ್ತಾರೆ. ಆದರೆ ವಾಸ್ತವವಾಗಿ ಇದು ತಾತ್ಕಾಲಿಕ.

ಈ ಸಮಯದಲ್ಲಿ ನೀವು ಆ ಯೋಚನೆಯನ್ನು ಬದಲಿಸಿದರೆ ಉತ್ತಮ ಭವಿಷ್ಯವು ನಿಮ್ಮ ಮುಂದಿರುತ್ತದೆ. ಒಂದು ವಿಷಯ ನೆನಪಿಟ್ಟುಕೊಳ್ಳಿ ನಿಮ್ಮ ಭಾವನೆಗಳು ನಿರಂತರವಾಗಿ ಬದಲಾಗುತ್ತಿರುತ್ತವೆ. ಹಾಗೆಯೇ ನಿಮ್ಮ ಸಮಸ್ಯೆಗಳು ಕೂಡ ಇಂದಲ್ಲಾ ನಾಳೆ ಕೊನೆಗೊಳ್ಳಲೇ ಬೇಕಲ್ಲವೆ.

ಆತ್ಮಹತ್ಯೆಯಂತಹ ಕೆಟ್ಟ ಆಲೋಚನೆಗಳಿಂದ ದೂರಬರಲು ಸಲಹೆ

-ಪ್ರತಿದಿನ ನಿಮ್ಮ ಪ್ರೀತಿಪಾತ್ರರೊಂದಿಗೆ ಸಮಯ ಕಳೆಯಿರಿ. ನೇರವಾಗಿ ಭೇಟಿಯಾಗಲು ಆದ್ಯತೆ ನೀಡಿ ಅದೂ ಸಾಧ್ಯವಾಗದಿದ್ದರೆ ಫೋನ್‌ನಲ್ಲಿ ಮಾತನಾಡಿ. ನಿಮ್ಮ ಎಲ್ಲಾ ನೋವುಗಳನ್ನು ಅವರೊಂದಿಗೆ ಹಂಚಿಕೊಳ್ಳಿ.

-ನಿಮ್ಮ ಆತ್ಮೀಯ ಸ್ನೇಹಿತರು ಅಥವಾ ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಿರಿ.

-ಸಹಾಯವಾಣಿಗೆ ಕರೆ ಮಾಡಿ ನಿಮ್ಮ ಸಮಸ್ಯೆಯನ್ನು ವಿವರಿಸಿ.

-ಪ್ರತಿ ದಿನ ಕನಿಷ್ಠ 20 ರಿಂದ 40 ನಿಮಿಷ ಬಿಸಿಲಿನಲ್ಲಿ ಇರಿ ಅಥವಾ ಉದ್ಯಾನವನಕ್ಕೆ ಹೋಗಿ ಸಣ್ಣ ವಾಕಿಂಗ್ ಮಾಡಿ

-ನಿಮ್ಮ ಭಾವನೆಗಳು ನಿಯಂತ್ರಣದಲ್ಲಿಲ್ಲದಿದ್ದರೂ ಕೂಡಾ ಸಾಧ್ಯವಾದಷ್ಟು ಸಾಮಾನ್ಯ ದಿನಚರಿಯನ್ನು ಕಾಪಾಡಿಕೊಳ್ಳಿ.

-10 ನಿಮಿಷಗಳ ವ್ಯಾಯಾಮಗಳು ನಿಮ್ಮ ಮನಸ್ಥಿತಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತವೆ.

-ದುಃಖ ಭರಿತ ಸಂಗೀತವನ್ನು ಆಲಿಸಬೇಡಿ. ಕೆಲವು ಹಳೆಯ ಫೋಟೋಗಳನ್ನು ನೋಡಬೇಡಿ, ಹಳೆಯ ಪತ್ರಗಳನ್ನು ಓದಬೇಡಿ.

– ನಿಮಗೆ ಖುಷಿ ಕೊಡುತ್ತದೆ ಎನ್ನುವ ವಿಷಯಗಳ ಕಡೆಗೆ ಹೆಚ್ಚು ಸಮಯವನ್ನು ಮೀಸಲಿಡಿ.

– ನೀವು ಯಾವ ಗುರಿಯನ್ನು ಸಾಧಿಸಬೇಕು ಎಂದುಕೊಂಡಿದ್ದೀರೋ ಅದರತ್ತ ಹೆಜ್ಜೆ ಹಾಕಿ.

ಈ ಕೆಲಸವನ್ನು ಮಾಡಬೇಡಿ

– ಒಂಟಿಯಾಗಿ ಒಂದೆಡೆ ಕೂರಬೇಡಿ

– ಮದ್ಯ ಮತ್ತು ಡ್ರಗ್ಸ್ ಖಿನ್ನತೆಯನ್ನು ಹೆಚ್ಚಿಸುತ್ತವೆ. ನಿಮ್ಮ ಸಮಸ್ಯೆಯನ್ನು ಪರಿಹರಿಸುವ ಸಾಮರ್ಥ್ಯವನ್ನು ಕುಂಠಿತಗೊಳಿಸುತ್ತದೆ.

-ಆತ್ಮಹತ್ಯೆ ಮಾಡಿಕೊಂಡರೆ ಸಮಸ್ಯೆ ಪರಿಹಾರವಾಗುವುದಿಲ್ಲ. ಅದರಿಂದ ಸಮಸ್ಯೆ ಮತ್ತಷ್ಟು ಉಲ್ಬಣಿಸಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ