Health Tips: ಮನೆಯ ಹಿತ್ತಲಲ್ಲಿ ಬೆಳೆಯುವ ಈ ಸಸ್ಯಗಳಲ್ಲಿ ಅಡಗಿದೆ ಅನೇಕ ಆರೋಗ್ಯಕರ ಗುಣ

ಮಧುಮೇಹ ಸಮಸ್ಯೆಯನ್ನು ನಿಯಂತ್ರಿಸಲು ಹೆಚ್ಚಿನವರು ಆಯುರ್ವೇದ, ಮನೆಮದ್ದುಗಳ ಮೊರೆ ಹೋಗುತ್ತಾರೆ. ವಿಶೇಷವಾಗಿ ಮನೆಯಲ್ಲಿರುವ ಕೆಲವು ಗಿಡಗಳಿಂದಲೇ ಈ ಸಮಸ್ಯೆಯನ್ನು ನಿವಾರಿಸಬಹುದು.

Health Tips: ಮನೆಯ ಹಿತ್ತಲಲ್ಲಿ ಬೆಳೆಯುವ ಈ ಸಸ್ಯಗಳಲ್ಲಿ ಅಡಗಿದೆ ಅನೇಕ ಆರೋಗ್ಯಕರ ಗುಣ
ಪ್ರಾತಿನಿಧಿಕ ಚಿತ್ರ
Follow us
| Updated By: preethi shettigar

Updated on: Sep 01, 2021 | 8:28 AM

ಇತ್ತೀಚೆಗೆ ಅನೇಕ ಜನರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ದೇಹವು ಕಡಿಮೆ ಇನ್ಸುಲಿನ್ ಬಿಡುಗಡೆ ಮಾಡಿದಾಗ ಮಧುಮೇಹದ ಸಮಸ್ಯೆ ಬರುತ್ತದೆ. ಸ್ಥೂಲಕಾಯದ ಸಮಸ್ಯೆಗಳು ಮತ್ತು ಬದಲಾಗುತ್ತಿರುವ ಜೀವನಶೈಲಿಯೊಂದಿಗೆ ಒತ್ತಡ, ಮಧುಮೇಹದ ಅಪಾಯವು ಇಂದಿನ ದಿನಗಳಲ್ಲಿ ಸರ್ವೆ ಸಾಮಾನ್ಯವಾಗಿದೆ. ಒಮ್ಮೆ ಮಧುಮೇಹಕ್ಕೆ ಗುರಿಯಾದರೆ ಅದನ್ನು ನಿಯಂತ್ರಿಸುವುದು ತುಂಬಾ ಕಷ್ಟ. ನಿಯಮಿತವಾಗಿ ಔಷಧಿಗಳನ್ನು ತೆಗೆದುಕೊಲ್ಳುವುದರೊಂದಿಗೆ ಸಹಬಾಳ್ವೆ ನಡೆಸಬೇಕಾಗುತ್ತದೆ. ಮಧುಮೇಹ ಸಮಸ್ಯೆಯನ್ನು ನಿಯಂತ್ರಿಸಲು ಹೆಚ್ಚಿನವರು ಆಯುರ್ವೇದ, ಮನೆಮದ್ದುಗಳ ಮೊರೆ ಹೋಗುತ್ತಾರೆ. ವಿಶೇಷವಾಗಿ ಮನೆಯಲ್ಲಿರುವ ಕೆಲವು ಗಿಡಗಳಿಂದಲೇ ಈ ಸಮಸ್ಯೆಯನ್ನು ನಿವಾರಿಸಬಹುದು. ಅವುಗಳು ಯಾವುದು ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

 ಅಲೋವೆರಾ ಅಲೋವೆರಾ ಅನೇಕ ಸಮಸ್ಯೆಗಳಿಗೆ ಪರಿಹಾರವಾಗಿದೆ. ಇದು ಮಧುಮೇಹ ರೋಗಿಗಳಿಗೆ ತುಂಬಾ ಉಪಯುಕ್ತವಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡುವ ಕೆಲವು ಅಂಶಗಳನ್ನು ಒಳಗೊಂಡಿದೆ. ಅಲೋವೆರಾ ರಕ್ತದಲ್ಲಿನ ಗ್ಲೂಕೋಸ್ ಪ್ರಮಾಣವನ್ನು ನಿಯಂತ್ರಿಸಲು ರಾಮಬಾಣವಾಗಿ ಕೆಲಸ ಮಾಡುತ್ತದೆ.

 ಇನ್ಸುಲಿನ್ ಗಿಡ ಆಯುರ್ವೇದದಲ್ಲಿ ಇನ್ಸುಲಿನ್ ಸಸ್ಯ ಬಹಳ ಮುಖ್ಯ. ಮಧುಮೇಹ ರೋಗಿಗಳಿಗೆ ಈ ಸಸ್ಯವು ತುಂಬಾ ಉಪಯುಕ್ತವಾಗಿದೆ. ಈ ಗಿಡದ ಎಲೆಗಳು ಹುಳಿಯಾಗಿರುತ್ತವೆ. ಈ ಎಲೆಗಳನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಬಹುದು.

ಸ್ಟೀವಿಯಾ ಸಸ್ಯ ಮಧುಮೇಹ ರೋಗಿಗಳಿಗೆ ಸ್ಟೀವಿಯಾ ಸಸ್ಯವು ತುಂಬಾ ಉಪಯುಕ್ತವಾಗಿದೆ. ಇದರ ಎಲೆಗಳು ಸಿಹಿಯಾಗಿರುತ್ತವೆ. ಈ ಎಲೆಗಳನ್ನು ಒಣಗಿಸಿ ಚಹಾ ಮತ್ತು ಜ್ಯೂಸ್​ಗೆ ಸಕ್ಕರೆಯಂತೆ ಬಳಸಬಹುದು. ಇದರ ಎಲೆಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಉಪಯುಕ್ತವಾಗಿವೆ. ಇದು ಶೂನ್ಯ ಕ್ಯಾಲೊರಿಗಳನ್ನು ಹೊಂದಿರುತ್ತದೆ. ಅಲ್ಲದೆ ಮಧುಮೇಹ ಕಡಿಮೆ ಮಾಡಲು ಸಹ ಉಪಯುಕ್ತವಾಗಿದೆ.

ಬೇವಿನ ಎಲೆಗಳು ಆಯುರ್ವೇದದಲ್ಲಿ ಬೇವಿನ ಎಲೆಗಳು ಬಹಳ ಮುಖ್ಯ. ಬೇವಿನ ಹಸಿರು ಎಲೆಗಳು ಗ್ಲೈಕೋಸೈಡ್‌ಗಳನ್ನು ಹೊಂದಿರುತ್ತವೆ. ಇದು ಅನೇಕ ವಿರೋಧಿ ವೈರಸ್ ಗುಣಗಳನ್ನು ಕಡಿಮೆ ಮಾಡುವ ಶಕ್ತಿ ಹೊಂದಿದೆ. ಇವುಗಳು ರಕ್ತದಲ್ಲಿನ ಗ್ಲೂಕೋಸ್ ಪ್ರಮಾಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.

ನೇರಳೆ ಎಲೆ ನೇರಳೆ ಎಲೆಗಳು ಇನ್ಸುಲಿನ್ ಸ್ರವಿಸುವಿಕೆಯನ್ನು ಉತ್ತೇಜಿಸುತ್ತದೆ. ಮಧುಮೇಹದಿಂದ ಬಳಲುತ್ತಿರುವ ಜನರಿಗೆ ಇವು ಪ್ರಯೋಜನಕಾರಿ. ನೇರಳೆ ಬೀಜಗಳು ಮೂತ್ರಪಿಂಡಕ್ಕೆ ಸಂಬಂಧಿಸಿದ ಅಪಾಯವನ್ನು ಕಡಿಮೆ ಮಾಡುತ್ತದೆ. ಮಧುಮೇಹ ರೋಗಿಗಳಲ್ಲಿ ಗಾಯ ಗುಣಪಡಿಸುವ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ. ಇದಕ್ಕಾಗಿ, ನೀವು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರಿನೊಂದಿಗೆ ಒಂದು ಚಮಚ ನೇರಳೆ ಎಲೆಯ ಪುಡಿಯನ್ನು ತೆಗೆದುಕೊಳ್ಳಬಹುದು.

ಇದನ್ನೂ ಓದಿ: Health Tips: ಬೆಳಿಗ್ಗೆ ಎದ್ದ ತಕ್ಷಣ ಈ ರೀತಿ ಮಾಡುವುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ

ಹಾಗಲಕಾಯಿ: ರುಚಿ ಕಹಿಯಾಗಿರಬಹುದು; ಚಹ ಮಾಡಿ ಸವಿದರೆ ಆರೋಗ್ಯ ಪ್ರಯೋಜನಗಳಿವೆ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?