AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಜ್ಞಾಪಕ ಶಕ್ತಿ ಕಡಿಮೆಯಾಗುತ್ತಿದೆಯೇ? ಆಹಾರ ಕ್ರಮದ ಬಗ್ಗೆ ಇರಲಿ ಎಚ್ಚರ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಚಿಕ್ಕ ವಯಸ್ಸಿನಲ್ಲೇ ಮಧುಮೇಹ, ಸಂಧಿವಾತ, ಬಿಪಿ, ಒತ್ತಡ ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಾರೆ. ಇದಕ್ಕೆ ಅವರ ಆಹಾರ ಕ್ರಮವೂ ಒಂದು ಕಾರಣ. ದೇಹಕ್ಕೆ ಹಾಗೂ ಮಾನಸಿಕ ಆರೋಗ್ಯಕ್ಕೆ ತುಂಬಾ ಕೆಟ್ಟದ್ದು ಎಂದು ಪರಿಗಣಿಸಲಾದ 5 ವಿಷಯಗಳ ಬಗ್ಗೆ ಅಥವಾ ಆಹಾರ ಪದ್ಧತಿಯ ಬಗ್ಗೆ ತಿಳಿಯುವುದು ಸೂಕ್ತ.

Health Tips: ಜ್ಞಾಪಕ ಶಕ್ತಿ ಕಡಿಮೆಯಾಗುತ್ತಿದೆಯೇ? ಆಹಾರ ಕ್ರಮದ ಬಗ್ಗೆ ಇರಲಿ ಎಚ್ಚರ
ಸಂಗ್ರಹ ಚಿತ್ರ
TV9 Web
| Edited By: |

Updated on: Oct 31, 2021 | 8:45 AM

Share

ನಮ್ಮ ನೆನಪಿನ ಶಕ್ತಿಯು ವಯಸ್ಸಿನ ಮೇಲೆ ಅವಲಂಬಿತವಾಗಿದೆ ಎಂದು ಹೇಳಲಾಗುತ್ತದೆ. ವಯಸ್ಸಾಗುತ್ತಾ ಹೋದಂತೆ ಜ್ಞಾಪಕಶಕ್ತಿಯೇ ಹದಗೆಡುತ್ತದೆ ಎಂದು ಹೇಳಲಾಗುತ್ತದೆ. ಆದರೆ ಕೆಲವು ಹಿರಿಯರು ಇಂದಿಗೂ ಸಹ ಹೆಚ್ಚು ಚೈತನ್ಯದಿಂದ ಇರುತ್ತಾರೆ ಮತ್ತು ಜ್ಞಾಪಕ ಶಕ್ತಿಯು ವೃದ್ಧಾಪ್ಯದಲ್ಲಿಯೂ ತುಂಬಾ ಚೆನ್ನಾಗಿರುತ್ತದೆ. ವಾಸ್ತವವಾಗಿ ಇದೆಲ್ಲವೂ ಅವರ ಉತ್ತಮ ಆಹಾರ ಮತ್ತು ದಿನಚರಿಯ ಪರಿಣಾಮವಾಗಿದೆ. ಆಹಾರವು ನಮ್ಮ ದೈಹಿಕ ಆರೋಗ್ಯದ ಮೇಲೆ ಮಾತ್ರವಲ್ಲದೆ ನಮ್ಮ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ ಎಂದು ಎಲ್ಲಾ ಸಂಶೋಧನೆಗಳು ತಿಳಿಸಿವೆ.

ನಿಮ್ಮ ಆಹಾರ ಕ್ರಮ ಸರಿಯಾಗಿಲ್ಲದಿದ್ದರೆ ದೈಹಿಕ ಮತ್ತು ಮಾನಸಿಕ ಎರಡೂ ಸಮಸ್ಯೆಗಳು ನಿಮ್ಮನ್ನು ಅಕಾಲಿಕವಾಗಿ ಸುತ್ತುವರಿಯುತ್ತವೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಚಿಕ್ಕ ವಯಸ್ಸಿನಲ್ಲೇ ಮಧುಮೇಹ, ಸಂಧಿವಾತ, ಬಿಪಿ, ಒತ್ತಡ ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಾರೆ. ಇದಕ್ಕೆ ಅವರ ಆಹಾರ ಕ್ರಮವೂ ಒಂದು ಕಾರಣ. ದೇಹಕ್ಕೆ ಹಾಗೂ ಮಾನಸಿಕ ಆರೋಗ್ಯಕ್ಕೆ ತುಂಬಾ ಕೆಟ್ಟದ್ದು ಎಂದು ಪರಿಗಣಿಸಲಾದ 5 ವಿಷಯಗಳ ಬಗ್ಗೆ ಅಥವಾ ಆಹಾರ ಪದ್ಧತಿಯ ಬಗ್ಗೆ ತಿಳಿಯುವುದು ಸೂಕ್ತ. ವಿವರ ಇಲ್ಲಿದೆ ನೋಡಿ.

ಜಿಡ್ಡಿನ ಪದಾರ್ಥ ಸಹಜವಾಗಿ, ಹೆಚ್ಚು ಜಿಡ್ಡಿನ ಆಹಾರವನ್ನು ತಿನ್ನುವುದು ರುಚಿಕರವಾಗಿರುತ್ತದೆ. ಆದರೆ ಇದು ನಿಮ್ಮ ಆರೋಗ್ಯಕ್ಕೆ ಯಾವುದೇ ರೀತಿಯಲ್ಲಿ ಉತ್ತಮವೆಂದು ಪರಿಗಣಿಸಲಾಗುವುದಿಲ್ಲ. ಹೆಚ್ಚು ಕರಿದ ಆಹಾರವು ನಿಮ್ಮ ನರ ಕೋಶಗಳನ್ನು ಹಾನಿಗೊಳಿಸುತ್ತದೆ ಮತ್ತು ಮೆದುಳಿನ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಇದು ನಿಮ್ಮ ಜ್ಞಾಪಕಶಕ್ತಿಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಹಾಗಾಗಿ ಸಾಧ್ಯವಾದಷ್ಟು ಸರಳ ಮತ್ತು ಜೀರ್ಣವಾಗುವ ಆಹಾರವನ್ನು ಸೇವಿಸುವುದನ್ನು ರೂಢಿಸಿಕೊಳ್ಳಿ.

ಜಂಕ್ ಫುಡ್ ಜಂಕ್ ಫುಡ್‌ನಲ್ಲಿ ರುಚಿಯನ್ನು ಹೆಚ್ಚಿಸಲು, ಡೋಪಮೈನ್ ಹಾರ್ಮೋನ್ ನಂತಹ ಕೆಲವು ವಸ್ತುಗಳನ್ನು ಬಳಸಲಾಗುತ್ತದೆ. ಇದನ್ನು ಹೆಚ್ಚು ತಿನ್ನುವುದರಿಂದ, ವ್ಯಕ್ತಿಯಲ್ಲಿ ಒತ್ತಡದ ಮಟ್ಟವು ಹೆಚ್ಚಾಗುತ್ತದೆ ಮತ್ತು ನೆನಪಿನ ಶಕ್ತಿ ದುರ್ಬಲಗೊಳ್ಳಲು ಪ್ರಾರಂಭವಾಗುತ್ತದೆ.

ಮದ್ಯ ಮದ್ಯಪಾನ ಮಾಡುವ ಅಭ್ಯಾಸವು ನಿಮ್ಮ ಇಡೀ ಜೀವನವನ್ನು ಹಾಳುಮಾಡುತ್ತದೆ. ಇದು ನಿಮ್ಮ ದೇಹದಲ್ಲಿ ಅನೇಕ ಮಾರಣಾಂತಿಕ ಕಾಯಿಲೆಗಳನ್ನು ಉಂಟುಮಾಡುತ್ತದೆ. ಜೊತೆಗೆ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದನ್ನು ಕುಡಿಯುವುದರಿಂದ ವ್ಯಕ್ತಿಯ ಮಾನಸಿಕ ಸಮತೋಲನ ಹದಗೆಡುತ್ತದೆ. ಆ ಮೂಲಕ ಜ್ಞಾಪಕ ಶಕ್ತಿ ದುರ್ಬಲವಾಗುತ್ತದೆ.

ಸಿಹಿ ತಿಂಡಿ ಸಿಹಿ ತಿನ್ನಲು ಇಷ್ಟಪಡುವವರೂ ಜಾಗರೂಕರಾಗಿರಬೇಕು. ಆರೋಗ್ಯ ತಜ್ಞರ ಪ್ರಕಾರ ಹೆಚ್ಚು ಸಕ್ಕರೆ ತಿನ್ನುವುದರಿಂದ ಮೆದುಳಿನ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ಮನಸ್ಸು ಜಡವಾಗುತ್ತದೆ ಮತ್ತು ತನ್ನ ಕೆಲಸವನ್ನು ಸರಿಯಾಗಿ ಮಾಡಲಾರದು. ಈ ಕಾರಣದಿಂದಾಗಿ, ವ್ಯಕ್ತಿಯ ನೆನಪಿನ ಶಕ್ತಿ ದುರ್ಬಲಗೊಳ್ಳಲು ಪ್ರಾರಂಭಿಸುತ್ತದೆ.

ಕೊಬ್ಬಿನಿಂದ ಕೂಡಿದ ಆಹಾರ ಅಧಿಕ ಪ್ರಮಾಣದ ಟ್ರಾನ್ಸ್ ಕೊಬ್ಬು ನಿಮ್ಮ ಮಾನಸಿಕ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಇದು ನೆನಪಿನ ಶಕ್ತಿ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ ಮತ್ತು ವ್ಯಕ್ತಿಯು ಮರೆವಿನ ಅಪಾಯವನ್ನು ಎದುರಿಸಬೇಕಾಗುತ್ತದೆ.

ಇದನ್ನೂ ಓದಿ:

ಕಡಿಮೆ ನೀರು ಕುಡಿಯುತ್ತಿದ್ದೀರಾ? ಆರೋಗ್ಯದಲ್ಲಿನ ಈ ಬದಲಾವಣೆ ಬಗ್ಗೆ ಇರಲಿ ಎಚ್ಚರ

Health Tips: ಕಹಿಯಾಗಿದ್ದರೂ ಆರೋಗ್ಯಕರ ಗುಣಗಳನ್ನು ಹೊಂದಿರುವ ಈ 5 ಪದಾರ್ಥಗಳ ಬಗ್ಗೆ ತಿಳಿಯಿರಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ