AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಅಧಿಕ ತಲೆನೋವು ಉಂಟು ಮಾಡಬಲ್ಲ 4 ಪಾನೀಯಗಳಿವು

ನಿಮ್ಮ ದೇಹವನ್ನು ಸದಾ ಹೈಡ್ರೇಟ್​ ಆಗಿರಿಸಿಕೊಳ್ಳಲು ದ್ರವ ಪದಾರ್ಥಗಳನ್ನು ಸೇವಿಸಬೇಕು ನಿಜ ಆದರೆ ನೀರು ಕುಡಿಯುವ ಬದಲು ತಂಪಾದ ಪಾನೀಯಗಳನ್ನು ಸೇವಿಸಿದರೆ ವಿಪರೀತ ತಲೆನೋವಿನ ಸಮಸ್ಯೆ ಕಾಡಬಹುದು ಎಂದು ವೈದ್ಯರು ಹೇಳಿದ್ದಾರೆ

ನಿಮಗೆ ಅಧಿಕ ತಲೆನೋವು ಉಂಟು ಮಾಡಬಲ್ಲ 4 ಪಾನೀಯಗಳಿವು
Drinks
TV9 Web
| Updated By: ನಯನಾ ರಾಜೀವ್|

Updated on: Jul 13, 2022 | 11:46 AM

Share

ನಿಮ್ಮ ದೇಹವನ್ನು ಸದಾ ಹೈಡ್ರೇಟ್​ ಆಗಿರಿಸಿಕೊಳ್ಳಲು ದ್ರವ ಪದಾರ್ಥಗಳನ್ನು ಸೇವಿಸಬೇಕು ನಿಜ ಆದರೆ ನೀರು ಕುಡಿಯುವ ಬದಲು ತಂಪಾದ ಪಾನೀಯಗಳನ್ನು ಸೇವಿಸಿದರೆ ವಿಪರೀತ ತಲೆನೋವಿನ ಸಮಸ್ಯೆ ಕಾಡಬಹುದು ಎಂದು ವೈದ್ಯರು ಹೇಳಿದ್ದಾರೆ. ಈ ಪಾನೀಯಗಳ ಸೇವನೆಯಿಂದ ದೃಷ್ಟಿದೋಷ, ನಿದ್ರಾಹೀನತೆ, ಒತ್ತಡ, ಖಿನ್ನತೆ, ಅಲರ್ಜಿಯಂತಹ ಸಮಸ್ಯೆಯುಂಟಾಗಲಿದೆ. ನಿಮ್ಮ ದೇಹಕ್ಕೆ ಅಪಾಯವನ್ನುಂಟು ಮಾಡುವ ಪಾನೀಯಗಳಿವು.

ಬಿಯರ್, ವೈನ್: ಬಿಯರ್ ಅನ್ನು ಬಾರ್ಲಿಯಿಂದ ಮತ್ತು ದ್ರಾಕ್ಷಿಯಿಂದ ವೈನ್ ತಯಾರಿಸಲಾಗುತ್ತದೆ , ಸ್ವಲ್ಪ ಪ್ರಮಾಣದಲ್ಲಿ ಸೇವಿಸಿದರೆ ಆರೋಗ್ಯಕ್ಕೆ ಉತ್ತಮ ಅದೇ ಹೆಚ್ಚಾದರೆ ನಿರ್ಜಲೀಕರಣ ಹಾಗೂ ತಲೆನೋವು ಉಂಟು ಮಾಡುತ್ತದೆ.

ಕಾಫಿ: ಕೆಫೀನ್‌ನಲ್ಲಿ ಸಮೃದ್ಧವಾಗಿರುವ ಕಾಫಿಯನ್ನು ಸ್ವಲ್ಪ ಪ್ರಮಾಣದಲ್ಲಿ ಬಳಸಿದಾಗ ತೂಕ ನಷ್ಟವನ್ನು ಉಂಟುಮಾಡಬಹುದು, ಹೆಚ್ಚಿನ ಪ್ರಮಾಣದಲ್ಲಿ ಕುಡಿದಾಗ ನಿದ್ರಾಹೀನತೆ ಮತ್ತು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಸಮಸ್ಯೆ ಕಾಡಬಹುದು. ನಿತ್ಯ 3 ಕಪ್​ಗಳಿಗಿಂತ ಹೆಚ್ಚಿನ ಕಾಫಿ ಸೇವನೆ ಬೇಡ.

ಎನರ್ಜಿ ಡ್ರಿಂಕ್ಸ್: ಈ ಎನರ್ಜಿ ಡಿಂಕ್ಸ್​ಗಳನ್ನು ಕೆಫೀನ್ ಮತ್ತು ಕಾಣದ ಸಕ್ಕರೆಯ ಅಂಶವು ತಾತ್ಕಾಲಿಕ ಶಕ್ತಿಯನ್ನು ಒದಗಿಸುತ್ತದೆ. ಆದರೆ ದೀರ್ಘಕಾಲದವರೆಗೆ ಅಲ್ಲ. ಬಳಿಕ ನಿದ್ರೆಯ ಕೊರತೆ, ನಿರ್ಜಲೀಕರಣ, ಆಯಾಸ ಹಾಗೂ ಸಹಜವಾಗಿ ತಲೆನೋವು ಕಾಣಿಸಿಕೊಳ್ಳುತ್ತದೆ.

ಹಣ್ಣಿನ ರಸಗಳು: ಹಣ್ಣಿನ ರಸಗಳು, ಹೆಚ್ಚಿನ ಸಕ್ಕರೆ ಅಂಶದಿಂದಾಗಿ, ರಕ್ತದಲ್ಲಿನ ಸಕ್ಕರೆಯ ಮಟ್ಟವು ತ್ವರಿತ ಏರಿಕೆ ಮತ್ತು ಕುಸಿತಕ್ಕೆ ಕಾರಣವಾಗಬಹುದು, ಇದರಿಂದಾಗಿ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ ಮತ್ತು ತಲೆನೋವು ಉಂಟಾಗುತ್ತದೆ. ಪರ್ಯಾಯವಾಗಿ ತೆಂಗಿನ ನೀರಿನೊಂದಿಗೆ ಹಣ್ಣಿನ ರಸವನ್ನು ಕುಡಿಯಲು ಪ್ರಯತ್ನಿಸಿ.

ಈ ಮೇಲಿನ ಸುದ್ದಿಯು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ