AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ನಿದ್ರೆಯ ಮಧ್ಯೆ ಎಚ್ಚರವಾಗುತ್ತಿದೆಯೇ? ಇದರ ಹಿಂದಿನ ಕಾರಣದ ಬಗ್ಗೆ ಇರಲಿ ನಿಮ್ಮ ಗಮನ

Health Tips: ಕಿರಿಕಿರಿ ಮತ್ತು ಕೋಪ ಹೆಚ್ಚುತ್ತದೆ. ಅಲ್ಲದೆ ಕ್ರಮೇಣ ವ್ಯಕ್ತಿಯು ಅನೇಕ ಕಾಯಿಲೆಗಳಿಗೆ ತುತ್ತಾಗಬಹುದು. ಇದರಿಂದ ಹೊರಬರಲು ಈ ಸಮಸ್ಯೆ ಹಿಂದಿನ ಕಾರಣವನ್ನು ತಿಳಿಯುವುದು ಬಹಳ ಮುಖ್ಯ.

ರಾತ್ರಿ ನಿದ್ರೆಯ ಮಧ್ಯೆ ಎಚ್ಚರವಾಗುತ್ತಿದೆಯೇ? ಇದರ ಹಿಂದಿನ ಕಾರಣದ ಬಗ್ಗೆ ಇರಲಿ ನಿಮ್ಮ ಗಮನ
ಪ್ರಾತಿನಿಧಿಕ ಚಿತ್ರ
TV9 Web
| Updated By: preethi shettigar|

Updated on: Jan 08, 2022 | 7:30 AM

Share

ಇತ್ತೀಚಿನ ದಿನಗಳಲ್ಲಿ ನಿದ್ರಾಹೀನತೆಯೂ ದೊಡ್ಡ ಸಮಸ್ಯೆಯಾಗುತ್ತಿದೆ. ಕೆಲವರಿಗೆ ಸರಿಯಾಗಿ ನಿದ್ದೆ (Sleep)ಬರುವುದಿಲ್ಲ. ಬಂದರೂ ನಿದ್ರೆ ಮಧ್ಯೆ ಆಗಾಗ್ಗೆ ಎಚ್ಚರಗೊಳ್ಳುವ ಮೂಲಕ ಕಿರಿಕಿರಿ ಅನುಭವಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ದೇಹವು ಸರಿಯಾಗಿ ವಿಶ್ರಾಂತಿ ಪಡೆಯುವುದಿಲ್ಲ ಮತ್ತು ಅದರ ಋಣಾತ್ಮಕ ಪರಿಣಾಮವು ಆರೋಗ್ಯದ (Health) ಮೇಲೆ ಕಂಡುಬರುತ್ತದೆ. ಇದರಿಂದ ದಿನವಿಡೀ ಆಯಾಸ, ಆಲಸ್ಯ, ತಲೆನೋವಿನ ಸಮಸ್ಯೆ, ಜೊತೆಗೆ ಯಾವ ಕೆಲಸವನ್ನೂ ಪೂರ್ಣವಾಗಿ ಏಕಾಗ್ರತೆಯಿಂದ ಮಾಡಲಾಗುವುದಿಲ್ಲ. ಇದರಿಂದ ಕಿರಿಕಿರಿ ಮತ್ತು ಕೋಪ ಹೆಚ್ಚುತ್ತದೆ. ಅಲ್ಲದೆ ಕ್ರಮೇಣ ವ್ಯಕ್ತಿಯು ಅನೇಕ ಕಾಯಿಲೆಗಳಿಗೆ ತುತ್ತಾಗಬಹುದು. ಇದರಿಂದ ಹೊರಬರಲು ಈ ಸಮಸ್ಯೆ ಹಿಂದಿನ ಕಾರಣವನ್ನು ತಿಳಿಯುವುದು ಬಹಳ ಮುಖ್ಯ.

ಒತ್ತಡ ಇತ್ತೀಚೆಗೆ ಒತ್ತಡ ಸಾಮಾನ್ಯ ಸಮಸ್ಯೆಯಾಗಿದೆ. ಒತ್ತಡದ ಸಮಯದಲ್ಲಿ ದೇಹದಲ್ಲಿ ಕಾರ್ಟಿಸೋಲ್ ಮಟ್ಟವು ಹೆಚ್ಚಾಗುತ್ತದೆ. ಈ ಕಾರಣದಿಂದಾಗಿ, ಮೆದುಳು ನಿರಂತರವಾಗಿ ಸಕ್ರಿಯವಾಗಿರುತ್ತದೆ. ಆದ್ದರಿಂದ ಸರಿಯಾಗಿ ನಿದ್ರೆ ಮಾಡಲು ಸಾಧ್ಯವಿಲ್ಲ.

ಥೈರಾಯ್ಡ್ ಥೈರಾಯ್ಡ್ ರೋಗಿಗಳೂ ಈ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ವಾಸ್ತವವಾಗಿ ಥೈರಾಯ್ಡ್ ಸಮಯದಲ್ಲಿ ಆರೋಗ್ಯದಲ್ಲಿ ಅಸಮತೋಲನ ಉಂಟಾಗುತ್ತದೆ ಮತ್ತು ಇದು ನಿದ್ರೆಯ ಮೇಲೆ ಪರಿಣಾಮ ಬೀರುತ್ತದೆ. ಥೈರಾಯ್ಡ್ ಹಿಗ್ಗಿದಾಗ, ಹೃದಯವು ವೇಗವಾಗಿ ಕೆಲಸ ಮಾಡುತ್ತದೆ ಮತ್ತು ದೇಹದಲ್ಲಿ ಅಡ್ರಿನಾಲಿನ್ ಹಾರ್ಮೋನ್ ಮಟ್ಟವು ಹೆಚ್ಚಾಗಲು ಪ್ರಾರಂಭಿಸುತ್ತದೆ. ಇದರಿಂದ ನಿದ್ರಾಹೀನತೆಯ ಸಮಸ್ಯೆ ಪ್ರಾರಂಭವಾಗುತ್ತದೆ.

ನಿದ್ರಾಹೀನತೆ ನಿದ್ರಾಹೀನತೆಯೂ ಇದಕ್ಕೆ ಕಾರಣವಾಗಿರಬಹುದು. ರಾತ್ರಿ ನಿದ್ರೆ ಬರದೇ ಇರುವುದು ಮತ್ತು ಇದರಿಂದ ಆಯಾಸ ಅನುಭವಿಸುವುದು ಇದಕ್ಕೆ ಕಾರಣ.

ಅತಿಯಾದ ಮೊಬೈಲ್​ ಬಳಕೆ ನಿದ್ರಾಹೀನತೆಯ ಸಮಸ್ಯೆಗೆ ಮೊಬೈಲ್ ಮತ್ತು ಸಾಮಾಜಿಕ ಮಾಧ್ಯಮಗಳ ಅತಿಯಾದ ಬಳಕೆಯೂ ಕಾರಣವಾಗಬಹುದು. ಮೊಬೈಲ್​ನ ಬೆಳಕು ನೇರವಾಗಿ ನಿಮ್ಮ ಕಣ್ಣಿಗೆ ಬೀಳುತ್ತದೆ. ಈ ಕಾರಣದಿಂದಾಗಿ ದೇಹವು ಮೆಲಟೋನಿನ್ ಮತ್ತು ನಿದ್ರೆಯ ಹಾರ್ಮೋನ್ ಉತ್ಪಾದನೆಯನ್ನು ತಡೆಯುತ್ತದೆ. ಇದರಿಂದಾಗಿ ನಿದ್ರೆ ಸರಿಯಾಗಿ ಆಗುವುದಿಲ್ಲ.

ನಿದ್ರೆಯಲ್ಲಿ ಉಸಿರುಕಟ್ಟುವಿಕೆ ರಾತ್ರಿಯಲ್ಲಿ ಮಲಗುವಾಗ ಉಸಿರಾಟದಲ್ಲಿ ಪದೇ ಪದೇ ತೊಂದರೆಯಾಗುತ್ತದೆ. ಪದೇ ಪದೇ ಎಚ್ಚರಗೊಳ್ಳಲು ಇದು ಒಂದು ಕಾರಣವಾಗಿರಬಹುದು. ಈ ಸಮಸ್ಯೆಯಿಂದ ದೂರವಿರಲು ಮತ್ತು ಉತ್ತಮ ನಿದ್ರೆ ಪಡೆಯಲು ವೈದ್ಯರ ಸಲಹೆ ಪಡೆಯಿರಿ.

ಈ ಅಭ್ಯಾಸಗಳು ಸಹ ಕಾರಣವಾಗಬಹುದು ರಾತ್ರಿಯಲ್ಲಿ ಚಹಾ ಅಥವಾ ಕಾಫಿಯ ಅತಿಯಾದ ಸೇವನೆಯು ನಿದ್ರೆಗೆ ಅಡ್ಡಿಪಡಿಸುತ್ತದೆ. ಇನ್ನು ರಾತ್ರಿ ಪಾಳಿಯ ಕೆಲಸ ಕೂಡ ನಿದ್ರಾಹೀನತೆಗೆ ಕಾರಣವಾಗಬಹುದು.

ಇದನ್ನೂ ಓದಿ: ಕಿಡ್ನಿ ಸಮಸ್ಯೆ ಎದುರಾಗುವ ಮೊದಲೇ ಮುನ್ನೆಚ್ಚರಿಕೆ ವಹಿಸಿ; ಆರೋಗ್ಯ ಕಾಳಜಿಗಾಗಿ ಫೋಟೋ ಸಹಿತ ಮಾಹಿತಿ ಇದೆ ನೋಡಿ

Women Health: ಮುಟ್ಟಿನ ದಿನಗಳಲ್ಲಿ ಹೊಟ್ಟೆ ನೋವಿನ ಸಮಸ್ಯೆಯೇ? ಪರಿಹಾರಕ್ಕಾಗಿ ಇಲ್ಲಿದೆ ಸರಳ ವಿಧಾನಗಳು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!