AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

High Blood Pressure: ಅಧಿಕ ರಕ್ತದೊತ್ತಡ ಸಮಸ್ಯೆ ನಿಯಂತ್ರಿಸಲು ಕೆಲವು ಸಲಹೆಗಳು ಇಲ್ಲಿವೆ

ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಲು ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ಪೌಷ್ಟಿಕಾಂಶಯುಕ್ತ ಆಹಾರ ಮತ್ತು ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಗಳು ಅತ್ಯವಶ್ಯಕ.

High Blood Pressure: ಅಧಿಕ ರಕ್ತದೊತ್ತಡ ಸಮಸ್ಯೆ ನಿಯಂತ್ರಿಸಲು ಕೆಲವು ಸಲಹೆಗಳು ಇಲ್ಲಿವೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 01, 2021 | 8:23 AM

Share

ಪ್ರಸ್ತುತದಲ್ಲಿ ಹೃದಯಾಘಾತ ಸಮಸ್ಯೆ ಹೆಚ್ಚು ಕಂಡು ಬರುತ್ತಿದೆ. ಹೃದಯಾಘಾತ ಸಂಭವಿಸಲು ಅಧಿಕ ರಕ್ತದೊತ್ತಡವೂ ಸಹ ಒಂದು ಕಾರಣ. ಹೀಗಿರುವ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಲು ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ಪೌಷ್ಟಿಕಾಂಶಯುಕ್ತ ಆಹಾರ ಮತ್ತು ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಗಳು ಅತ್ಯವಶ್ಯಕ. ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ನೀವು ಈ ಕೆಲವು ಗಿಡಮೂಲಿಕೆಗಳನ್ನು ಬಳಸಬಹುದು.

ಆಮ್ಲಾ ರಕ್ತದೊತ್ತಡವನ್ನು ನಿಯಂತ್ರಿಸಲು ಆಮ್ಲಾ ಉತ್ತಮ ಔಷಧವಾಗಿದೆ. ಇದರಲ್ಲಿ ವಿಟಮಿನ್ ಸಿ ಅಂಶವಿರುತ್ತದೆ. ಇದು ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆಮ್ಲಾವನ್ನು ನಿಮ್ಮ ಅಹಾರ ಪದ್ಧತಿಯಲ್ಲಿ ಇಂದಿನಿಂದಲೇ ಸೇರಿಸಿಕೊಳ್ಳಿ.

ಅಶ್ವಗಂಧ ಅಶ್ವಗಂಧವು ನೈಸರ್ಗಿಕ ಔಷಧೀಯ ಸಸ್ಯವಾಗಿದೆ. ಸಂಜೆಯ ವೇಳೆ ಚಹಾ ತಯಾರಿಸಿಕೊಂಡು ಇದನ್ನು ಸೇವಿಸಬಹುದು. ಅಶ್ವಗಂಧವು ರಕ್ತದೊತ್ತಡ ಸಮಸ್ಯೆಯನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡುತ್ತದೆ ಎಂಬುದು ಅಧ್ಯಯನಗಳಿಂದ ತಿಳಿದು ಬಂದಿದೆ. ಇದು ದೇಹದಲ್ಲಿ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ.

ಬೆಳ್ಳುಳ್ಳಿ ಬೆಳ್ಳುಳ್ಳಿ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ನಿಮ್ಮ ಆಹಾರ ಪದ್ಧತಿಯಲ್ಲಿ ಬೆಳ್ಳುಳ್ಳಿ ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

ಜೇನು ತುಪ್ಪ ನೀವು ಪ್ರತಿನಿತ್ಯ ಬೆಳಿಗ್ಗೆ ಜೇನು ತುಪ್ಪ ಸೇವಿಸುವ ಅಭ್ಯಾಸ ಮಾಡಿಕೊಳ್ಳಬಹುದು. ಉಗುರು ಬೆಚ್ಚಗಿನ ನೀರಿನೊಂದಿಗೆ ಜೇನುತುಪ್ಪ ಸವಿಯುವ ಮೂಲಕ ನೀವು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಜೇನುತುಪ್ಪ ರಕ್ತದೊತ್ತಡ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ತುಳಸಿ ತುಳಸಿಯಲ್ಲಿ ಅಧಿಕ ರಕ್ತದೊತ್ತಡ ನಿಯಂತ್ರಿಸುವ ಶಕ್ತಿಯಿದೆ. ಜತೆಗೆ ನೆಗಡಿ, ಜ್ವರ, ಸಂಧಿವಾತ ಮತ್ತು ಇತರ ಅನೇಕ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ತುಳಸಿಯನ್ನು ಬಳಸುತ್ತಾರೆ. ತುಳಸಿ ಎಲೆಗಳಿಂದ ತಯಾರಿಸಿದ ಚಹಾ ಸವಿಯುವ ಮೂಲಕ ನೀವು ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

ಇದನ್ನೂ ಓದಿ:

Health Tips: ನಿಮ್ಮ ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ನೀಗಿಸಲು ರಾಗಿಯಿಂದ ತಯಾರಿಸಿದ ಆಹಾರ ಪದಾರ್ಥಗಳು ಸಹಾಯಕ

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಈ 3 ಬಗೆಯ ಆರೋಗ್ಯಕರ ಪಾನೀಯಗಳು ಸಹಾಯಕ

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ