AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ನಿಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಇಲ್ಲಿವೆ ಉತ್ತಮ ಸಲಹೆ

Mental Health:ನೀವು ಮಾನಸಿಕವಾಗಿ ಎಷ್ಟು ಆರೋಗ್ಯವಾಗಿರುತ್ತೀರೋ ನಿಮ್ಮ ದೇಹವೂ ಕೂಡ ಅಷ್ಟೇ ಆರೋಗ್ಯವಾಗಿರುತ್ತದೆ. ನಿಮ್ಮ ದೇಹ( Body) ದಣಿದಂತೆ ಮೆದುಳು ಕೂಡ ದಣಿದಿರುತ್ತದೆ. ಈ ಆಯಾಸದಿಂದ ಮೆದುಳು( Brain) ಭಾರವಾದಂತೆ ಭಾಸವಾಗುತ್ತದೆ.

Mental Health: ನಿಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಇಲ್ಲಿವೆ ಉತ್ತಮ ಸಲಹೆ
ಮಾನಸಿಕ ಆರೋಗ್ಯ
TV9 Web
| Edited By: |

Updated on: May 18, 2022 | 3:57 PM

Share

ನೀವು ಮಾನಸಿಕವಾಗಿ ಎಷ್ಟು ಆರೋಗ್ಯವಾಗಿರುತ್ತೀರೋ ನಿಮ್ಮ ದೇಹವೂ ಕೂಡ ಅಷ್ಟೇ ಆರೋಗ್ಯವಾಗಿರುತ್ತದೆ. ನಿಮ್ಮ ದೇಹ( Body) ದಣಿದಂತೆ ಮೆದುಳು ಕೂಡ ದಣಿದಿರುತ್ತದೆ. ಈ ಆಯಾಸದಿಂದ ಮೆದುಳು( Brain) ಭಾರವಾದಂತೆ ಭಾಸವಾಗುತ್ತದೆ. ನಿಮಗೆ ಆಯಾಸವಾದಾಗ ತಲೆಯಲ್ಲಿ ಭಾರ, ಮಾನಸಿಕ ಆಯಾಸ,ಸಿಟ್ಟು, ಉದ್ವೇಗ, ಯಾರೊಂದಿಗೂ ಮಾತನಾಡುವ ಆಸೆ ಇರುವುದಿಲ್ಲ. ಈ ಎಲ್ಲಾ ಸಮಸ್ಯೆಗಳು ನಿಮ್ಮ ಮೆದುಳಿನ ಆರೋಗ್ಯಕ್ಕೆ ಗಮನ ಕೊಡಬೇಕೆಂದು ಸೂಚಿಸುತ್ತವೆ. ಇದಲ್ಲದೆ ಭಾವನಾತ್ಮಕ ಆರೋಗ್ಯದ ಬಗ್ಗೆ ಗಮನಹರಿಸುವ ಅವಶ್ಯಕತೆಯಿದೆ. ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ ಇಲ್ಲಿವೆ ಸಲಹೆಗಳು.

ಮಾನಸಿಕ ಆಯಾಸ ವ್ಯಕ್ತಿಯಿಂದ ವ್ಯಕ್ತಿಗೆ ಭಿನ್ನವಾಗಿರಬಹುದು ಮಾನಸಿಕ ಆಯಾಸವೆಂಬುದು ವ್ಯಕ್ತಿಯಿಂದ ವ್ಯಕ್ತಿಗೆ ಭಿನ್ನವಾಗಿರಬಹುದು, ಮಾನಸಿಕ ಆಯಾಸದ ಕಾರಣಗಳು ಪ್ರತಿಯೊಬ್ಬ ವ್ಯಕ್ತಿಗೆ ವಿಭಿನ್ನವಾಗಿರಬಹುದು. ಉದಾಹರಣೆಗೆ ದೀರ್ಘಕಾಲದ ಅನಾರೋಗ್ಯ, ಔಷಧಿಗಳ ದೀರ್ಘಕಾಲದ ಬಳಕೆ, ಹೆಚ್ಚು ಒತ್ತಡ ತೆಗೆದುಕೊಳ್ಳುವುದು. ಈ ಎಲ್ಲಾ ಕಾರಣಗಳು ಮಾನಸಿಕ ಆಯಾಸದಿಂದ ಉಂಟಾಗಬಹುದು.

ಸಕ್ರಿಯ ಜೀವನಶೈಲಿಯನ್ನು ಕಾಪಾಡಿಕೊಳ್ಳಿ ಹೆಚ್ಚು ಸಕ್ರಿಯ ಜೀವನಶೈಲಿಯನ್ನು ಅಳವಡಿಸಿಕೊಳ್ಳಿ ಎಂದು ತಜ್ಞರು ಸಲಹೆ ನೀಡುತ್ತಾರೆ. ಮಕ್ಕಳು ವಿಶೇಷವಾಗಿ ತಮ್ಮ ಆರೋಗ್ಯದ ಮೇಲೆ ಗಮನಹರಿಸಬೇಕು ಮತ್ತು ಒಳಾಂಗಣ ಆಟಗಳು, ವ್ಯಾಯಾಮ ಇತ್ಯಾದಿಗಳ ಮೇಲೆ ಕೇಂದ್ರೀಕರಿಸಬೇಕು” ಎಂದು ಮನೋವೈದ್ಯರು ಹೇಳುತ್ತಾರೆ.

ಈ ಆಯುರ್ವೇದ ಔಷಧಗಳಿಂದ ಮಾನಸಿಕ ಆಯಾಸಕ್ಕೆ ಪರಿಹಾರ ಮಾನಸಿಕ ಆಯಾಸವನ್ನು ತಪ್ಪಿಸಲು ನೀವು 3 ಆಯುರ್ವೇದ ಔಷಧಿಗಳನ್ನು ಸಹ ಬಳಸಬಹುದು. ಇದು ಖಂಡಿತವಾಗಿಯೂ ನಿಮಗೆ ಪರಿಹಾರವನ್ನು ನೀಡುತ್ತದೆ. ಇದು ಅಶ್ವಗಂಧ, ಶಂಖಪುಷ್ಪಿ ಮತ್ತು ಬ್ರಾಹ್ಮಿಗಳನ್ನು ಒಳಗೊಂಡಿದೆ.

ಬ್ರಾಹ್ಮಿ ನಿಮ್ಮ ಜ್ಞಾಪಕಶಕ್ತಿಯನ್ನು ಹೆಚ್ಚಿಸಬಲ್ಲದು. ಇದರೊಂದಿಗೆ ಇದು ಮಾನಸಿಕ ಆಯಾಸವನ್ನು ನಿವಾರಿಸಲು ಮತ್ತು ಹಾರ್ಮೋನುಗಳ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳುವಲ್ಲಿ ಸಮಸ್ಯೆ ಇದ್ದರೆ ನೀವು ಬ್ರಾಹ್ಮಿಯನ್ನು ಸೇವಿಸಬೇಕು.

ಅಶ್ವಗಂಧವು ದೈವಿಕ ಔಷಧವಾಗಿದೆ, ಇದು ನಿಮ್ಮನ್ನು ಮಾನಸಿಕ ಒತ್ತಡದಿಂದ ರಕ್ಷಿಸುತ್ತದೆ. ಈ ಔಷಧಿಯನ್ನು ಅನಾರೋಗ್ಯದ ಸಮಯದಲ್ಲಿ ಮಾತ್ರ ಸೇವಿಸಬೇಕೆಂದೆನಿಲ್ಲ, ಸಕ್ರಿಯವಾಗಿರಲು ನೀವು ಇದನ್ನು ಬಳಸಬಹುದು. ಅದೇ ರೀತಿ ಮೂರನೇ ಔಷಧವು ಮನಸ್ಸನ್ನು ಚುರುಕುಗೊಳಿಸಲಿದೆ. ಇದನ್ನು ಶಂಖಪುಷ್ಪಿ ಎಂದು ಕರೆಯಲಾಗುತ್ತದೆ. ಇದನ್ನು ಸೇವಿಸುವುದರಿಂದ ದೇಹ ಮತ್ತು ಮನಸ್ಸು ಎರಡೂ ತಾಜಾತನವನ್ನು ಪಡೆಯುತ್ತದೆ.

ಸ್ವಯಂ ಕಾಳಜಿಯ ಮೇಲೆ ಕೇಂದ್ರೀಕರಿಸಿ ನಮ್ಮ ಬಗ್ಗೆ ನಾವು ಹೆಚ್ಚು ಕಾಳಜಿವಹಿಸುವುದು ಮುಖ್ಯವಾಗುತ್ತದೆ. ಈ ಕಾಳಜಿಯು ಹಲವಾರು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಒಬ್ಬ ಉತ್ತಮ ವ್ಯಕ್ತಿಯಾಗಲು ಸ್ವಯಂ-ಅರಿವು ಬೆಳೆಸಿಕೊಳ್ಳುವಲ್ಲಿ ಸಹ ಕೆಲಸ ಮಾಡಬೇಕು ಏಕೆಂದರೆ ನೀವು ಉತ್ತಮ ವ್ಯಕ್ತಿಯಾಗಿದ್ದಾಗ, ನಿಮ್ಮ ಸುತ್ತಲಿನ ವಿಷಯಗಳು ಉತ್ತಮವಾಗುತ್ತದೆ. ಹಾಗಅಗಿ ನಿಮ್ಮ ವ್ಯಕ್ತಿತ್ವ ಬೆಳವಣಿಗೆಯ ಕುರಿತು ಹೆಚ್ಚು ಗಮನ ನೀಡುವುದು ಉತ್ತಮ.

ಧ್ಯಾನ ಮಾಡಿ: ನೀವು ಧ್ಯಾನ ಮಾಡುವುದರಿಂದ ಮನಸ್ಸಿಗೆ ಸಂಬಂಧಿಸಿದ ಹಲವು ಕಾಯಿಲೆಗಳಿಂದ ದೂರ ಇರಬಹುದಾಗಿದೆ. ಮೊದಲು ಧ್ಯಾನ ಮಾಡುವುದು ಹೇಗೆ ಎಂಬುದನ್ನು ಕಲಿತುಕೊಳ್ಳಿ, ಧ್ಯಾನಕ್ಕೆ ಕುಳಿತಾಗ ಕಷ್ಟ, ನೋವು ಎಲ್ಲವನ್ನೂ ಕ್ಷಣಕಾಲ ಬದಿಗಿಡಬೇಕು.

ಆರೋಗ್ಕ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!