AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿನ ವಿಷಕಾರಿ ಅಂಶಗಳನ್ನು ತೊಡೆದು ಹಾಕಲು ‘ABC’ ಜ್ಯೂಸ್​ ಸೇವಿಸಿ

ದೇಹದಲ್ಲಿ ಉತ್ಪತ್ತಿಯಾಗುವ ನಿರುಪಯುಕ್ತ ವಸ್ತುಗಳು ಎಲ್ಲವ್ನನೂ ಹೊರಹಾಕುವುದು ಅಗತ್ಯವಾಗಿರುತ್ತದೆ. ಇದಕ್ಕಾಗಿ ಕೆಲವು  ಆಹಾರಗಳು ಸಹಾಯ ಮಾಡುತ್ತದೆ. ಅವುಗಳಲ್ಲಿ ಕೆಲವು ಜ್ಯೂಸ್​ಗಳು ಉತ್ತಮ ಡಿಟಾಫ್ಸಿಫಿಕೇಶನ್​ ಗಳಾಗಿ ಕೆಲಸ ಮಾಡುತ್ತವೆ

ದೇಹದಲ್ಲಿನ ವಿಷಕಾರಿ ಅಂಶಗಳನ್ನು ತೊಡೆದು ಹಾಕಲು 'ABC' ಜ್ಯೂಸ್​ ಸೇವಿಸಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 11, 2022 | 2:12 PM

Share

ಪ್ರತೀ ದೇಹಕ್ಕೆ ಒಂದಷ್ಟು ಸ್ವಚ್ಛಗೊಳಿಸುವ ಕ್ರಿಯೆ ಅಗತ್ಯವಾಗಿರುತ್ತದೆ. ತಿಂದ ಆಹಾರ, ದೇಹದಲ್ಲಿ ಉತ್ಪತ್ತಿಯಾಗುವ ನಿರುಪಯುಕ್ತ ವಸ್ತುಗಳು ಎಲ್ಲವನ್ನೂ ಹೊರಹಾಕುವುದು ಅಗತ್ಯವಾಗಿರುತ್ತದೆ. ಇದಕ್ಕಾಗಿ ಕೆಲವು  ಆಹಾರಗಳು ಸಹಾಯ ಮಾಡುತ್ತದೆ. ಅವುಗಳಲ್ಲಿ ಕೆಲವು ಜ್ಯೂಸ್​ಗಳು ಉತ್ತಮ ಡಿಟಾಫ್ಸಿಫಿಕೇಶನ್​ ಗಳಾಗಿ ಕೆಲಸ ಮಾಡುತ್ತವೆ. ಎಬಿಸಿ ಜ್ಯೂಸ್​ಗಳು ಇದಕ್ಕೆ ಹೆಚ್ಚು ನೆರವಾಗುತ್ತದೆ, ಅರೇ ಏನಿದು ಎಬಿಸಿ ಜ್ಯೂಸ್​ ಅಂತೀರಾ ಇಲ್ಲಿದೆ ನೋಡಿ ಮಾಹಿತಿ

ಎ-ಎಂದರೆ ಆಪಲ್​ ಜ್ಯೂಸ್,​ ಬಿ ಎಂದರೆ ಬಿಟ್ರೂಟ್​ ಜ್ಯೂಸ್​ ಇನ್ನು ಸಿ ಎಂದರೆ ಕ್ಯಾರೇಟ್​ ಜ್ಯೂಸ್​. ಇವೇ ನೋಡಿ ಎಬಿಸಿ ಜ್ಯೂಸ್​ಗಳು. ಈ ಪದಾರ್ಥಗಳ ತಾಜಾ ಜ್ಯೂಸ್​ ತಯಾರಿಸಿ ಸೇವಿಸಿದರೆ ನಿಮ್ಮ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕಬಹುದು.  ಅದರ ಜತೆಗೆ ಈ ಎಬಿಸಿ ಜ್ಯೂಸ್​ನಿಂದ ಆರೋಗ್ಯಕ್ಕೆ ಯಾವೆಲ್ಲಾ ಉಪಯೋಗಗಳಿವೆ ಎನ್ನುವುದನ್ನು ನೀವು ತಿಳಿದುಕೊಳ್ಳಲೇಬೇಕು.

ಆಪಲ್​ ಜ್ಯೂಸ್​: ಸೇಬುವಿನಲ್ಲಿ ಯಥೇಚ್ಛವಾದ ವಿಟಮಿನ್​ ಸಿ, ಫೈಬರ್​ ಸೇರಿದಂತೆ ಆ್ಯಂಟಿಆಕ್ಸಿಡೆಂಟ್​ ಅಂಶಗಳು ಅಡಕವಾಗಿದೆ. ಇವು ಜೀರ್ಣಕ್ರಿಯೆಯನ್ನು ಉತ್ತಮಪಡಿಸುತ್ತವೆ. ಇದರೊಂದಿಗೆ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನೂ ನಿಯಂತ್ರಿಸುತ್ತದೆ. ನಿಮ್ಮ ಡಯೆಟ್​ಗೂ ಈ ಆಪಲ್​ ಜ್ಯೂಸ್​ ಸಹಕಾರಿಯಾಗಿದೆ. ಆದ್ದರಿಂದ ನಿಮ್ಮ ದಿನನಿತ್ಯದ ಜೀವನದಲ್ಲಿ ಆಪಲ್​​ ಜ್ಯೂಸ್​ ಸೇವನೆ ಅಭ್ಯಾಸ ಮಾಡಿಕೊಳ್ಳಿ.

ಬಿಟ್ರೂಟ್​ ಜ್ಯೂಸ್​: ಹೆಚ್ಚು ಪೋಷಕಾಂಶಗಳಿರುವ ಗಡ್ಡೆಯ ಆಹಾರ ಬಿಟ್ರೂಟ್​. ದೇಹದಲ್ಲಿ ರಕ್ತದ ಉತ್ಪತ್ತಿಯನ್ನು ಹೆಚ್ಚಿಸಿ, ಆರೋಗ್ಯವನ್ನು ಕಾಪಾಡುವಲ್ಲಿ ಬಿಟ್ರೂಟ್​ ಸಹಕಾರಿಯಾಗಿದೆ, ಅಲ್ಲದೆ ಬಿಟ್ರೂಟ್​ ಜ್ಯೂಸ್​ ಸೇವನೆಯಿಂದ ಜೀರ್ಣವ್ಯವಸ್ಥೆಯೂ ಸರಿಯಾದ ಪ್ರಮಾಣದಲ್ಲಿ ಆಗುತ್ತದೆ. ಕ್ಯಾನ್ಸರ್​ನ ಅಪಾಯವನ್ನೂ ಕಡಿಮೆ ಮಾಡುತ್ತದೆ.

ಕ್ಯಾರೇಟ್​ ಜ್ಯೂಸ್​: ವಿಟಮಿನ್​ ಎ, ಫೈಬರ್​​, ವಿಟಮಿನ್​ ಕೆ ಅಂಶಗಳನ್ನು  ಹೇರಳವಾಗಿ ಹೊಂದಿರುವ ಕ್ಯಾರೆಟ್​ ದೇಹವನ್ನು ಆಂತರಿಕವಾಗಿ ಸ್ವಚ್ಛಗೊಳಿಸುತ್ತದೆ. ಚಯಾಪಚಯ ಕ್ರಿಯೆಯನ್ನು ಉತ್ತಮಗೊಳಿಸಿ ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ.  ಕಿಡ್ನಿಯ ಆರೋಗ್ಯ ಮತ್ತು ಕಣ್ಣಿನ ಆರೋಗ್ಯಕ್ಕೂ ಕ್ಯಾರೇಟ್​ ಒಳ್ಳೆಯದು.

ಇದನ್ನೂ ಓದಿ:

‘ಕೈಯಲ್ಲೇ ಊಟ ಮಾಡಬೇಕು, ಚಪ್ಪಲಿಯನ್ನು ಮನೆಯಿಂದ ಹೊರಗಿಡಬೇಕು’ ಈ ರೀತಿಯ ಆಚರಣೆಗೆ ವೈಜ್ಞಾನಿಕ ಕಾರಣಗಳೇನು? ಇಲ್ಲಿದೆ ಮಾಹಿತಿ

Published On - 1:11 pm, Fri, 11 March 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ