AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿನ ವಿಷಕಾರಿ ಅಂಶಗಳನ್ನು ತೊಡೆದು ಹಾಕಲು ‘ABC’ ಜ್ಯೂಸ್​ ಸೇವಿಸಿ

ದೇಹದಲ್ಲಿ ಉತ್ಪತ್ತಿಯಾಗುವ ನಿರುಪಯುಕ್ತ ವಸ್ತುಗಳು ಎಲ್ಲವ್ನನೂ ಹೊರಹಾಕುವುದು ಅಗತ್ಯವಾಗಿರುತ್ತದೆ. ಇದಕ್ಕಾಗಿ ಕೆಲವು  ಆಹಾರಗಳು ಸಹಾಯ ಮಾಡುತ್ತದೆ. ಅವುಗಳಲ್ಲಿ ಕೆಲವು ಜ್ಯೂಸ್​ಗಳು ಉತ್ತಮ ಡಿಟಾಫ್ಸಿಫಿಕೇಶನ್​ ಗಳಾಗಿ ಕೆಲಸ ಮಾಡುತ್ತವೆ

ದೇಹದಲ್ಲಿನ ವಿಷಕಾರಿ ಅಂಶಗಳನ್ನು ತೊಡೆದು ಹಾಕಲು 'ABC' ಜ್ಯೂಸ್​ ಸೇವಿಸಿ
ಪ್ರಾತಿನಿಧಿಕ ಚಿತ್ರ
TV9 Web
| Updated By: Pavitra Bhat Jigalemane|

Updated on:Mar 11, 2022 | 2:12 PM

Share

ಪ್ರತೀ ದೇಹಕ್ಕೆ ಒಂದಷ್ಟು ಸ್ವಚ್ಛಗೊಳಿಸುವ ಕ್ರಿಯೆ ಅಗತ್ಯವಾಗಿರುತ್ತದೆ. ತಿಂದ ಆಹಾರ, ದೇಹದಲ್ಲಿ ಉತ್ಪತ್ತಿಯಾಗುವ ನಿರುಪಯುಕ್ತ ವಸ್ತುಗಳು ಎಲ್ಲವನ್ನೂ ಹೊರಹಾಕುವುದು ಅಗತ್ಯವಾಗಿರುತ್ತದೆ. ಇದಕ್ಕಾಗಿ ಕೆಲವು  ಆಹಾರಗಳು ಸಹಾಯ ಮಾಡುತ್ತದೆ. ಅವುಗಳಲ್ಲಿ ಕೆಲವು ಜ್ಯೂಸ್​ಗಳು ಉತ್ತಮ ಡಿಟಾಫ್ಸಿಫಿಕೇಶನ್​ ಗಳಾಗಿ ಕೆಲಸ ಮಾಡುತ್ತವೆ. ಎಬಿಸಿ ಜ್ಯೂಸ್​ಗಳು ಇದಕ್ಕೆ ಹೆಚ್ಚು ನೆರವಾಗುತ್ತದೆ, ಅರೇ ಏನಿದು ಎಬಿಸಿ ಜ್ಯೂಸ್​ ಅಂತೀರಾ ಇಲ್ಲಿದೆ ನೋಡಿ ಮಾಹಿತಿ

ಎ-ಎಂದರೆ ಆಪಲ್​ ಜ್ಯೂಸ್,​ ಬಿ ಎಂದರೆ ಬಿಟ್ರೂಟ್​ ಜ್ಯೂಸ್​ ಇನ್ನು ಸಿ ಎಂದರೆ ಕ್ಯಾರೇಟ್​ ಜ್ಯೂಸ್​. ಇವೇ ನೋಡಿ ಎಬಿಸಿ ಜ್ಯೂಸ್​ಗಳು. ಈ ಪದಾರ್ಥಗಳ ತಾಜಾ ಜ್ಯೂಸ್​ ತಯಾರಿಸಿ ಸೇವಿಸಿದರೆ ನಿಮ್ಮ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕಬಹುದು.  ಅದರ ಜತೆಗೆ ಈ ಎಬಿಸಿ ಜ್ಯೂಸ್​ನಿಂದ ಆರೋಗ್ಯಕ್ಕೆ ಯಾವೆಲ್ಲಾ ಉಪಯೋಗಗಳಿವೆ ಎನ್ನುವುದನ್ನು ನೀವು ತಿಳಿದುಕೊಳ್ಳಲೇಬೇಕು.

ಆಪಲ್​ ಜ್ಯೂಸ್​: ಸೇಬುವಿನಲ್ಲಿ ಯಥೇಚ್ಛವಾದ ವಿಟಮಿನ್​ ಸಿ, ಫೈಬರ್​ ಸೇರಿದಂತೆ ಆ್ಯಂಟಿಆಕ್ಸಿಡೆಂಟ್​ ಅಂಶಗಳು ಅಡಕವಾಗಿದೆ. ಇವು ಜೀರ್ಣಕ್ರಿಯೆಯನ್ನು ಉತ್ತಮಪಡಿಸುತ್ತವೆ. ಇದರೊಂದಿಗೆ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನೂ ನಿಯಂತ್ರಿಸುತ್ತದೆ. ನಿಮ್ಮ ಡಯೆಟ್​ಗೂ ಈ ಆಪಲ್​ ಜ್ಯೂಸ್​ ಸಹಕಾರಿಯಾಗಿದೆ. ಆದ್ದರಿಂದ ನಿಮ್ಮ ದಿನನಿತ್ಯದ ಜೀವನದಲ್ಲಿ ಆಪಲ್​​ ಜ್ಯೂಸ್​ ಸೇವನೆ ಅಭ್ಯಾಸ ಮಾಡಿಕೊಳ್ಳಿ.

ಬಿಟ್ರೂಟ್​ ಜ್ಯೂಸ್​: ಹೆಚ್ಚು ಪೋಷಕಾಂಶಗಳಿರುವ ಗಡ್ಡೆಯ ಆಹಾರ ಬಿಟ್ರೂಟ್​. ದೇಹದಲ್ಲಿ ರಕ್ತದ ಉತ್ಪತ್ತಿಯನ್ನು ಹೆಚ್ಚಿಸಿ, ಆರೋಗ್ಯವನ್ನು ಕಾಪಾಡುವಲ್ಲಿ ಬಿಟ್ರೂಟ್​ ಸಹಕಾರಿಯಾಗಿದೆ, ಅಲ್ಲದೆ ಬಿಟ್ರೂಟ್​ ಜ್ಯೂಸ್​ ಸೇವನೆಯಿಂದ ಜೀರ್ಣವ್ಯವಸ್ಥೆಯೂ ಸರಿಯಾದ ಪ್ರಮಾಣದಲ್ಲಿ ಆಗುತ್ತದೆ. ಕ್ಯಾನ್ಸರ್​ನ ಅಪಾಯವನ್ನೂ ಕಡಿಮೆ ಮಾಡುತ್ತದೆ.

ಕ್ಯಾರೇಟ್​ ಜ್ಯೂಸ್​: ವಿಟಮಿನ್​ ಎ, ಫೈಬರ್​​, ವಿಟಮಿನ್​ ಕೆ ಅಂಶಗಳನ್ನು  ಹೇರಳವಾಗಿ ಹೊಂದಿರುವ ಕ್ಯಾರೆಟ್​ ದೇಹವನ್ನು ಆಂತರಿಕವಾಗಿ ಸ್ವಚ್ಛಗೊಳಿಸುತ್ತದೆ. ಚಯಾಪಚಯ ಕ್ರಿಯೆಯನ್ನು ಉತ್ತಮಗೊಳಿಸಿ ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ.  ಕಿಡ್ನಿಯ ಆರೋಗ್ಯ ಮತ್ತು ಕಣ್ಣಿನ ಆರೋಗ್ಯಕ್ಕೂ ಕ್ಯಾರೇಟ್​ ಒಳ್ಳೆಯದು.

ಇದನ್ನೂ ಓದಿ:

‘ಕೈಯಲ್ಲೇ ಊಟ ಮಾಡಬೇಕು, ಚಪ್ಪಲಿಯನ್ನು ಮನೆಯಿಂದ ಹೊರಗಿಡಬೇಕು’ ಈ ರೀತಿಯ ಆಚರಣೆಗೆ ವೈಜ್ಞಾನಿಕ ಕಾರಣಗಳೇನು? ಇಲ್ಲಿದೆ ಮಾಹಿತಿ

Published On - 1:11 pm, Fri, 11 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ