AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

High Blood Pressure: ಅಧಿಕ ರಕ್ತದೊತ್ತಡ ಸಮಸ್ಯೆ ನಿಯಂತ್ರಿಸಲು ಕೆಲವು ಸಲಹೆಗಳು ಇಲ್ಲಿವೆ

ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಲು ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ಪೌಷ್ಟಿಕಾಂಶಯುಕ್ತ ಆಹಾರ ಮತ್ತು ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಗಳು ಅತ್ಯವಶ್ಯಕ.

High Blood Pressure: ಅಧಿಕ ರಕ್ತದೊತ್ತಡ ಸಮಸ್ಯೆ ನಿಯಂತ್ರಿಸಲು ಕೆಲವು ಸಲಹೆಗಳು ಇಲ್ಲಿವೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 01, 2021 | 8:23 AM

Share

ಪ್ರಸ್ತುತದಲ್ಲಿ ಹೃದಯಾಘಾತ ಸಮಸ್ಯೆ ಹೆಚ್ಚು ಕಂಡು ಬರುತ್ತಿದೆ. ಹೃದಯಾಘಾತ ಸಂಭವಿಸಲು ಅಧಿಕ ರಕ್ತದೊತ್ತಡವೂ ಸಹ ಒಂದು ಕಾರಣ. ಹೀಗಿರುವ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಲು ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ಪೌಷ್ಟಿಕಾಂಶಯುಕ್ತ ಆಹಾರ ಮತ್ತು ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಗಳು ಅತ್ಯವಶ್ಯಕ. ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ನೀವು ಈ ಕೆಲವು ಗಿಡಮೂಲಿಕೆಗಳನ್ನು ಬಳಸಬಹುದು.

ಆಮ್ಲಾ ರಕ್ತದೊತ್ತಡವನ್ನು ನಿಯಂತ್ರಿಸಲು ಆಮ್ಲಾ ಉತ್ತಮ ಔಷಧವಾಗಿದೆ. ಇದರಲ್ಲಿ ವಿಟಮಿನ್ ಸಿ ಅಂಶವಿರುತ್ತದೆ. ಇದು ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆಮ್ಲಾವನ್ನು ನಿಮ್ಮ ಅಹಾರ ಪದ್ಧತಿಯಲ್ಲಿ ಇಂದಿನಿಂದಲೇ ಸೇರಿಸಿಕೊಳ್ಳಿ.

ಅಶ್ವಗಂಧ ಅಶ್ವಗಂಧವು ನೈಸರ್ಗಿಕ ಔಷಧೀಯ ಸಸ್ಯವಾಗಿದೆ. ಸಂಜೆಯ ವೇಳೆ ಚಹಾ ತಯಾರಿಸಿಕೊಂಡು ಇದನ್ನು ಸೇವಿಸಬಹುದು. ಅಶ್ವಗಂಧವು ರಕ್ತದೊತ್ತಡ ಸಮಸ್ಯೆಯನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡುತ್ತದೆ ಎಂಬುದು ಅಧ್ಯಯನಗಳಿಂದ ತಿಳಿದು ಬಂದಿದೆ. ಇದು ದೇಹದಲ್ಲಿ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ.

ಬೆಳ್ಳುಳ್ಳಿ ಬೆಳ್ಳುಳ್ಳಿ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ನಿಮ್ಮ ಆಹಾರ ಪದ್ಧತಿಯಲ್ಲಿ ಬೆಳ್ಳುಳ್ಳಿ ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

ಜೇನು ತುಪ್ಪ ನೀವು ಪ್ರತಿನಿತ್ಯ ಬೆಳಿಗ್ಗೆ ಜೇನು ತುಪ್ಪ ಸೇವಿಸುವ ಅಭ್ಯಾಸ ಮಾಡಿಕೊಳ್ಳಬಹುದು. ಉಗುರು ಬೆಚ್ಚಗಿನ ನೀರಿನೊಂದಿಗೆ ಜೇನುತುಪ್ಪ ಸವಿಯುವ ಮೂಲಕ ನೀವು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಜೇನುತುಪ್ಪ ರಕ್ತದೊತ್ತಡ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ತುಳಸಿ ತುಳಸಿಯಲ್ಲಿ ಅಧಿಕ ರಕ್ತದೊತ್ತಡ ನಿಯಂತ್ರಿಸುವ ಶಕ್ತಿಯಿದೆ. ಜತೆಗೆ ನೆಗಡಿ, ಜ್ವರ, ಸಂಧಿವಾತ ಮತ್ತು ಇತರ ಅನೇಕ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ತುಳಸಿಯನ್ನು ಬಳಸುತ್ತಾರೆ. ತುಳಸಿ ಎಲೆಗಳಿಂದ ತಯಾರಿಸಿದ ಚಹಾ ಸವಿಯುವ ಮೂಲಕ ನೀವು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

ಇದನ್ನೂ ಓದಿ:

Health Tips: ನಿಮ್ಮ ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ನೀಗಿಸಲು ರಾಗಿಯಿಂದ ತಯಾರಿಸಿದ ಆಹಾರ ಪದಾರ್ಥಗಳು ಸಹಾಯಕ

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಈ 3 ಬಗೆಯ ಆರೋಗ್ಯಕರ ಪಾನೀಯಗಳು ಸಹಾಯಕ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ