AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಕೊವಿಡ್ ಸಮಯದಲ್ಲಿ ನೀವು ಪಾಲಿಸಲೇಬೇಕಾದ ಐದು ಆಹಾರ ಪದ್ಧತಿಗಳು

ನಾವು ಪ್ರತಿನಿತ್ಯ ತೆಗೆದುಕೊಳ್ಳುವ ತರಕಾರಿ, ಹಣ್ಣು ಮತ್ತು ಇನ್ನಿತರ ಪದಾರ್ಥಗಳಲ್ಲಿ ರೋಗನಿರೋಧಕ ಶಕ್ತಿ ಮತ್ತು ಪೋಷಕಾಂಶಗಳು ಹೆಚ್ಚು ಇರುವಂತೆ ನೊಡಿಕೊಳ್ಳುವುದು ಅವಶ್ಯವಾಗಿದೆ. ಈ ರೀತಿಯ ಆಹಾರ ಸೇವನೆ ನಮ್ಮಲ್ಲಿ ಪ್ರತಿರಕ್ಷಣಾ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ.

Health Tips: ಕೊವಿಡ್ ಸಮಯದಲ್ಲಿ ನೀವು ಪಾಲಿಸಲೇಬೇಕಾದ ಐದು ಆಹಾರ ಪದ್ಧತಿಗಳು
ಪ್ರಾತಿನಿಧಿಕ ಚಿತ್ರ
TV9 Web
| Updated By: shruti hegde|

Updated on: Jun 21, 2021 | 8:54 AM

Share

ಆರೋಗ್ಯದ ಬಗ್ಗೆ ಎಷ್ಟು ಕಾಳಜಿವಹಿಸಿದರು ಪ್ರಸ್ತುತ ಕೊರೊನಾ ಕಾಲಗಟ್ಟದಲ್ಲಿ ಕಡಿಮೆಯೇ. ಹೀಗಾಗಿ ನಾವು ಸೇವಿಸುವ ಆಹಾರದ ಬಗೆಗೆ ಹೆಚ್ಚಿನ ಕಾಳಜಿ ಅಗತ್ಯ. ನಾವು ಪ್ರತಿನಿತ್ಯ ತೆಗೆದುಕೊಳ್ಳುವ ತರಕಾರಿ, ಹಣ್ಣು ಮತ್ತು ಇನ್ನಿತರ ಪದಾರ್ಥಗಳಲ್ಲಿ ರೋಗನಿರೋಧಕ ಶಕ್ತಿ ಮತ್ತು ಪೋಷಕಾಂಶಗಳು ಹೆಚ್ಚು ಇರುವಂತೆ ನೊಡಿಕೊಳ್ಳುವುದು ಅವಶ್ಯವಾಗಿದೆ. ಈ ರೀತಿಯ ಆಹಾರ ಸೇವನೆ ನಮ್ಮಲ್ಲಿ ಪ್ರತಿರಕ್ಷಣಾ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಿಸುವ ಪದಾರ್ಥಗಳು ಈ ಕೆಳಗಿನಂತಿವೆ.

1. ಮೊಟ್ಟೆ ಮೊಟ್ಟೆಗಳಲ್ಲಿ ವಿಟಮಿನ್ ಡಿ ಸಮೃದ್ಧವಾಗಿದೆ. ಇದು ನಿಮ್ಮ ಎಲುಬುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಈ ಕಾರಣಕ್ಕಾಗಿ ಮೊಟ್ಟೆಗಳನ್ನು ಅತ್ಯುತ್ತಮ ಆರೋಗ್ಯಕರ ಆಹಾರವೆಂದು ಪರಿಗಣಿಸಲಾಗುತ್ತದೆ. ಮೊಟ್ಟೆಗಳಲ್ಲಿ ಕ್ಯಾಲೋರಿಗಳು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಫೋಲೇಟ್, ಕ್ಯಾಲ್ಸಿಯಂ, ರಂಜಕ, ಸೆಲೆನಿಯಮ್, ವಿಟಮಿನ್ ಎ, ವಿಟಮಿನ್ ಬಿ 5, ವಿಟಮಿನ್ ಬಿ 12, ವಿಟಮಿನ್ ಬಿ, ವಿಟಮಿನ್ ಇ, ವಿಟಮಿನ್ ಕೆ ಮತ್ತು ವಿಟಮಿನ್ ಬಿ 6 ಇರುತ್ತವೆ. ಮೊಟ್ಟೆಗಳು ದೇಹಕ್ಕೆ ಸ್ಯಾಚುರೇಟೆಡ್ ಪೋಷಕಾಂಶಗಳನ್ನು ಒದಗಿಸುತ್ತವೆ.

2. ಓಟ್ಸ್ ಪ್ರೋಟೀನ್‌ ಉತ್ತಮ ಮೂಲ ಓಟ್ಸ್​ ಆಗಿದೆ. ಇದು ನಿಮ್ಮ ದೇಹದಲ್ಲಿನ ಹೆಚ್ಚುವರಿ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. 100 ಗ್ರಾಂ ಓಟ್ಸ್ 12 ಗ್ರಾಂ ಪ್ರೋಟೀನ್ ನೀಡುತ್ತದೆ. ಓಟ್ಸ್ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ತೂಕವನ್ನು ನಿಯಂತ್ರಿಸುತ್ತದೆ. ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಓಟ್ಸ್ ನಿಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಓಟ್ಸ್ ಗಿಂತ ಉತ್ತಮವಾದ ಉಪಹಾರವಿಲ್ಲ ಎಂಬ ಮಾತು ಕೂಡ ಇದೆ.

3. ಪಾಲಕ್ ಸೊಪ್ಪು ಬೆಳಗಿನ ಉಪಾಹಾರದ ಜತೆ ಪಾಲಕ್ ರಸವನ್ನು ಕುಡಿಯುವುದು ತುಂಬಾ ಪ್ರಯೋಜನಕಾರಿ. ನಾವು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಾಲಕ್ ರಸವನ್ನು ಕುಡಿಯಬಹುದು. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಪಾಲಕ್​ನಲ್ಲಿ ಕ್ಯಾಲೋರಿಗಳು, ಪ್ರೋಟೀನ್, ಕಾರ್ಬೋಹೈಡ್ರೇಟ್‌ಗಳು ಮತ್ತು ಫೈಬರ್ ಇರುತ್ತದೆ. ಪಾಲಕ್​ ಸೊಪ್ಪಿನಲ್ಲಿ ಕ್ಯಾಲ್ಸಿಯಂ, ರಂಜಕ, ಕ್ಲೋರಿನ್, ಕಬ್ಬಿಣ, ಜೀವಸತ್ವಗಳು ಎ, ಬಿ ಮತ್ತು ಸಿ ಸಮೃದ್ಧವಾಗಿದೆ. ವಿಶೇಷವೆಂದರೆ ಪಾಲಕ್ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

4. ಬ್ರೊಕೊಲಿ ಬ್ರೊಕೊಲಿ ಕಬ್ಬಿಣಾಂಶ, ವಿಟಮಿನ್ ಎ, ಸಿ, ಪೊಟ್ಯಾಸಿಯಮ್, ಪ್ರೋಟೀನ್, ಕ್ಯಾಲ್ಸಿಯಂ, ಕಾರ್ಬೋಹೈಡ್ರೇಟ್ಗಳು, ಕ್ರೋಮಿಯಂನ ಅತ್ಯುತ್ತಮ ಮೂಲವಾಗಿದೆ. ಇದರಲ್ಲಿ ಆಂಟಿಆಕ್ಸಿಡೆಂಟ್‌ಗಳಿವೆ. ಇದು ಇಂಡೋಲ್ 3 ಕಾರ್ಬಿನಾಲ್ ಅನ್ನು ಸಹ ಒಳಗೊಂಡಿದೆ.

5.ಸೋಯಾಬೀನ್ ಸೋಯಾಬೀನ್​ನಲ್ಲಿ ಪ್ರೋಟೀನ್, ಟ್ರಿಪ್ಟೊಫಾನ್, ಮ್ಯಾಂಗನೀಸ್, ಕಬ್ಬಿಣ, ಒಮೆಗಾ -3, ಕೊಬ್ಬಿನಾಮ್ಲಗಳು, ರಂಜಕ, ಫೈಬರ್, ಮೆಗ್ನೀಸಿಯಮ್, ತಾಮ್ರ, ವಿಟಮಿನ್ ಬಿ, ಸಿ ಮತ್ತು ಪೊಟ್ಯಾಸಿಯಮ್ ಇರುತ್ತದೆ.

6. ವ್ಯಾಯಾಮ ವ್ಯಾಯಾಮ ಕೂಡ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದಲ್ಲದೆ ಇದು ದೇಹದಲ್ಲಿನ ಒತ್ತಡದ ಮಟ್ಟವನ್ನು ಕಡಿಮೆ ಮಾಡಲು ಕೆಲಸ ಮಾಡುತ್ತದೆ. ಏರೋಬಿಕ್ ವ್ಯಾಯಾಮಗಳಾದ ಓಡುವುದು, ಈಜು ಮತ್ತು ತೂಕ ಎತ್ತುವುದು ರೋಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತದೆ. ಕ್ರೀಡೆಗಳನ್ನು ಆಡುವುದು ದೇಹಕ್ಕೆ ತುಂಬಾ ಒಳ್ಳೆಯದು ಇದ್ದರಿಂದ ನಾವು ಸದೃಡವಾಗಿರಬಹುದು.

ಇದನ್ನೂ ಓದಿ:

Health Benefits: ಹಾಲು ಕುಡಿಯುವ ಅಭ್ಯಾಸ ಇದೆಯೇ? ಹಾಗಿದ್ದರೆ ಸೇವಿಸುವ ಸಮಯದ ಬಗ್ಗೆ ತಿಳಿಯವುದನ್ನು ಮರೆಯಬೇಡಿ

Health Tips: ಕೆಮ್ಮು ಮತ್ತು ಮನೆಮದ್ದು; ಅಡುಗೆ ಮನೆಯಲ್ಲಿರುವ ಪದಾರ್ಥಗಳೇ ಮಳೆಗಾಲಕ್ಕೆ ಔಷಧಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ